Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌: ’ಮಾನ್ಸೂನ್’ ಬಗ್ಗೆ ತಪ್ಪು ಮಾಹಿತಿ ನೀಡಿದ ಅಮಿತಾಬ್‌ ಬಚ್ಚನ್‌!

ಫ್ಯಾಕ್ಟ್‌‌ಚೆಕ್‌: ’ಮಾನ್ಸೂನ್’ ಬಗ್ಗೆ ತಪ್ಪು ಮಾಹಿತಿ ನೀಡಿದ ಅಮಿತಾಬ್‌ ಬಚ್ಚನ್‌!

ಶಬ್ದಗಳಿಂದ ಉಂಟಾಗುವ ತರಂಗಗಳಿಂದ ಕೊರೊನಾ ವೈರಸ್ ಸಾಯುತ್ತದೆ ಎಂದು ಟ್ವೀಟ್‌ ಮಾಡಿದ್ದೆರು. ನೆಟ್ಟಿಗರು ಇದರ ವಿರುದ್ಧ ಕಿಡಿಕಾರಿದಾಗ ಅವರು ಟ್ವೀಟ್ ಡಿಲೀಟ್ ಮಾಡಿದ್ದರು.

- Advertisement -
- Advertisement -

ಟ್ವಿಟ್ಟರ್‌ನಲ್ಲಿ 4.38 ಕೋಟಿ ಅನುಯಾಯಿಗಳನ್ನು ಹೊಂದಿರುವ ಬಾಲಿವುಡ್ ಚಿತ್ರನಟ ಅಮಿತಾಬ್‌ ಬಚ್ಚನ್ ಗುರುವಾರ ರಾತ್ರಿ “ಮಾನ್ಸೂನ್ 400 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ನಿಮಗೆ ತಿಳಿದಿದೆಯೇ? ಅದನ್ನು ಎಲ್ಲೋ ಓದಿದ ನೆನಪು.. ಆದರೆ ಅದನ್ನು ಹೇಗೆ ಮತ್ತು ಯಾರು ಲೆಕ್ಕ ಹಾಕಿದರು ..?” ಎಂದು ಟ್ವೇಟ್‌ ಮಾಡಿದ್ದಾರೆ.

ಅವರ ಈ ಪೋಸ್ಟ್ 2,100 ಬಾರಿ ರಿಟ್ವೀಟ್ ಮಾಡಲಾಗಿದ್ದು, 40,500 ಲೈಕ್‌‌ಗಳು ಪಡೆದಿದೆ. ಅದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌‌ಚೆಕ್

ನಮ್ಮ ಮಾನ್ಸೂನ್ ಕೇವಲ 40 ಮಿಲಿಯನ್‌ಗಳಷ್ಟು ಹಳೆಯದಾಗಿದೆ. ನಟ ಅಮಿತಾಬ್‌ ಬಚ್ಚನ್ ಪ್ರಶ್ನಿಸಿರುವಂತೆ ನಮ್ಮ ಮಾನ್ಸೂನ್ 400 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂಬ ವಾದ ತಪ್ಪಾಗಿದೆ.

ವಿಶ್ವದ ಅತಿದೊಡ್ಡ ಹವಾಮಾನ ವ್ಯವಸ್ಥೆಗಳಲ್ಲಿ ಒಂದಾಗಿರುವ ಏಷ್ಯನ್ ಮಾನ್ಸೂನ್ 40 ಮಿಲಿಯನ್‌ ವರ್ಷಗಳಷ್ಟು ಹಳೆಯದು ಎಂದು ಅಂತರರಾಷ್ಟ್ರೀಯ ಸಂಶೋಧನಾ ತಂಡದ ಹೊಸ ಅಧ್ಯಯನವು ಕಂಡುಹಿಡಿದಿದೆ ಎಂದು ಸೈನ್ಸ್ ಡೈಲಿ ಎಂಬ ವಿಜ್ಞಾನ ವೆಬ್‌ಸೈಟ್‌ ಮಾಹಿತಿ ನೀಡುತ್ತದೆ.

ಈ ಹಿಂದೆ, ಟಿಬೆಟಿಯನ್ ಪ್ರಸ್ಥಭೂಮಿ ಮತ್ತು ಹಿಮಾಲಯ ಪರ್ವತಗಳು ಖಂಡಾಂತರ ಚಲನೆಯಿಂದ ಮೇಲೆದ್ದ ಪರಿಣಾಮವಾಗಿ ಮಾನ್ಸೂನ್ 22-25 ಮಿಲಿಯನ್ ವರ್ಷಗಳಷ್ಟು ಹಳೆಯದು ಎಂದು ವಿಜ್ಞಾನಿಗಳು ನಂಬಿದ್ದರು. ಆದರೆ ಹೊಸ ಅಧ್ಯಯನಗಳು ಏಷ್ಯಾದ ಮಾನ್ಸೂನ್ 40 ಮಿಲಿಯನ್ ವರ್ಷಗಳಷ್ಟು ಹಿಂದೆ ವಾತಾವರಣದಲ್ಲಿ ಇಂಗಾಲದ ಡೈಆಕ್ಸೈಡ್ ಮತ್ತು ಬೆಚ್ಚಗಿನ ತಾಪಮಾನದ ಅವಧಿಯಿಂದಲೂ ಅಸ್ತಿತ್ವದಲ್ಲಿದೆ ಎಂದು ಕಂಡುಹಿಡಿದಿದೆ.

ಅಮಿತಾಬ್ ಬಚ್ಚನ್ ಸುಳ್ಳು ವಾದಗಳನ್ನು ಮಂಡಿಸುವ ಪೋಸ್ಟ್ ಮಾಡುವುದು ಇದೇ ಮೊದಲ ಬಾರಿಯಲ್ಲ. ಈ ಹಿಂದೆ ಅವರು ಗೀತರಚನೆಕಾರ ಮತ್ತು ಕವಿ ಪ್ರಸೂನ್ ಜೋಶಿ ಬರೆದ ಕವಿತೆಯೊಂದನ್ನು ತಮ್ಮ ತಂದೆ, ಕವಿ ಹರಿವನ್ಶ್ ರಾಯ್ ಬಚ್ಚನ್ ಅವರು ಬರೆದದ್ದು ಎಂದು ಸುಳ್ಳು ಬರೆದಿದ್ದರು. ನಂತರದ ಟ್ವೀಟ್‌ನಲ್ಲಿ ಆದ ಪ್ರಮಾದವನ್ನು ಒಪ್ಪಿಕೊಂಡು ಕ್ಷಮೆಯಾಚಿಸಿದ್ದರು.

ಅಲ್ಲದೇ ಕೊರೊನಾ ಲಾಕ್‌ಡೌನ್‌ ಸಮಯದಲ್ಲಿ ನರೇಂದ್ರ ಮೋದಿಯವರು ಚಪ್ಪಾಳೆ ತಟ್ಟಲು, ತಟ್ಟೆ ಬಡಿಯಲು ಸೂಚಿಸಿದ್ದರು. ಆಗ ಅಮಿತಾಬ್ ಬಚ್ಚನ್‌ರವರು ಈ ಶಬ್ದಗಳಿಂದ ಉಂಟಾಗುವ ತರಂಗಗಳಿಂದ ಕೊರೊನಾ ವೈರಸ್ ಸಾಯುತ್ತದೆ ಎಂದು ಟ್ವೀಟ್‌ ಮಾಡಿದ್ದೆರು. ನೆಟ್ಟಿಗರು ಇದರ ವಿರುದ್ಧ ಕಿಡಿಕಾರಿದಾಗ ಅವರು ಟ್ವೀಟ್ ಡಿಲೀಟ್ ಮಾಡಿದ್ದರು.

ನಮ್ಮ ಮಾನ್ಸೂನ್ ಕೇವಲ 40 ಮಿಲಿಯನ್ ವರ್ಷಗಳಷ್ಟು ಹಳೆಯದಾಗಿದೆ. ಅಮಿತಾಬ್ ಬಚ್ಚನ್ ಅವರ ಟ್ವೀಟ್‌‌ನಲ್ಲಿನ ಮಾನ್ಸೂನ್ 400 ವರ್ಷಗಳಷ್ಟು ಹಳೆಯದು ಎಂಬ ಮಾಹಿತಿ ತಪ್ಪಾಗಿದೆ.


ಓದಿ: ಸುಶಾಂತ್ ಸಿಂಗ್ ಸೊಸೆಯ ಬಗ್ಗೆ ಆಜ್‌ತಕ್‌ ಸೇರಿದಂತೆ ಹಲವಾರು ಮಾಧ್ಯಮಗಳು ಸುದ್ದಿ ಮಾಡಿದ್ದ ಈ ವರದಿ ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...