Homeಮುಖಪುಟರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ರಕ್ಷಣಾ ಕ್ಷೇತ್ರದಲ್ಲಿ ಆತ್ಮನಿರ್ಭರತೆ: ಹೊಸ ಬಾಟಲ್‌ನಲ್ಲಿ ಹಳೆ ಮದ್ಯ -ಎಚ್.ಎಸ್ ದೊರೆಸ್ವಾಮಿ

ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.

- Advertisement -
- Advertisement -

ದೇಶ ರಕ್ಷಣೆಯಲ್ಲಿ ಆತ್ಮನಿರ್ಭರತೆ ಸಾಧಿಸಬೇಕೆಂದು ಸಂಕಲ್ಪ ಮಾಡಿರುವುದಾಗಿ ರಕ್ಷಣಾ ಮಂತ್ರಿ ರಾಜನಾಥ್‌ಸಿಂಗ್ ಹೇಳಿದ್ದಾರೆ. ಮೋದಿ ಮಂತ್ರ ಪಠಣವೂ ಇದೇ ಆಗಿದೆ. ಆದರೆ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಆತ್ಮನಿರ್ಭರತೆ ಎಂದರೆ ಎಲ್ಲ ಆಮದನ್ನೂ ಕೈ ಬಿಡುವುದಲ್ಲ ಎಂದು ಹೇಳುತ್ತಾರೆ. ಈ ರೀತಿ ಹೇಳುವ ಮೂಲಕ ಆತ್ಮನಿರ್ಭರತೆಗೆ ಆರ್‌ಎಸ್‌ಎಸ್ ಹೊಸ ವ್ಯಾಖ್ಯಾನವನ್ನೆ ಮಂಡಿಸುತ್ತಿದೆ. ಒಟ್ಟಿನಲ್ಲಿ ಆತ್ಮನಿರ್ಭರತೆ ಒಂದು ಘೋಷಣೆಯೆ ಹೊರತು ಬೇರೇನೂ ಅಲ್ಲ ಎಂದು ಮತಾಂಧರು ಘೋಷಿಸುತ್ತಿದ್ದಾರೆ.

ರಾಜನಾಥ್‌ಸಿಂಗರು ಈಗ ದೇಶರಕ್ಷಣೆಯಲ್ಲಿ ಆತ್ಮನಿರ್ಭರತೆ ಮಾತನ್ನಾಡಿದರೆ ಈ ಹಿಂದೆ ಮೋದಿ ಅವರು ಮೇಡ್ ಇನ್ ಇಂಡಿಯಾ ಘೋಷಣೆ  ಕೂಗುವಾಗಲೂ ಇದನ್ನೇ ಹೇಳಿದ್ದರು. ರಾಜನಾಥ್‌ಸಿಂಗರು ಡಿಫೆನ್ಸ್ ಡಿಪಾರ್ಟ್ಮೆಂಟ್‌ಗೆ ಬೇಕಾದ 101 ಐಟಂಗಳ ಆಮದನ್ನು ನಿಲ್ಲಿಸಿ ಇನ್ನೂ ಐದು ವರ್ಷಗಳೊಳಗಾಗಿ ಅವನ್ನೆಲ್ಲ ಭಾರತದಲ್ಲೇ ತಯಾರಿಸುವ ನಿರ್ಧಾರವನ್ನು ಘೋಷಿಸಿದ್ದಾರೆ. ಇವರ ಘೋಷಣೆಯನ್ನು ಅತ್ಯುತ್ಸಾಹದಿಂದ ಯಾರೂ ಸ್ವಾಗತಿಸಿದಂತೆ ಕಾಣುವುದಿಲ್ಲ. ಅದಕ್ಕೆ ಕಾರಣವೆಂದರೆ, ಇದೇ ಮೋದಿ ಸರ್ಕಾರ ತನ್ನ ಆಡಳಿತದ ಮೊದಲ ಅವಧಿಯಲ್ಲಿ ನಾಲ್ಕಾರು ವರ್ಷಗಳ ಹಿಂದೆ ಮೇಕ್ ಇನ್ ಇಂಡಿಯಾ ಘೋಷಣೆ ಮೊಳಗಿಸಿತ್ತು. ಆಗಲೂ ಮೋದಿ ಭಾರತ ರಕ್ಷಣೆಗಾಗಿ ಆಮದಾಗುವ ಐಟಂಗಳನ್ನು ಸ್ವದೇಶದಲ್ಲೇ ತಯಾರಿಸುವ ಭರವಸೆ ನೀಡಿದ್ದರು. ರಾಜನಾಥ್‌ಸಿಂಗರ ಇಂದಿನ ಘೋಷಣೆ Old wine in New Bottle ಎಂಬಂತಿದೆ. ಆಗ ಮೋದಿ ನೀಡಿದ ಭರವಸೆಗಳೆಲ್ಲ ಕಾಗದದಲ್ಲಿ ಮಾತ್ರ ಉಳಿದಿದೆ.

2014ರಿಂದ ರಕ್ಷಣಾ ಸಚಿವಾಲಯ ತಿಳಿಸಿರುವಂತೆ 2019ರವರೆಗೆ 190 ಭಾರತೀಯ ಉದ್ದಿಮೆದಾರರು ಕಾಂಟ್ರಾಕ್ಟ್‌ಗೆ ಸಹಿ ಹಾಕಿದ್ದಾರೆ. ಇದರ ಮೊತ್ತ 25.8 ಬಿಲಿಯನ್‌ಗಳಾಗುತ್ತದೆ. ಈ ಪೈಕಿ ಮೇಕ್ ಇನ್ ಇಂಡಿಯಾದ ಭಾಗವಾಗಿಯೇ 3.5 ಲಕ್ಷ ಕೋಟಿಯ ಕಂಟ್ರಾಕ್ಟ್‌ಗೆ ಸಹಿ ಹಾಕಲಾಗಿತ್ತು. ಈ ಕಂಟ್ರಾಕ್ಟುಗಳಲ್ಲಿ ಐನಾತಿ ಐಟಂಗಳಾದ ನ್ಯೂಜನರೇಷನ್ ಸ್ಟೆಲ್ತ್ ಸಬ್‌ಮೆರಿನ್‌ಗಳು ಮತ್ತು ಮೈನ್ ಸ್ವೀಪರ್ ಳು, ಫೈಟರ್ ಜೆಟ್ಸ್ಗಳು ಇವುಗಳ್ಯಾವುವೂ ಕಂಟ್ರಾಕ್ಟ್ಗೆ ಸಹಿ ಹಾಕಿ ವರ್ಷಗಳೇ ಕಳೆದರೂ ಅವುಗಳನ್ನು ಸರಬರಾಜು ಮಾಡಿಲ್ಲ. ಅವುಗಳಲ್ಲಿ ತಯಾರಾಗಿರುವುದು ಎಕೆ 203 ಆಸ್ಸಾಲ್ಟ್ ರೈಫಲ್‌ಗಳು ಮಾತ್ರ. ಇವನ್ನು ರಷ್ಯಾದ ಸಹಕಾರದೊಂದಿಗೆ ಒಪ್ಪಂದ ಮಾಡಿಕೊಂಡಿರುವ ಉತ್ತರ ಪ್ರದೇಶದಲ್ಲಿರುವ ಕೊರ್ವಾ ಆರ್ಡಿನೆನ್ಸ್ ಫ್ಯಾಕ್ಟರಿ ಜಂಟಿಯಾಗಿ ತಯಾರಿಸಿದೆ. ಗೋವಾ ಷಿಪ್‌ಯಾರ್ಡ್ ಮತ್ತು ದಕ್ಷಿಣ ಕೊರಿಯಾದ ಕಂಪನಿಯೊಂದರ ಮಧ್ಯೆ 12 ಮೈನ್ ಸ್ವೀಪರ್ಸ್ ಸರಬರಾಜಿಗಾಗಿ 2015ರಲ್ಲಿ ಮಾಡಿಕೊಂಡಿದ್ದ 3200 ಕೋಟಿ ರೂ ಒಪ್ಪಂದವನ್ನು 2018ರಲ್ಲಿ ರದ್ದುಗೊಳಿಸಲಾಯಿತು. DRDOಒಂದು ಸರ್ಕಾರಿ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ. ಇದರ ಅಡಿಯಲ್ಲಿ 52ಪ್ರಗತಿಗಾಮಿ ಲ್ಯಾಬೋರೇಟರ್‌ಗಳು ಇವೆ. 5000 ಮಿಲಿಟರಿ ವಿಜ್ಞಾನಿಗಳು ಮತ್ತು ಇಂಜಿನಿಯರ್‌ಗಳು ಇಲ್ಲಿ ಕೆಲಸ ಮಾಡುತ್ತಾರೆ. 25000 ಸಹಾಯ ಸಿಬ್ಬಂದಿ ಇದ್ದಾರೆ. 2016ರಲ್ಲಿ ಇದರ ಬಜೆಟ್ 13501ಕೋಟಿ ರೂ. ಇತ್ತು. ಅದು 2019-20ಕ್ಕೆ 19021 ಕೋಟಿ ರೂಗೆ ಏರಿತು. ಆದರೆ ಅದೇನೂ ಹೆಚ್ಚು ಪ್ರಗತಿ ಹೊಂದಿಲ್ಲ. ಭಾರತ ಸರ್ಕಾರದ ನೂರಾರು ರಕ್ಷಣಾ ಫ್ಯಾಕ್ಟರಿಗಳು ಇದ್ದಾಗ್ಯೂ ಬಜೆಟ್ಟಿನ ಶೇ.59ರಷ್ಟು ಇವರ ಸಂಬಳ, ಸಾರಿಗೆಗಳಿಗೆ, ವಿಶ್ರಾಂತಿವೇತನಕ್ಕೆ ವಿನಿಯೋಗವಾಗುತ್ತದೆ. ಶಸ್ತ್ರಾಸ್ತ್ರಬಳಸುವ ಸೈನಿಕರನ್ನು ಸರ್ಕಾರ ಆಮದು ನೀತಿಗೆ ಹೊಣೆಗಾರರನ್ನಾಗಿಸಲು ಸಾಧ್ಯವೇನು? ಅವರಿಗೆ ಆಮದಾದ ಶಸ್ತ್ರಾಸ್ತ್ರಗಳನ್ನು ಬಳಸುವುದಲ್ಲದೆ ಬೇರೇನು ಆಯ್ಕೆ ಇದೆ!

ದೇಶ ರಕ್ಷಣೆಗೆ ಬೇಕಾದ ಸಾಮಗ್ರಿಗಳಲ್ಲಿ ಶೇ.65 ರಷ್ಟನ್ನು ಭಾರತ ಸರ್ಕಾರ ಆಮದು ಮಾಡಿಕೊಳ್ಳುತ್ತದೆ. ಭಾರತದಲ್ಲಿ 2019ರಲ್ಲಿ ಮಿಲಿಟರಿಯ ಮೇಲೆ ಖರ್ಚಾದ ಹಣ 71.1ಬಿಲಿಯನ್ ಡಾಲರ್‌ಗಳು, ಚೈನಾ 261 ಬಿಲಿಯನ್ ಡಾಲರ್, ರಷ್ಯಾ 65 ಬಿಲಿಯನ್ ಡಾಲರ್ ಮಿಲಿಟರಿ ಮೇಲೆ ಖರ್ಚು ಮಾಡುತ್ತವೆ. 2020-21 ಭಾರತದ ಮಿಲಿಟರಿ ಬಜೆಟ್ 62.85 ಬಿಲಿಯನ್ ಅಥವಾ 4.9 ಲಕ್ಷ ಕೋಟಿ ರೂ.ಗಳಾಗಿವೆ. ರಕ್ಷಣಾ ಇಲಾಖೆಯ ಯುದ್ಧ ಸಾಮಗ್ರಿಗಳನ್ನು ಆಮದು ಮಾಡಿಕೊಳ್ಳುವುದರಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಸೌದಿ ಅರೇಬಿಯಾ ಮೊದಲ ಸ್ಥಾನದಲ್ಲಿದೆ.

ಹೀಗಿರುವ ದೇಶವೊಂದು ತನ್ನ ಆಮದನ್ನು ನಿಲ್ಲಿಸಿ ಸ್ವಾವಲಂಬಿಯಾಗುತ್ತೇನೆ ಎಂದರೆ ಅದು ಸ್ವಾಗತಾರ್ಹವಲ್ಲವೇ? ಆದರೆ, ಮೇಕ್ ಇನ್ ಇಂಡಿಯಾ ಸಂದರ್ಭದಲ್ಲಿ ಮಾಡಿದಂತೆ ಕೇವಲ ಘೋಷಣೆಗಳಿಗೆ ಸೀಮಿತಗೊಳಿಸಿ, ಆತ್ಮಘಾತುಕತನವನ್ನು ಮಾಡಲಾಗುತ್ತದೆ ಎಂಬ ಬಗ್ಗೆ ಸಂದೇಹವೇನೂ ಉಳಿದಿಲ್ಲ.


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...