Homeಸಾಮಾಜಿಕಚಿಕ್ಕಮಗಳೂರಲ್ಲಿ ಮಧುಕರ ಶೆಟ್ಟಿ

ಚಿಕ್ಕಮಗಳೂರಲ್ಲಿ ಮಧುಕರ ಶೆಟ್ಟಿ

- Advertisement -
- Advertisement -

ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳು, ಯಾವ ಸರಕಾರಕ್ಕೂ ಸಹ್ಯವಾಗುವುದಿಲ್ಲ. ಕ್ರಮೇಣ ಅಂತಹವರನ್ನ ಅಧೈರ್ಯಗೊಳಿಸಿ ಮೆತ್ತಗಾಗಿಸುತ್ತವೆ. ಈಗ ತೀರಿಕೊಂಡ ಮಧುಕರ ಶೆಟ್ಟಿಯವರು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದಲೇ ಹೆಸರು ಮಾಡಿದವರು. ಇಂತಹ ಅಧಿಕಾರಿ ನಮ್ಮ ಚಿಕ್ಕಮಗಳೂರಿಗೆ ಎಸ್ಪಿಯಾಗಿ ಬಂದಾಗ ಸಾರ್ವಜನಿಕರಿಗೆ ಸಂಭ್ರಮವಾದರೆ, ಜನಪೀಡಕ ರಾಜಕಾರಣಿಗಳಿಗೆ ತೊಳ್ಳೆ ನಡುಕವುಂಟಾಯ್ತು. ಈ ಪೈಕಿ ಇಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯ ಬಲಗೈಯಂತಿರುವ ಭೋಜೇಗೌಡ ಮತ್ತು ಸಿ.ಟಿ ರವಿ ಎಂಬ ಜಿಲ್ಲೆಯ ಸಮಸ್ಯೆಗಳು ಮಧುಕರ ಶೆಟ್ಟಿಯವರನ್ನ ಎದುರುಗೊಳ್ಳಲು ಹಿಂಜರಿಯತೊಡಗಿದವು. ಆದರೂ ಅವರನ್ನ ಎತ್ತಂಗಡಿ ಮಾಡಿಸಲು ಜೊತೆಯಾಗಿಯೇ ಶ್ರಮಿಸುತ್ತಿದ್ದವು. ಭೋಜೇಗೌಡ ಆಗಾಗ್ಗೆ ಕುಮಾರಸ್ವಾಮಿಗೆ ಎಸ್ಪಿ ವಿರುದ್ಧ ದೂರು ಹೇಳುವುದನ್ನೇ ಕಾಯಕ ಮಾಡಿಕೊಂಡರೆ ಸಿ.ಟಿ.ರವಿ ಎಸ್ಪಿಗೆ ಕೆಟ್ಟ ಹೆಸರು ತರಲು ಹವಣಿಸುತ್ತಿದ್ದರು. ಈ ಸವiಯದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ಕಠಾರಿಯ ಧಕ್ಷ ಅಧಿಕಾರಿಯಾದ್ದರಿಂದ ರಾಜಕಾರಣಿಗಳ ಪುಂಗಿ ಬಂದಾಗಿತ್ತು. ಇಂತಹ ಉಸಿರುಗಟ್ಟುವ ಸನ್ನಿವೇಶದಲ್ಲಿ ಭೋಜೇಗೌಡ ಕುಮಾರಣ್ಣನ ಮೇಲೆ ವಿಪರೀತ ಒತ್ತಡ ತಂದಿದ್ದರಿಂದ ಮಧುಕರ ಶೆಟ್ಟರು ರಾಜ್ಯಪಾಲರ ಸೆಕ್ಯೂರಿಟಿ ಮುಖ್ಯಸ್ಥರಾಗಿ ವರ್ಗಾವಣೆಗೊಂಡರು! ಇದು ಒಬ್ಬ ದಕ್ಷ ಅಧಿಕಾರೊಗೆ ಸರಕಾರ ಮಾಡಿದ ತೀವ್ರ ತರದ ಅವಮಾನ. ಏಕೆಂದರೆ ಚಿಕ್ಕಮಗಳೂರ ಬಡವರು ಕೂಲಿ ಕಾರ್ಮಿಕರು ಮತ್ತು ಹಿಂದುಳಿದ ಜಾತಿಗಳು ನಮಗೆ ಯಾರಿಲ್ಲದಿದ್ದರೂ ಜಿಲ್ಲಾ ರಕ್ಷಣಾಧಿಕಾರಿಗಳಿಂದ ಪೂರ್ಣ ರಕ್ಷಣೆಯಿದೆ ಎಂದು ಭಾವಿಸಿದ್ದರು. ಕಾಡಲ್ಲಿನ ನಕ್ಷಲರೂ ಕೂಡ ಮಧುಕರ ಶೆಟ್ಟರು ಎಸ್ಪಿಯಾಗಿರುವುದರಿಂದ ನಮಗಾವ ತೊಂದರೆಯಿಲ್ಲವೆಂದು ಭಾವಿಸಿದ್ದರು. ಎಸ್ಪಿ ಕೂಡ ಆ ನಕ್ಸಲರನ್ನ ಅಕ್ಕ-ಪಕ್ಕದ ಜಿಲ್ಲೆಗೆ ಓಡಿಸಿ ಎಂದು ಹೇಳಿದ್ದರು. ತಮ್ಮ ಇರುವಿಕೆಯ ಕಾರಣಕ್ಕೆ ಹಲವು ಸಮಸ್ಯೆಗಳು ಕರಗಿ ಹೋಗುವಂತೆ ನೋಡಿಕೊಂಡಿದ್ದ ಮಧುಕರ ಶೆಟ್ಟರಿಂದ ರಾಜಕಾರಣಿಗಳು ನಿರುದ್ಯೋಗಿಗಳಂತಾಗಿದ್ದರು. ಇಂತಿರುವಾಗ ನಮಗೆ ಬೇಕೇ ಇಲ್ಲದ ರಾಜ್ಯಪಾಲರೆಂಬ ಮುದಿಯಾನೆಯ ರಕ್ಷಣೆಗೆ ಹೋಗಿ ಅದರ ಹಿಂದೆ ನಿಂತಾಗ ಜಿಲ್ಲೆಯ ಕಿಡಿಗೇಡಿ ರಾಜಕಾರಣಿಗಳು ಕುಹಕವಾಗಿ ನಕ್ಕು ಸಂತೋಷ ವ್ಯಕ್ತಪಡಿಸಿದ್ದರು.
ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳಿಗೆ ಅವಮಾನವಾಗುತ್ತಿರುವುದು ಈ ಜಿಲ್ಲೆಯಲ್ಲಿ ಇದೇ ಮೊದಲಲ್ಲ. ಹೆಚ್.ಎಲ್.ನಾಗೇಗೌಡರು ಡಿ.ಸಿ.ಯಾಗಿದ್ದ ಕಾಲದಿಂದಲೂ ನಡೆದು ಬಂದಿದೆ. ಅದರಲ್ಲೂ ಬಿರೂರು ಶಾಸಕರಾಗಿದ್ದ ಲಕ್ಷ್ಮಯ್ಯ ಪಿಳ್ಳೆನಳ್ಳಿ ಊರ ಮುಂದೆ ನಿಂತು ಪ್ಯಾಂಟ್‍ಜಿಪ್ ತೆಗೆದು ತನ್ನ ವೈರಿಗಳ ಹೆಂಗಸರನ್ನು ಕರೆದು ತನ್ನ ತಾಕತ್ತು ತೋರುತ್ತೇನೆ ಎಂದಿದ್ದರು. ಇದನ್ನು ಕಂಡ ಬಿಪಿನ್ ಗೋಪಾಲಕೃಷ್ಣ ಎಂಬ ಎಸ್ಪಿ ಕೂಡಲೆ ಕ್ರಮ ಜರುಗಿಸಿದ್ದರಿಂದ ಅವರನ್ನು 24 ಗಂಟೆಯಲ್ಲಿ ವರ್ಗ ಮಾಡಿಸಿದ್ದರು. ಅದೇ ¯ಕ್ಷ್ಮಯ್ಯನವರ ಮಗ ಭೋಜೇಗೌಡ ಮಧುಕರ ಶೆಟ್ಟರನ್ನ ವರ್ಗ ಮಾಡಿಸಿದ್ದರು. ಕೆಟ್ಟ ಸರಕಾರಗಳು ಬಂದಾಗ ಒಳ್ಳೆ ಅಧಿಕಾರಿಗಳು ತೊಂದರೆ ಅವಮಾನಕ್ಕೊಳಗಾಗುವುದು ಸಾಮಾನ್ಯ. ಆದ್ದರಿಂದ ಮಧುಕರಶೆಟ್ಟರು ತಮ್ಮ ಸೇವಾವಧಿಯಲ್ಲಿ ನೋವನ್ನ ಅನುಭವಿಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ದಲಿತ ಜನಾಂಗದಿಂದ ಬಂದ ಬಿ.ಬಿ ನಿಂಗಯ್ಯ, ಮೋಟಮ್ಮ ಇಂತವರೆಲ್ಲಾ ಮಂತ್ರಿಗಳಾಗಿ ಮೆರೆದರು. ಆದರೂ ಭೂಮಾಲೀಕರ ನಿರಂತರ ಶೋಷಣೆಗೆ ತುತ್ತಾದ ದಲಿತರಿಗೆ ಹರ್ಷಗುಪ್ತ ಮತ್ತು ಮಧುಕರ ಶೆಟ್ಟರು ವಸತಿ ನಿರ್ಮಿಸಿಕೊಟ್ಟು ನಿರ್ಗತಿಕರ ಬಾಳಿಗೆ ಬೆಳಕಾದದ್ದು ವಿಶೇಷ ಇದರಿಂದ ಅರ್ಥವಾಗುವುದೇನೆಂದರೆ, ಈ ಪಂಚರಂಗಿ ರಾಜಕಾರಣಿಗಳಿಂದ ಏನೂ ಆಗುವುದಿಲ್ಲ. ಜನಪರ ಕಾಳಜಿಯ ಅಧಿಕಾರಿಗಳಿಂದ ಮಾತ್ರ ಜನ ನೆಮ್ಮದಿ ಕಾಣಬಲ್ಲರು ಎಂಬುದು ಸಾಬೀತಾಗಿದೆ. ಚಿಕ್ಕಮಗಳೂರಲ್ಲಿ ಎಷ್ಟೆಲ್ಲಾ ರಾಜಕಾರಣಿಗಳು ಆಗಿಹೋದರೂ ಜನಮಾನಸಲ್ಲುಳಿದವರು ದಕ್ಷ ಪ್ರಾಮಾಣಿಕ ಅಧಿಕಾರಿಗಳು ಮಾತ್ರ ಎಂಬುದು ವಿಶೇಷ!

ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...