Homeಮುಖಪುಟಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ 'ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ' ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

- Advertisement -
- Advertisement -

ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆಂದು ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸ ಮಾಡುವುದಕ್ಕೆ ಈಗ ತಡೆಯೊಡ್ಡಲಾಗಿದೆ ಎಂದು ವಾರಣಾಸಿ ಅಭಿವೃದ್ಧಿ ಪ್ರಾಧಿಕಾರ (ವಿಡಿಎ) ತಿಳಿಸಿದೆ.

ಕುಟುಂಬ ಸದಸ್ಯರೊಬ್ಬರು ವಾಣಿಜ್ಯ ಲಾಭಕ್ಕಾಗಿ ಮನೆಯನ್ನು ಧ್ವಂಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದ ನಂತರ, ವಲಯ ಅಧಿಕಾರಿ ಮತ್ತು ಕಿರಿಯ ಎಂಜಿನಿಯರ್ ಒಳಗೊಂಡ ವಿಡಿಎ ತಂಡವು ಕಳೆದ ವಾರ ಹಡಾಹ ಸರೈ ಪ್ರದೇಶದಲ್ಲಿರುವ ಬಿಸ್ಮಿಲ್ಲಾಖಾನ್ ಅವರ ಮನೆಗೆ ಭೇಟಿ ನೀಡಿತ್ತು.

ಬಿಸ್ಮಿಲ್ಲಾಖಾನ್ ಅವರ ಮನೆಯನ್ನು ‘ರಾಷ್ಟ್ರೀಯ ಸಾಂಸ್ಕೃತಿಕ ಪರಂಪರೆ’ ಎಂದು ಸಂರಕ್ಷಿಸಬೇಕೆಂಬ ಕೂಗು ಕೇಳಿಬರುತ್ತಿದ್ದಂತೆ, ಮನೆ ಉರುಳಿಸುವಿಕೆಯ ಚಟುವಟಿಕೆಯನ್ನು ನಿಲ್ಲಿಸಲಾಗಿದೆ. ವಿಡಿಎ ತಪಾಸಣೆ ವರದಿಯ ಪ್ರಕಾರ, ಎರಡನೇ ಮಹಡಿಯಲ್ಲಿರುವ ಕೊಠಡಿಯನ್ನು ಬಿಸ್ಮಿಲ್ಲಾಖಾನ್ ಅವರ ಮೊಮ್ಮಗ ಮತ್ತು ದಿವಂಗತ ಮೆಹ್ತಾಬ್ ಹುಸೇನ್ ಅವರ ಪುತ್ರ ಮೊಹಮ್ಮದ್ ಶಿಫ್ಟೈನ್ ನೆಲಸಮ ಮಾಡಿದ್ದಾರೆ. ಶಿಫ್ಟೈನ್ ಆ ಮನೆಯಲ್ಲಿ ವಾಸಿಸುತ್ತಿದ್ದರು.

ಬಿಸ್ಮಿಲ್ಲಾ ಖಾನ್ ಅವರಿಗೆ ಐದು ಗಂಡು ಮಕ್ಕಳಿದ್ದರು. ಕುಟುಂಬ ಸದಸ್ಯರಲ್ಲಿ ಆಸ್ತಿ ವಿಚಾರವಾಗಿ ವಿವಾದವಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

“ಇದು ಖಾಸಗಿ ಆಸ್ತಿಯ ಪ್ರಕರಣವಾದ್ದರಿಂದ, ವಿಡಿಎ ತಂಡವು ಮಾತುಕತೆಗಳ ಮೂಲಕ ಮತ್ತು ನೋಟಿಸ್ ಮೂಲಕ, ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದರೆ ಅದನ್ನು ನೆಲಸಮಗೊಳಿಸುವುದಕ್ಕೆ ನಗರಸಭೆಯಿಂದ ಅನುಮತಿ ಪಡೆಯಲು ಕುಟುಂಬ ಸದಸ್ಯರಿಗೆ ನಿರ್ದೇಶನ ನೀಡಿತು. ಯಾವುದೇ ಹೊಸ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ನಕ್ಷೆಯನ್ನು ವಿಡಿಎಯಿಂದ ಅನುಮೋದಿಸಲು ನಿರ್ದೇಶಿಸಲಾಗಿದೆ “ಎಂದು ವಿಡಿಎ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಬಿಸ್ಮಿಲ್ಲಾಖಾನ್ ವಾಸಿಸುತ್ತಿದ್ದ ಮನೆಯ ಮೇಲಿನ ಮಹಡಿಯನ್ನು ಅವರ ಕೆಲ ಸಂಬಂಧಿಕರು ನೆಲಸಮಗೊಳಿಸಿ ಮನೆಯನ್ನು ವಾಣಿಜ್ಯ ಸಂಕೀರ್ಣವಾಗಿ ಅಭಿವೃದ್ಧಿಪಡಿಸುವುದಕ್ಕೆ ಕುಟುಂಬದ ಇತರ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ ‘ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ’ ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

ಈ ಕುರಿತ ಜಂಟಿ ಪತ್ರಿಕಾ ಹೇಳಿಕೆಯಲ್ಲಿ, ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ದಿಲೀಪ್ ಕುಮಾರ್, ಎಐಡಿಒಒನ ಮಕಾರ್ಥ್ವಾಜ್ ಮತ್ತು ಎಐಎಂಎಸ್ಎಸ್ ನ ವಂದನಾ ಸಿಂಗ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮನೆಯನ್ನು ರಕ್ಷಿಸಬೇಕೆಂದು ಒತ್ತಾಯಿಸಿದ್ದರು.

“ಇದನ್ನು ಶಹನಾಯ್ ತರಬೇತಿ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು. ಕುಟುಂಬ ಸದಸ್ಯರನ್ನು ಬೇರೆಡೆ ಪುನರ್ವಸತಿಗೊಳಿಸಿ ಆರ್ಥಿಕ ನೆರವು ನೀಡಬೇಕು” ಎಂದು ಅವರು ಆಗ್ರಹಿಸಿದ್ದರು.

ಬಿಸ್ಮಿಲ್ಲಾ ಖಾನ್ ಅವರ ಸಾಕು ಮಗಳು ಮತ್ತು ಗಾಯಕಿ ಸೋಮ ಘೋಷ್ ಮತ್ತು ಕಾಂಗ್ರೆಸ್ ಮುಖಂಡ ಅಜಯ್ ರೈ ಕೂಡ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದರು. ಅವರ ಮನೆಯನ್ನು ವಸ್ತುಸಂಗ್ರಹಾಲಯವಾಗಿ ಸಂರಕ್ಷಿಸಲು ಸರ್ಕಾರ ಮುಂದೆ ಬರಬೇಕು ಎಂದು ಹೇಳಿದ್ದರು.


ಇದನ್ನೂ ಓದಿ: ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಶಹನಾಯಿಯ ಗಾರುಡಿಗ ಉಸ್ತಾದ್ ಬಿಸ್ಮಿಲ್ಲಾ ಖಾನ್ ಮತ್ತು ಭಾರತೀಯ ಸಂಗೀತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...