Homeಮುಖಪುಟಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ಸತತ ಪರಿಶ್ರಮದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ತೇರ್ಗಡೆಯಾದ ಆನಂತರ ಕರ್ನಾಟಕದ ಅತ್ಯುತ್ತಮ ವೈದ್ಯಕೀಯ ಕಾಲೇಜೊಂದರಲ್ಲಿ ಪರಿಶ್ರಮಪಟ್ಟು ಓದಿದ ಹೀರೊ ವೈದ್ಯರವರು.

- Advertisement -
- Advertisement -

ಡಾ. ಕಫೀಲ್‌ಖಾನ್ ಒಬ್ಬ ಹೋರಾಟಗಾರ ವೈದ್ಯ. ಅವರು ನಮ್ಮೆಲ್ಲರಿಗಾಗಿ ಮತ್ತು ಉಜ್ವಲ ಭಾರತಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ಬಿಆರ್‌ಡಿ (ಬಾಬಾ ರಾಘವ ದಾಸ್) ಆಸ್ಪತ್ರೆಯಲ್ಲಿ ಗ್ಯಾಸ್ ದುರಂತ ನಡೆದ ದುರ್ದಿನ ನನಗೆ ಕಣ್ಣಿಗೆ ಕಟ್ಟಿದಂತೆ ನೆನಪಿದೆ. ಆಮ್ಲಜನಕದ ಕೊರತೆಯಿಂದಾಗಿ ಅಂದು ಅನೇಕ ಮುಗ್ಧ ಜೀವಗಳು ಕಣ್ಮುಚ್ಚಿದವು. ಸರ್ಕಾರದ ಅಸಮರ್ಥತೆ ಮತ್ತು ಅದಕ್ಷತೆಯಿಂದಾಗಿ ಮಕ್ಕಳು ಮರಣ ಹೊಂದಿದವು. ಈ ಅಮೂಲ್ಯ ಜೀವಗಳನ್ನು ಕಾಪಾಡಲು ಈ ಯುವ ವೈದ್ಯ ಮತ್ತು ಆತನ ತಂಡ ತಮಗೆದುರಾದ ಪ್ರತಿಯೊಂದು ಅಡೆ-ತಡೆಯನ್ನು ಮೆಟ್ಟಿ ಹೋರಾಡಿದರು. ಇಂಥ ದಯನೀಯ ಸನ್ನಿವೇಶವನ್ನು ಎದುರಿಸಬೇಕಾದ ವೈದ್ಯನೊಬ್ಬನಿಗೆ ಇದು ಎಂತಹಾ ಘಾಸಿಗೊಳಿಸುವ ಅನುಭವವೆಂಬುದನ್ನು ನಾವು ಊಹಿಸಬಹುದು ಆದರೂ ಆತ ಎದೆಗುಂದದೇ ತನ್ನ ಸ್ವಂತ ಹಣದಿಂದ ಆಮ್ಲಜನಕದ ಸಿಲಿಂಡರುಗಳನ್ನು ವ್ಯವಸ್ಥೆ ಮಾಡಲು ಲಭ್ಯವಿರುವ ಎಲ್ಲಾ ಬಾಗಿಲುಗಳನ್ನೂ ಬಡಿದರು. ಒಬ್ಬ ಅಪಾರ ಬದ್ಧತೆಯಿರುವ ಮಕ್ಕಳ ವೈದ್ಯರಾಗಿ ಒಬ್ಬ ಜವಾಬ್ದಾರಿಯುತ ನಾಗರಿಕನಾಗಿ ತಮ್ಮ ಕರ್ತವ್ಯವನ್ನು ನಿಭಾಯಿಸಲಷ್ಟೇ ಅವರು ಪ್ರಯಾಸಪಟ್ಟದ್ದು. ಅವರು ಹೋರಾಟ ನಡೆಸಿ ಅನೇಕ ಜೀವಗಳನ್ನು ಕಾಪಾಡಿದ್ದನ್ನು ಕೆಲ ಮಾಧ್ಯಮಗಳು ವರದಿ ಮಾಡಿದವು. ಹೀಗಾಗಿ ಬೆಳಗಾಗುವುದರೊಳಗೆ ಅವರೊಬ್ಬ ‘ಹೀರೊ’ ಆಗಿ ಅಥವಾ ಮಕ್ಕಳ ಪಾಲಿನ ದೇವದೂತನಾಗಿ ಉದಯಿಸಿದರು.

ಯೋಗಿ ಅವರಿಗೆ ಈ ವಿಷಯ ತಿಳಿದುಬಂದಾಗ ಜೀವ ಕಳೆದುಕೊಂಡವರಿಗೆ ಪರಿಹಾರ ನೀಡುವುದು ಅಥವಾ ಸರ್ಕಾರದ ವೈಫಲ್ಯಕ್ಕೆ ಜವಾಬ್ದಾರಿಯನ್ನು ಹೊತ್ತುಕೊಳ್ಳುವುದಕ್ಕೆ ಬದಲಾಗಿ ಅವರು ಮಾಡಿದ್ದೇನೆಂದರೆ, “ನಿನ್ನನ್ನು ನೀನು ಹೀರೊ ಎಂದು ತಿಳಿದಿದ್ದೀಯಾ, ನಿನ್ನನ್ನು ನೋಡಿಕೊಳ್ಳುತ್ತೇನೆ” ಎಂದದ್ದು. ಡಾ. ಕಫೀಲ್‌ಖಾನ್ ಮತ್ತು ಅವರ ಕುಟುಂಬದವರಿಗೆ ಕಿರುಕುಳ ನೀಡುವ ಮತ್ತು ಅವರನ್ನು ಅಪರಾಧಿಗಳನ್ನಾಗಿಸುವ ಸರಣಿ ಪ್ರಯತ್ನಗಳು ಶುರುವಾಗಿದ್ದು ಅಂದಿನಿಂದಲೇ. ಅವರನ್ನು ಬಲಿಪಶು ಮಾಡಲಾಯಿತು ಮತ್ತು ಬಿಆರ್‌ಡಿ ವೈದ್ಯಕೀಯ ಕಾಲೇಜಿನ ಅಂದಿನ ಪ್ರಾಂಶುಪಾಲರು ಮತ್ತವರ ಪತ್ನಿ ಹಾಗೂ ಅವರ ಕೆಲ ಸಹೋದ್ಯೋಗಿ ವೈದ್ಯರು ಮತ್ತು ಸಿಬ್ಬಂದಿಯೊಂದಿಗೆ ಜೈಲಿಗೆ ಕಳುಹಿಸಲಾಯಿತು.

ಅವರನ್ನು ಒಂಭತ್ತು ತಿಂಗಳ ಸುದೀರ್ಘ ಅವಧಿಗೆ ಸೆರೆಮನೆಗೆ ತಳ್ಳಲಾಯಿತು. ಮಕ್ಕಳ ಪ್ರಾಣ ಉಳಿಸಲು ತನ್ನೆಲ್ಲಾ ಶಕ್ತಿಮೀರಿ ಶ್ರಮಿಸಿದ ಅವರನ್ನು ಕರ್ತವ್ಯದಿಂದ ವಜಾಮಾಡಲಾಯಿತು. ಅವರಿಗೆ ಕಿರುಕುಳ ನೀಡುತ್ತಾ ಬಂದಿರುವುದು ಮತ್ತು ಆತನ ಕುಟುಂಬ, ಆತನ ತಾಯಿ, ಹೆಂಡತಿ ಮತ್ತು ಮಕ್ಕಳು ಕಷ್ಟಪಡುವಂತಾಗಿದ್ದು ನಿಜಕ್ಕೂ ದುರಂತ, ಅಕ್ಷಮ್ಯ ಮತ್ತು ಅಮಾನವೀಯ.

ತೊಂದರೆಗೀಡಾದ ಅವರು ನಿರ್ದೋಷಿಯೆಂದು ಸಾಬೀತಾದಮೇಲೂ ಮುಸ್ಲಿಂ ವೈದ್ಯನೆಂಬ ಕಾರಣಕ್ಕೆ ಕಷ್ಟಕೋಟಲೆಗಳು ಕೊನೆಗೊಳ್ಳಲಿಲ್ಲ. ಮುಖ್ಯಮಂತ್ರಿಗಳು ಗೋರಖ್‌ಪುರದಲ್ಲಿ ಹಾಜರಿದ್ದ ಸಂದರ್ಭದಲ್ಲೇ ಗೋರಖನಾಥ ದೇವಸ್ಥಾನದ ಬಳಿಯಲ್ಲಿ ಅವರ ಕಿರಿಯ ಸಹೋದರನಿಗೆ ಪುಂಡರು ಗುಂಡು ಹೊಡೆದರು. ಅಷ್ಟೇ ಅಲ್ಲ ಆಸ್ಪತ್ರೆಯಲ್ಲಿ ಅವರಿಗೆ ಕೂಡಲೇ ಶುಶ್ರೂಷೆ ದೊರೆಯದಂತೆ ತಡೆಯಲು ಪೊಲೀಸರು ಯತ್ನಿಸಿದರು. 2018ರಲ್ಲಿ ಬಹ್ರೈಚ್‌ನಲ್ಲಿ ಎನ್‌ಸೆಫಲೈಟಿಸ್ ಕಾಯಿಲೆಗೀಡಾದ ರೋಗಿಗಳ ಸ್ಥಿತಿಯನ್ನು ಬಹಿರಂಗಗೊಳಿಸಲು ಯತ್ನಿಸಿದ ಅವರನ್ನು ಅವರ ಹಿರಿಯ ಸೋದರ ಅದೀಲ್ ಅಹಮದ್ ಖಾನ್ ಅವರೊಂದಿಗೆ ಪೊಲೀಸ್ ಅಧಿಕಾರಿಗಳು ಮತ್ತೊಮ್ಮೆ ಬಂಧಿಸಿದರು. ಇದರಿಂದ ಮತ್ತೊಮ್ಮೆ ಅವರ ಕುಟುಂಬದ ಸದಸ್ಯರು ಕೆಲ ತಿಂಗಳ ಕಾಲ ಮಾನಸಿಕ ಹಿಂಸೆಯನ್ನು ಅನುಭವಿಸುವಂತಾಯಿತು.

ಸತತ ಪರಿಶ್ರಮದಿಂದ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ತೇರ್ಗಡೆಯಾದ ಆನಂತರ ಕರ್ನಾಟಕದ ಅತ್ಯುತ್ತಮ ವೈದ್ಯಕೀಯ ಕಾಲೇಜೊಂದರಲ್ಲಿ ಪರಿಶ್ರಮಪಟ್ಟು ಓದಿದ ಹೀರೊ ವೈದ್ಯರವರು. ಭಾರತದ ಜನರಿಗೆ ಸೇವೆ ಸಲ್ಲಿಸುವುದನ್ನೇ ತನ್ನ ಬದುಕಿನ ಗುರಿ ಮತ್ತು ಧ್ಯೇಯವಾಗಿಸಿಕೊಂಡ ವೈದ್ಯರು. ವಿಕೋಪಗಳಿಗೀಡಾದಾಗ ಭಾರತದ ಬಹುಪಾಲು ಎಲ್ಲಾ ರಾಜ್ಯಗಳಲ್ಲೂ ಅವರು ಹಲವಾರು ಆರೋಗ್ಯ ಶಿಬಿರಗಳನ್ನು ನಡೆಸಿದ್ದಾರೆ. ಬಿಹಾರದ ಚಮ್ಕಿ ಜ್ವರ ಪೀಡಿತರು, ಅಸ್ಸಾಂನ ಪ್ರವಾಹಪೀಡಿತ ಪ್ರದೇಶಗಳು, ಉತ್ತರಪ್ರದೇಶದ ಗ್ರಾಮೀಣಾ ಪ್ರಾಂತ್ಯಗಳ ಮೂಲೆ ಮುಡುಕುಗಳಲ್ಲೂ ಅವರು ಶಿಬಿರಗಳನ್ನು ನಡೆಸಿದ್ದಾರೆ. ತಮ್ಮ ಜೀವವನ್ನೇ ಪಣಕ್ಕೊಡ್ಡಿ ದೇಶಸೇವೆ ಮಾಡಿದ್ದಾರೆ. ಸಮಸ್ತ ವೈದ್ಯಕೀಯ ಸಮುದಾಯ ಅವರ ಬಗ್ಗೆ ಹೆಮ್ಮೆಪಡುವಂತೆ ಮಾಡಿದ್ದಾರೆ.

ಕೊರೊನಾ ಸಾಂಕ್ರಾಮಿಕ ಜೀವಗಳನ್ನು ಬಲಿತೆಗೆದುಕೊಳ್ಳುತ್ತಿರುವ ಹೊತ್ತಲ್ಲಿ ಭಾರತಕ್ಕೆ ಸ್ವಚ್ಛ ಮನಸ್ಸಿನ, ಅತ್ಯಂತ ಪ್ರತಿಭಾನ್ವಿತ ಮತ್ತು ಪ್ರಾಮಾಣಿಕನಾದ ಶ್ರಮಜೀವಿ ಮಕ್ಕಳ ವೈದ್ಯನ ಅಗತ್ಯವಿದೆ.
ಆದರೆ ಈ ಕರ್ತವ್ಯನಿಷ್ಠ, ಪ್ರಾಮಾಣಿಕ ನಾಗರಿಕನೀಗ ಸೆರೆಮನೆಯಲ್ಲಿ ಕೊಳೆಯುತ್ತಿದ್ದಾರೆ. ಪ್ರಾಮಾಣಿಕತೆ ಮತ್ತು ಕರ್ತವ್ಯನಿಷ್ಟೆಯೇ ಅವರಲ್ಲಿರುವ ದೋಷ. ಇಂತಹ ಅತ್ಯುತ್ತಮ ವ್ಯಕ್ತಿಯೊಬ್ಬ ದೇಶಕ್ಕೆ ಹೇಗೆ ಬೆದರಿಕೆಯಾಗುತ್ತಾನೆ ಎಂಬ ಬಗ್ಗೆ ಕೊಂಚ ಯೋಚಿಸಿ.

– ಅದೀಲ್ ಖಾನ್
ಕನ್ನಡಕ್ಕೆ: ಮಾಧವಿ


ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...