Homeಮುಖಪುಟರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.

- Advertisement -
- Advertisement -

ದೇಶ ರಕ್ಷಣೆಯಲ್ಲಿ ಆತ್ಮನಿರ್ಭರತೆ ಸಾಧಿಸಬೇಕೆಂದು ಸಂಕಲ್ಪ ಮಾಡಿರುವುದಾಗಿ ರಕ್ಷಣಾ ಮಂತ್ರಿ ರಾಜನಾಥ್‌ಸಿಂಗ್ ಹೇಳಿದ್ದಾರೆ. ಮೋದಿ ಮಂತ್ರ ಪಠಣವೂ ಇದೇ ಆಗಿದೆ. ಆದರೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಆತ್ಮನಿರ್ಭರತೆ ಎಂದರೆ ಎಲ್ಲ ಆಮದನ್ನೂ ಕೈ ಬಿಡುವುದಲ್ಲ ಎಂದು ಹೇಳುತ್ತಾರೆ. ಈ ರೀತಿ ಹೇಳುವ ಮೂಲಕ ಆತ್ಮನಿರ್ಭರತೆಗೆ ಆರ್‌ಎಸ್‌ಎಸ್ ಹೊಸ ವ್ಯಾಖ್ಯಾನವನ್ನೆ ಮಂಡಿಸುತ್ತಿದೆ. ಒಟ್ಟಿನಲ್ಲಿ ಆತ್ಮನಿರ್ಭರತೆ ಒಂದು ಘೋಷಣೆಯೆ ಹೊರತು ಬೇರೇನೂ ಅಲ್ಲ ಎಂದು ಮತಾಂಧರು ಘೋಷಿಸುತ್ತಿದ್ದಾರೆ.

ರಾಜನಾಥ್‌ಸಿಂಗರು ಈಗ ದೇಶರಕ್ಷಣೆಯಲ್ಲಿ ಆತ್ಮನಿರ್ಭರತೆ ಮಾತನ್ನಾಡಿದರೆ ಈ ಹಿಂದೆ ಮೋದಿ ಅವರು ಮೇಡ್ ಇನ್ ಇಂಡಿಯಾ ಘೋಷಣೆ  ಕೂಗುವಾಗಲೂ ಇದನ್ನೇ ಹೇಳಿದ್ದರು. ರಾಜನಾಥ್‌ಸಿಂಗರು ಡಿಫೆನ್ಸ್ ಡಿಪಾರ್ಟ್ಮೆಂಟ್‌ಗೆ ಬೇಕಾದ 101 ಐಟಂಗಳ ಆಮದನ್ನು ನಿಲ್ಲಿಸಿ ಇನ್ನೂ ಐದು ವರ್ಷಗಳೊಳಗಾಗಿ ಅವನ್ನೆಲ್ಲ ಭಾರತದಲ್ಲೇ ತಯಾರಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ಇವರ ಘೋಷಣೆಯನ್ನು ಅತ್ಯುತ್ಸಾಹದಿಂದ ಯಾರೂ ಸ್ವಾಗತಿಸಿದಂತೆ ಕಾಣುವುದಿಲ್ಲ. ಅದಕ್ಕೆ ಕಾರಣವೆಂದರೆ, ಇದೇ ಮೋದಿ ಸರ್ಕಾರ ತನ್ನ ಆಡಳಿತದ ಮೊದಲ ಅವಧಿಯಲ್ಲಿ ನಾಲ್ಕಾರು ವರ್ಷಗಳ ಹಿಂದೆ ಮೇಕ್ ಇನ್ ಇಂಡಿಯಾ ಘೋಷಣೆ ಮೊಳಗಿಸಿತ್ತು. ಆಗಲೂ ಮೋದಿ ಭಾರತ ರಕ್ಷಣೆಗಾಗಿ ಆಮದಾಗುವ ಐಟಂಗಳನ್ನು ಸ್ವದೇಶದಲ್ಲೇ ತಯಾರಿಸುವ ಭರವಸೆ ನೀಡಿದ್ದರು. ರಾಜನಾಥ್‌ಸಿಂಗರ ಇಂದಿನ ಘೋಷಣೆ Old wine in New Bottle ಎಂಬಂತಿದೆ. ಆಗ ಮೋದಿ ನೀಡಿದ ಭರವಸೆಗಳೆಲ್ಲ ಕಾಗದದಲ್ಲಿ ಮಾತ್ರ ಉಳಿದಿದೆ.

2014ರಿಂದ ರಕ್ಷಣಾ ಸಚಿವಾಲಯ ತಿಳಿಸಿರುವಂತೆ 2019ರವರೆಗೆ 190 ಭಾರತೀಯ ಉದ್ದಿಮೆದಾರರು ಕಾಂಟ್ರಾಕ್ಟ್‌ಗೆ ಸಹಿ ಹಾಕಿದ್ದಾರೆ. ಇದರ ಮೊತ್ತ 25.8 ಬಿಲಿಯನ್‌ಗಳಾಗುತ್ತದೆ. ಈ ಪೈಕಿ ಮೇಕ್ ಇನ್ ಇಂಡಿಯಾದ ಭಾಗವಾಗಿಯೇ 3.5 ಲಕ್ಷ ಕೋಟಿಯ ಕಂಟ್ರಾಕ್ಟ್‌ಗೆ ಸಹಿ ಹಾಕಲಾಗಿತ್ತು. ಈ ಕಂಟ್ರಾಕ್ಟುಗಳಲ್ಲಿ ಐನಾತಿ ಐಟಂಗಳಾದ ನ್ಯೂಜನರೇಷನ್ ಸ್ಟೆಲ್ತ್ ಸಬ್‌ಮೆರಿನ್‌ಗಳು ಮತ್ತು ಮೈನ್ ಸ್ವೀಪರ್ ಳು, ಫೈಟರ್ ಜೆಟ್ಸ್ಗಳು ಇವುಗಳ್ಯಾವುವೂ ಕಂಟ್ರಾಕ್ಟ್ಗೆ ಸಹಿ ಹಾಕಿ ವರ್ಷಗಳೇ ಕಳೆದರೂ ಅವುಗಳನ್ನು ಸರಬರಾಜು ಮಾಡಿಲ್ಲ. ಅವುಗಳಲ್ಲಿ ತಯಾರಾಗಿರುವುದು ಎಕೆ 203 ಆಸ್ಸಾಲ್ಟ್ ರೈಫಲ್‌ಗಳು ಮಾತ್ರ. ಇವನ್ನು ರಷ್ಯಾದ ಸಹಕಾರದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಉತ್ತರ ಪ್ರದೇಶದಲ್ಲಿರುವ ಕೊರ್ವಾ ಆರ್ಡಿನೆನ್ಸ್ ಫ್ಯಾಕ್ಟರಿ ಜಂಟಿಯಾಗಿ ತಯಾರಿಸಿದೆ. ಗೋವಾ ಷಿಪ್‌ಯಾರ್ಡ್ ಮತ್ತು ದಕ್ಷಿಣ ಕೊರಿಯಾದ ಕಂಪನಿಯೊಂದರ ಮಧ್ಯೆ 12 ಮೈನ್ ಸ್ವೀಪರ್ಸ್ ಸರಬರಾಜಿಗಾಗಿ 2015ರಲ್ಲಿ ಮಾಡಿಕೊಂಡಿದ್ದ 3200 ಕೋಟಿ ರೂ ಒಪ್ಪಂದವನ್ನು 2018ರಲ್ಲಿ ರದ್ದುಗೊಳಿಸಲಾಯಿತು. DRDOಒಂದು ಸರ್ಕಾರಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ. ಇದರ ಅಡಿಯಲ್ಲಿ 52ಪ್ರಗತಿಗಾಮಿ ಲ್ಯಾಬೋರೇಟರ್‌ಗಳು ಇವೆ. 5000 ಮಿಲಿಟರಿ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳು ಇಲ್ಲಿ ಕೆಲಸ ಮಾಡುತ್ತಾರೆ. 25000 ಸಹಾಯ ಸಿಬ್ಬಂದಿ ಇದ್ದಾರೆ. 2016ರಲ್ಲಿ ಇದರ ಬಜೆಟ್ 13501ಕೋಟಿ ರೂ. ಇತ್ತು. ಅದು 2019-20ಕ್ಕೆ 19021 ಕೋಟಿ ರೂಗೆ ಏರಿತು. ಆದರೆ ಅದೇನೂ ಹೆಚ್ಚು ಪ್ರಗತಿ ಹೊಂದಿಲ್ಲ. ಭಾರತ ಸರ್ಕಾರದ ನೂರಾರು ರಕ್ಷಣಾ ಫ್ಯಾಕ್ಟರಿಗಳು ಇದ್ದಾಗ್ಯೂ ಬಜೆಟ್ಟಿನ ಶೇ.59ರಷ್ಟು ಇವರ ಸಂಬಳ, ಸಾರಿಗೆಗಳಿಗೆ, ವಿಶ್ರಾಂತಿವೇತನಕ್ಕೆ ವಿನಿಯೋಗವಾಗುತ್ತದೆ. ಶಸ್ತ್ರಾಸ್ತ್ರಬಳಸುವ ಸೈನಿಕರನ್ನು ಸರ್ಕಾರ ಆಮದು ನೀತಿಗೆ ಹೊಣೆಗಾರರನ್ನಾಗಿಸಲು ಸಾಧ್ಯವೇನು? ಅವರಿಗೆ ಆಮದಾದ ಶಸ್ತ್ರಾಸ್ತ್ರಗಳನ್ನು ಬಳಸುವುದಲ್ಲದೆ ಬೇರೇನು ಆಯ್ಕೆ ಇದೆ!

ದೇಶ ರಕ್ಷಣೆಗೆ ಬೇಕಾದ ಸಾಮಗ್ರಿಗಳಲ್ಲಿ ಶೇ.65 ರಷ್ಟನ್ನು ಭಾರತ ಸರ್ಕಾರ ಆಮದು ಮಾಡಿಕೊಳ್ಳುತ್ತದೆ. ಭಾರತದಲ್ಲಿ 2019ರಲ್ಲಿ ಮಿಲಿಟರಿಯ ಮೇಲೆ ಖರ್ಚಾದ ಹಣ 71.1ಬಿಲಿಯನ್ ಡಾಲರ್‌ಗಳು, ಚೈನಾ 261 ಬಿಲಿಯನ್ ಡಾಲರ್, ರಷ್ಯಾ 65 ಬಿಲಿಯನ್ ಡಾಲರ್ ಮಿಲಿಟರಿ ಮೇಲೆ ಖರ್ಚು ಮಾಡುತ್ತವೆ. 2020-21 ಭಾರತದ ಮಿಲಿಟರಿ ಬಜೆಟ್ 62.85 ಬಿಲಿಯನ್ ಅಥವಾ 4.9 ಲಕ್ಷ ಕೋಟಿ ರೂ.ಗಳಾಗಿವೆ. ರಕ್ಷಣಾ ಇಲಾಖೆಯ ಯುದ್ಧ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳುವುದರಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಸೌದಿ ಅರೇಬಿಯಾ ಮೊದಲ ಸ್ಥಾನದಲ್ಲಿದೆ.

ಹೀಗಿರುವ ದೇಶವೊಂದು ತನ್ನ ಆಮದನ್ನು ನಿಲ್ಲಿಸಿ ಸ್ವಾವಲಂಬಿಯಾಗುತ್ತೇನೆ ಎಂದರೆ ಅದು ಸ್ವಾಗತಾರ್ಹವಲ್ಲವೇ? ಆದರೆ, ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...