Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

- Advertisement -
- Advertisement -

ಬಾಲಿವುಡ್ ಪ್ರಸಿದ್ದ ನಟ ಅಮೀರ್‌ ಖಾನ್ ಹಜ್‌ ಯಾತ್ರೆಗೆ ಹೋದಾಗ ಲಷ್ಕರ್‌-ಎ-ತೈಬಾ ಭಯೋತ್ಪಾದಕರನ್ನು ಭೇಟಿಯಾದರು ಎಂದು ಇಬ್ಬರು ಗಡ್ಡದಾರಿ ವ್ಯಕ್ತಿಗಳ ಜೊತೆಗೆ ಅವರು ನಿಂತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಮೀರ್‌ ಖಾನ್‌ ಸುಶಾಂತ್‌ ಸಿಂಗ್ ರಜಪೂತ್ ಸಾವಿನ ಬಗ್ಗೆ ಟ್ವೀಟ್ ಮಾಡಿಲ್ಲ, ಜೊತೆಗೆ ಸ್ವಾತಂತ್ಯ್ರೋತ್ಸವಕ್ಕೂ ಶುಭಾಶಯ ಕೋರಿಲ್ಲ. ಭಯೋತ್ಪಾದಕರೊಂದಿಗೆ ಚಿತ್ರ ಕ್ಲಿಕ್ಕಿಸುತ್ತಿದ್ದಾರೆ, ನಾಚಿಕೆಯಾಗಬೇಕು ಅಮೀರ್‌ ಖಾನ್‌ಗೆ ಎಂಬ ಸಂದೇಶದ ಜೊತೆಗೆ ಈ ಪೋಸ್ಟ್‌ ಅನ್ನು ಹಲವಾರು ಜನರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದು, ಪೋಟೋ ವೈರಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿರುವ ಚಿತ್ರ
ಆರ್ಕೈವ್‌ ಇಲ್ಲಿದೆ.

ಇದನ್ನೇ ಕಾಪಿ ಪೇಸ್ಟ್ ಮಾಡಿ ಹಲವಾರು ಜನರು ಅದೇ ಧ್ವನಿಯಲ್ಲಿ ಟ್ವೀಟ್ ಮಾಡಿದ್ದಾರೆ. ಆರ್ಕೈವ್ ಇಲ್ಲಿದೆ.

ಇನ್ನು ಕೆಲವರು ಅಮೀರ್‌ ಖಾನ್‌ ಮಕ್ಕಾದ ಹಜ್‌ ಯಾತ್ರೆಗೆ ಹೋದಾಗ ಭಯೋತ್ಪಾದಕರನ್ನು ಭೇಟಿಯಾದರು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ. ಇದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌ಚೆಕ್‌

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

ಈ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಟ ನಡೆಸಿದಾಗ, ಪಾಕಿಸ್ತಾನದ ಪತ್ರಿಕೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್‌ನ ಡಿಸೆಂಬರ್ 2016 ರಲ್ಲಿ ಬರೆದ ಲೇಖನವೊಂದು ಕಾಣಬಹುದಾಗಿದೆ. ಅದರಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ವರದಿಯಲ್ಲಿ ಜುನೈದ್‌ ಜಮ್ಶೆಡ್‌ ಅವರು ವಿಮಾನ ಅಫಘಾತದಲ್ಲಿ ಸಾವಿಗೀಡಾದಾಗ ಅಮೀರ್‌ ಖಾನ್‌ ಹೇಗೆ ಪ್ರತಿಕ್ರಿಯಿಸಿದರು ಎಂದು ಬರೆಯಲಾಗಿದೆ.

ಅದರಲ್ಲಿ ಅಮೀರ್‌ ಖಾನ್‌ ತನ್ನ ತಾಯಿಯೊಂದಿಗೆ ಹಜ್‌‌ಗೆ ಹೋದಾಗ ಜುನೈದ್‌ ಜಮ್ಶೆಡ್ ಅವರನ್ನು ಅಮೀರ್‌ ಖಾನ್‌ ಭೇಟಿಯಾಗಿದ್ದರು ಎಂದು ಉಲ್ಲೇಖಿಸಲಾಗಿದೆ.‌‌ ಆದರೆ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ವೈರಲಾಗುತ್ತಿರುವ ಚಿತ್ರದ ಜೊತೆಗೆ ಅವರ ಹೆಸರನ್ನು ಜುನೈದ್‌ ಜಮ್ಶೇದ್ ಬದಲಾಗಿ ಭಯೋತ್ಪಾದಕ ಜುನೈದ್ ಸಂಶೇದ್ ಎಂದು ತಪ್ಪಾಗಿ ಬರೆಯಲಾಗಿದೆ.

ಇದನ್ನೂ ಓದಿ:  ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ವಾಸ್ತವದಲ್ಲಿ ಜುನೈದ್‌ ಜಮ್ಶೇದ್‌ ಪ್ರಸಿದ್ದ ಪಾಕಿಸ್ತಾನಿ ಗಾಯಕ ಹಾಗೂ ಇಸ್ಲಾಮಿಕ್ ಬೋಧಕರಾಗಿದ್ದಾರೆ. ಇವರು ತಮ್ಮ ಸಂಗೀತ ವೃತ್ತಿಜೀವನವನ್ನು 1983 ಪ್ರಾರಂಭಿಸಿದರು. ’ಉಸ್ ರಾಹ್ ಪರ್’ ಆಲ್ಬಮ್‌ ಸಂಗೀತ ಇವರ ಪ್ರಸಿದ್ಧ ಸಂಗೀತ ಆಲ್ಬಮ್ ಆಗಿದೆ. ಆದಾಗ್ಯೂ ನಂತರ ಅವರು ತಮ್ಮ ಸಂಗೀತ ವೃತ್ತಿಜೀವನವನ್ನು ಬಿಟ್ಟು ಧಾರ್ಮಿಕ ಚಟುವಟಿಕೆಗಳತ್ತ ಗಮನಹರಿಸಲು ಪ್ರಾರಂಭಿಸಿದ್ದರು.

ಹಜ್‌ ಯಾತ್ರೆಯಲ್ಲಿ ಅಮೀರ್ ಖಾನ್ ಅವರನ್ನು ಇವರು ಭೇಟಿಯಾಗಿರುವ ಬಗ್ಗೆ ಮಾತನಾಡುತ್ತಿರುವ ವಿಡಿಯೋ ಕೆಳಗಿದೆ.

ಇದಲ್ಲದೆ, ಜಮ್ಶೆದ್ ಅವರೊಂದಿಗಿನ ಖಾನ್ ಅವರ ಫೋಟೋಗಳನ್ನು ಪಾಕಿಸ್ತಾನದ ಪತ್ರಿಕೆ ಡಾನ್ ಕೂಡಾ ಪ್ರಕಟ ಮಾಡಿತ್ತು. “ಜುನೈದ್ ಜಮ್ಶೆದ್ ಅವರೊಂದಿಗೆ ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ 2012 ತೀರ್ಥಯಾತ್ರೆಯಲ್ಲಿ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಪ್ರಕಟಿಸಿದೆ.

ಡಾನ್‌ ಪತ್ರಿಕೆ ಪ್ರಕಟಿಸಿರುವ ಚಿತ್ರ

ಅಷ್ಟೆ ಅಲ್ಲದೆ ಅಕ್ಟೋಬರ್ 2012 ರಲ್ಲಿ ಜಮ್ಶೆದ್ ಕೂಡಾ ತನ್ನ ಫೇಸ್ಬುಕ್ ಖಾತೆಯಲ್ಲಿ ಅದೇ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

Posted by Junaid Jamshed on Tuesday, October 30, 2012

ಆದ್ದರಿಂದ, ಇದು 2012 ರ ಚಿತ್ರವಾಗಿದ್ದು ಅಮೀರ್‌ ಖಾನ್ ತನ್ನ ತಾಯಿ ಝೀನತ್ ಹುಸೇನ್ ಅವರೊಂದಿಗೆ ಹಜ್‌ ಯಾತ್ರೆಗಾಗಿ ಮೆಕ್ಕಾಗೆ ಹೋಗಿದ್ದಾಗ ಕ್ಲಿಕ್ಕಿಸಿದ ಫೋಟೋವಾಗಿದೆ. ಹಜ್‌ ಯಾತ್ರೆಯ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿತ್ತು.

ಇದಲ್ಲದೆ ಅಮೀರ್‌ ಖಾನ್ ಜೊತೆಯಲ್ಲಿ ನಿಂತಿರುವ ಇನ್ನೊಬ್ಬ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಿಕ್ ದೂರದರ್ಶನ ಬೋಧಕ, ಧಾರ್ಮಿಕ ಬರಹಗಾರ ಮತ್ತು ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಆಗಿದ್ದಾರೆ. ಅವರು ಪಾಕಿಸ್ತಾನದ ಪ್ರಸಿದ್ಧ ಧಾರ್ಮಿಕ ವಿಧ್ವಾಂಸನಾಗಿದ್ದು, 2020 ರಲ್ಲಿ ದೇಶದ ಸರ್ಕಾರವು ಅವರಿಗೆ ನಾಗರಿಕ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಡೈಲಿ ಟೈಮ್ಸ್ ವರದಿ ತಿಳಿಸಿದೆ.

ಜಮೀಲ್ ಅವರು ಅಮೀರ್‌ ಖಾನ್ ಅವರೊಂದಿಗಿನ ಭೇಟಿಯ ಕುರಿತು ಮಾತನಾಡುವ ವೀಡಿಯೊ ಕೆಳಗಿದೆ.

ಆದ್ದರಿಂದ, ಅಮೀರ್‌ ಖಾನ್ ತನ್ನ ಹಜ್‌ ಯಾತ್ರೆಯಲ್ಲಿ ಭಯೋತ್ಪಾದಕರನ್ನು ಭೇಟಿಯಾದರು ಎಂಬ ಹೇಳಿಕೆ ಸಂಪೂರ್ಣವಾಗಿ ಸುಳ್ಳಾಗಿದೆ.


ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...