Homeಮುಖಪುಟಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಭೂಷಣ್ ಪ್ರಕರಣ: ರಚನಾತ್ಮಕ ಟೀಕೆಯೊಂದನ್ನು ಸಹಿಸಲಾಗದಷ್ಟು ಸಂಕುಚಿತವೇ ಸುಪ್ರೀಮ್ ಭುಜಗಳು?

ಈ ತೀರ್ಪಿನ ವೇಳೆ ಕಟಕಟೆಯಲ್ಲಿ ನಿಂತಿರುವುದು ಪ್ರಶಾಂತ್ ಮಾತ್ರವೇ ಅಲ್ಲ, ಸುಪ್ರೀಮ್ ಕೋರ್ಟಿನ ಸಹನೆ ಘನತೆ ವಿವೇಕಗಳು ಕೂಡ ಕಟಕಟೆಯಲ್ಲಿ ನಿಂತಿರುವುದು ಹೌದು.

- Advertisement -
- Advertisement -

ಸುಪ್ರೀಮ್ ಕೋರ್ಟಿನ ಘನತೆ ಗೌರವಗಳು ಗುರುವಾರ ಅಗ್ನಿಪರೀಕ್ಷೆಗೆ ಗುರಿಯಾಗಲಿವೆ. ನ್ಯಾಯಾಂಗ ನಿಂದನೆಯ ಉರುಳಿಗೆ ಪ್ರಶಾಂತ್ ಭೂಷಣ್ ಅವರ ಕೊರಳನ್ನು ಸಿಕ್ಕಿಸುವುದು ಆಳುವ ಪಟ್ಟಭದ್ರರ ಪ್ರಯತ್ನ. ಯಾಕೆಂದರೆ ಆಳುವವರ ಪಾಲಿಗೆ ಪ್ರಶಾಂತ್ ಬೆಂಬಿಡದೆ ಕಾಡುವ ತೊಣಚಿ. ಜೊತೆಗೆ ನ್ಯಾಯಾಂಗದ ಕಾರ್ಯವೈಖರಿ- ಭ್ರಷ್ಟಾಚಾರದತ್ತ ಕಾಲ ಕಾಲಕ್ಕೆ ಬೆರಳು ಮಾಡಿ ತೋರುತ್ತ, ಅದರ ಅಂತಸ್ಸಾಕ್ಷಿಯನ್ನು ಪಾಟೀಸವಾಲಿಗೆ ಗುರಿ ಮಾಡಿರುವ ದಿಟ್ಟ ನ್ಯಾಯವಾದಿ.

ಸಾಮಾಜಿಕ ಜಾಲತಾಣ ಟ್ವೀಟ್‌ರ್‌ನಲ್ಲಿ ಸುಪ್ರೀಮ್ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ.ಬೋಬ್ಡೆ ಕುರಿತು ಮತ್ತು ಕಳೆದ ಆರು ವರ್ಷಗಳ ಸುಪ್ರೀಮ್ ಕೋರ್ಟ್ ಕಾರ್ಯವೈಖರಿ ಕುರಿತು ಇತ್ತೀಚೆಗೆ ಎರಡು ಟ್ವೀಟ್‌ಗಳನ್ನು ಮಾಡಿದ್ದರು. ಇವುಗಳಿಂದ ನ್ಯಾಯಾಂಗ ನಿಂದನೆಯಾಗಿದೆ ಎಂಬ ತೀರ್ಮಾನಕ್ಕೆ ಬಂದಿರುವ ಸುಪ್ರೀಮ್ ಕೋರ್ಟ್ ಗುರುವಾರ ಪ್ರಶಾಂತ್ ಅವರಿಗೆ ವಿಧಿಸುವ ಶಿಕ್ಷೆಯ ಸ್ವರೂಪ ಮತ್ತು ಪ್ರಮಾಣವನ್ನು ಪ್ರಕಟಿಸಲಿದೆ.

ಈ ತೀರ್ಪಿನ ವೇಳೆ ಕಟಕಟೆಯಲ್ಲಿ ನಿಂತಿರುವುದು ಪ್ರಶಾಂತ್ ಮಾತ್ರವೇ ಅಲ್ಲ, ಸುಪ್ರೀಮ್ ಕೋರ್ಟಿನ ಸಹನೆ ಘನತೆ ವಿವೇಕಗಳು ಕೂಡ ಕಟಕಟೆಯಲ್ಲಿ ನಿಂತಿರುವುದು ಹೌದು. ಇಷ್ಟಕ್ಕೂ ಪ್ರಶಾಂತ್ ಟ್ವೀಟ್‌ಗಳು ಹೇಳಿದ್ದೇನು ಎಂಬುದನ್ನು ಮತ್ತೊಮ್ಮೆ ನೆನೆದು ನೋಡೋಣ:

ಟ್ವೀಟ್ 1- ತಮ್ಮ ಮೂಲಭೂತ ಹಕ್ಕನ್ನು ಉಳಿಸಿಕೊಳ್ಳಲು ಕದ ಬಡಿಯುವ ನಾಗರಿಕರ ಪಾಲಿಗೆ ಸುಪ್ರೀಮ್ ಕೋರ್ಟನ್ನು ಲಾಕ್‌ಡೌನ್ ಸ್ಥಿತಿಯಲ್ಲಿ ಇರಿಸಿ ಅವರಿಗೆ ನ್ಯಾಯವನ್ನು ನಿರಾಕರಿಸಿರುವ ಮುಖ್ಯ ನ್ಯಾಯಮೂರ್ತಿಯವರು ನಾಗಪುರದ ರಾಜಭವನದಲ್ಲಿ ಬಿಜೆಪಿ ನಾಯಕರೊಬ್ಬರ ಒಡೆತನದ 50 ಲಕ್ಷ ರು ಬೆಲೆ ಬಾಳುವ ಮೋಟರ್ ಸೈಕಲ್ಲನ್ನು ಏರಿ ಕುಳಿತಿದ್ದಾರೆ. ಮಾಸ್ಕ್ ಮತ್ತು ಹೆಲ್ಮೆಟ್ ಕೂಡ ಧರಿಸಿಲ್ಲ.

ಟ್ವೀಟ್ 2- ಅಧಿಕೃತ ತುರ್ತುಪರಿಸ್ಥಿತಿಯನ್ನು ಕೂಡ ಘೋಷಿಸದೆ ಕಳೆದ ಆರು ವರ್ಷಗಳ ಅವಧಿಯಲ್ಲಿ ಭಾರತದ ಜನತಂತ್ರವನ್ನು ಹೇಗೆ ನಾಶ ಮಾಡಲಾಯಿತು ಎಂಬುದನ್ನು ಭವಿಷ್ಯದಲ್ಲಿ ಇತಿಹಾಸಕಾರರು ಹೊರಳಿ ನೋಡಲಿದ್ದಾರೆ. ಆಗ ಅವರು ಈ ವಿನಾಶದಲ್ಲಿ ಸುಪ್ರೀಮ್ ಕೋರ್ಟಿನ, ಅದರಲ್ಲೂ ವಿಶೇಷವಾಗಿ ಕಳೆದ ನಾಲ್ವರು ಮುಖ್ಯನ್ಯಾಯಮೂರ್ತಿಗಳ ಪಾತ್ರವನ್ನು ರೇಖಾಂಕಿತಗೊಳಿಸಿ ಗುರುತಿಸುವರು.

ಕಾಯಿದೆ ಕಾನೂನು ನಿಷ್ಪಕ್ಷಪಾತತೆಯ ಬಟ್ಟೆಯನ್ನು ಕಣ್ಣಿಗೆ ಕಟ್ಟಿಕೊಂಡಿರುವ ನ್ಯಾಯದೇವತೆಗೆ, ದಯೆ, ಕರುಣೆ ಸಹನೆ, ಘನತೆ, ಔದಾರ್ಯ, ಕ್ಷಮೆಯ ಗುಣಗಳೂ ಇರುತ್ತವೆ. ವಿವೇಚನೆಯಿಂದ ಆಕೆ ಅದನ್ನು ಬಳಸುತ್ತಾಳೆ ಕೂಡ. ಆರೋಗ್ಯಕರವಾಗಿ ಜನಪರ ಕಾಳಜಿಗಳೊಂದಿಗೆ ಕೆಲಸ ಮಾಡಲು ಪೂರಕವಾಗುವ ಸಕಾರಾತ್ಮಕ ಟೀಕೆಯನ್ನು ಅಸಹನೆಯಿಂದ ಕೊಡವಿ ಹಾಕುವಷ್ಟು ಸಂಕುಚಿತವಲ್ಲ ನ್ಯಾಯಾಂಗದ ಭುಜಗಳು. ಭೂಷಣ್ ಅವರ ಈ ಟೀಕೆ ತಮ್ಮ ಸ್ವಂತದ ಹಿತಕ್ಕಾಗಿ ಮಾಡಿರುವಂತಹುದಲ್ಲ. ಒಂದು ವೇಳೆ ಘನತೆಯ ಗಡಿಯನ್ನು ಅಷ್ಟಿಷ್ಟು ಮೀರಿದ್ದರೂ ಅದನ್ನು ರಚನಾತ್ಮಕವಾಗಿ ಸ್ವೀಕರಿಸಬೇಕಿತ್ತು ಸುಪ್ರೀಮ್ ಕೋರ್ಟು.

ಸುಪ್ರೀಮ್ ಕೋರ್ಟಿನ ಆಡಳಿತ ಕೊಳೆತಿದೆ, ದೇಶದಲ್ಲಿ ಜನತಂತ್ರ ಉಳಿಯಬೇಕೆಂದಿದ್ದರೆ ಅದನ್ನು ಸರಿಪಡಿಸಬೇಕು ಎಂದು ೨೦೧೮ರ ಜನವರಿಯಲ್ಲಿ ಸರ್ವೋಚ್ಚ ನ್ಯಾಯಾಲಯದ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಇತಿಹಾಸದಲ್ಲೇ ಮೊದಲ ಬಾರಿಗೆ ಎಂಬAತೆ ಪತ್ರಿಕಾಗೋಷ್ಠಿ ನಡೆಸಿ ಹೇಳಿದ್ದರು. ಅಂದಿನ ಮುಖ್ಯನ್ಯಾಯಮೂರ್ತಿ ದೀಪಕ್ ಮಿಶ್ರ ಯಾವ್ಯಾವ ನ್ಯಾಯಮೂರ್ತಿಗೆ ಯಾವ್ಯಾವ ಕೇಸುಗಳನ್ನು ವಿಚಾರಣೆಗೆ ಒಪ್ಪಿಸಬೇಕೆಂಬ ತೀರ್ಮಾನದಲ್ಲಿ ಗಂಭೀರ ಅಕ್ರಮಗಳು ನಡೆಯುತ್ತಿವೆ ಎಂಬ ಆಪಾದನೆಯನ್ನು ಈ ಹಿರಿಯ ನ್ಯಾಯಮೂರ್ತಿಗಳು ಮಾಡಿದ್ದರು. ನ್ಯಾಯಾಲಯದ ಘನತೆ ಮಣ್ಣುಪಾಲಾಗುತ್ತದೆಂಬ ಕಾರಣದಿಂದ ವಿವರಗಳನ್ನು ಬಹಿರಂಗಗೊಳಿಸುತ್ತಿಲ್ಲ ಎಂದೂ ಸಾರಿದ್ದರು. ಈ ನಾಲ್ವರ ಪೈಕಿ ಒಬ್ಬರಾದ ರಂಜನ್ ಗೊಗೋಯ್ ಮುಖ್ಯ ನ್ಯಾಯಮೂರ್ತಿಯ ಹುದ್ದೆ ಏರಿದರು. ಅವರ ಮೇಲಿನ ಆಪಾದನೆಗಳು ದೀಪಕ್ ಮಿಶ್ರ ವಿರುದ್ಧ ಮಾಡಿದ್ದ ಆಪಾದನೆಗಳಿಗಿಂತ ಹೀನ ಸ್ವರೂಪದವು.

ಸುಪ್ರೀಮ್ ಕೋರ್ಟಿನ ನಿವೃತ್ತ ನ್ಯಾಯಮೂರ್ತಿ ಮಾರ್ಕಂಡೇಯ ಕಾಟ್ಜು ಅವರ ಮಾತುಗಳನ್ನು ಯಥಾವತ್ ಉಲ್ಲೇಖಿಸುವುದಾದರೆ, “ಗೊಗೋಯ್ (ಅವರನ್ನು ನ್ಯಾಯಮೂರ್ತಿ ಎಂದು ಕರೆಯಲು ನನ್ನ ಮನಸ್ಸು ಒಪ್ಪುವುದಿಲ್ಲ) (ದೀಪಕ್ ಮಿಶ್ರ ಎಸಗಿದ್ದಕ್ಕಿಂತ) ಗಂಭೀರವಾದ, ದೊಡ್ಡದಾದ ದುರ್ವರ್ತನೆಗಳನ್ನು ಪ್ರದರ್ಶಿಸಿದರು. ಅಕ್ಷರಶಃ ಆಳುವ ಬಿಜೆಪಿ ಸರ್ಕಾರದ ಕಾಲಿಗೆ ಬಿದ್ದು ನಮಸ್ಕರಿಸಿದರು. ಬಹುತೇಕ ಸುಪ್ರೀಮ್ ಕೋರ್ಟನ್ನು ರಾಜಕೀಯ ಕಾರ್ಯಾಂಗದ ವಶಕ್ಕೆ ಒಪ್ಪಿಸಿದರು. ಜನರ ಹಕ್ಕುಗಳನ್ನು ಕಾಯುವ ಪವಿತ್ರ ಕಾರ್ಯಕ್ಕೆ ಎಳ್ಳು ನೀರು ಬಿಟ್ಟರು. ಆದರೆ ಗೊಗೋಯ್ ಹೀಗೆ ನಡೆದುಕೊಳ್ಳುತ್ತಿದ್ದಾಗ ಸುಪ್ರೀಮ್ ಕೋರ್ಟಿನ ನ್ಯಾಯಮೂರ್ತಿಗಳಿಂದ ಒಂದೇ ಒಂದು ಭಿನ್ನಮತದ ದನಿಯೂ ಕೇಳಿಬರಲಿಲ್ಲ.”

ಪ್ರಶಾಂತ್ ಭೂಷಣ್ ಟೀಕೆಗೆ ಸುಪ್ರೀಮ್ ಕೋರ್ಟ್ ಈಗ ತಳೆದಿರುವ ನಿಲುವಿನ ತರ್ಕದ ಪ್ರಕಾರ,2018ರಲ್ಲಿ ಪತ್ರಿಕಾಗೋಷ್ಠಿ ನಡೆಸಿದ ನಾಲ್ವರು ಹಿರಿಯ ನ್ಯಾಯಮೂರ್ತಿಗಳ ವಿರುದ್ಧವೂ ನ್ಯಾಯಾಂಗನಿಂದನೆ ಕ್ರಮ ಜರುಗಿಸಬೇಕು. ಮಾರ್ಕಂಡೇಯ ಕಾಟ್ಜು ಅವರನ್ನೂ ಬಿಡುವಂತಿಲ್ಲ.

ಕೋವಿಡ್-19 ಮಹಾಮಾರಿಯ ಈ ಸಂದರ್ಭದಲ್ಲಿ ಸುಪ್ರೀಮ್ ಕೋರ್ಟು ತನ್ನ ಕಲಾಪಗಳನ್ನು ಎಂದಿನಂತೆ ಕೋರ್ಟುಗಳಲ್ಲಿ ನಡೆಸುತ್ತಿಲ್ಲ. ವಾದ ಮಂಡನೆ- ವಿಚಾರಣೆ ತೀರ್ಪು ಎಲ್ಲವೂ ಕಂಪ್ಯೂಟರ್ ಜಾಲ ಬಳಸಿ ನಡೆಯುತ್ತಿದೆ. 19 ಸಾವಿರಕ್ಕೂ ಹೆಚ್ಚು ಕೇಸುಗಳು ವಿಚಾರಣೆಗೆ ಕಾದಿವೆ. ಇವುಗಳಲ್ಲಿ ಕಾಶ್ಮೀರಕ್ಕೆ ಸಂಬಂಧಿಸಿದ ಹೇಬಿಯಸ್ ಕಾರ್ಪಸ್ ಅರ್ಜಿಗಳು, ಪೌರತ್ವ

ಕಾಯಿದೆ ತಿದ್ದುಪಡಿಯನ್ನು ಪ್ರಶ್ನಿಸುವ ತುರ್ತು ಸ್ವರೂಪದ ಅರ್ಜಿಗಳೂ ಸೇರಿವೆ. ಇವುಗಳೆಲ್ಲವನ್ನೂ ಪಕ್ಕಕ್ಕಿರಿಸಿ ಪ್ರಶಾಂತ್ ಭೂಷಣ್ ಅವರ ವಿರುದ್ಧದ ಪ್ರಕರಣವನ್ನು ಕೈಗೆತ್ತಿಕೊಳ್ಳುವ ತುರ್ತನ್ನು ನಿವೃತ್ತ ನ್ಯಾಯಮೂರ್ತಿಗಳು, ನಿವೃತ್ತ ಹಿರಿಯ ಅಧಿಕಾರಿಗಳೂ ಪ್ರಶ್ನಿಸಿದ್ದಾರೆ.
ಹಾಲಿ ಸುಪ್ರೀಮ್ ಕೋರ್ಟ್ ನ್ಯಾಯಮೂರ್ತಿ ಅರುಣ್ ಮಿಶ್ರ ಅವರು ಪ್ರಧಾನಿ ಮೋದಿಯವರನ್ನು versatile Genius(ಬಹುಮಖ ಮೇಧಾವಿ) ಎಂದು ಸಾರ್ವಜನಿಕ ಸಮಾರಂಭವೊಂದರಲ್ಲಿ ಹೊಗಳಿದ್ದರು. ಪ್ರಶಾಂತ್ ಭೂಷಣ್ ಅವರು ಮೋದಿಯವರ ಕಟು ಟೀಕಾಕಾರರು ಎಂಬುದು ಜನಜನಿತ. ಆದರೂ ಪ್ರಶಾಂತ್ ವಿರುದ್ಧದ ಈ ಕೇಸನ್ನು ಅರುಣ್ ಮಿಶ್ರ ಅವರ ನ್ಯಾಯಪೀಠಕ್ಕೆ ಒಪ್ಪಿಸಿರುವ ಔಚಿತ್ಯವೂ ಪ್ರಶ್ನಾರ್ಹ.

ತಮ್ಮ ಮೇಲಿನ ಆಪಾದನೆಯ ವಿಚಾರಣೆಯನ್ನು ನ್ಯಾಯಮೂರ್ತಿ ಅರುಣ್ ಮಿಶ್ರ ಅವರಿಲ್ಲದ ಪೀಠಕ್ಕೆ ಒಪ್ಪಿಸಬೇಕು ಮತ್ತು ಶಿಕ್ಷೆಯ ಸ್ವರೂಪ- ಪ್ರಮಾಣದ ಪ್ರಕಟಣೆಯನ್ನು ಮರುವಿಮರ್ಶಾ ಅರ್ಜಿಯ ವಿಚಾರಣೆ ನಡೆಯುವವರೆಗೆ ಮುಂದೂಡಬೇಕು ಎಂಬುದಾಗಿ ಪ್ರಶಾಂತ್ ಅರ್ಜಿ ಸಲ್ಲಿಸಿದ್ದಾರೆ.

ಈ ಅರ್ಜಿಗೆ ಬೆಲೆ ಸಿಕ್ಕೀತೇ, ನಿವೃತ್ತ ನ್ಯಾಯಮೂರ್ತಿಗಳು ಸುಪ್ರೀಮ್ ಕೋರ್ಟಿಗೆ ಬೋಧಿಸಿರುವ ವಿವೇಕ ಕೆಲಸ ಮಾಡೀತೇ ಕಾದು ನೋಡಬೇಕಿದೆ.


ಇದನ್ನೂ ಓದಿ: ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ಸಂವಿಧಾನದ ರಕ್ಷಣೆ ಎನ್ನುವುದು ವ್ಯಕ್ತಿಗತವಾಗಿ ಹಾಗೂ ವೃತ್ತಿಯಿಂದ ಬರಬೇಕು. ಈ ದಿಸೆಯಲ್ಲಿ ಯಾವುದು ನನ್ನ ಆದ್ಯ ಕರ್ತವ್ಯ ಎಂದು ಭಾವಿಸಿದ್ದೇನೆಯೋ ಅದರ ಒಂದು ಸಣ್ಣ ಪ್ರಯತ್ನ ನನ್ನ ಟ್ವೀಟ್‌ಗಳಾಗಿವೆ.

ಕ್ಷಮೆಯಾಚಿಸುವುದಿಲ್ಲ, ಖುಷಿಯಿಂದ ಶಿಕ್ಷೆ ಸ್ವೀಕರಿಸುತ್ತೇನೆ: ಪ್ರಶಾಂತ್ ಭೂಷಣ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...