Homeಮುಖಪುಟಮತದಾರರ ವಿವರಗಳನ್ನು ಕಾನೂನುಬಾಹಿರವಾಗಿ ಹಂಚಿಕೊಂಡ ಚುನಾವಣಾ ಆಯೋಗ?

ಮತದಾರರ ವಿವರಗಳನ್ನು ಕಾನೂನುಬಾಹಿರವಾಗಿ ಹಂಚಿಕೊಂಡ ಚುನಾವಣಾ ಆಯೋಗ?

ಫೆಬ್ರವರಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹತ್ಯಾಕಾಂಡವು 53 ಜನರನ್ನು ಬಲಿ ತೆಗೆದುಕೊಂಡಿತ್ತು. ಇವರಲ್ಲಿ ಹೆಚ್ಚಿನವರು ಭಾರತದ ರಾಷ್ಟ್ರ ರಾಜಧಾನಿಯಲ್ಲಿನ ಮುಸ್ಲಿಮರಾಗಿದ್ದಾರೆ.

- Advertisement -
- Advertisement -

ಫೆಬ್ರವರಿ 2020 ರಲ್ಲಿ ನಡೆದ ದೆಹಲಿ ಗಲಭೆಯ ನಂತರ, ಭಾರತದ ಚುನಾವಣಾ ಆಯೋಗ ಈಶಾನ್ಯ ದೆಹಲಿಯ ಎಲ್ಲಾ ನಿವಾಸಿಗಳ ಫೋಟೋಗಳು ಮತ್ತು ವಿಳಾಸಗಳನ್ನು ಪೊಲೀಸರೊಂದಿಗೆ ಕಾನೂನುಬಾಹಿರವಾಗಿ ಹಂಚಿಕೊಂಡಿದೆ ಎಂದು ಆರ್‌ಟಿಐ ಕಾರ್ಯಕರ್ತ ಸಾಕೇತ್ ಗೋಖಲೆ ಬಹಿರಂಗಗೊಳಿಸಿದ್ದಾರೆ.

ಚುನಾವಣಾ ಆಯೋಗದ ಪತ್ರವನ್ನು ಹಂಚಿಕೊಂಡ ಸಾಕೇತ್ ಗೋಖಲೆ, ಜನರ ಸಂಪೂರ್ಣ ಮತದಾರರ ಪಟ್ಟಿಯನ್ನು ದೆಹಲಿ ಪೊಲೀಸರಿಗೆ ಕಾನೂನುಬಾಹಿರವಾಗಿ ಹಸ್ತಾಂತರಿಸಲಾಗಿದೆ ಎಂದು ದೂರಿದ್ದಾರೆ.

“ಆದೇಶದ ಮೊದಲನೇ ಸಾಲು ಪೊಲೀಸರೊಂದಿಗೆ ಹಂಚಿಕೊಂಡ ಮತದಾರರ ಪಟ್ಟಿಗಳಲ್ಲಿ ಛಾಯಾಚಿತ್ರ ಇಲ್ಲ ಎಂದು ಹೇಳುತ್ತದೆ. ಆದರೂ ದೆಹಲಿ ಹತ್ಯಾಕಾಂಡದ ನಂತರ ಫೋಟೋಗಳೊಂದಿಗೆ ಈ ಪೂರ್ಣ ಮತದಾರರ ಪಟ್ಟಿಗಳನ್ನು ಪೊಲೀಸರಿಗೆ ಲಭ್ಯವಾಗುವಂತೆ ಮಾಡಿ, ಭಾರತದ ಚುನಾವಣಾ ಆಯೋಗ ತನ್ನದೇ ನಿಯಮಗಳನ್ನು ಮುರಿದಿದೆ. ಇದು ಯಾವುದೇ ಪ್ರದೇಶದಲ್ಲಿ ವಾಸಿಸುವ ಅಲ್ಪಸಂಖ್ಯಾತರನ್ನು ಗುರುತಿಸಲು ಇದು ಸುಲಭವಾದ ಮಾರ್ಗವಾಗಿದೆ” ಎಂದು ಗೋಖಲೆ ಆರೋಪಿಸಿದ್ದಾರೆ.

ಚುನಾವಣಾ ಆಯೋಗದ ವಕ್ತಾರ ಶೆಫಾಲಿ ಶರಣ್ ಅವರನ್ನು ಟ್ವಿಟ್ಟರ್ ನಲ್ಲಿ ಟ್ಯಾಗ್ ಮಾಡಿ ರಾಷ್ಟ್ರೀಯ ಚುನಾವಣಾ ಸಂಸ್ಥೆ ತನ್ನದೇ ಆದ ನಿಯಮಗಳನ್ನು ಏಕೆ ಉಲ್ಲಂಘಿಸಿದೆ ಎಂದು ಸ್ಪಷ್ಟಪಡಿಸುವಂತೆ ಕೇಳಿದ್ದಾರೆ.

“ಮುಗ್ಧ ಮುಸ್ಲಿಂ ಯುವಕನನ್ನು ಪೊಲೀಸರು ನಿರಂಕುಶವಾಗಿ ಎತ್ತಿಕೊಂಡರು. ಇತರ ಸ್ಥಳಗಳಲ್ಲಿಯೂ ಸಹ ಫೋಟೋಗಳನ್ನು ಹೊಂದಿರುವ ಮತದಾರರ ಪಟ್ಟಿಗಳನ್ನು ಹಂಚಿಕೊಳ್ಳಲಾಗಿದೆಯೇ? ಇದು ಗಂಭೀರವಾಗಿದೆ!” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಚುನಾವಣಾ ಆಯೋಗವು ಈ ಆರೋಪಕ್ಕೆ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಗೋಖಲೆ ಹಂಚಿಕೊಂಡ ಚುನಾವಣಾ ಆಯೋಗದ ಉದ್ದೇಶಿತ ಪತ್ರದಲ್ಲಿ, ದೆಹಲಿ ಪೊಲೀಸರೊಂದಿಗೆ ‘ಈಶಾನ್ಯ ಸಂಸದೀಯ ಕ್ಷೇತ್ರದ ಮತದಾರರ ಚಿತ್ರಗಳ ಜೊತೆಗೆ ಮತದಾರರ ಪಟ್ಟಿಯನ್ನು ಪ್ರದರ್ಶಿಸುವಂತೆ’ ಮುಖ್ಯ ಕಾರ್ಯದರ್ಶಿ ಹಂತದ ಅಧಿಕಾರಿಗಳು, ಮುಖ್ಯ ಚುನಾವಣಾ ಅಧಿಕಾರಿಗೆ ನಿರ್ದೇಶನ ನೀಡಿದ್ದಾರೆ.

“ದೆಹಲಿ ಪೊಲೀಸರ ಮನವಿಯನ್ನು ಗಮನದಲ್ಲಿಟ್ಟುಕೊಂಡು ಆಯೋಗವು, ದೆಹಲಿಯಲ್ಲಿ ಇತ್ತೀಚಿನ ಹಿಂಸಾಚಾರದ ತನಿಖಾ ತಂಡದೊಂದಿಗೆ ಸಿ.ಸಿ.ಟಿ.ವಿ ಮತ್ತು ಇತರ ವಿಡಿಯೋ ತುಣುಕಿನ ಮೂಲಕ ಸೆರೆಹಿಡಿಯಲಾದ ಅಪರಾಧಿಗಳ ಛಾಯಾಚಿತ್ರಗಳು, ದೆಹಲಿಯ ಈಶಾನ್ಯ ಸಂಸದೀಯ ಕ್ಷೇತ್ರದ ಮತದಾರರ ಚಿತ್ರಗಳೊಂದಿಗೆ ತನಿಖಾ ಅಧಿಕಾರಿಯ ಮುಂದೆ ಮತದಾರರ ಪಟ್ಟಿಯನ್ನು ಪ್ರದರ್ಶಿಸಲು ಸಲಹೆ ನೀಡುವಂತೆ ನಿರ್ದೇಶಿಸಿದೆ” ಎಂದು ಆಯೋಗದ ಪತ್ರದಲ್ಲಿ ಹೇಳಲಾಗಿದೆ.

ಫೆಬ್ರವರಿಯಲ್ಲಿ ನಡೆದ ಮುಸ್ಲಿಂ ವಿರೋಧಿ ಹತ್ಯಾಕಾಂಡವು 53 ಜನರನ್ನು ಬಲಿ ತೆಗೆದುಕೊಂಡಿತ್ತು. ಇವರಲ್ಲಿ ಹೆಚ್ಚಿನವರು ಭಾರತದ ರಾಷ್ಟ್ರ ರಾಜಧಾನಿಯಲ್ಲಿನ ಮುಸ್ಲಿಮರಾಗಿದ್ದಾರೆ. ಬಿಜೆಪಿ ನಾಯಕರ ದ್ವೇಷದ ಭಾಷಣಗಳು ಸಹ ಈ ಹತ್ಯಾಕಾಂಡಕ್ಕೆ ಕಾರಣವಾಗಿದ್ದವು ಎಂಬ ಆರೋಪವಿದೆ.


ಇದನ್ನೂ ಓದಿ: ಚುನಾವಣಾ ಆಯೋಗವೆಂಬ ಬಿಜೆಪಿ ಕಚೇರಿ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...