Homeಕರೋನಾ ತಲ್ಲಣಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ...

ಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ ಸಂಕಷ್ಟ

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ವೈದ್ಯರ ಸಮಸ್ಯೆಗಳನ್ನು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ಬಿಚ್ಚಿಟ್ಟಿದೆ. ಅವರು ಒಮ್ಮೆ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ ನಂತರ ಅದನ್ನು ಎಂಟುಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಅದರ ಜೊತೆಗೆ ಮೂತ್ರ ವಿಸರ್ಜನೆಗೆ ಡೈಪರ್‌ಗಳನ್ನು ಕೂಡಾ ಧರಿಸಬೇಕಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆ ಮುಟ್ಟಿನ ಸಮಯದಲ್ಲಿ ಇನ್ನೂ ಹೆಚ್ಚಾಗುತ್ತದೆ ಎಂದು ಮಹಿಳಾ ವೈದ್ಯರು ಹೇಳುತ್ತಾರೆ.

ಆರೋಗ್ಯ ಕೇಂದ್ರದಲ್ಲಿ ಸೋಂಕಿನ ಸಾಮಾನ್ಯ ಅಪಾಯಗಳ ಮಧ್ಯೆ ಕೊರೊನಾ ವಾರ್ಡ್‌ಗಳಲ್ಲಿ ಕೆಲಸ ಮಾಡುವ ಮಹಿಳಾ ವೈದ್ಯರು ಮತ್ತು ದಾದಿಯರಿಗೆ ಕಡ್ಡಾಯವಾಗಿರುವ ಪಿಪಿಇ ಅವರ ಸಮಸ್ಯೆಗಳನ್ನು ಇನ್ನೂ ಹೆಚ್ಚಿಸುತ್ತದೆ.

ಒಮ್ಮ ಪಿಪಿಇ ಕಿಟ್ ಧರಿಸಿದರೆ ಅದನ್ನು ಸಾಮಾನ್ಯವಾಗಿ 8 ಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಈ ಸಮಯದಲ್ಲಿ ವೈದ್ಯರು ಏನನ್ನು ಕುಡಿಯಲೋ ಹಾಗೂ ತಿನ್ನಲು ಸಾಧ್ಯವಿಲ್ಲ. ತಮ್ಮ ಸಮಸ್ಯೆಗಳನ್ನು ಬಿಚ್ಚಿಡುವ ಪಂಚಕುಲ ಪ್ಯಾರಾಸ್ ಆಸ್ಪತ್ರೆಯ ವೈದ್ಯರಾದ ಡಾ. ಜಸ್ಲೋವ್ಲಿನ್ ಕೌರ್‌ “ನಾವು ಸಾಮಾನ್ಯವಾಗಿ ಮೂತ್ರ ವಿಸರ್ಜಿಸಲು ಡಯಾಪರ್ ಧರಿಸುತ್ತೇವೆ” ಎನ್ನುತ್ತಾರೆ.

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ. ಇಲ್ಲಿಯ ತನಕ ಟ್ಯಾಂಪನ್‍ ಗಳನ್ನು ಬಳಸದ ನಾನು ಈಗ ಅವುಗಳನ್ನು ಧರಿಸಬೇಕಾಗುತ್ತದೆ ಎಂದು ಅವರು ವಿವರಿಸುತ್ತಾರೆ.

ಅಧಿಕ ರಕ್ತಸ್ರಾವವಾಗುವವರು ತಮ್ಮ ಪಿಪಿಇ ಯಲ್ಲಿದ್ದಾಗ ಎರಡು ಅಥವಾ ಹೆಚ್ಚು ಪ್ಯಾಡ್‌ಗಳನ್ನು ಸಹ ಬಳಸುತ್ತಾರೆ ಎಂದು ನೋಯ್ಡಾದ ಮದರ್‌ಹುಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗತಜ್ಞೆ ಡಾ. ಸಂದೀಪ್ ಚಾಧಾ ಹೇಳುತ್ತಾರೆ.

ಧೀರ್ಘ ಕಾಲದವರೆಗೆ ಸ್ಯಾನಿಟರಿ ಪ್ಯಾಡ್ ಧರಿಸುವುದರಿಂದ ಆರೋಗ್ಯದ ಅಪಾಯಗಳು ಕೂಡಾ ಹೆಚ್ಚಿರುತ್ತವೆ ಎನ್ನುವ ಡಾ. ರೀಚಾ ಸರೀನ್, “ಪಿಪಿಇ ಧರಿಸಿದಾಗ ದೇಹವು ತುಂಬಾ ಬಿಸಿ ಮತ್ತು ಆರ್ದ್ರವಾಗಿರುತ್ತದೆ. ಆರರಿಂದ ಎಂಟು ಗಂಟೆಗಳ ಕಾಲ ಪ್ಯಾಡ್ ಬದಲಾಯಿಸದ ಕಾರಣ, ತೇವಾಂಶ ಮತ್ತು ಉಷ್ಣತೆಯು ಜನನಾಂಗದ ಪ್ರದೇಶದಲ್ಲಿ ಸೋಂಕಿಗೆ ಕಾರಣವಾಗಬಹುದು” ಎಂದು ಅವರು ವಿವರಿಸುತ್ತಾರೆ.

ಒಮ್ಮೆ ಪಿಪಿಇ ಕಳಚಿಟ್ಟರೆ ಅದನ್ನು ಮರುಬಳಕೆ ಮಾಡುವುದಿಲ್ಲ, ಹೊಸದನ್ನು ಧರಿಸಬೇಕಾಗುತ್ತದೆ. ನನ್ನ ಕೆಲವು ಸಹೋದ್ಯೋಗಿಗಳಿಗೆ ಪಿಪಿಇ ಧರಿಸಿರುವಾಗಲೆ ಮುಟ್ಟು ಪ್ರಾರಂಭವಾದ ಉದಾಹರಣೆಗಳಿವೆ. ಈ ಸಮಯದಲ್ಲಿ ಹೊಸದಾದ ಪಿಪಿಇಯನ್ನೆ ಧರಿಸಬೇಕಾಗುತ್ತದೆ ಎಂದು ಅವರು ಸಮಸ್ಯೆಯನ್ನು ಎತ್ತಿತೋರಿಸಿದ್ದಾರೆ.

ರಕ್ತ ಹೋಗುತ್ತಿರುವಾಗ ಮತ್ತು ಮುಟ್ಟಿನ ಸಮಯದ ನೋವನ್ನು ಸಹಿಸಿ ದೈಹಿಕ ಶಕ್ತಿಯನ್ನು ಉಳಿಸಿಕೊಳ್ಳಲು ತಜ್ಞರು ಈ ಅವಧಿಗಳಲ್ಲಿ ಸಾಕಷ್ಟು ಪೋಷಕಾಂಶಗಳು ಮತ್ತು ನೀರು ಸೇವಿಸಲು ಒತ್ತಿಹೇಳುತ್ತಾರೆ. ಆದರೆ ಪ್ರಸ್ತುತ ಕೊರೊನಾ ಬಿಕ್ಕಟ್ಟಿನಲ್ಲಿ ಈ ಆರೋಗ್ಯ ಕಾರ್ಯಕರ್ತರು ಗಂಟೆಗಟ್ಟಲೆ ಆಹಾರ ಮತ್ತು ನೀರಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿಯಾಗಿದೆ.

ಮುಟ್ಟು, ಶೌಚ ವಿಷಯಗಳನ್ನು ಭಾರತದಲ್ಲಿ ಮಡಿ ಎಂದು ನೋಡಲಾಗುತ್ತದೆ. ಆದರೆ ಅವು ನೈಸರ್ಗಿಕ ಕ್ರಿಯೆಗಳಷ್ಟೆ. ಅವುಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಮಹಿಳೆಯರನ್ನು ಗೌರವಿಸಲು ಸಾಧ್ಯ. ಈ ಸಾಂಕ್ರಾಮಿಕ ಕಾಲದಲ್ಲಿ ಮಹಿಳಾ ವೈದ್ಯರು, ದಾದಿಯುರು ಅವುಗಳನ್ನೆಲ್ಲ ಮೆಟ್ಟಿ ನಿಂತು ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ.

ಇಂತಹ ವೈದ್ಯರನ್ನು ಸ್ಮರಿಸುವುದು, ಅವರ ಕರ್ತವ್ಯಕ್ಕೆ ಗೌರವ ಸೂಚಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಅದೇ ರೀತಿ ಸರ್ಕಾರಗಳು ಸಹ ಕೇವಲ ಭಾಷಣ ಮಾತ್ರವಲ್ಲದೇ ಈ ಮಹಿಲಾ ವೈದ್ಯರು ಮತ್ತು ದಾದಿಯರಿಗೆ ಸಮರ್ಪಕ ಸಂಬಳ, ಭತ್ಯೆಗಳನ್ನು ನೀಡಬೇಕು. ಅವರಿಗೆ ಅಗತ್ಯವಿರುವ ಪಿಪಿಇ ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಒದಗಿಸಬೇಕು.


ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...