Homeಸಾಮಾಜಿಕಚಿಕ್ಕಮಗಳೂರಲ್ಲಿ ಮಧುಕರ ಶೆಟ್ಟಿ

ಚಿಕ್ಕಮಗಳೂರಲ್ಲಿ ಮಧುಕರ ಶೆಟ್ಟಿ

- Advertisement -
- Advertisement -

ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳು, ಯಾವ ಸರಕಾರಕ್ಕೂ ಸಹ್ಯವಾಗುವುದಿಲ್ಲ. ಕ್ರಮೇಣ ಅಂತಹವರನ್ನ ಅಧೈರ್ಯಗೊಳಿಸಿ ಮೆತ್ತಗಾಗಿಸುತ್ತವೆ. ಈಗ ತೀರಿಕೊಂಡ ಮಧುಕರ ಶೆಟ್ಟಿಯವರು ದಕ್ಷತೆ ಮತ್ತು ಪ್ರಾಮಾಣಿಕತೆಯಿಂದಲೇ ಹೆಸರು ಮಾಡಿದವರು. ಇಂತಹ ಅಧಿಕಾರಿ ನಮ್ಮ ಚಿಕ್ಕಮಗಳೂರಿಗೆ ಎಸ್ಪಿಯಾಗಿ ಬಂದಾಗ ಸಾರ್ವಜನಿಕರಿಗೆ ಸಂಭ್ರಮವಾದರೆ, ಜನಪೀಡಕ ರಾಜಕಾರಣಿಗಳಿಗೆ ತೊಳ್ಳೆ ನಡುಕವುಂಟಾಯ್ತು. ಈ ಪೈಕಿ ಇಂದಿನ ಮುಖ್ಯಮಂತ್ರಿ ಕುಮಾರಸ್ವಾಮಿಯ ಬಲಗೈಯಂತಿರುವ ಭೋಜೇಗೌಡ ಮತ್ತು ಸಿ.ಟಿ ರವಿ ಎಂಬ ಜಿಲ್ಲೆಯ ಸಮಸ್ಯೆಗಳು ಮಧುಕರ ಶೆಟ್ಟಿಯವರನ್ನ ಎದುರುಗೊಳ್ಳಲು ಹಿಂಜರಿಯತೊಡಗಿದವು. ಆದರೂ ಅವರನ್ನ ಎತ್ತಂಗಡಿ ಮಾಡಿಸಲು ಜೊತೆಯಾಗಿಯೇ ಶ್ರಮಿಸುತ್ತಿದ್ದವು. ಭೋಜೇಗೌಡ ಆಗಾಗ್ಗೆ ಕುಮಾರಸ್ವಾಮಿಗೆ ಎಸ್ಪಿ ವಿರುದ್ಧ ದೂರು ಹೇಳುವುದನ್ನೇ ಕಾಯಕ ಮಾಡಿಕೊಂಡರೆ ಸಿ.ಟಿ.ರವಿ ಎಸ್ಪಿಗೆ ಕೆಟ್ಟ ಹೆಸರು ತರಲು ಹವಣಿಸುತ್ತಿದ್ದರು. ಈ ಸವiಯದಲ್ಲಿ ಜಿಲ್ಲಾಧಿಕಾರಿಗಳಾಗಿದ್ದ ಕಠಾರಿಯ ಧಕ್ಷ ಅಧಿಕಾರಿಯಾದ್ದರಿಂದ ರಾಜಕಾರಣಿಗಳ ಪುಂಗಿ ಬಂದಾಗಿತ್ತು. ಇಂತಹ ಉಸಿರುಗಟ್ಟುವ ಸನ್ನಿವೇಶದಲ್ಲಿ ಭೋಜೇಗೌಡ ಕುಮಾರಣ್ಣನ ಮೇಲೆ ವಿಪರೀತ ಒತ್ತಡ ತಂದಿದ್ದರಿಂದ ಮಧುಕರ ಶೆಟ್ಟರು ರಾಜ್ಯಪಾಲರ ಸೆಕ್ಯೂರಿಟಿ ಮುಖ್ಯಸ್ಥರಾಗಿ ವರ್ಗಾವಣೆಗೊಂಡರು! ಇದು ಒಬ್ಬ ದಕ್ಷ ಅಧಿಕಾರೊಗೆ ಸರಕಾರ ಮಾಡಿದ ತೀವ್ರ ತರದ ಅವಮಾನ. ಏಕೆಂದರೆ ಚಿಕ್ಕಮಗಳೂರ ಬಡವರು ಕೂಲಿ ಕಾರ್ಮಿಕರು ಮತ್ತು ಹಿಂದುಳಿದ ಜಾತಿಗಳು ನಮಗೆ ಯಾರಿಲ್ಲದಿದ್ದರೂ ಜಿಲ್ಲಾ ರಕ್ಷಣಾಧಿಕಾರಿಗಳಿಂದ ಪೂರ್ಣ ರಕ್ಷಣೆಯಿದೆ ಎಂದು ಭಾವಿಸಿದ್ದರು. ಕಾಡಲ್ಲಿನ ನಕ್ಷಲರೂ ಕೂಡ ಮಧುಕರ ಶೆಟ್ಟರು ಎಸ್ಪಿಯಾಗಿರುವುದರಿಂದ ನಮಗಾವ ತೊಂದರೆಯಿಲ್ಲವೆಂದು ಭಾವಿಸಿದ್ದರು. ಎಸ್ಪಿ ಕೂಡ ಆ ನಕ್ಸಲರನ್ನ ಅಕ್ಕ-ಪಕ್ಕದ ಜಿಲ್ಲೆಗೆ ಓಡಿಸಿ ಎಂದು ಹೇಳಿದ್ದರು. ತಮ್ಮ ಇರುವಿಕೆಯ ಕಾರಣಕ್ಕೆ ಹಲವು ಸಮಸ್ಯೆಗಳು ಕರಗಿ ಹೋಗುವಂತೆ ನೋಡಿಕೊಂಡಿದ್ದ ಮಧುಕರ ಶೆಟ್ಟರಿಂದ ರಾಜಕಾರಣಿಗಳು ನಿರುದ್ಯೋಗಿಗಳಂತಾಗಿದ್ದರು. ಇಂತಿರುವಾಗ ನಮಗೆ ಬೇಕೇ ಇಲ್ಲದ ರಾಜ್ಯಪಾಲರೆಂಬ ಮುದಿಯಾನೆಯ ರಕ್ಷಣೆಗೆ ಹೋಗಿ ಅದರ ಹಿಂದೆ ನಿಂತಾಗ ಜಿಲ್ಲೆಯ ಕಿಡಿಗೇಡಿ ರಾಜಕಾರಣಿಗಳು ಕುಹಕವಾಗಿ ನಕ್ಕು ಸಂತೋಷ ವ್ಯಕ್ತಪಡಿಸಿದ್ದರು.
ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿಗಳಿಗೆ ಅವಮಾನವಾಗುತ್ತಿರುವುದು ಈ ಜಿಲ್ಲೆಯಲ್ಲಿ ಇದೇ ಮೊದಲಲ್ಲ. ಹೆಚ್.ಎಲ್.ನಾಗೇಗೌಡರು ಡಿ.ಸಿ.ಯಾಗಿದ್ದ ಕಾಲದಿಂದಲೂ ನಡೆದು ಬಂದಿದೆ. ಅದರಲ್ಲೂ ಬಿರೂರು ಶಾಸಕರಾಗಿದ್ದ ಲಕ್ಷ್ಮಯ್ಯ ಪಿಳ್ಳೆನಳ್ಳಿ ಊರ ಮುಂದೆ ನಿಂತು ಪ್ಯಾಂಟ್‍ಜಿಪ್ ತೆಗೆದು ತನ್ನ ವೈರಿಗಳ ಹೆಂಗಸರನ್ನು ಕರೆದು ತನ್ನ ತಾಕತ್ತು ತೋರುತ್ತೇನೆ ಎಂದಿದ್ದರು. ಇದನ್ನು ಕಂಡ ಬಿಪಿನ್ ಗೋಪಾಲಕೃಷ್ಣ ಎಂಬ ಎಸ್ಪಿ ಕೂಡಲೆ ಕ್ರಮ ಜರುಗಿಸಿದ್ದರಿಂದ ಅವರನ್ನು 24 ಗಂಟೆಯಲ್ಲಿ ವರ್ಗ ಮಾಡಿಸಿದ್ದರು. ಅದೇ ¯ಕ್ಷ್ಮಯ್ಯನವರ ಮಗ ಭೋಜೇಗೌಡ ಮಧುಕರ ಶೆಟ್ಟರನ್ನ ವರ್ಗ ಮಾಡಿಸಿದ್ದರು. ಕೆಟ್ಟ ಸರಕಾರಗಳು ಬಂದಾಗ ಒಳ್ಳೆ ಅಧಿಕಾರಿಗಳು ತೊಂದರೆ ಅವಮಾನಕ್ಕೊಳಗಾಗುವುದು ಸಾಮಾನ್ಯ. ಆದ್ದರಿಂದ ಮಧುಕರಶೆಟ್ಟರು ತಮ್ಮ ಸೇವಾವಧಿಯಲ್ಲಿ ನೋವನ್ನ ಅನುಭವಿಸಿದ್ದರು. ಚಿಕ್ಕಮಗಳೂರು ಜಿಲ್ಲೆಯ ದಲಿತ ಜನಾಂಗದಿಂದ ಬಂದ ಬಿ.ಬಿ ನಿಂಗಯ್ಯ, ಮೋಟಮ್ಮ ಇಂತವರೆಲ್ಲಾ ಮಂತ್ರಿಗಳಾಗಿ ಮೆರೆದರು. ಆದರೂ ಭೂಮಾಲೀಕರ ನಿರಂತರ ಶೋಷಣೆಗೆ ತುತ್ತಾದ ದಲಿತರಿಗೆ ಹರ್ಷಗುಪ್ತ ಮತ್ತು ಮಧುಕರ ಶೆಟ್ಟರು ವಸತಿ ನಿರ್ಮಿಸಿಕೊಟ್ಟು ನಿರ್ಗತಿಕರ ಬಾಳಿಗೆ ಬೆಳಕಾದದ್ದು ವಿಶೇಷ ಇದರಿಂದ ಅರ್ಥವಾಗುವುದೇನೆಂದರೆ, ಈ ಪಂಚರಂಗಿ ರಾಜಕಾರಣಿಗಳಿಂದ ಏನೂ ಆಗುವುದಿಲ್ಲ. ಜನಪರ ಕಾಳಜಿಯ ಅಧಿಕಾರಿಗಳಿಂದ ಮಾತ್ರ ಜನ ನೆಮ್ಮದಿ ಕಾಣಬಲ್ಲರು ಎಂಬುದು ಸಾಬೀತಾಗಿದೆ. ಚಿಕ್ಕಮಗಳೂರಲ್ಲಿ ಎಷ್ಟೆಲ್ಲಾ ರಾಜಕಾರಣಿಗಳು ಆಗಿಹೋದರೂ ಜನಮಾನಸಲ್ಲುಳಿದವರು ದಕ್ಷ ಪ್ರಾಮಾಣಿಕ ಅಧಿಕಾರಿಗಳು ಮಾತ್ರ ಎಂಬುದು ವಿಶೇಷ!

ವರದಿಗಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...