Homeಕರ್ನಾಟಕNEP ಜಾರಿ ಕರ್ನಾಟಕದಲ್ಲಿಯೇ ಮೊದಲು ಎಂದ ಡಿಸಿಎಂ: ಟ್ವಿಟ್ಟರ್‌ನಲ್ಲಿ '#RejectNEP2020' ಟ್ರೆಂಡ್‌

NEP ಜಾರಿ ಕರ್ನಾಟಕದಲ್ಲಿಯೇ ಮೊದಲು ಎಂದ ಡಿಸಿಎಂ: ಟ್ವಿಟ್ಟರ್‌ನಲ್ಲಿ ‘#RejectNEP2020’ ಟ್ರೆಂಡ್‌

ಒಕ್ಕೂಟ ವ್ಯವಸ್ಥೆಗೆ, ಸಂವಿಧಾನಕ್ಕೆ ವಿರುದ್ಧವಾಗಿ, ಶೈಕ್ಷಣಿಕ ವಲಯದ ಸರ್ವಾಧಿಕಾರಗಳನ್ನು ಕೇಂದ್ರ ಸರ್ಕಾರದ ಕೈಯಲ್ಲಿ ಇಟ್ಟ ಶಿಕ್ಷಣ ನೀತಿ ಇದಾಗಿದೆ. ವೈವಿದ್ಯತೆಯಲ್ಲಿ ಏಕತೆಯೆಂಬ ಅಂಶವನ್ನು ಕೈಬಿಟ್ಟು ಹಿಂದಿ ಹೇರಿಕೆ ಮತ್ತು ಸಂಸ್ಕೃತ ಹೇರಿಕೆಗೆ ಅವಕಾಶ ನೀಡಿದ ಶಿಕ್ಷಣ ನೀತಿ ಇದಾಗಿದೆ ಎಂದು ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಕರ್ನಾಟಕದಲ್ಲಿಯೇ ಮೊದಲು ಜಾರಿಗೊಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ನಿನ್ನೆ ಘೋಷಿಸಿದ್ದಾರೆ. ಆದರೆ ಅದೇ ದಿನ ಸಾವಿರಾರು ವಿದ್ಯಾರ್ಥಿಗಳು NEP ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಟ್ವಿಟ್ಟರ್‌ನಲ್ಲಿ #RejectNEP2020 ಟ್ರೆಂಡ್‌ ಆಗಿದೆ.

ಸದ್ಯದಲ್ಲೇ ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಕ್ಯಾಬಿನೆಟ್‌ನಲ್ಲಿ ಅನುಮೋದನೆ ಪಡೆದಿದೆ. ಅದರಲ್ಲೂ ಕರ್ನಾಟಕ ಸರ್ಕಾರ ತಾನೇ ಮೊದಲು ಹೊಸ ಶಿಕ್ಷಣ ನೀತಿ ಜಾರಿಗೆ ತರುವುದಾಗಿ ಘೋಷಿಸಿದೆ. ಆದರೆ ಹೊಸ ಶಿಕ್ಷಣ ನೀತಿಯ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಹೊಸ ಶಿಕ್ಷಣ ನೀತಿಯು ರಾಷ್ಟ್ರೀಕರಣವಲ್ಲ ಅದು ವ್ಯಾಪಾರೀಕರಣ ಎಂದು ಆರೋಪಿಸಿರುವ ಅವರು, ಉಚಿತ, ಸಮಾನ, ಗುಣಮಟ್ಟದ ಶಿಕ್ಷಣಕ್ಕಾಗಿ ಆಗ್ರಹಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ, ಸಂವಿಧಾನಕ್ಕೆ ವಿರುದ್ಧವಾಗಿ, ಶೈಕ್ಷಣಿಕ ವಲಯದ ಸರ್ವಾಧಿಕಾರಗಳನ್ನು ಕೇಂದ್ರ ಸರ್ಕಾರದ ಕೈಯಲ್ಲಿ ಇಟ್ಟ ಶಿಕ್ಷಣ ನೀತಿ ಇದಾಗಿದೆ. ವೈವಿದ್ಯತೆಯಲ್ಲಿ ಏಕತೆಯೆಂಬ ಅಂಶವನ್ನು ಕೈಬಿಟ್ಟು ಹಿಂದಿ ಹೇರಿಕೆ ಮತ್ತು ಸಂಸ್ಕೃತ ಹೇರಿಕೆಗೆ ಅವಕಾಶ ನೀಡಿದ ಶಿಕ್ಷಣ ನೀತಿ ಇದಾಗಿದೆ ಎಂದು ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ಮೇಲ್ಜಾತಿಯ, ಪುರುಷ ಪ್ರಧಾನವಾದ ಪುರುತನ ಸಿದ್ದಾಂತವನ್ನು ಗುರುಕುಲಗಳ ಹೆಸರಿನಲ್ಲಿ ಪದೇ ಪದೇ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ. ರಾಷ್ಟ್ರೀಯ ಸಂಶೋಧನಾ ಫೌಂಡೇಷನ್ ಹೆಸರಿನಲ್ಲಿ ದೇಶದ್ಯಾಂತ ನಡೆಯುವ ಸಂಶೋಧನೆಗಳನ್ನು ನಿಯಂತ್ರಿಸುವ ದುರುದ್ಧೇಶ ಹೊಂದಿದೆ ಎಂದು ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ವಿಶ್ವವಿದ್ಯಾಲಯಲಯಗಳಿಗೆ ಸ್ವಾತಂತ್ರ್ಯ ಇರಬೇಕೆಂದು ಹೇಳುತ್ತಲೇ ಹೊರಗಿನ ಖಾಸಗಿಯವರ ಹಿಡಿತಕ್ಕೆ ನೀಡುವ ಗೊಂದಲಕಾರಿ ಅಂಶಗಳನ್ನು ಒಳಗೊಂಡಿರುವ ಶಿಕ್ಷಣ ನೀತಿ ನಿಷ್ಪ್ರಯೋಜಕ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆಗಳ ಆಗಲಿದೆ ಎಂದು ತೋರಿಸುತ್ತೆ ಮತ್ತೆ ಶಿಕ್ಷಣದ ವ್ಯಾಪಾರವನ್ನು ಬೆಂಬಲಿಸುವ ಅಂಶಗಳನ್ನೇ ತುರುಕಲಾಗಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ತನ್ನ ಟ್ವೀಟ್‌ನಲ್ಲಿ ತಿಳಿಸಿದೆ.

ಇನ್ನು ನಿನ್ನೆಯಿಂದ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ #RejectNEP2020 ಎಂಬುದು ಟ್ರೇಂಡಿಂಗ್‌ನಲ್ಲಿದೆ. ಡಾ. ಬಿ.ಆರ್.ಅಂಬೇಡ್ಕರ್, ಮಹಾತ್ಮಾ ಜ್ಯೋತಿಬಾಪುಲೆ ಅವರ ನುಡಿಗಳನ್ನು ಆಧರಿಸಿ ಸಾವಿರಾರು ಮಂದಿ ಟ್ವೀಟ್‌ ಮಾಡಿದ್ದಾರೆ. ಚಿಂತಕರು, ಚಲನಚಿತ್ರ ನಟ, ನಟಿಯರು, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಹೊಸ ಶಿಕ್ಷಣ ನೀತಿಯ ವಿರುದ್ಧ ದನಿ ಎತ್ತಿದ್ದಾರೆ.

ದುಡ್ಡಿದವರಿಗೆ ಮಾತ್ರ ಶಿಕ್ಷಣ ಎಂಬುದನ್ನು ಪರೋಕ್ಷವಾಗಿ ಬೆಂಬಲಿಸುವ ಹಣವಂತರಿಗೆ ಅನುಕೂಲವಾದ ಶಿಕ್ಷಣ ನೀತಿ ನಮಗೆ ಬೇಡ. ಉಚಿತ ಶಿಕ್ಷಣದ ಬಗ್ಗೆ ಉಸಿರೆತ್ತದ ರಾಷ್ಟ್ರೀಯ ಶಿಕ್ಷಣ ಕಾಯ್ದೆ 2020ನ್ನು ತಿರಸ್ಕರಿಸೋಣ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಶಿಕ್ಷಣದ ಕೇಂದ್ರಿಕರಣ, ಖಾಸಗೀಕರಣ ಮತ್ತು ಶಿಕ್ಷಣವನ್ನು ಕೇಸರೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಕರ್ನಾಟಕದಲ್ಲಿ ಮೊದಲು ಜಾರಿಗೆ ತರುತ್ತೇವೆ ಎನ್ನುವುದಕ್ಕೆ ಮುಖ್ಯ ಕಾರಣ ನಮ್ಮ ಬೆಂಗಳೂರು ಬಹುದೊಡ್ಡ ಶಿಕ್ಷಣ ಕೇಂದ್ರವಾಗಿರುವುದು. ವಿದೇಶಿ ಮತ್ತು ಅಂತಾರಾಜ್ಯ ವಿದ್ಯಾರ್ಥಿಗಳಿಗಾಗಿ ಈ ನೀತಿ ಜಾರಿ ಮಾಡಲಾಗಿದೆ. ಶಿಕ್ಷಣದ ವ್ಯಾಪಾರೀಕರಣ ದೊಡ್ಡಮಟ್ಟದಲ್ಲಿದೆ. ಹಾಗಾಗಿ ನಾವು ಇದಕ್ಕೆ ಅವಕಾಶ ನೀಡುವುದಿಲ್ಲ. ತಕ್ಕ ಪ್ರತಿರೋಧ ನೀಡಿ ಹೋರಾಟ ಮಾಡುತ್ತೇವೆ ಎಂದು ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸದೇವರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಇಷ್ಟೊಂದು ವಿರೋಧದ ನಡುವೆಯೂ ಕರ್ನಾಟಕದಲ್ಲಿ ನಾವೇ ಮೊದಲು NEP ಜಾರಿಗೆ ತರುತ್ತೇವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿಕೊಂಡಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಆಡಳಿತಾತ್ಮಕ ಸುಧಾರಣೆಗಳನ್ನು ತರಲು ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಉನ್ನತ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಈಗಾಗಲೇ ಹಲವು ಸಭೆಗಳನ್ನು ನಡೆಸಿದ್ದು, ಅದರ ಅಂತಿಮ ಸಲಹೆಗಳ ನಂತರ ಹೊಸ ನೀತಿಯನ್ನು ಅಳವಡಿಸಲಾಗುತ್ತದೆ. ಈ ಮೂಲಕ ದೇಶದಲ್ಲೇ ಎನ್‌ಇಪಿ 2020 ಅಳವಡಿಸಿಕೊಂಡ ಮೊದಲ ರಾಜ್ಯ ಕರ್ನಾಟಕವಾಗಲಿದೆ ಎಂದು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...