Homeಮುಖಪುಟಮತದಾರರ ವಿವರಗಳನ್ನು ಕಾನೂನುಬಾಹಿರವಾಗಿ ಹಂಚಿಕೊಂಡ ಚುನಾವಣಾ ಆಯೋಗ?

ಮತದಾರರ ವಿವರಗಳನ್ನು ಕಾನೂನುಬಾಹಿರವಾಗಿ ಹಂಚಿಕೊಂಡ ಚುನಾವಣಾ ಆಯೋಗ?

ಫೆಬ್ರವರಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹತ್ಯಾಕಾಂಡವು 53 ಜನರನ್ನು ಬಲಿ ತೆಗೆದುಕೊಂಡಿತ್ತು. ಇವರಲ್ಲಿ ಹೆಚ್ಚಿನವರು ಭಾರತದ ರಾಷ್ಟ್ರ ರಾಜಧಾನಿಯಲ್ಲಿನ ಮುಸ್ಲಿಮರಾಗಿದ್ದಾರೆ.

- Advertisement -
- Advertisement -

ಫೆಬ್ರವರಿ 2020 ರಲ್ಲಿ ನಡೆದ ದೆಹಲಿ ಗಲಭೆಯ ನಂತರ, ಭಾರತದ ಚುನಾವಣಾ ಆಯೋಗ ಈಶಾನ್ಯ ದೆಹಲಿಯ ಎಲ್ಲಾ ನಿವಾಸಿಗಳ ಫೋಟೋಗಳು ಮತ್ತು ವಿಳಾಸಗಳನ್ನು ಪೊಲೀಸರೊಂದಿಗೆ ಕಾನೂನುಬಾಹಿರವಾಗಿ ಹಂಚಿಕೊಂಡಿದೆ ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಬಹಿರಂಗಗೊಳಿಸಿದ್ದಾರೆ.

ಚುನಾವಣಾ ಆಯೋಗದ ಪತ್ರವನ್ನು ಹಂಚಿಕೊಂಡ ಸಾಕೇತ್ ಗೋಖಲೆ, ಜನರ ಸಂಪೂರ್ಣ ಮತದಾರರ ಪಟ್ಟಿಯನ್ನು ದೆಹಲಿ ಪೊಲೀಸರಿಗೆ ಕಾನೂನುಬಾಹಿರವಾಗಿ ಹಸ್ತಾಂತರಿಸಲಾಗಿದೆ ಎಂದು ದೂರಿದ್ದಾರೆ.

“ಆದೇಶದ ಮೊದಲನೇ ಸಾಲು ಪೊಲೀಸರೊಂದಿಗೆ ಹಂಚಿಕೊಂಡ ಮತದಾರರ ಪಟ್ಟಿಗಳಲ್ಲಿ ಛಾಯಾಚಿತ್ರ ಇಲ್ಲ ಎಂದು ಹೇಳುತ್ತದೆ. ಆದರೂ ದೆಹಲಿ ಹತ್ಯಾಕಾಂಡದ ನಂತರ ಫೋಟೋಗಳೊಂದಿಗೆ ಈ ಪೂರ್ಣ ಮತದಾರರ ಪಟ್ಟಿಗಳನ್ನು ಪೊಲೀಸರಿಗೆ ಲಭ್ಯವಾಗುವಂತೆ ಮಾಡಿ, ಭಾರತದ ಚುನಾವಣಾ ಆಯೋಗ ತನ್ನದೇ ನಿಯಮಗಳನ್ನು ಮುರಿದಿದೆ. ಇದು ಯಾವುದೇ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರನ್ನು ಗುರುತಿಸಲು ಇದು ಸುಲಭವಾದ ಮಾರ್ಗವಾಗಿದೆ” ಎಂದು ಗೋಖಲೆ ಆರೋಪಿಸಿದ್ದಾರೆ.

ಚುನಾವಣಾ ಆಯೋಗದ ವಕ್ತಾರ ಶೆಫಾಲಿ ಶರಣ್ ಅವರನ್ನು ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ ರಾಷ್ಟ್ರೀಯ ಚುನಾವಣಾ ಸಂಸ್ಥೆ ತನ್ನದೇ ಆದ ನಿಯಮಗಳನ್ನು ಏಕೆ ಉಲ್ಲಂಘಿಸಿದೆ ಎಂದು ಸ್ಪಷ್ಟಪಡಿಸುವಂತೆ ಕೇಳಿದ್ದಾರೆ.

“ಮುಗ್ಧ ಮುಸ್ಲಿಂ ಯುವಕನನ್ನು ಪೊಲೀಸರು ನಿರಂಕುಶವಾಗಿ ಎತ್ತಿಕೊಂಡರು. ಇತರ ಸ್ಥಳಗಳಲ್ಲಿಯೂ ಸಹ ಫೋಟೋಗಳನ್ನು ಹೊಂದಿರುವ ಮತದಾರರ ಪಟ್ಟಿಗಳನ್ನು ಹಂಚಿಕೊಳ್ಳಲಾಗಿದೆಯೇ? ಇದು ಗಂಭೀರವಾಗಿದೆ!” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಚುನಾವಣಾ ಆಯೋಗವು ಈ ಆರೋಪಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗೋಖಲೆ ಹಂಚಿಕೊಂಡ ಚುನಾವಣಾ ಆಯೋಗದ ಉದ್ದೇಶಿತ ಪತ್ರದಲ್ಲಿ, ದೆಹಲಿ ಪೊಲೀಸರೊಂದಿಗೆ ‘ಈಶಾನ್ಯ ಸಂಸದೀಯ ಕ್ಷೇತ್ರದ ಮತದಾರರ ಚಿತ್ರಗಳ ಜೊತೆಗೆ ಮತದಾರರ ಪಟ್ಟಿಯನ್ನು ಪ್ರದರ್ಶಿಸುವಂತೆ’ ಮುಖ್ಯ ಕಾರ್ಯದರ್ಶಿ ಹಂತದ ಅಧಿಕಾರಿಗಳು, ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

“ದೆಹಲಿ ಪೊಲೀಸರ ಮನವಿಯನ್ನು ಗಮನದಲ್ಲಿಟ್ಟುಕೊಂಡು ಆಯೋಗವು, ದೆಹಲಿಯಲ್ಲಿ ಇತ್ತೀಚಿನ ಹಿಂಸಾಚಾರದ ತನಿಖಾ ತಂಡದೊಂದಿಗೆ ಸಿ.ಸಿ.ಟಿ.ವಿ ಮತ್ತು ಇತರ ವಿಡಿಯೋ ತುಣುಕಿನ ಮೂಲಕ ಸೆರೆಹಿಡಿಯಲಾದ ಅಪರಾಧಿಗಳ ಛಾಯಾಚಿತ್ರಗಳು, ದೆಹಲಿಯ ಈಶಾನ್ಯ ಸಂಸದೀಯ ಕ್ಷೇತ್ರದ ಮತದಾರರ ಚಿತ್ರಗಳೊಂದಿಗೆ ತನಿಖಾ ಅಧಿಕಾರಿಯ ಮುಂದೆ ಮತದಾರರ ಪಟ್ಟಿಯನ್ನು ಪ್ರದರ್ಶಿಸಲು ಸಲಹೆ ನೀಡುವಂತೆ ನಿರ್ದೇಶಿಸಿದೆ” ಎಂದು ಆಯೋಗದ ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹತ್ಯಾಕಾಂಡವು 53 ಜನರನ್ನು ಬಲಿ ತೆಗೆದುಕೊಂಡಿತ್ತು. ಇವರಲ್ಲಿ ಹೆಚ್ಚಿನವರು ಭಾರತದ ರಾಷ್ಟ್ರ ರಾಜಧಾನಿಯಲ್ಲಿನ ಮುಸ್ಲಿಮರಾಗಿದ್ದಾರೆ. ಬಿಜೆಪಿ ನಾಯಕರ ದ್ವೇಷದ ಭಾಷಣಗಳು ಸಹ ಈ ಹತ್ಯಾಕಾಂಡಕ್ಕೆ ಕಾರಣವಾಗಿದ್ದವು ಎಂಬ ಆರೋಪವಿದೆ.


ಇದನ್ನೂ ಓದಿ: ಚುನಾವಣಾ ಆಯೋಗವೆಂಬ ಬಿಜೆಪಿ ಕಚೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...