Homeಮುಖಪುಟಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ: ಬಿಡುಗಡೆಯಾಗಿದ್ದು 6 ಕಂತು, ಬಂದಿದ್ದು 3 ಕಂತು ಮಾತ್ರ

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ: ಬಿಡುಗಡೆಯಾಗಿದ್ದು 6 ಕಂತು, ಬಂದಿದ್ದು 3 ಕಂತು ಮಾತ್ರ

ಬೆಳೆಗಳಿಗೆ ಸರಿಯಾದ ಧಾರಣೆ ನೀಡಿದರೆ, ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ, ರೈತರ ಸಮಸ್ಯೆಗಳನ್ನು ಪರಿಹರಿಸಿದರೆ ರೈತರಿಗೆ ಯಾವ ಹಣವನ್ನೂ ನೀಡಬೇಕಾದ ಅಗತ್ಯವಿಲ್ಲ.

- Advertisement -
- Advertisement -

ಪ್ರಧಾನಮಂತ್ರಿ ಕಿಸಾನ್ ಸನ್ಮಾನ್ ನಿಧಿ ಯೋಜನೆಯಡಿ ರೈತರಿಗೆ ಆರನೇ ಕಂತಿನ ಹಣ ಬಿಡುಗಡೆಯಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿಕೊಂಡಿದೆ. ಆದರೆ ವಾಸ್ತವದಲ್ಲಿ ಕೇವಲ ಮೂರು-ನಾಲ್ಕು ಕಂತಿನ ಹಣ ಮಾತ್ರ ಕೆಲ ರೈತರ ಖಾತೆಗೆ ನೇರ ವರ್ಗಾವಣೆಯಾಗಿದೆ ಎಂದು ರೈತರು ದೂರುತ್ತಿದ್ದಾರೆ. ಈ ಕುರಿತು ಹಲವು ರೈತರನ್ನು ಮಾತನಾಡಿಸಿದಾಗ ಎಲ್ಲಾ ದಾಖಲೆ ಸಲ್ಲಿಸಿದ್ದರೂ ಕೇವಲ 2 ಬಾರಿ ಹಣ ಬಂದಿದ್ದು ನಂತರ ಬಂದಿಲ್ಲ ಎಂದು ಕೆಲವು ರೈತರು ಹೇಳಿದ್ದಾರೆ.

ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿಯ ಮಹಾತ್ವಾಕಾಂಕ್ಷೆಯ ಯೋಜನೆ ಎನ್ನಲಾಗಿದ್ದು, ಲೋಕಸಭಾ ಚುನಾವಣಾ ಪೂರ್ವದಲ್ಲಿ ಈ ಯೋಜನೆ ಘೋಷಣೆ ಮಾಡಲಾಗಿತ್ತು. ತುಮಕೂರಿನ ಸರ್ಕಾರಿ ಜೂನಿಯರ್ ಕಾಲೇಜು ಆವರಣದಲ್ಲಿ ಜನವರಿ 2, 2019 ರಂದು ನಡೆದ ಬೃಹತ್ ರೈತರ ಸಮಾವೇಶದಲ್ಲಿ ಪ್ರಧಾನಿ ನರೇಂದ್ರಿ ಮೋದಿ ಮೊದಲ ಕಂತು ಬಿಡುಗಡೆ ಮಾಡಿದ್ದರು. ಬಟನ್ ಒತ್ತುವ ಮೂಲಕ ಫಲನುಭವಿ ರೈತರ ಖಾತೆಗೆ ಹಣ ಜಮಾವಣೆ ಮಾಡಿದ್ದರು. ಆರಂಭದಲ್ಲಿ ಎಲ್ಲರಿಗೂ ಹಣ ಜಮೆಗೊಂಡಿತಾದರೂ ನಂತರ ಹಣ ಬರಲೇ ಇಲ್ಲ ಎನ್ನುವ ಆರೋಪಗಳು ಕೇಳಿಬರುತ್ತಿವೆ.

ಇದನ್ನೂ ಓದಿ: ಭಾರತೀಯ ರೈತರಿಗೆ ಅಮೇರಿಕಾ-ಭಾರತ ಮುಕ್ತ ವ್ಯಾಪಾರ ಒಪ್ಪಂದ ತಂದೊಡ್ಡುವ ಅಪಾಯಗಳು

ವಾರ್ಷಿಕ ಮೂರು ಕಂತುಗಳಲ್ಲಿ 6 ಸಾವಿರ ರೂಪಾಯಿ ರೈತರ ಖಾತೆಗೆ ಹಣ ವರ್ಗಾವಣೆಯಾಗುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳುತ್ತ ಬಂದಿದೆ. ಅರ್ಹ ಫಲನುಭವಿ ರೈತರು ಆಧಾರ್, ಮೊಬೈಲ್ ನಂಬರ್, ಪಹಣಿ, ಬ್ಯಾಂಕ್ ಖಾತೆ ಲಿಂಕ್ ಮಾಡಿದರೆ ಹಣ ಬರುತ್ತದೆ ಎಂದು ಸರ್ಕಾರ ಹೇಳಿತ್ತು. ಅದರಂತೆ ಎಲ್ಲಾ ದಾಖಲೆ ಸಲ್ಲಿಸಿದರೂ ಕೆಲವರಿಗೆ ಬಂದಿಲ್ಲ. ಕೆಲವರಿಗೆ ಎರಡು, ಮತ್ತೆ ಹಲವರಿಗೆ ಮೂರು, ನಾಲ್ಕು ಕಂತಿನ ಹಣ ಮಾತ್ರ ಬಂದಿದೆ. ಉಳಿದ ಕಂತಿನ ಹಣ ಬಂದಿಲ್ಲ. ಇದೇಕೆ ಹೀಗೆ? ಎರಡು ಕಂತಿನ ಹಣಬರುವವರೆಗೆ ದಾಖಲೆಗಳು ಸರಿ ಇದ್ದವು. ನಂತರ ದಾಖಲೆಗಳು ಸರಿ ಇಲ್ಲವೇ ಎಂದು ಹಣ ಬಾರದ ರೈತರು ಪ್ರಶ್ನಿಸಿದ್ದಾರೆ.

ಕಳೆದ ಒಂದು ವರ್ಷ 8 ತಿಂಗಳಲ್ಲಿ 6 ಕಂತುಗಳಲ್ಲಿ ಹಣ ಬಿಡುಗಡೆಯಾಗಿದೆ. ಆಗಸ್ಟ್ 9, 2020ರಂದು ಪ್ರಧಾನಿ ಆರನೇ ಕಂತಿನ ಹಣ ರೈತರ ಖಾತೆಗಳಿಗೆ ವರ್ಗಾಯಿಸಿದರು. ಆ ದಿನದ 17 ಸಾವಿರ ಕೋಟಿ ಸೇರಿ ಒಟ್ಟು ಇದುವರೆಗೆ 75 ಸಾವಿರ ಕೋಟಿ ರೂಪಾಯಿಗಳನ್ನು 8.5 ಕೋಟಿ ಫಲನುಭವಿ ರೈತರಿಗೆ ನೀಡಿದೆ ಎಂದು ಸರ್ಕಾರದ ಅಂಕಿ ಅಂಶಗಳು ತಿಳಿಸುತ್ತವೆ. ವಾಸ್ತವವಾಗಿ ನೋಡಿದರೆ ಕಿಸಾನ್ ಸನ್ಮಾನ್ ನಿಧಿ ಯೋಜನೆ ಘೋಷಣೆಯಾಗಿ 20 ತಿಂಗಳು ಕಳೆದಿವೆ. ಅಂದರೆ ವಾರ್ಷಿಕ ಮೂರು ಕಂತುಗಳಾದರೆ ಒಂದು ವರ್ಷ ಎಂಟು ತಿಂಗಳಿಗೆ 5 ಕಂತುಗಳು ಮಾತ್ರ ಆಗುತ್ತವೆ. ಸರ್ಕಾರದ ಪ್ರಕಾರ ಒಂದು ಕಂತಿನ ಹಣ ಹೆಚ್ಚುವರಿಯಾಗಿ ಬಿಡುಗಡೆಯಾಗಿದೆ.

ಭಾರತ ಕೃಷಿ ಪ್ರಧಾನ ದೇಶ. ಶೇಕಡ 65 ರಷ್ಟು ಕುಟುಂಬಗಳು ಕೃಷಿಯನ್ನೇ ಅವಲಂಬಿಸಿವೆ. ಕೃಷಿಯ ಜೊತೆ ಇತರೆ ಉಪಕಸುಬುಗಳಲ್ಲೂ ತೊಡಗಿಸಿಕೊಂಡಿವೆ. ದೇಶಕ್ಕೆ ಅನ್ನ ನೀಡುವ ರೈತ ಕುಟುಂಬಗಳ ದಿಕ್ಕುಗಾಣದೆ ಜೀವನ ನಡೆಸುತ್ತಿವೆ. ಇಂತಹ ಹೊತ್ತಿನಲ್ಲಿ ಸರ್ಕಾರ ಪ್ರತಿಯೊಬ್ಬ ರೈತ ಈ ಯೋಜನೆ ವ್ಯಾಪ್ತಿಗೆ ಬರುವಂತೆ ನೋಡಿಕೊಳ್ಳಬೇಕಿತ್ತು. ಆದರೆ ಅಂತಹ ಕೆಲಸ ಅಗಿಲ್ಲ. ಪಹಣಿ ಇಲ್ಲದ, ಪಾಲುದಾರಿಕೆ ಸರಿಯಾಗಿ ಆಗದೇ ಇರುವಂಥ, ಬಗರ್ ಹುಕುಂ ಸಾಗುವಳಿಯಲ್ಲಿ ತೊಡಗಿರುವಂಥ ರೈತರೂ ಕೃಷಿ ಸಮ್ಮಾನ್ ಯೋಜನೆಯ ಫಲನುಭವಿಗಳು ಆಗಲು ಸಾಧ್ಯವಾಗಿಲ್ಲ. ಎಷ್ಟೋ ಜಮೀನುಗಳು ಇನ್ನೂ ತಾತ-ಮುತ್ತಾತನ ಹೆಸರಿನಲ್ಲೇ ಓಡುತ್ತಿವೆ. ಇಂತಹ ಸಂಕಷ್ಟಗಳು ಈ ದೇಶದ ಅಧಿಕಾರದ ಚುಕ್ಕಾಣಿ ಹಿಡಿದಿರುವವರಿಗೆ ಕಾಣುತ್ತಿಲ್ಲ.

ಇದನ್ನೂ ಓದಿ: ಹುಲಿಗಳಿಗೆ ಧಾಮ! ರೈತ, ಆದಿವಾಸಿಗಳಿಗೆ ಪಂಗನಾಮ!!

ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯಾಧ್ಯಕ್ಷ ಜಿ.ಸಿ.ಬಯ್ಯಾರೆಡ್ಡಿ ಅವರು ನಾನುಗೌರಿ.ಕಾಂ ಜೊತೆ ಮಾತನಾಡಿ, “ಟ್ರಾಕ್ಟರ್ ನಲ್ಲಿ ಒಂದು ಗಂಟೆ ಉಳುಮೆ ಮಾಡಲು 1500 ರೂ ನೀಡಬೇಕು. ರಸಗೊಬ್ಬರ ಖರೀದಿಗೆ ಸಾವಿರಾರು ರೂಪಾಯಿ ವೆಚ್ಚವಾಗುತ್ತದೆ. ವರ್ಷಕ್ಕೆ 6 ಸಾವಿರ ರೂ ನೀಡಿದರೆ ಯಾವುದಕ್ಕು ಆಗುವುದಿಲ್ಲ. ನಮ್ಮೂರಿನಲ್ಲಿ 300 ರೈತ ಕುಟುಂಬಗಳಿವೆ. ಅವರಲ್ಲಿ ಕೇವಲ 60 ಮಂದಿಗೆ ಮಾತ್ರ ಬಂದಿದೆ. ಅಧಿಕಾರಿಗಳು ರೆಕಾರ್ಡ್ ಮಾತ್ರ ಕೇಳುತ್ತಾರೆ. ಭೂಮಿ ಉಳುವ ಗೇಣಿದಾರನಿಗೆ ಯಾವುದೇ ದಾಖಲೆ ಇಲ್ಲ. ಭೂಮಾಲಿಕರು ಮಾತ್ರ ಕಿಸಾನ್ ಸನ್ಮಾನ್ ಯೋಜನೆಯ ಲಾಭ ಪಡೆಯುತ್ತಾರೆ. ಗೇಣಿದಾರರಿಗೂ ಹಣ ನೀಡಬೇಕು ಎಂಬುದು ನಮ್ಮ ಒತ್ತಾಯ. ದೇಶದಲ್ಲಿ ಬಹುಸಂಖ್ಯಾತರು ರೈತರಾದರೂ ಸರ್ಕಾರದ ನೆರವು ದೊರೆಯುತ್ತಿಲ್ಲ. ಇದು ನೋವಿನ ಸಂಗತಿ” ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರ ಡಾ. ಸ್ವಾಮಿನಾಥನ್ ವರದಿಯನ್ವಯ ರೈತರು ಮಾಡಿದ ವೆಚ್ಚದ ಒಂದೂವರೆ ಪಟ್ಟು ಹಣ ನೀಡಬೇಕೆಂದು ವ್ಯಾಪಕ ಆಗ್ರಹ ಕೇಳಿಬಂತು. ಇದರ ಒತ್ತಡವನ್ನು ಸಹಿಸದ ಕೇಂದ್ರ ಸರ್ಕಾರ ಅತುರವಾಗಿ ಕಿಸಾನ್ ಸನ್ಮಾನ್ ನಿಧಿ ಯೋಜನೆ ಜಾರಿಗೆ ತಂದಿತು. ಇದರಿಂದ ನಿಜವಾದ ರೈತರಿಗೆ ಪ್ರಯೋಜನವಿಲ್ಲ. ಇದೊಂದು ನಾಮಕಾವಸ್ತೆ ಮತ್ತು ತೋರಿಕೆಯ ಯೋಜನೆ ಎಂದು ಅವರು ಹೇಳಿದರು.

ಕಾರ್ಮಿಕ ಮುಖಂಡ ಸೈಯದ್ ಮುಜೀಬ್ ಹೇಳುವಂತೆ, “ಕೇಂದ್ರ ಸರ್ಕಾರ ಕೇವಲ 8.5 ಕೋಟಿ ರೈತರನ್ನು ರೀಚ್ ಆಗಲು ಸಾಧ್ಯವಾಗಿದೆ. ಸರ್ಕಾರ ನೀಡುತ್ತಿರುವ ಹಣ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತೆ. ರೈತರ ಮೂಗಿಗೆ ತುಪ್ಪ ಸವರುವಂತಹ ಕೆಲಸ ಮಾಡಿದೆ. ರೈತರ ಪ್ರಶ್ನೆಗಳನ್ನು ಕೇಂದ್ರ ಸರ್ಕಾರ ಇತ್ಯರ್ಥ ಪಡಿಸಿದರೆ, ಬೆಳೆಗಳಿಗೆ ಸರಿಯಾದ ಧಾರಣೆ ನೀಡಿದರೆ, ಉತ್ತಮ ಮಾರುಕಟ್ಟೆ ಸೌಲಭ್ಯ ಕಲ್ಪಿಸಿದರೆ, ರೈತರ ಸಮಸ್ಯೆಗಳನ್ನು ಪರಿಹರಿಸಿದರೆ ರೈತರಿಗೆ ಯಾವ ಹಣವನ್ನೂ ನೀಡಬೇಕಾದ ಅಗತ್ಯವಿಲ್ಲ. ರೈತರ ನಿಜವಾದ ಸಮಸ್ಯೆಗೆ ಸರ್ಕಾರ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ: ಹೊಂಬಾಳೆ – 2: ಕಂದಾಯ ಇಲಾಖೆ ಕೈಯಲ್ಲಿ ರೈತನ ಜುಟ್ಟು – ನಳಿನಿ ಕೋಲಾರ

ಶಿರಾ ತಾಲೂಕಿನ ಗೌಡಗೆರೆ ಗ್ರಾಮದ ಈರಣ್ಣ ನಾನುಗೌರಿ.ಕಾಂ ಜೊತೆ ಮಾತನಾಡಿದರು ‘’ನನಗೆ ಎರಡು ಕಂತು ಬಂತು ಸ್ವಾಮಿ, ಉಳಿದಿದ್ದು ಬಂದಿಲ್ಲ.. ನಮ್ಮ ಚಿಕ್ಕಪ್ಪನ ಮಕ್ಕಳಿಗೆ ಮೂರು ಕಂತು ಬಂತು. ನಾನು, ಅಧಿಕಾರಿಗಳನ್ನು ಕೇಳಿದೆ. ಬೇರೆಯವರಿಗೆ ಮೂರು ಕಂತು ಬಂದೈತೆ. ನನಗೆ ಎರಡೇ ಕಂತು ಬಂದಿರೋದು ಅಂದ್ರೆ ಬರುತ್ತೆ ಹೋಗಿ ಎಂದು ಹೇಳಿಕಳಿಸ್ತಾರೆ. ಇವಾಗ ನೋಡಿದ್ರೆ 6 ಕಂತು ಹಣ ಬಿಡುಗಡೆ ಆಗೈತೆ ಅಂತಾರೆ. ನನಗೇನು ಬಂದಿಲ್ಲ ಸ್ವಾಮಿ” ಎಂದು ಹೇಳಿದರು.

ಪಾವಗಡ ತಾಲೂಕು ರೈತ ಮುದ್ದಪ್ಪ ಅವರನ್ನು ಸಂಪರ್ಕಿಸಿದಾಗ “ನಮಗೆ ಎರಡು ಸಾರಿ ಬಂದೈತೆ. ಎರಡು ಸರಿನು ಬ್ಯಾಂಕ್‌ಗೆ ಹೋಗಿ ಎರಡೆರಡು ಸಾವಿರ ತಂದ್ವಿ. ಈ ತಿಂಗ್ಳಾಗೆ ಒಂದು ಮೆಸೇಜ್ ಬಂದೈತೆ. 2 ಸಾವಿರ ಹಾಕಿದ್ದೀವಿ ಅಂತ. ಇನ್ನೂ ಹೋಗಿಲ್ಲ. ಹೋಗಿ ತರಬೇಕು. ಇದು ಸೇರಿದ್ರೆ ಮೂರು ಸಾರಿ ಬಂದಂಗಾಗ್ತೈತೆ” ಎಂದು ತಿಳಿಸಿದರು.

ಕೇಂದ್ರ ಸರ್ಕಾರ 6 ಸಾವಿರ ಘೋಷಣೆ ಮಾಡುತ್ತಿದ್ದಂತೆಯೇ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಕೂಡ ರಾಜ್ಯ ಸರ್ಕಾರವೂ 4 ಸಾವಿರ ಕೊಡುತ್ತದೆ ಎಂದು ಭರವಸೆ ನೀಡಿದರು. 2019 ರ ಸಾಲಿನಲ್ಲಿ ರೈತರಿಗೆ ನೀಡಿದ ಭರವಸೆಯಂತೆ ಕೆಲವರಿಗೆ 4 ಸಾವಿರ ರೂಪಾಯಿ ದೊರೆಯಿತು. ಮತ್ತೆ ಕೆಲವರಿಗೆ 2 ಸಾವಿರ ಮಾತ್ರ ಖಾತೆಗೆ ಬಂತು. 2020 ನೇ ಸಾಲಿನಲ್ಲಿ ಕೊರೊನಾ ಬಂದ ಮೇಲೆ ಹಣವೂ ಇಲ್ಲ. ಅದರ ಬಗ್ಗೆ ಸೊಲ್ಲೂ ಇಲ್ಲ ಅನ್ನುವಂತಾಗಿದೆ.

ಕೇಂದ್ರ ಸರ್ಕಾರದ ಕಿಸಾನ್ ಸನ್ಮಾನ್ ಯೋಜನೆ 8.5 ಕೋಟಿ ರೈತರ ಪೈಕಿ ಬಹುತೇಕರಿಗೆ ಎರಡು, ಮೂರು ಮತ್ತು ನಾಲ್ಕು ಬಾರಿ ಹಣ ಬಂದಿದ್ದರೆ, ಕೆಲವೇ ಮಂದಿ ರೈತರಿಗೆ ಆರು ಕಂತುಗಳು ಬಂದಿವೆ. ಆದರೆ ನಿಜ ರೈತ ಫಲನುಭವಿಗಳು ಈ ಯೋಜನೆಯಿಂದ ಹೊರಗಿದ್ದು ಸೌಲಭ್ಯದಿಂದ ವಂಚಿತರಾಗಿದ್ದಾರೆ.


ಓದಿ: ರೈತರ ಮರಣ ಶಾಸನ ಬರೆಯಲು ಕಳ್ಳದಾರಿ ಹಿಡಿದ ರಾಜ್ಯ ಸರ್ಕಾರ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...