Homeಮುಖಪುಟಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸಕ್ಕೆ ತಡೆ

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ 'ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ' ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

- Advertisement -
- Advertisement -

ವಾಣಿಜ್ಯ ಸಂಕೀರ್ಣ ನಿರ್ಮಾಣಕ್ಕೆಂದು ಶಹನಾಯ್ ವಿದ್ವಾನ್ ಬಿಸ್ಮಿಲ್ಲಾಖಾನ್ ಮನೆ ಧ್ವಂಸ ಮಾಡುವುದಕ್ಕೆ ಈಗ ತಡೆಯೊಡ್ಡಲಾಗಿದೆ ಎಂದು ವಾರಣಾಸಿ ಅಭಿವೃದ್ಧಿ ಪ್ರಾಧಿಕಾರ (ವಿಡಿಎ) ತಿಳಿಸಿದೆ.

ಕುಟುಂಬ ಸದಸ್ಯರೊಬ್ಬರು ವಾಣಿಜ್ಯ ಲಾಭಕ್ಕಾಗಿ ಮನೆಯನ್ನು ಧ್ವಂಸ ಮಾಡುತ್ತಿದ್ದಾರೆ ಎಂಬ ಮಾಹಿತಿ ಬೆಳಕಿಗೆ ಬಂದ ನಂತರ, ವಲಯ ಅಧಿಕಾರಿ ಮತ್ತು ಕಿರಿಯ ಎಂಜಿನಿಯರ್ ಒಳಗೊಂಡ ವಿಡಿಎ ತಂಡವು ಕಳೆದ ವಾರ ಹಡಾಹ ಸರೈ ಪ್ರದೇಶದಲ್ಲಿರುವ ಬಿಸ್ಮಿಲ್ಲಾಖಾನ್ ಅವರ ಮನೆಗೆ ಭೇಟಿ ನೀಡಿತ್ತು.

ಬಿಸ್ಮಿಲ್ಲಾಖಾನ್ ಅವರ ಮನೆಯನ್ನು ‘ರಾಷ್ಟ್ರೀಯ ಸಾಂಸ್ಕೃತಿಕ ಪರಂಪರೆ’ ಎಂದು ಸಂರಕ್ಷಿಸಬೇಕೆಂಬ ಕೂಗು ಕೇಳಿಬರುತ್ತಿದ್ದಂತೆ, ಮನೆ ಉರುಳಿಸುವಿಕೆಯ ಚಟುವಟಿಕೆಯನ್ನು ನಿಲ್ಲಿಸಲಾಗಿದೆ. ವಿಡಿಎ ತಪಾಸಣೆ ವರದಿಯ ಪ್ರಕಾರ, ಎರಡನೇ ಮಹಡಿಯಲ್ಲಿರುವ ಕೊಠಡಿಯನ್ನು ಬಿಸ್ಮಿಲ್ಲಾಖಾನ್ ಅವರ ಮೊಮ್ಮಗ ಮತ್ತು ದಿವಂಗತ ಮೆಹ್ತಾಬ್ ಹುಸೇನ್ ಅವರ ಪುತ್ರ ಮೊಹಮ್ಮದ್ ಶಿಫ್ಟೈನ್ ನೆಲಸಮ ಮಾಡಿದ್ದಾರೆ. ಶಿಫ್ಟೈನ್ ಆ ಮನೆಯಲ್ಲಿ ವಾಸಿಸುತ್ತಿದ್ದರು.

ಬಿಸ್ಮಿಲ್ಲಾ ಖಾನ್ ಅವರಿಗೆ ಐದು ಗಂಡು ಮಕ್ಕಳಿದ್ದರು. ಕುಟುಂಬ ಸದಸ್ಯರಲ್ಲಿ ಆಸ್ತಿ ವಿಚಾರವಾಗಿ ವಿವಾದವಿದೆ ಎಂಬ ಅಂಶ ಬೆಳಕಿಗೆ ಬಂದಿದೆ.

“ಇದು ಖಾಸಗಿ ಆಸ್ತಿಯ ಪ್ರಕರಣವಾದ್ದರಿಂದ, ವಿಡಿಎ ತಂಡವು ಮಾತುಕತೆಗಳ ಮೂಲಕ ಮತ್ತು ನೋಟಿಸ್ ಮೂಲಕ, ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದರೆ ಅದನ್ನು ನೆಲಸಮಗೊಳಿಸುವುದಕ್ಕೆ ನಗರಸಭೆಯಿಂದ ಅನುಮತಿ ಪಡೆಯಲು ಕುಟುಂಬ ಸದಸ್ಯರಿಗೆ ನಿರ್ದೇಶನ ನೀಡಿತು. ಯಾವುದೇ ಹೊಸ ನಿರ್ಮಾಣವನ್ನು ಪ್ರಾರಂಭಿಸುವ ಮೊದಲು ನಕ್ಷೆಯನ್ನು ವಿಡಿಎಯಿಂದ ಅನುಮೋದಿಸಲು ನಿರ್ದೇಶಿಸಲಾಗಿದೆ “ಎಂದು ವಿಡಿಎ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಬಿಸ್ಮಿಲ್ಲಾಖಾನ್ ವಾಸಿಸುತ್ತಿದ್ದ ಮನೆಯ ಮೇಲಿನ ಮಹಡಿಯನ್ನು ಅವರ ಕೆಲ ಸಂಬಂಧಿಕರು ನೆಲಸಮಗೊಳಿಸಿ ಮನೆಯನ್ನು ವಾಣಿಜ್ಯ ಸಂಕೀರ್ಣವಾಗಿ ಅಭಿವೃದ್ಧಿಪಡಿಸುವುದಕ್ಕೆ ಕುಟುಂಬದ ಇತರ ಕೆಲವು ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದರು.

ಮನೆ ಧ್ವಂಸದ ಸುದ್ದಿ ಹರಡುತ್ತಿದ್ದಂತೆ, ಹಲವಾರು ಯುವ ಸಂಘಟನೆಗಳು ಪ್ರತಿಭಟನೆ ನಡೆಸಿ ‘ಮನೆಯನ್ನು ಉಳಿಸಿ, ಮ್ಯೂಸಿಯಂ ಮಾಡಿ ಸಂರಕ್ಷಿಸುವಂತೆ’ ಸರ್ಕಾರ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಒತ್ತಾಯಿಸಿದ್ದರು.

ಈ ಕುರಿತ ಜಂಟಿ ಪತ್ರಿಕಾ ಹೇಳಿಕೆಯಲ್ಲಿ, ಎಐಡಿಎಸ್ಒ ರಾಜ್ಯ ಕಾರ್ಯದರ್ಶಿ ದಿಲೀಪ್ ಕುಮಾರ್, ಎಐಡಿಒಒನ ಮಕಾರ್ಥ್ವಾಜ್ ಮತ್ತು ಎಐಎಂಎಸ್ಎಸ್ ನ ವಂದನಾ ಸಿಂಗ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮನೆಯನ್ನು ರಕ್ಷಿಸಬೇಕೆಂದು ಒತ್ತಾಯಿಸಿದ್ದರು.

“ಇದನ್ನು ಶಹನಾಯ್ ತರಬೇತಿ ಕೇಂದ್ರವಾಗಿ ಅಭಿವೃದ್ಧಿಪಡಿಸಬೇಕು. ಕುಟುಂಬ ಸದಸ್ಯರನ್ನು ಬೇರೆಡೆ ಪುನರ್ವಸತಿಗೊಳಿಸಿ ಆರ್ಥಿಕ ನೆರವು ನೀಡಬೇಕು” ಎಂದು ಅವರು ಆಗ್ರಹಿಸಿದ್ದರು.

ಬಿಸ್ಮಿಲ್ಲಾ ಖಾನ್ ಅವರ ಸಾಕು ಮಗಳು ಮತ್ತು ಗಾಯಕಿ ಸೋಮ ಘೋಷ್ ಮತ್ತು ಕಾಂಗ್ರೆಸ್ ಮುಖಂಡ ಅಜಯ್ ರೈ ಕೂಡ ಸರ್ಕಾರದ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದರು. ಅವರ ಮನೆಯನ್ನು ವಸ್ತುಸಂಗ್ರಹಾಲಯವಾಗಿ ಸಂರಕ್ಷಿಸಲು ಸರ್ಕಾರ ಮುಂದೆ ಬರಬೇಕು ಎಂದು ಹೇಳಿದ್ದರು.


ಇದನ್ನೂ ಓದಿ: ಕಮರ್ಷಿಯಲ್ ಕಾಂಪ್ಲೆಕ್ಸ್‌ಗಾಗಿ ಶಹನಾಯ್ ವಿದ್ವಾನ್ ಬಿಸ್ಮಿಲ್ಲಾ ಖಾನ್ ಮನೆ ಧ್ವಂಸ

ಶಹನಾಯಿಯ ಗಾರುಡಿಗ ಉಸ್ತಾದ್ ಬಿಸ್ಮಿಲ್ಲಾ ಖಾನ್ ಮತ್ತು ಭಾರತೀಯ ಸಂಗೀತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...