Homeಕರ್ನಾಟಕNEP ಜಾರಿ ಕರ್ನಾಟಕದಲ್ಲಿಯೇ ಮೊದಲು ಎಂದ ಡಿಸಿಎಂ: ಟ್ವಿಟ್ಟರ್‌ನಲ್ಲಿ '#RejectNEP2020' ಟ್ರೆಂಡ್‌

NEP ಜಾರಿ ಕರ್ನಾಟಕದಲ್ಲಿಯೇ ಮೊದಲು ಎಂದ ಡಿಸಿಎಂ: ಟ್ವಿಟ್ಟರ್‌ನಲ್ಲಿ ‘#RejectNEP2020’ ಟ್ರೆಂಡ್‌

ಒಕ್ಕೂಟ ವ್ಯವಸ್ಥೆಗೆ, ಸಂವಿಧಾನಕ್ಕೆ ವಿರುದ್ಧವಾಗಿ, ಶೈಕ್ಷಣಿಕ ವಲಯದ ಸರ್ವಾಧಿಕಾರಗಳನ್ನು ಕೇಂದ್ರ ಸರ್ಕಾರದ ಕೈಯಲ್ಲಿ ಇಟ್ಟ ಶಿಕ್ಷಣ ನೀತಿ ಇದಾಗಿದೆ. ವೈವಿದ್ಯತೆಯಲ್ಲಿ ಏಕತೆಯೆಂಬ ಅಂಶವನ್ನು ಕೈಬಿಟ್ಟು ಹಿಂದಿ ಹೇರಿಕೆ ಮತ್ತು ಸಂಸ್ಕೃತ ಹೇರಿಕೆಗೆ ಅವಕಾಶ ನೀಡಿದ ಶಿಕ್ಷಣ ನೀತಿ ಇದಾಗಿದೆ ಎಂದು ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

- Advertisement -
- Advertisement -

ರಾಷ್ಟ್ರೀಯ ಶಿಕ್ಷಣ ನೀತಿ 2020 ಅನ್ನು ಕರ್ನಾಟಕದಲ್ಲಿಯೇ ಮೊದಲು ಜಾರಿಗೊಳಿಸುತ್ತೇವೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ್ ನಿನ್ನೆ ಘೋಷಿಸಿದ್ದಾರೆ. ಆದರೆ ಅದೇ ದಿನ ಸಾವಿರಾರು ವಿದ್ಯಾರ್ಥಿಗಳು NEP ಜಾರಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಟ್ವಿಟ್ಟರ್‌ನಲ್ಲಿ #RejectNEP2020 ಟ್ರೆಂಡ್‌ ಆಗಿದೆ.

ಸದ್ಯದಲ್ಲೇ ದೇಶದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ 2020 ಜಾರಿಗೆ ತರಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಕ್ಯಾಬಿನೆಟ್‌ನಲ್ಲಿ ಅನುಮೋದನೆ ಪಡೆದಿದೆ. ಅದರಲ್ಲೂ ಕರ್ನಾಟಕ ಸರ್ಕಾರ ತಾನೇ ಮೊದಲು ಹೊಸ ಶಿಕ್ಷಣ ನೀತಿ ಜಾರಿಗೆ ತರುವುದಾಗಿ ಘೋಷಿಸಿದೆ. ಆದರೆ ಹೊಸ ಶಿಕ್ಷಣ ನೀತಿಯ ವಿರುದ್ಧ ವಿದ್ಯಾರ್ಥಿ ಸಂಘಟನೆಗಳು ವಿರೋಧ ವ್ಯಕ್ತಪಡಿಸುತ್ತಿವೆ. ಹೊಸ ಶಿಕ್ಷಣ ನೀತಿಯು ರಾಷ್ಟ್ರೀಕರಣವಲ್ಲ ಅದು ವ್ಯಾಪಾರೀಕರಣ ಎಂದು ಆರೋಪಿಸಿರುವ ಅವರು, ಉಚಿತ, ಸಮಾನ, ಗುಣಮಟ್ಟದ ಶಿಕ್ಷಣಕ್ಕಾಗಿ ಆಗ್ರಹಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಗೆ ವಿರುದ್ಧವಾಗಿ, ಸಂವಿಧಾನಕ್ಕೆ ವಿರುದ್ಧವಾಗಿ, ಶೈಕ್ಷಣಿಕ ವಲಯದ ಸರ್ವಾಧಿಕಾರಗಳನ್ನು ಕೇಂದ್ರ ಸರ್ಕಾರದ ಕೈಯಲ್ಲಿ ಇಟ್ಟ ಶಿಕ್ಷಣ ನೀತಿ ಇದಾಗಿದೆ. ವೈವಿದ್ಯತೆಯಲ್ಲಿ ಏಕತೆಯೆಂಬ ಅಂಶವನ್ನು ಕೈಬಿಟ್ಟು ಹಿಂದಿ ಹೇರಿಕೆ ಮತ್ತು ಸಂಸ್ಕೃತ ಹೇರಿಕೆಗೆ ಅವಕಾಶ ನೀಡಿದ ಶಿಕ್ಷಣ ನೀತಿ ಇದಾಗಿದೆ ಎಂದು ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ಮೇಲ್ಜಾತಿಯ, ಪುರುಷ ಪ್ರಧಾನವಾದ ಪುರುತನ ಸಿದ್ದಾಂತವನ್ನು ಗುರುಕುಲಗಳ ಹೆಸರಿನಲ್ಲಿ ಪದೇ ಪದೇ ನೀತಿಯಲ್ಲಿ ಪ್ರಸ್ತಾಪಿಸಲಾಗಿದೆ. ರಾಷ್ಟ್ರೀಯ ಸಂಶೋಧನಾ ಫೌಂಡೇಷನ್ ಹೆಸರಿನಲ್ಲಿ ದೇಶದ್ಯಾಂತ ನಡೆಯುವ ಸಂಶೋಧನೆಗಳನ್ನು ನಿಯಂತ್ರಿಸುವ ದುರುದ್ಧೇಶ ಹೊಂದಿದೆ ಎಂದು ವಿದ್ಯಾರ್ಥಿಗಳು ಕಿಡಿಕಾರಿದ್ದಾರೆ.

ವಿಶ್ವವಿದ್ಯಾಲಯಲಯಗಳಿಗೆ ಸ್ವಾತಂತ್ರ್ಯ ಇರಬೇಕೆಂದು ಹೇಳುತ್ತಲೇ ಹೊರಗಿನ ಖಾಸಗಿಯವರ ಹಿಡಿತಕ್ಕೆ ನೀಡುವ ಗೊಂದಲಕಾರಿ ಅಂಶಗಳನ್ನು ಒಳಗೊಂಡಿರುವ ಶಿಕ್ಷಣ ನೀತಿ ನಿಷ್ಪ್ರಯೋಜಕ. ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ಕ್ರಾಂತಿಕಾರಿ ಬದಲಾವಣೆಗಳ ಆಗಲಿದೆ ಎಂದು ತೋರಿಸುತ್ತೆ ಮತ್ತೆ ಶಿಕ್ಷಣದ ವ್ಯಾಪಾರವನ್ನು ಬೆಂಬಲಿಸುವ ಅಂಶಗಳನ್ನೇ ತುರುಕಲಾಗಿದೆ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆ ತನ್ನ ಟ್ವೀಟ್‌ನಲ್ಲಿ ತಿಳಿಸಿದೆ.

ಇನ್ನು ನಿನ್ನೆಯಿಂದ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ನಲ್ಲಿ #RejectNEP2020 ಎಂಬುದು ಟ್ರೇಂಡಿಂಗ್‌ನಲ್ಲಿದೆ. ಡಾ. ಬಿ.ಆರ್.ಅಂಬೇಡ್ಕರ್, ಮಹಾತ್ಮಾ ಜ್ಯೋತಿಬಾಪುಲೆ ಅವರ ನುಡಿಗಳನ್ನು ಆಧರಿಸಿ ಸಾವಿರಾರು ಮಂದಿ ಟ್ವೀಟ್‌ ಮಾಡಿದ್ದಾರೆ. ಚಿಂತಕರು, ಚಲನಚಿತ್ರ ನಟ, ನಟಿಯರು, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು ಹೊಸ ಶಿಕ್ಷಣ ನೀತಿಯ ವಿರುದ್ಧ ದನಿ ಎತ್ತಿದ್ದಾರೆ.

ದುಡ್ಡಿದವರಿಗೆ ಮಾತ್ರ ಶಿಕ್ಷಣ ಎಂಬುದನ್ನು ಪರೋಕ್ಷವಾಗಿ ಬೆಂಬಲಿಸುವ ಹಣವಂತರಿಗೆ ಅನುಕೂಲವಾದ ಶಿಕ್ಷಣ ನೀತಿ ನಮಗೆ ಬೇಡ. ಉಚಿತ ಶಿಕ್ಷಣದ ಬಗ್ಗೆ ಉಸಿರೆತ್ತದ ರಾಷ್ಟ್ರೀಯ ಶಿಕ್ಷಣ ಕಾಯ್ದೆ 2020ನ್ನು ತಿರಸ್ಕರಿಸೋಣ ಎಂದು ಕರ್ನಾಟಕ ವಿದ್ಯಾರ್ಥಿ ಸಂಘಟನೆಯ ಸಂಚಾಲಕರಾದ ಸರೋವರ್ ಬೆಂಕಿಕೆರೆ ತಿಳಿಸಿದ್ದಾರೆ.

ಶಿಕ್ಷಣದ ಕೇಂದ್ರಿಕರಣ, ಖಾಸಗೀಕರಣ ಮತ್ತು ಶಿಕ್ಷಣವನ್ನು ಕೇಸರೀಕರಣ ಮಾಡಲು ಕೇಂದ್ರ ಸರ್ಕಾರ ಹೊರಟಿದೆ. ಕರ್ನಾಟಕದಲ್ಲಿ ಮೊದಲು ಜಾರಿಗೆ ತರುತ್ತೇವೆ ಎನ್ನುವುದಕ್ಕೆ ಮುಖ್ಯ ಕಾರಣ ನಮ್ಮ ಬೆಂಗಳೂರು ಬಹುದೊಡ್ಡ ಶಿಕ್ಷಣ ಕೇಂದ್ರವಾಗಿರುವುದು. ವಿದೇಶಿ ಮತ್ತು ಅಂತಾರಾಜ್ಯ ವಿದ್ಯಾರ್ಥಿಗಳಿಗಾಗಿ ಈ ನೀತಿ ಜಾರಿ ಮಾಡಲಾಗಿದೆ. ಶಿಕ್ಷಣದ ವ್ಯಾಪಾರೀಕರಣ ದೊಡ್ಡಮಟ್ಟದಲ್ಲಿದೆ. ಹಾಗಾಗಿ ನಾವು ಇದಕ್ಕೆ ಅವಕಾಶ ನೀಡುವುದಿಲ್ಲ. ತಕ್ಕ ಪ್ರತಿರೋಧ ನೀಡಿ ಹೋರಾಟ ಮಾಡುತ್ತೇವೆ ಎಂದು ಎಸ್‌ಎಫ್‌ಐ ರಾಜ್ಯ ಕಾರ್ಯದರ್ಶಿ ವಾಸದೇವರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ.

ಇಷ್ಟೊಂದು ವಿರೋಧದ ನಡುವೆಯೂ ಕರ್ನಾಟಕದಲ್ಲಿ ನಾವೇ ಮೊದಲು NEP ಜಾರಿಗೆ ತರುತ್ತೇವೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿಕೊಂಡಿದ್ದಾರೆ. ಶಿಕ್ಷಣ ವ್ಯವಸ್ಥೆಯಲ್ಲಿ ಆಡಳಿತಾತ್ಮಕ ಸುಧಾರಣೆಗಳನ್ನು ತರಲು ನಾವು ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ಉನ್ನತ ಮಟ್ಟದ ಟಾಸ್ಕ್ ಪೋರ್ಸ್ ಸಮಿತಿ ಈಗಾಗಲೇ ಹಲವು ಸಭೆಗಳನ್ನು ನಡೆಸಿದ್ದು, ಅದರ ಅಂತಿಮ ಸಲಹೆಗಳ ನಂತರ ಹೊಸ ನೀತಿಯನ್ನು ಅಳವಡಿಸಲಾಗುತ್ತದೆ. ಈ ಮೂಲಕ ದೇಶದಲ್ಲೇ ಎನ್‌ಇಪಿ 2020 ಅಳವಡಿಸಿಕೊಂಡ ಮೊದಲ ರಾಜ್ಯ ಕರ್ನಾಟಕವಾಗಲಿದೆ ಎಂದು ಬೆಂಗಳೂರಿನಲ್ಲಿ ತಿಳಿಸಿದ್ದಾರೆ.


ಇದನ್ನೂ ಓದಿ: ನೂತನ ಶಿಕ್ಷಣ ನೀತಿಗೆ ಭಾರೀ ವಿರೋಧ : TNRejectsNEP ಹ್ಯಾಷ್‌ಟ್ಯಾಗ್ ಟ್ರೆಂಡ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...