Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಫ್ಯಾಕ್ಟ್‌‌ಚೆಕ್: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿಲ್ಲ.

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

- Advertisement -
- Advertisement -

ಬಾಲಿವುಡ್ ಪ್ರಸಿದ್ದ ನಟ ಅಮೀರ್‌ ಖಾನ್ ಹಜ್‌ ಯಾತ್ರೆಗೆ ಹೋದಾಗ ಲಷ್ಕರ್‌-ಎ-ತೈಬಾ ಭಯೋತ್ಪಾದಕರನ್ನು ಭೇಟಿಯಾದರು ಎಂದು ಇಬ್ಬರು ಗಡ್ಡದಾರಿ ವ್ಯಕ್ತಿಗಳ ಜೊತೆಗೆ ಅವರು ನಿಂತಿರುವ ಫೋಟೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಅಮೀರ್‌ ಖಾನ್‌ ಸುಶಾಂತ್‌ ಸಿಂಗ್ ರಜಪೂತ್ ಸಾವಿನ ಬಗ್ಗೆ ಟ್ವೀಟ್ ಮಾಡಿಲ್ಲ, ಜೊತೆಗೆ ಸ್ವಾತಂತ್ಯ್ರೋತ್ಸವಕ್ಕೂ ಶುಭಾಶಯ ಕೋರಿಲ್ಲ. ಭಯೋತ್ಪಾದಕರೊಂದಿಗೆ ಚಿತ್ರ ಕ್ಲಿಕ್ಕಿಸುತ್ತಿದ್ದಾರೆ, ನಾಚಿಕೆಯಾಗಬೇಕು ಅಮೀರ್‌ ಖಾನ್‌ಗೆ ಎಂಬ ಸಂದೇಶದ ಜೊತೆಗೆ ಈ ಪೋಸ್ಟ್‌ ಅನ್ನು ಹಲವಾರು ಜನರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದು, ಪೋಟೋ ವೈರಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿರುವ ಚಿತ್ರ
ಆರ್ಕೈವ್‌ ಇಲ್ಲಿದೆ.

ಇದನ್ನೇ ಕಾಪಿ ಪೇಸ್ಟ್ ಮಾಡಿ ಹಲವಾರು ಜನರು ಅದೇ ಧ್ವನಿಯಲ್ಲಿ ಟ್ವೀಟ್ ಮಾಡಿದ್ದಾರೆ. ಆರ್ಕೈವ್ ಇಲ್ಲಿದೆ.

ಇನ್ನು ಕೆಲವರು ಅಮೀರ್‌ ಖಾನ್‌ ಮಕ್ಕಾದ ಹಜ್‌ ಯಾತ್ರೆಗೆ ಹೋದಾಗ ಭಯೋತ್ಪಾದಕರನ್ನು ಭೇಟಿಯಾದರು ಎಂದು ಬರೆದು ಸಾಮಾಜಿಕ ಜಾಲತಾಣದಲ್ಲಿ ಹಂಚುತ್ತಿದ್ದಾರೆ. ಇದರ ಆರ್ಕೈವ್‌ ಇಲ್ಲಿದೆ.

ಫ್ಯಾಕ್ಟ್‌ಚೆಕ್‌

ಅಮೀರ್‌ ಖಾನ್‌ ಜೊತೆಗೆ ವೈರಲ್ ಚಿತ್ರದಲ್ಲಿ ಇರುವ ಇಬ್ಬರು ಗಡ್ಡದಾರಿಗಳಲ್ಲಿ ಒಬ್ಬರು ದಿವಂಗತ ಪಾಕಿಸ್ತಾನಿ ಗಾಯಕ ಜುನೈದ್ ಜಮ್ಶೆಡ್ ಮತ್ತೊಬ್ಬರು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ ಆಗಿದ್ದಾರೆ.

ಈ ಚಿತ್ರವನ್ನು ರಿವರ್ಸ್ ಇಮೇಜ್ ಮೂಲಕ ಹುಡುಕಾಟ ನಡೆಸಿದಾಗ, ಪಾಕಿಸ್ತಾನದ ಪತ್ರಿಕೆ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್‌ನ ಡಿಸೆಂಬರ್ 2016 ರಲ್ಲಿ ಬರೆದ ಲೇಖನವೊಂದು ಕಾಣಬಹುದಾಗಿದೆ. ಅದರಲ್ಲಿ ಈ ಚಿತ್ರವನ್ನು ಕಾಣಬಹುದಾಗಿದೆ. ವರದಿಯಲ್ಲಿ ಜುನೈದ್‌ ಜಮ್ಶೆಡ್‌ ಅವರು ವಿಮಾನ ಅಫಘಾತದಲ್ಲಿ ಸಾವಿಗೀಡಾದಾಗ ಅಮೀರ್‌ ಖಾನ್‌ ಹೇಗೆ ಪ್ರತಿಕ್ರಿಯಿಸಿದರು ಎಂದು ಬರೆಯಲಾಗಿದೆ.

ಅದರಲ್ಲಿ ಅಮೀರ್‌ ಖಾನ್‌ ತನ್ನ ತಾಯಿಯೊಂದಿಗೆ ಹಜ್‌‌ಗೆ ಹೋದಾಗ ಜುನೈದ್‌ ಜಮ್ಶೆಡ್ ಅವರನ್ನು ಅಮೀರ್‌ ಖಾನ್‌ ಭೇಟಿಯಾಗಿದ್ದರು ಎಂದು ಉಲ್ಲೇಖಿಸಲಾಗಿದೆ.‌‌ ಆದರೆ ಸಾಮಾಜಿಕ ಜಾಲತಾಣದಲ್ಲಿ ಪ್ರಸ್ತುತ ವೈರಲಾಗುತ್ತಿರುವ ಚಿತ್ರದ ಜೊತೆಗೆ ಅವರ ಹೆಸರನ್ನು ಜುನೈದ್‌ ಜಮ್ಶೇದ್ ಬದಲಾಗಿ ಭಯೋತ್ಪಾದಕ ಜುನೈದ್ ಸಂಶೇದ್ ಎಂದು ತಪ್ಪಾಗಿ ಬರೆಯಲಾಗಿದೆ.

ಇದನ್ನೂ ಓದಿ:  ಜಿಯೋ ಜಾಹಿರಾತಿನಿಂದ ಶಾರುಖ್ ಖಾನ್‌ನನ್ನು ಮುಖೇಶ್ ಅಂಬಾನಿ ಕಿತ್ತೆಸೆದರೆ?

ವಾಸ್ತವದಲ್ಲಿ ಜುನೈದ್‌ ಜಮ್ಶೇದ್‌ ಪ್ರಸಿದ್ದ ಪಾಕಿಸ್ತಾನಿ ಗಾಯಕ ಹಾಗೂ ಇಸ್ಲಾಮಿಕ್ ಬೋಧಕರಾಗಿದ್ದಾರೆ. ಇವರು ತಮ್ಮ ಸಂಗೀತ ವೃತ್ತಿಜೀವನವನ್ನು 1983 ಪ್ರಾರಂಭಿಸಿದರು. ’ಉಸ್ ರಾಹ್ ಪರ್’ ಆಲ್ಬಮ್‌ ಸಂಗೀತ ಇವರ ಪ್ರಸಿದ್ಧ ಸಂಗೀತ ಆಲ್ಬಮ್ ಆಗಿದೆ. ಆದಾಗ್ಯೂ ನಂತರ ಅವರು ತಮ್ಮ ಸಂಗೀತ ವೃತ್ತಿಜೀವನವನ್ನು ಬಿಟ್ಟು ಧಾರ್ಮಿಕ ಚಟುವಟಿಕೆಗಳತ್ತ ಗಮನಹರಿಸಲು ಪ್ರಾರಂಭಿಸಿದ್ದರು.

ಹಜ್‌ ಯಾತ್ರೆಯಲ್ಲಿ ಅಮೀರ್ ಖಾನ್ ಅವರನ್ನು ಇವರು ಭೇಟಿಯಾಗಿರುವ ಬಗ್ಗೆ ಮಾತನಾಡುತ್ತಿರುವ ವಿಡಿಯೋ ಕೆಳಗಿದೆ.

ಇದಲ್ಲದೆ, ಜಮ್ಶೆದ್ ಅವರೊಂದಿಗಿನ ಖಾನ್ ಅವರ ಫೋಟೋಗಳನ್ನು ಪಾಕಿಸ್ತಾನದ ಪತ್ರಿಕೆ ಡಾನ್ ಕೂಡಾ ಪ್ರಕಟ ಮಾಡಿತ್ತು. “ಜುನೈದ್ ಜಮ್ಶೆದ್ ಅವರೊಂದಿಗೆ ಬಾಲಿವುಡ್ ನಟ ಅಮೀರ್ ಖಾನ್ ಮತ್ತು ಆಧ್ಯಾತ್ಮಿಕ ಮಾರ್ಗದರ್ಶಕ ತಾರಿಕ್ ಜಮೀಲ್ 2012 ತೀರ್ಥಯಾತ್ರೆಯಲ್ಲಿ” ಎಂಬ ಶೀರ್ಷಿಕೆಯೊಂದಿಗೆ ಫೋಟೋವನ್ನು ಪ್ರಕಟಿಸಿದೆ.

ಡಾನ್‌ ಪತ್ರಿಕೆ ಪ್ರಕಟಿಸಿರುವ ಚಿತ್ರ

ಅಷ್ಟೆ ಅಲ್ಲದೆ ಅಕ್ಟೋಬರ್ 2012 ರಲ್ಲಿ ಜಮ್ಶೆದ್ ಕೂಡಾ ತನ್ನ ಫೇಸ್ಬುಕ್ ಖಾತೆಯಲ್ಲಿ ಅದೇ ಫೋಟೋವನ್ನು ಅಪ್ಲೋಡ್ ಮಾಡಿದ್ದಾರೆ.

Posted by Junaid Jamshed on Tuesday, October 30, 2012

ಆದ್ದರಿಂದ, ಇದು 2012 ರ ಚಿತ್ರವಾಗಿದ್ದು ಅಮೀರ್‌ ಖಾನ್ ತನ್ನ ತಾಯಿ ಝೀನತ್ ಹುಸೇನ್ ಅವರೊಂದಿಗೆ ಹಜ್‌ ಯಾತ್ರೆಗಾಗಿ ಮೆಕ್ಕಾಗೆ ಹೋಗಿದ್ದಾಗ ಕ್ಲಿಕ್ಕಿಸಿದ ಫೋಟೋವಾಗಿದೆ. ಹಜ್‌ ಯಾತ್ರೆಯ ಬಗ್ಗೆ ಇಂಡಿಯಾ ಟುಡೆ ವರದಿ ಮಾಡಿತ್ತು.

ಇದಲ್ಲದೆ ಅಮೀರ್‌ ಖಾನ್ ಜೊತೆಯಲ್ಲಿ ನಿಂತಿರುವ ಇನ್ನೊಬ್ಬ ವ್ಯಕ್ತಿ ಪಾಕಿಸ್ತಾನದ ಇಸ್ಲಾಮಿಕ್ ದೂರದರ್ಶನ ಬೋಧಕ, ಧಾರ್ಮಿಕ ಬರಹಗಾರ ಮತ್ತು ವಿದ್ವಾಂಸ ಮೌಲಾನಾ ತಾರಿಕ್ ಜಮೀಲ್ ಆಗಿದ್ದಾರೆ. ಅವರು ಪಾಕಿಸ್ತಾನದ ಪ್ರಸಿದ್ಧ ಧಾರ್ಮಿಕ ವಿಧ್ವಾಂಸನಾಗಿದ್ದು, 2020 ರಲ್ಲಿ ದೇಶದ ಸರ್ಕಾರವು ಅವರಿಗೆ ನಾಗರಿಕ ಪ್ರಶಸ್ತಿಯನ್ನು ನೀಡುತ್ತಿದೆ ಎಂದು ಡೈಲಿ ಟೈಮ್ಸ್ ವರದಿ ತಿಳಿಸಿದೆ.

ಜಮೀಲ್ ಅವರು ಅಮೀರ್‌ ಖಾನ್ ಅವರೊಂದಿಗಿನ ಭೇಟಿಯ ಕುರಿತು ಮಾತನಾಡುವ ವೀಡಿಯೊ ಕೆಳಗಿದೆ.

ಆದ್ದರಿಂದ, ಅಮೀರ್‌ ಖಾನ್ ತನ್ನ ಹಜ್‌ ಯಾತ್ರೆಯಲ್ಲಿ ಭಯೋತ್ಪಾದಕರನ್ನು ಭೇಟಿಯಾದರು ಎಂಬ ಹೇಳಿಕೆ ಸಂಪೂರ್ಣವಾಗಿ ಸುಳ್ಳಾಗಿದೆ.


ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...