Homeಕರೋನಾ ತಲ್ಲಣಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ...

ಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ ಸಂಕಷ್ಟ

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ವೈದ್ಯರ ಸಮಸ್ಯೆಗಳನ್ನು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ಬಿಚ್ಚಿಟ್ಟಿದೆ. ಅವರು ಒಮ್ಮೆ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ ನಂತರ ಅದನ್ನು ಎಂಟುಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಅದರ ಜೊತೆಗೆ ಮೂತ್ರ ವಿಸರ್ಜನೆಗೆ ಡೈಪರ್‌ಗಳನ್ನು ಕೂಡಾ ಧರಿಸಬೇಕಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆ ಮುಟ್ಟಿನ ಸಮಯದಲ್ಲಿ ಇನ್ನೂ ಹೆಚ್ಚಾಗುತ್ತದೆ ಎಂದು ಮಹಿಳಾ ವೈದ್ಯರು ಹೇಳುತ್ತಾರೆ.

ಆರೋಗ್ಯ ಕೇಂದ್ರದಲ್ಲಿ ಸೋಂಕಿನ ಸಾಮಾನ್ಯ ಅಪಾಯಗಳ ಮಧ್ಯೆ ಕೊರೊನಾ ವಾರ್ಡ್‌ಗಳಲ್ಲಿ ಕೆಲಸ ಮಾಡುವ ಮಹಿಳಾ ವೈದ್ಯರು ಮತ್ತು ದಾದಿಯರಿಗೆ ಕಡ್ಡಾಯವಾಗಿರುವ ಪಿಪಿಇ ಅವರ ಸಮಸ್ಯೆಗಳನ್ನು ಇನ್ನೂ ಹೆಚ್ಚಿಸುತ್ತದೆ.

ಒಮ್ಮ ಪಿಪಿಇ ಕಿಟ್ ಧರಿಸಿದರೆ ಅದನ್ನು ಸಾಮಾನ್ಯವಾಗಿ 8 ಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಈ ಸಮಯದಲ್ಲಿ ವೈದ್ಯರು ಏನನ್ನು ಕುಡಿಯಲೋ ಹಾಗೂ ತಿನ್ನಲು ಸಾಧ್ಯವಿಲ್ಲ. ತಮ್ಮ ಸಮಸ್ಯೆಗಳನ್ನು ಬಿಚ್ಚಿಡುವ ಪಂಚಕುಲ ಪ್ಯಾರಾಸ್ ಆಸ್ಪತ್ರೆಯ ವೈದ್ಯರಾದ ಡಾ. ಜಸ್ಲೋವ್ಲಿನ್ ಕೌರ್‌ “ನಾವು ಸಾಮಾನ್ಯವಾಗಿ ಮೂತ್ರ ವಿಸರ್ಜಿಸಲು ಡಯಾಪರ್ ಧರಿಸುತ್ತೇವೆ” ಎನ್ನುತ್ತಾರೆ.

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ. ಇಲ್ಲಿಯ ತನಕ ಟ್ಯಾಂಪನ್‍ ಗಳನ್ನು ಬಳಸದ ನಾನು ಈಗ ಅವುಗಳನ್ನು ಧರಿಸಬೇಕಾಗುತ್ತದೆ ಎಂದು ಅವರು ವಿವರಿಸುತ್ತಾರೆ.

ಅಧಿಕ ರಕ್ತಸ್ರಾವವಾಗುವವರು ತಮ್ಮ ಪಿಪಿಇ ಯಲ್ಲಿದ್ದಾಗ ಎರಡು ಅಥವಾ ಹೆಚ್ಚು ಪ್ಯಾಡ್‌ಗಳನ್ನು ಸಹ ಬಳಸುತ್ತಾರೆ ಎಂದು ನೋಯ್ಡಾದ ಮದರ್‌ಹುಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗತಜ್ಞೆ ಡಾ. ಸಂದೀಪ್ ಚಾಧಾ ಹೇಳುತ್ತಾರೆ.

ಧೀರ್ಘ ಕಾಲದವರೆಗೆ ಸ್ಯಾನಿಟರಿ ಪ್ಯಾಡ್ ಧರಿಸುವುದರಿಂದ ಆರೋಗ್ಯದ ಅಪಾಯಗಳು ಕೂಡಾ ಹೆಚ್ಚಿರುತ್ತವೆ ಎನ್ನುವ ಡಾ. ರೀಚಾ ಸರೀನ್, “ಪಿಪಿಇ ಧರಿಸಿದಾಗ ದೇಹವು ತುಂಬಾ ಬಿಸಿ ಮತ್ತು ಆರ್ದ್ರವಾಗಿರುತ್ತದೆ. ಆರರಿಂದ ಎಂಟು ಗಂಟೆಗಳ ಕಾಲ ಪ್ಯಾಡ್ ಬದಲಾಯಿಸದ ಕಾರಣ, ತೇವಾಂಶ ಮತ್ತು ಉಷ್ಣತೆಯು ಜನನಾಂಗದ ಪ್ರದೇಶದಲ್ಲಿ ಸೋಂಕಿಗೆ ಕಾರಣವಾಗಬಹುದು” ಎಂದು ಅವರು ವಿವರಿಸುತ್ತಾರೆ.

ಒಮ್ಮೆ ಪಿಪಿಇ ಕಳಚಿಟ್ಟರೆ ಅದನ್ನು ಮರುಬಳಕೆ ಮಾಡುವುದಿಲ್ಲ, ಹೊಸದನ್ನು ಧರಿಸಬೇಕಾಗುತ್ತದೆ. ನನ್ನ ಕೆಲವು ಸಹೋದ್ಯೋಗಿಗಳಿಗೆ ಪಿಪಿಇ ಧರಿಸಿರುವಾಗಲೆ ಮುಟ್ಟು ಪ್ರಾರಂಭವಾದ ಉದಾಹರಣೆಗಳಿವೆ. ಈ ಸಮಯದಲ್ಲಿ ಹೊಸದಾದ ಪಿಪಿಇಯನ್ನೆ ಧರಿಸಬೇಕಾಗುತ್ತದೆ ಎಂದು ಅವರು ಸಮಸ್ಯೆಯನ್ನು ಎತ್ತಿತೋರಿಸಿದ್ದಾರೆ.

ರಕ್ತ ಹೋಗುತ್ತಿರುವಾಗ ಮತ್ತು ಮುಟ್ಟಿನ ಸಮಯದ ನೋವನ್ನು ಸಹಿಸಿ ದೈಹಿಕ ಶಕ್ತಿಯನ್ನು ಉಳಿಸಿಕೊಳ್ಳಲು ತಜ್ಞರು ಈ ಅವಧಿಗಳಲ್ಲಿ ಸಾಕಷ್ಟು ಪೋಷಕಾಂಶಗಳು ಮತ್ತು ನೀರು ಸೇವಿಸಲು ಒತ್ತಿಹೇಳುತ್ತಾರೆ. ಆದರೆ ಪ್ರಸ್ತುತ ಕೊರೊನಾ ಬಿಕ್ಕಟ್ಟಿನಲ್ಲಿ ಈ ಆರೋಗ್ಯ ಕಾರ್ಯಕರ್ತರು ಗಂಟೆಗಟ್ಟಲೆ ಆಹಾರ ಮತ್ತು ನೀರಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿಯಾಗಿದೆ.

ಮುಟ್ಟು, ಶೌಚ ವಿಷಯಗಳನ್ನು ಭಾರತದಲ್ಲಿ ಮಡಿ ಎಂದು ನೋಡಲಾಗುತ್ತದೆ. ಆದರೆ ಅವು ನೈಸರ್ಗಿಕ ಕ್ರಿಯೆಗಳಷ್ಟೆ. ಅವುಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಮಹಿಳೆಯರನ್ನು ಗೌರವಿಸಲು ಸಾಧ್ಯ. ಈ ಸಾಂಕ್ರಾಮಿಕ ಕಾಲದಲ್ಲಿ ಮಹಿಳಾ ವೈದ್ಯರು, ದಾದಿಯುರು ಅವುಗಳನ್ನೆಲ್ಲ ಮೆಟ್ಟಿ ನಿಂತು ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ.

ಇಂತಹ ವೈದ್ಯರನ್ನು ಸ್ಮರಿಸುವುದು, ಅವರ ಕರ್ತವ್ಯಕ್ಕೆ ಗೌರವ ಸೂಚಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಅದೇ ರೀತಿ ಸರ್ಕಾರಗಳು ಸಹ ಕೇವಲ ಭಾಷಣ ಮಾತ್ರವಲ್ಲದೇ ಈ ಮಹಿಲಾ ವೈದ್ಯರು ಮತ್ತು ದಾದಿಯರಿಗೆ ಸಮರ್ಪಕ ಸಂಬಳ, ಭತ್ಯೆಗಳನ್ನು ನೀಡಬೇಕು. ಅವರಿಗೆ ಅಗತ್ಯವಿರುವ ಪಿಪಿಇ ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಒದಗಿಸಬೇಕು.


ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...