Homeಕರೋನಾ ತಲ್ಲಣಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ...

ಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ ಸಂಕಷ್ಟ

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ವೈದ್ಯರ ಸಮಸ್ಯೆಗಳನ್ನು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ಬಿಚ್ಚಿಟ್ಟಿದೆ. ಅವರು ಒಮ್ಮೆ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ ನಂತರ ಅದನ್ನು ಎಂಟುಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಅದರ ಜೊತೆಗೆ ಮೂತ್ರ ವಿಸರ್ಜನೆಗೆ ಡೈಪರ್‌ಗಳನ್ನು ಕೂಡಾ ಧರಿಸಬೇಕಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆ ಮುಟ್ಟಿನ ಸಮಯದಲ್ಲಿ ಇನ್ನೂ ಹೆಚ್ಚಾಗುತ್ತದೆ ಎಂದು ಮಹಿಳಾ ವೈದ್ಯರು ಹೇಳುತ್ತಾರೆ.

ಆರೋಗ್ಯ ಕೇಂದ್ರದಲ್ಲಿ ಸೋಂಕಿನ ಸಾಮಾನ್ಯ ಅಪಾಯಗಳ ಮಧ್ಯೆ ಕೊರೊನಾ ವಾರ್ಡ್‌ಗಳಲ್ಲಿ ಕೆಲಸ ಮಾಡುವ ಮಹಿಳಾ ವೈದ್ಯರು ಮತ್ತು ದಾದಿಯರಿಗೆ ಕಡ್ಡಾಯವಾಗಿರುವ ಪಿಪಿಇ ಅವರ ಸಮಸ್ಯೆಗಳನ್ನು ಇನ್ನೂ ಹೆಚ್ಚಿಸುತ್ತದೆ.

ಒಮ್ಮ ಪಿಪಿಇ ಕಿಟ್ ಧರಿಸಿದರೆ ಅದನ್ನು ಸಾಮಾನ್ಯವಾಗಿ 8 ಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಈ ಸಮಯದಲ್ಲಿ ವೈದ್ಯರು ಏನನ್ನು ಕುಡಿಯಲೋ ಹಾಗೂ ತಿನ್ನಲು ಸಾಧ್ಯವಿಲ್ಲ. ತಮ್ಮ ಸಮಸ್ಯೆಗಳನ್ನು ಬಿಚ್ಚಿಡುವ ಪಂಚಕುಲ ಪ್ಯಾರಾಸ್ ಆಸ್ಪತ್ರೆಯ ವೈದ್ಯರಾದ ಡಾ. ಜಸ್ಲೋವ್ಲಿನ್ ಕೌರ್‌ “ನಾವು ಸಾಮಾನ್ಯವಾಗಿ ಮೂತ್ರ ವಿಸರ್ಜಿಸಲು ಡಯಾಪರ್ ಧರಿಸುತ್ತೇವೆ” ಎನ್ನುತ್ತಾರೆ.

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ. ಇಲ್ಲಿಯ ತನಕ ಟ್ಯಾಂಪನ್‍ ಗಳನ್ನು ಬಳಸದ ನಾನು ಈಗ ಅವುಗಳನ್ನು ಧರಿಸಬೇಕಾಗುತ್ತದೆ ಎಂದು ಅವರು ವಿವರಿಸುತ್ತಾರೆ.

ಅಧಿಕ ರಕ್ತಸ್ರಾವವಾಗುವವರು ತಮ್ಮ ಪಿಪಿಇ ಯಲ್ಲಿದ್ದಾಗ ಎರಡು ಅಥವಾ ಹೆಚ್ಚು ಪ್ಯಾಡ್‌ಗಳನ್ನು ಸಹ ಬಳಸುತ್ತಾರೆ ಎಂದು ನೋಯ್ಡಾದ ಮದರ್‌ಹುಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗತಜ್ಞೆ ಡಾ. ಸಂದೀಪ್ ಚಾಧಾ ಹೇಳುತ್ತಾರೆ.

ಧೀರ್ಘ ಕಾಲದವರೆಗೆ ಸ್ಯಾನಿಟರಿ ಪ್ಯಾಡ್ ಧರಿಸುವುದರಿಂದ ಆರೋಗ್ಯದ ಅಪಾಯಗಳು ಕೂಡಾ ಹೆಚ್ಚಿರುತ್ತವೆ ಎನ್ನುವ ಡಾ. ರೀಚಾ ಸರೀನ್, “ಪಿಪಿಇ ಧರಿಸಿದಾಗ ದೇಹವು ತುಂಬಾ ಬಿಸಿ ಮತ್ತು ಆರ್ದ್ರವಾಗಿರುತ್ತದೆ. ಆರರಿಂದ ಎಂಟು ಗಂಟೆಗಳ ಕಾಲ ಪ್ಯಾಡ್ ಬದಲಾಯಿಸದ ಕಾರಣ, ತೇವಾಂಶ ಮತ್ತು ಉಷ್ಣತೆಯು ಜನನಾಂಗದ ಪ್ರದೇಶದಲ್ಲಿ ಸೋಂಕಿಗೆ ಕಾರಣವಾಗಬಹುದು” ಎಂದು ಅವರು ವಿವರಿಸುತ್ತಾರೆ.

ಒಮ್ಮೆ ಪಿಪಿಇ ಕಳಚಿಟ್ಟರೆ ಅದನ್ನು ಮರುಬಳಕೆ ಮಾಡುವುದಿಲ್ಲ, ಹೊಸದನ್ನು ಧರಿಸಬೇಕಾಗುತ್ತದೆ. ನನ್ನ ಕೆಲವು ಸಹೋದ್ಯೋಗಿಗಳಿಗೆ ಪಿಪಿಇ ಧರಿಸಿರುವಾಗಲೆ ಮುಟ್ಟು ಪ್ರಾರಂಭವಾದ ಉದಾಹರಣೆಗಳಿವೆ. ಈ ಸಮಯದಲ್ಲಿ ಹೊಸದಾದ ಪಿಪಿಇಯನ್ನೆ ಧರಿಸಬೇಕಾಗುತ್ತದೆ ಎಂದು ಅವರು ಸಮಸ್ಯೆಯನ್ನು ಎತ್ತಿತೋರಿಸಿದ್ದಾರೆ.

ರಕ್ತ ಹೋಗುತ್ತಿರುವಾಗ ಮತ್ತು ಮುಟ್ಟಿನ ಸಮಯದ ನೋವನ್ನು ಸಹಿಸಿ ದೈಹಿಕ ಶಕ್ತಿಯನ್ನು ಉಳಿಸಿಕೊಳ್ಳಲು ತಜ್ಞರು ಈ ಅವಧಿಗಳಲ್ಲಿ ಸಾಕಷ್ಟು ಪೋಷಕಾಂಶಗಳು ಮತ್ತು ನೀರು ಸೇವಿಸಲು ಒತ್ತಿಹೇಳುತ್ತಾರೆ. ಆದರೆ ಪ್ರಸ್ತುತ ಕೊರೊನಾ ಬಿಕ್ಕಟ್ಟಿನಲ್ಲಿ ಈ ಆರೋಗ್ಯ ಕಾರ್ಯಕರ್ತರು ಗಂಟೆಗಟ್ಟಲೆ ಆಹಾರ ಮತ್ತು ನೀರಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿಯಾಗಿದೆ.

ಮುಟ್ಟು, ಶೌಚ ವಿಷಯಗಳನ್ನು ಭಾರತದಲ್ಲಿ ಮಡಿ ಎಂದು ನೋಡಲಾಗುತ್ತದೆ. ಆದರೆ ಅವು ನೈಸರ್ಗಿಕ ಕ್ರಿಯೆಗಳಷ್ಟೆ. ಅವುಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಮಹಿಳೆಯರನ್ನು ಗೌರವಿಸಲು ಸಾಧ್ಯ. ಈ ಸಾಂಕ್ರಾಮಿಕ ಕಾಲದಲ್ಲಿ ಮಹಿಳಾ ವೈದ್ಯರು, ದಾದಿಯುರು ಅವುಗಳನ್ನೆಲ್ಲ ಮೆಟ್ಟಿ ನಿಂತು ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ.

ಇಂತಹ ವೈದ್ಯರನ್ನು ಸ್ಮರಿಸುವುದು, ಅವರ ಕರ್ತವ್ಯಕ್ಕೆ ಗೌರವ ಸೂಚಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಅದೇ ರೀತಿ ಸರ್ಕಾರಗಳು ಸಹ ಕೇವಲ ಭಾಷಣ ಮಾತ್ರವಲ್ಲದೇ ಈ ಮಹಿಲಾ ವೈದ್ಯರು ಮತ್ತು ದಾದಿಯರಿಗೆ ಸಮರ್ಪಕ ಸಂಬಳ, ಭತ್ಯೆಗಳನ್ನು ನೀಡಬೇಕು. ಅವರಿಗೆ ಅಗತ್ಯವಿರುವ ಪಿಪಿಇ ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಒದಗಿಸಬೇಕು.


ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...