Homeಮುಖಪುಟಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ: ಬಿಡುಗಡೆಯಾಗಿದ್ದು 6 ಕಂತು, ಬಂದಿದ್ದು 3 ಕಂತು ಮಾತ್ರ

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ: ಬಿಡುಗಡೆಯಾಗಿದ್ದು 6 ಕಂತು, ಬಂದಿದ್ದು 3 ಕಂತು ಮಾತ್ರ

ಬೆಳೆಗಳಿಗೆ ಸರಿಯಾದ ಧಾರಣೆ ನೀಡಿದರೆ, ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ, ರೈತರ ಸಮಸ್ಯೆಗಳನ್ನು ಪರಿಹರಿಸಿದರೆ ರೈತರಿಗೆ ಯಾವ ಹಣವನ್ನೂ ನೀಡಬೇಕಾದ ಅಗತ್ಯವಿಲ್ಲ.

- Advertisement -
- Advertisement -

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಆರನೇ ಕಂತಿನ ಹಣ ಬಿಡುಗಡೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಆದರೆ ವಾಸ್ತವದಲ್ಲಿ ಕೇವಲ ಮೂರು-ನಾಲ್ಕು ಕಂತಿನ ಹಣ ಮಾತ್ರ ಕೆಲ ರೈತರ ಖಾತೆಗೆ ನೇರ ವರ್ಗಾವಣೆಯಾಗಿದೆ ಎಂದು ರೈತರು ದೂರುತ್ತಿದ್ದಾರೆ. ಈ ಕುರಿತು ಹಲವು ರೈತರನ್ನು ಮಾತನಾಡಿಸಿದಾಗ ಎಲ್ಲಾ ದಾಖಲೆ ಸಲ್ಲಿಸಿದ್ದರೂ ಕೇವಲ 2 ಬಾರಿ ಹಣ ಬಂದಿದ್ದು ನಂತರ ಬಂದಿಲ್ಲ ಎಂದು ಕೆಲವು ರೈತರು ಹೇಳಿದ್ದಾರೆ.

ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯ ಮಹಾತ್ವಾಕಾಂಕ್ಷೆಯ ಯೋಜನೆ ಎನ್ನಲಾಗಿದ್ದು, ಲೋಕಸಭಾ ಚುನಾವಣಾ ಪೂರ್ವದಲ್ಲಿ ಈ ಯೋಜನೆ ಘೋಷಣೆ ಮಾಡಲಾಗಿತ್ತು. ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಜನವರಿ 2, 2019 ರಂದು ನಡೆದ ಬೃಹತ್ ರೈತರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರಿ ಮೋದಿ ಮೊದಲ ಕಂತು ಬಿಡುಗಡೆ ಮಾಡಿದ್ದರು. ಬಟನ್ ಒತ್ತುವ ಮೂಲಕ ಫಲನುಭವಿ ರೈತರ ಖಾತೆಗೆ ಹಣ ಜಮಾವಣೆ ಮಾಡಿದ್ದರು. ಆರಂಭದಲ್ಲಿ ಎಲ್ಲರಿಗೂ ಹಣ ಜಮೆಗೊಂಡಿತಾದರೂ ನಂತರ ಹಣ ಬರಲೇ ಇಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ವಾರ್ಷಿಕ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ರೈತರ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತ ಬಂದಿದೆ. ಅರ್ಹ ಫಲನುಭವಿ ರೈತರು ಆಧಾರ್, ಮೊಬೈಲ್ ನಂಬರ್, ಪಹಣಿ, ಬ್ಯಾಂಕ್ ಖಾತೆ ಲಿಂಕ್ ಮಾಡಿದರೆ ಹಣ ಬರುತ್ತದೆ ಎಂದು ಸರ್ಕಾರ ಹೇಳಿತ್ತು. ಅದರಂತೆ ಎಲ್ಲಾ ದಾಖಲೆ ಸಲ್ಲಿಸಿದರೂ ಕೆಲವರಿಗೆ ಬಂದಿಲ್ಲ. ಕೆಲವರಿಗೆ ಎರಡು, ಮತ್ತೆ ಹಲವರಿಗೆ ಮೂರು, ನಾಲ್ಕು ಕಂತಿನ ಹಣ ಮಾತ್ರ ಬಂದಿದೆ. ಉಳಿದ ಕಂತಿನ ಹಣ ಬಂದಿಲ್ಲ. ಇದೇಕೆ ಹೀಗೆ? ಎರಡು ಕಂತಿನ ಹಣಬರುವವರೆಗೆ ದಾಖಲೆಗಳು ಸರಿ ಇದ್ದವು. ನಂತರ ದಾಖಲೆಗಳು ಸರಿ ಇಲ್ಲವೇ ಎಂದು ಹಣ ಬಾರದ ರೈತರು ಪ್ರಶ್ನಿಸಿದ್ದಾರೆ.

ಕಳೆದ ಒಂದು ವರ್ಷ 8 ತಿಂಗಳಲ್ಲಿ 6 ಕಂತುಗಳಲ್ಲಿ ಹಣ ಬಿಡುಗಡೆಯಾಗಿದೆ. ಆಗಸ್ಟ್ 9, 2020ರಂದು ಪ್ರಧಾನಿ ಆರನೇ ಕಂತಿನ ಹಣ ರೈತರ ಖಾತೆಗಳಿಗೆ ವರ್ಗಾಯಿಸಿದರು. ಆ ದಿನದ 17 ಸಾವಿರ ಕೋಟಿ ಸೇರಿ ಒಟ್ಟು ಇದುವರೆಗೆ 75 ಸಾವಿರ ಕೋಟಿ ರೂಪಾಯಿಗಳನ್ನು 8.5 ಕೋಟಿ ಫಲನುಭವಿ ರೈತರಿಗೆ ನೀಡಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸುತ್ತವೆ. ವಾಸ್ತವವಾಗಿ ನೋಡಿದರೆ ಕಿಸಾನ್ ಸನ್ಮಾನ್ ನಿಧಿ ಯೋಜನೆ ಘೋಷಣೆಯಾಗಿ 20 ತಿಂಗಳು ಕಳೆದಿವೆ. ಅಂದರೆ ವಾರ್ಷಿಕ ಮೂರು ಕಂತುಗಳಾದರೆ ಒಂದು ವರ್ಷ ಎಂಟು ತಿಂಗಳಿಗೆ 5 ಕಂತುಗಳು ಮಾತ್ರ ಆಗುತ್ತವೆ. ಸರ್ಕಾರದ ಪ್ರಕಾರ ಒಂದು ಕಂತಿನ ಹಣ ಹೆಚ್ಚುವರಿಯಾಗಿ ಬಿಡುಗಡೆಯಾಗಿದೆ.

ಭಾರತ ಕೃಷಿ ಪ್ರಧಾನ ದೇಶ. ಶೇಕಡ 65 ರಷ್ಟು ಕುಟುಂಬಗಳು ಕೃಷಿಯನ್ನೇ ಅವಲಂಬಿಸಿವೆ. ಕೃಷಿಯ ಜೊತೆ ಇತರೆ ಉಪಕಸುಬುಗಳಲ್ಲೂ ತೊಡಗಿಸಿಕೊಂಡಿವೆ. ದೇಶಕ್ಕೆ ಅನ್ನ ನೀಡುವ ರೈತ ಕುಟುಂಬಗಳ ದಿಕ್ಕುಗಾಣದೆ ಜೀವನ ನಡೆಸುತ್ತಿವೆ. ಇಂತಹ ಹೊತ್ತಿನಲ್ಲಿ ಸರ್ಕಾರ ಪ್ರತಿಯೊಬ್ಬ ರೈತ ಈ ಯೋಜನೆ ವ್ಯಾಪ್ತಿಗೆ ಬರುವಂತೆ ನೋಡಿಕೊಳ್ಳಬೇಕಿತ್ತು. ಆದರೆ ಅಂತಹ ಕೆಲಸ ಅಗಿಲ್ಲ. ಪಹಣಿ ಇಲ್ಲದ, ಪಾಲುದಾರಿಕೆ ಸರಿಯಾಗಿ ಆಗದೇ ಇರುವಂಥ, ಬಗರ್ ಹುಕುಂ ಸಾಗುವಳಿಯಲ್ಲಿ ತೊಡಗಿರುವಂಥ ರೈತರೂ ಕೃಷಿ ಸಮ್ಮಾನ್ ಯೋಜನೆಯ ಫಲನುಭವಿಗಳು ಆಗಲು ಸಾಧ್ಯವಾಗಿಲ್ಲ. ಎಷ್ಟೋ ಜಮೀನುಗಳು ಇನ್ನೂ ತಾತ-ಮುತ್ತಾತನ ಹೆಸರಿನಲ್ಲೇ ಓಡುತ್ತಿವೆ. ಇಂತಹ ಸಂಕಷ್ಟಗಳು ಈ ದೇಶದ ಅಧಿಕಾರದ ಚುಕ್ಕಾಣಿ ಹಿಡಿದಿರುವವರಿಗೆ ಕಾಣುತ್ತಿಲ್ಲ.

ಇದನ್ನೂ ಓದಿ: ಹುಲಿಗಳಿಗೆ ಧಾಮ! ರೈತ, ಆದಿವಾಸಿಗಳಿಗೆ ಪಂಗನಾಮ!!

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಟ್ರಾಕ್ಟರ್ ನಲ್ಲಿ ಒಂದು ಗಂಟೆ ಉಳುಮೆ ಮಾಡಲು 1500 ರೂ ನೀಡಬೇಕು. ರಸಗೊಬ್ಬರ ಖರೀದಿಗೆ ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ. ವರ್ಷಕ್ಕೆ 6 ಸಾವಿರ ರೂ ನೀಡಿದರೆ ಯಾವುದಕ್ಕು ಆಗುವುದಿಲ್ಲ. ನಮ್ಮೂರಿನಲ್ಲಿ 300 ರೈತ ಕುಟುಂಬಗಳಿವೆ. ಅವರಲ್ಲಿ ಕೇವಲ 60 ಮಂದಿಗೆ ಮಾತ್ರ ಬಂದಿದೆ. ಅಧಿಕಾರಿಗಳು ರೆಕಾರ್ಡ್ ಮಾತ್ರ ಕೇಳುತ್ತಾರೆ. ಭೂಮಿ ಉಳುವ ಗೇಣಿದಾರನಿಗೆ ಯಾವುದೇ ದಾಖಲೆ ಇಲ್ಲ. ಭೂಮಾಲಿಕರು ಮಾತ್ರ ಕಿಸಾನ್ ಸನ್ಮಾನ್ ಯೋಜನೆಯ ಲಾಭ ಪಡೆಯುತ್ತಾರೆ. ಗೇಣಿದಾರರಿಗೂ ಹಣ ನೀಡಬೇಕು ಎಂಬುದು ನಮ್ಮ ಒತ್ತಾಯ. ದೇಶದಲ್ಲಿ ಬಹುಸಂಖ್ಯಾತರು ರೈತರಾದರೂ ಸರ್ಕಾರದ ನೆರವು ದೊರೆಯುತ್ತಿಲ್ಲ. ಇದು ನೋವಿನ ಸಂಗತಿ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಡಾ. ಸ್ವಾಮಿನಾಥನ್ ವರದಿಯನ್ವಯ ರೈತರು ಮಾಡಿದ ವೆಚ್ಚದ ಒಂದೂವರೆ ಪಟ್ಟು ಹಣ ನೀಡಬೇಕೆಂದು ವ್ಯಾಪಕ ಆಗ್ರಹ ಕೇಳಿಬಂತು. ಇದರ ಒತ್ತಡವನ್ನು ಸಹಿಸದ ಕೇಂದ್ರ ಸರ್ಕಾರ ಅತುರವಾಗಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ಜಾರಿಗೆ ತಂದಿತು. ಇದರಿಂದ ನಿಜವಾದ ರೈತರಿಗೆ ಪ್ರಯೋಜನವಿಲ್ಲ. ಇದೊಂದು ನಾಮಕಾವಸ್ತೆ ಮತ್ತು ತೋರಿಕೆಯ ಯೋಜನೆ ಎಂದು ಅವರು ಹೇಳಿದರು.

ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಹೇಳುವಂತೆ, “ಕೇಂದ್ರ ಸರ್ಕಾರ ಕೇವಲ 8.5 ಕೋಟಿ ರೈತರನ್ನು ರೀಚ್ ಆಗಲು ಸಾಧ್ಯವಾಗಿದೆ. ಸರ್ಕಾರ ನೀಡುತ್ತಿರುವ ಹಣ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ. ರೈತರ ಮೂಗಿಗೆ ತುಪ್ಪ ಸವರುವಂತಹ ಕೆಲಸ ಮಾಡಿದೆ. ರೈತರ ಪ್ರಶ್ನೆಗಳನ್ನು ಕೇಂದ್ರ ಸರ್ಕಾರ ಇತ್ಯರ್ಥ ಪಡಿಸಿದರೆ, ಬೆಳೆಗಳಿಗೆ ಸರಿಯಾದ ಧಾರಣೆ ನೀಡಿದರೆ, ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ, ರೈತರ ಸಮಸ್ಯೆಗಳನ್ನು ಪರಿಹರಿಸಿದರೆ ರೈತರಿಗೆ ಯಾವ ಹಣವನ್ನೂ ನೀಡಬೇಕಾದ ಅಗತ್ಯವಿಲ್ಲ. ರೈತರ ನಿಜವಾದ ಸಮಸ್ಯೆಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಶಿರಾ ತಾಲೂಕಿನ ಗೌಡಗೆರೆ ಗ್ರಾಮದ ಈರಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿದರು ‘’ನನಗೆ ಎರಡು ಕಂತು ಬಂತು ಸ್ವಾಮಿ, ಉಳಿದಿದ್ದು ಬಂದಿಲ್ಲ.. ನಮ್ಮ ಚಿಕ್ಕಪ್ಪನ ಮಕ್ಕಳಿಗೆ ಮೂರು ಕಂತು ಬಂತು. ನಾನು, ಅಧಿಕಾರಿಗಳನ್ನು ಕೇಳಿದೆ. ಬೇರೆಯವರಿಗೆ ಮೂರು ಕಂತು ಬಂದೈತೆ. ನನಗೆ ಎರಡೇ ಕಂತು ಬಂದಿರೋದು ಅಂದ್ರೆ ಬರುತ್ತೆ ಹೋಗಿ ಎಂದು ಹೇಳಿಕಳಿಸ್ತಾರೆ. ಇವಾಗ ನೋಡಿದ್ರೆ 6 ಕಂತು ಹಣ ಬಿಡುಗಡೆ ಆಗೈತೆ ಅಂತಾರೆ. ನನಗೇನು ಬಂದಿಲ್ಲ ಸ್ವಾಮಿ” ಎಂದು ಹೇಳಿದರು.

ಪಾವಗಡ ತಾಲೂಕು ರೈತ ಮುದ್ದಪ್ಪ ಅವರನ್ನು ಸಂಪರ್ಕಿಸಿದಾಗ “ನಮಗೆ ಎರಡು ಸಾರಿ ಬಂದೈತೆ. ಎರಡು ಸರಿನು ಬ್ಯಾಂಕ್‌ಗೆ ಹೋಗಿ ಎರಡೆರಡು ಸಾವಿರ ತಂದ್ವಿ. ಈ ತಿಂಗ್ಳಾಗೆ ಒಂದು ಮೆಸೇಜ್ ಬಂದೈತೆ. 2 ಸಾವಿರ ಹಾಕಿದ್ದೀವಿ ಅಂತ. ಇನ್ನೂ ಹೋಗಿಲ್ಲ. ಹೋಗಿ ತರಬೇಕು. ಇದು ಸೇರಿದ್ರೆ ಮೂರು ಸಾರಿ ಬಂದಂಗಾಗ್ತೈತೆ” ಎಂದು ತಿಳಿಸಿದರು.

ಕೇಂದ್ರ ಸರ್ಕಾರ 6 ಸಾವಿರ ಘೋಷಣೆ ಮಾಡುತ್ತಿದ್ದಂತೆಯೇ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ರಾಜ್ಯ ಸರ್ಕಾರವೂ 4 ಸಾವಿರ ಕೊಡುತ್ತದೆ ಎಂದು ಭರವಸೆ ನೀಡಿದರು. 2019 ರ ಸಾಲಿನಲ್ಲಿ ರೈತರಿಗೆ ನೀಡಿದ ಭರವಸೆಯಂತೆ ಕೆಲವರಿಗೆ 4 ಸಾವಿರ ರೂಪಾಯಿ ದೊರೆಯಿತು. ಮತ್ತೆ ಕೆಲವರಿಗೆ 2 ಸಾವಿರ ಮಾತ್ರ ಖಾತೆಗೆ ಬಂತು. 2020 ನೇ ಸಾಲಿನಲ್ಲಿ ಕೊರೊನಾ ಬಂದ ಮೇಲೆ ಹಣವೂ ಇಲ್ಲ. ಅದರ ಬಗ್ಗೆ ಸೊಲ್ಲೂ ಇಲ್ಲ ಅನ್ನುವಂತಾಗಿದೆ.

ಕೇಂದ್ರ ಸರ್ಕಾರದ ಕಿಸಾನ್ ಸನ್ಮಾನ್ ಯೋಜನೆ 8.5 ಕೋಟಿ ರೈತರ ಪೈಕಿ ಬಹುತೇಕರಿಗೆ ಎರಡು, ಮೂರು ಮತ್ತು ನಾಲ್ಕು ಬಾರಿ ಹಣ ಬಂದಿದ್ದರೆ, ಕೆಲವೇ ಮಂದಿ ರೈತರಿಗೆ ಆರು ಕಂತುಗಳು ಬಂದಿವೆ. ಆದರೆ ನಿಜ ರೈತ ಫಲನುಭವಿಗಳು ಈ ಯೋಜನೆಯಿಂದ ಹೊರಗಿದ್ದು ಸೌಲಭ್ಯದಿಂದ ವಂಚಿತರಾಗಿದ್ದಾರೆ.


ಓದಿ: ರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...