Homeಮುಖಪುಟಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ಚತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್‌ ಬಾಗೆಲ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಕೇಳಿಕೊಂಡರು.

- Advertisement -
- Advertisement -

ಕಾಂಗ್ರೆಸ್ ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಸಭೆ ಸೇರಿದ್ದು, ಅಧ್ಯಕ್ಷ ಸ್ಥಾನ ಸೇರಿದಂತೆ ಹಲವು ವಿಷಯಗಳಿಗೆ ಭಾರೀ ಚರ್ಚೆ ಆರಂಭವಾಗಿದೆ.

ಪಕ್ಷದ 20 ಕ್ಕೂ ಹೆಚ್ಚು ಉನ್ನತ ನಾಯಕರು ಬರೆದಿರುವ “ಭಿನ್ನಮತೀಯ” ಪತ್ರದ ಬಗೆಗಿನ ಭಾರಿ ವಿವಾದ ಭುಗಿಲೆದ್ದಿದ್ದು ರಾಹುಲ್ ಗಾಂಧಿ ಪತ್ರದ ವಿರುದ್ಧ ಕಿಡಿಕಾರಿದ್ದಾರೆ.

ಪಕ್ಷದ ಅತೀ ಪ್ರಮುಖ ಸಭೆಯ ಪ್ರಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ತನ್ನನ್ನು ನಿರಾಳರಾಗುವಂತೆ ಸೋನಿಯಾ ಗಾಂಧಿಯವರ ಪತ್ರವನ್ನು ಓದಲಾಯಿತು. ವೇಣುಗೋಪಾಲ್ ನಂತರ ಮಾತನಾಡಿದ ಸೋನಿಯಾ ಗಾಂಧಿಯವರ ಬದಲಿಗೆ ಹೊಸ ಅಧ್ಯಕ್ಷರನ್ನು ಹುಡುಕುವ ಪ್ರಕ್ರಿಯೆಯನ್ನು ರೂಪಿಸುವ ಚರ್ಚೆಯನ್ನು ಪ್ರಾರಂಭಿಸಲು ಪಕ್ಷವನ್ನು ವಿನಂತಿಸಿದರು.

ಸೋನಿಯಾ ಗಾಂಧಿ ಮಾತನ್ನು ಬೆಂಬಲಿಸಿ ಹಾಗೂ ಭಿನ್ನಮತೀಯ ಪತ್ರ ಬರೆದ ನಾಯಕರ ವಿರುದ್ದ ರಾಹುಲ್  ಬಿಜೆಪಿಯೊಂದಿಗೆ ಸಹಕರಿಸಿದ್ದಾರೆ ಎಂದು ಆರೋಪಿಸಿದ್ದಾರೆ.

ಪತ್ರವನ್ನು ಬೆಂಬಲಿಸಿದ ಗುಲಾಮ್‌ ನಬಿ ಆಝಾದ್ ತಾನು ಬಿಜೆಪಿಯೊಂದಿಗೆ ಸಹಕರಿಸಿದ್ದು ಸಾಬೀತಾದರೆ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದರು. ಮಾಜಿ ಕೇಂದ್ರ ಸಚಿವರಾದ ಕಪಿಲ್ ಸಿಬಲ್ ರಾಹುಲ್ ಗಾಂಧಿಯವರ ಆರೋಪಕ್ಕೆ ವಿರೋಧ ವ್ಯಕ್ತಪಡಿಸಿ ಟ್ವೀಟ್ ಮಾಡಿದ್ದಾರೆ, “ನಾವು ಬಿಜೆಪಿಯೊಂದಿಗೆ ಸಹಕರಿಸುತ್ತಿದ್ದೆವೆ ಎಂದು ರಾಹುಲ್ ಗಾಂಧಿ ಹೇಳುತ್ತಾರೆ. ಕಾಂಗ್ರೆಸ್ ಪಕ್ಷವನ್ನು ರಕ್ಷಿಸಲು ರಾಜಸ್ಥಾನ ಹೈಕೋರ್ಟ್‌ನಲ್ಲಿ ಯಶಸ್ವಿಯಾಗಿದೆ. ಮಣಿಪುರದಲ್ಲಿ ಪಕ್ಷವನ್ನು ರಕ್ಷಿಸುತ್ತಿದ್ದೇವೆ. ಕಳೆದ 30 ವರ್ಷಗಳಲ್ಲಿ ಯಾವುದೇ ವಿಷಯದ ಬಗ್ಗೆ ಬಿಜೆಪಿಯ ಪರವಾಗಿ ಹೇಳಿಕೆ ನೀಡಿಲ್ಲ” ಎಂದು ಅವರು ಬರೆದಿದ್ದಾರೆ.

ನಂತರ ರಾಹುಲ್ ಗಾಂಧಿಯವರು ಸಿಬಲ್ ಅವರೊಂದಿಗೆ ವಯಕ್ತಿಕವಾಗಿ ಮಾತನಾಡಿ ಮಾಧ್ಯಮಗಳ ವರದಿಯನ್ನು ನಂಬಬೇಡಿ ಎಂದು ಮನವಿ ಮಾಡಿದ ನಂತರ ಸಿಬಲ್ ತನ್ನ ಟ್ವೀಟ್‌ ಅನ್ನು ಅಳಿಸಿಹಾಕಿದ್ದಾರೆ.

20ಕ್ಕೂ ಹೆಚ್ಚು ಕಾಂಗ್ರೆಸ್ ನಾಯಕರು ತಮ್ಮ ಪತ್ರದಲ್ಲಿ, ಪೂರ್ಣ ಸಮಯದ ಪರಿಣಾಮಕಾರಿ ನಾಯಕತ್ವಕ್ಕೆ ಕರೆ ನೀಡಿದ್ದಾರೆ. ಪ್ರಾಮಾಣಿಕ ಆತ್ಮಾವಲೋಕನ ಮಾಡುವಂತೆ ಹಾಗೂ ಸಾಮೂಹಿಕ ನಾಯಕತ್ವಕ್ಕೆ, ಅಧಿಕಾರದ ವಿಕೇಂದ್ರೀಕರಣಕ್ಕೆ, ರಾಜ್ಯ ಘಟಕಗಳ ಸಬಲೀಕರಣ ಮತ್ತು ಪ್ರತಿ ಹಂತದಲ್ಲೂ ಸಾಂಸ್ಥಿಕ ಚುನಾವಣೆಗಳು ನಡೆಸುವ ಬಗ್ಗೆ ಸೇರಿದಂತೆ ಹಲವಾರು ಸುಧಾರಣೆಗಳನ್ನು ಈ ಪತ್ರವು ಸೂಚಿಸಿತ್ತು ಎಂದು ಮೂಲಗಳು ತಿಳಿಸಿದೆ.

ಚತ್ತೀಸ್‌ಘಡ ಮುಖ್ಯಮಂತ್ರಿ ಭೂಪೇಶ್‌ ಬಾಗೆಲ್ ಹಾಗೂ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸೇರಿದಂತೆ ಕರ್ನಾಟಕದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವಂತೆ ಕೇಳಿಕೊಂಡರು.

ಈ ಮಧ್ಯೆ ಭಿನ್ನಮತೀಯರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಸಂಸದೆ ರಮ್ಯ, “ಅವರು ಪತ್ರವನ್ನು ಮಾಧ್ಯಮಗಳಿಗೆ ಸೋರಿಕೆ ಮಾಡಿದ್ದಲ್ಲದೆ, ಅವರು ಇದೀಗ ನಡೆಯುತ್ತಿರುವ ಕಾರ್ಯಕಾರಿ ಸಮಿತಿ ಸಭೆಯ ನಿಮಿಷದ ನಿಮಿಷದ ಸಂಭಾಷಣೆಗಳನ್ನು ಮಾಧ್ಯಮಗಳಿಗೆ ನೀಡುವುದನ್ನು ಮುಂದುವರೆಸಿದ್ದಾರೆ” ಎಂದು ಬರೆದಿದ್ದಾರೆ.

ಸಭೆಯಲ್ಲಿ ಸೋನಿಯ ಗಾಂಧಿ ತಮ್ಮ ನಿರ್ಧಾರವನ್ನು ಘೋಷಿಸಿದ ನಂತರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಮಾತನಾಡಿ ಸೋನಿಯಾ ಗಾಂಧಿ ಪಕ್ಷದ ಅಧ್ಯಕ್ಷರಾಗಿ ಉಳಿಯುವಂತೆ ಕೇಳಿದರು. ಅಲ್ಲದೆ 20 ನಾಯಕರು ಬರೆದಿರುವ ಪತ್ರವನ್ನು ದುರದೃಷ್ಟಕರ ಎಂದು ಕರೆದ ಅವರು, ಪಕ್ಷದ ಹೈಕಮಾಂಡ್‌ ಅನ್ನು ದುರ್ಬಲಗೊಳಿಸುವುದು ಕಾಂಗ್ರೆಸನ್ನು ದುರ್ಬಲಗೊಳಿಸುತ್ತದೆ ಎಂದು ಟೀಕಿಸಿದರು

ಮತ್ತೊಬ್ಬ ಹಿರಿಯ ಮುಖಂಡ ಎ.ಕೆ.ಆಂಟನಿ ರಾಹುಲ್ ಗಾಂಧಿಯನ್ನು ಪಕ್ಷದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಕೇಳಿಕೊಂಡರು.

ಗುಲಾಮ್ ನಬಿ ಆಜಾದ್ ಅವರಲ್ಲದೆ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಆನಂದ್ ಶರ್ಮಾ, ಮುಕುಲ್ ವಾಸ್ನಿಕ್ ಮತ್ತು ಜಿತಿನ್ ಪ್ರಸಾದ ಕೂಡಾ ಭಿನ್ನಮತೀಯ ಪತ್ರಕ್ಕೆ ಸಹಿ ಹಾಕಿದ್ದಾರೆ.


ಓದಿ: ಕಾಂಗ್ರೆಸ್‌ಗೆ ಪಕ್ಷಾಂತರಗೊಂಡಿದ್ದ 6 ಶಾಸಕರ ಕುರಿತ ಬಿಎಸ್‌ಪಿ ಅರ್ಜಿ ವಜಾಗೊಳಿಸಿದ ಸುಪ್ರೀಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...