Homeಕರೋನಾ ತಲ್ಲಣಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ...

ಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ ಸಂಕಷ್ಟ

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ.

- Advertisement -
- Advertisement -

ಕೊರೊನಾ ಸಾಂಕ್ರಾಮಿಕದ ವಿರುದ್ದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ಮಹಿಳಾ ವೈದ್ಯರ ಸಮಸ್ಯೆಗಳನ್ನು ದಿ ಇಂಡಿಯನ್ ಎಕ್ಸ್‌‌ಪ್ರೆಸ್ ಬಿಚ್ಚಿಟ್ಟಿದೆ. ಅವರು ಒಮ್ಮೆ ಪಿಪಿಇ (ವೈಯಕ್ತಿಕ ರಕ್ಷಣಾ ಸಾಧನಗಳು) ಧರಿಸಿದ ನಂತರ ಅದನ್ನು ಎಂಟುಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಅದರ ಜೊತೆಗೆ ಮೂತ್ರ ವಿಸರ್ಜನೆಗೆ ಡೈಪರ್‌ಗಳನ್ನು ಕೂಡಾ ಧರಿಸಬೇಕಾಗುತ್ತದೆ ಎಂದು ಅಳಲು ತೋಡಿಕೊಂಡಿದ್ದಾರೆ. ಈ ಸಮಸ್ಯೆ ಮುಟ್ಟಿನ ಸಮಯದಲ್ಲಿ ಇನ್ನೂ ಹೆಚ್ಚಾಗುತ್ತದೆ ಎಂದು ಮಹಿಳಾ ವೈದ್ಯರು ಹೇಳುತ್ತಾರೆ.

ಆರೋಗ್ಯ ಕೇಂದ್ರದಲ್ಲಿ ಸೋಂಕಿನ ಸಾಮಾನ್ಯ ಅಪಾಯಗಳ ಮಧ್ಯೆ ಕೊರೊನಾ ವಾರ್ಡ್‌ಗಳಲ್ಲಿ ಕೆಲಸ ಮಾಡುವ ಮಹಿಳಾ ವೈದ್ಯರು ಮತ್ತು ದಾದಿಯರಿಗೆ ಕಡ್ಡಾಯವಾಗಿರುವ ಪಿಪಿಇ ಅವರ ಸಮಸ್ಯೆಗಳನ್ನು ಇನ್ನೂ ಹೆಚ್ಚಿಸುತ್ತದೆ.

ಒಮ್ಮ ಪಿಪಿಇ ಕಿಟ್ ಧರಿಸಿದರೆ ಅದನ್ನು ಸಾಮಾನ್ಯವಾಗಿ 8 ಗಂಟೆಗಳ ಕಾಲ ಧರಿಸಿಯೆ ಇರಬೇಕಾಗುತ್ತದೆ. ಈ ಸಮಯದಲ್ಲಿ ವೈದ್ಯರು ಏನನ್ನು ಕುಡಿಯಲೋ ಹಾಗೂ ತಿನ್ನಲು ಸಾಧ್ಯವಿಲ್ಲ. ತಮ್ಮ ಸಮಸ್ಯೆಗಳನ್ನು ಬಿಚ್ಚಿಡುವ ಪಂಚಕುಲ ಪ್ಯಾರಾಸ್ ಆಸ್ಪತ್ರೆಯ ವೈದ್ಯರಾದ ಡಾ. ಜಸ್ಲೋವ್ಲಿನ್ ಕೌರ್‌ “ನಾವು ಸಾಮಾನ್ಯವಾಗಿ ಮೂತ್ರ ವಿಸರ್ಜಿಸಲು ಡಯಾಪರ್ ಧರಿಸುತ್ತೇವೆ” ಎನ್ನುತ್ತಾರೆ.

ಸತತ ಎಂಟು ಗಂಟೆಗಳ ಕಾಲ ಪಿಪಿಇ ಕಿಟ್ ಧರಿಸಬೇಕಾಗಿರುವುದರಿಂದ ಮುಟ್ಟಾದ ದಿನಗಳಲ್ಲಿ ಬಹಳಷ್ಟು ಕಷ್ಟಕರವಾಗುತ್ತದೆ. ಸ್ಯಾನಿಟರಿ ಪ್ಯಾಡ್ ಧರಿಸಿ ನಂತರ ಡಯಾಪರ್ ಧರಿಸಬೇಕಾಗುತ್ತದೆ. ಇಲ್ಲಿಯ ತನಕ ಟ್ಯಾಂಪನ್‍ ಗಳನ್ನು ಬಳಸದ ನಾನು ಈಗ ಅವುಗಳನ್ನು ಧರಿಸಬೇಕಾಗುತ್ತದೆ ಎಂದು ಅವರು ವಿವರಿಸುತ್ತಾರೆ.

ಅಧಿಕ ರಕ್ತಸ್ರಾವವಾಗುವವರು ತಮ್ಮ ಪಿಪಿಇ ಯಲ್ಲಿದ್ದಾಗ ಎರಡು ಅಥವಾ ಹೆಚ್ಚು ಪ್ಯಾಡ್‌ಗಳನ್ನು ಸಹ ಬಳಸುತ್ತಾರೆ ಎಂದು ನೋಯ್ಡಾದ ಮದರ್‌ಹುಡ್ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗತಜ್ಞೆ ಡಾ. ಸಂದೀಪ್ ಚಾಧಾ ಹೇಳುತ್ತಾರೆ.

ಧೀರ್ಘ ಕಾಲದವರೆಗೆ ಸ್ಯಾನಿಟರಿ ಪ್ಯಾಡ್ ಧರಿಸುವುದರಿಂದ ಆರೋಗ್ಯದ ಅಪಾಯಗಳು ಕೂಡಾ ಹೆಚ್ಚಿರುತ್ತವೆ ಎನ್ನುವ ಡಾ. ರೀಚಾ ಸರೀನ್, “ಪಿಪಿಇ ಧರಿಸಿದಾಗ ದೇಹವು ತುಂಬಾ ಬಿಸಿ ಮತ್ತು ಆರ್ದ್ರವಾಗಿರುತ್ತದೆ. ಆರರಿಂದ ಎಂಟು ಗಂಟೆಗಳ ಕಾಲ ಪ್ಯಾಡ್ ಬದಲಾಯಿಸದ ಕಾರಣ, ತೇವಾಂಶ ಮತ್ತು ಉಷ್ಣತೆಯು ಜನನಾಂಗದ ಪ್ರದೇಶದಲ್ಲಿ ಸೋಂಕಿಗೆ ಕಾರಣವಾಗಬಹುದು” ಎಂದು ಅವರು ವಿವರಿಸುತ್ತಾರೆ.

ಒಮ್ಮೆ ಪಿಪಿಇ ಕಳಚಿಟ್ಟರೆ ಅದನ್ನು ಮರುಬಳಕೆ ಮಾಡುವುದಿಲ್ಲ, ಹೊಸದನ್ನು ಧರಿಸಬೇಕಾಗುತ್ತದೆ. ನನ್ನ ಕೆಲವು ಸಹೋದ್ಯೋಗಿಗಳಿಗೆ ಪಿಪಿಇ ಧರಿಸಿರುವಾಗಲೆ ಮುಟ್ಟು ಪ್ರಾರಂಭವಾದ ಉದಾಹರಣೆಗಳಿವೆ. ಈ ಸಮಯದಲ್ಲಿ ಹೊಸದಾದ ಪಿಪಿಇಯನ್ನೆ ಧರಿಸಬೇಕಾಗುತ್ತದೆ ಎಂದು ಅವರು ಸಮಸ್ಯೆಯನ್ನು ಎತ್ತಿತೋರಿಸಿದ್ದಾರೆ.

ರಕ್ತ ಹೋಗುತ್ತಿರುವಾಗ ಮತ್ತು ಮುಟ್ಟಿನ ಸಮಯದ ನೋವನ್ನು ಸಹಿಸಿ ದೈಹಿಕ ಶಕ್ತಿಯನ್ನು ಉಳಿಸಿಕೊಳ್ಳಲು ತಜ್ಞರು ಈ ಅವಧಿಗಳಲ್ಲಿ ಸಾಕಷ್ಟು ಪೋಷಕಾಂಶಗಳು ಮತ್ತು ನೀರು ಸೇವಿಸಲು ಒತ್ತಿಹೇಳುತ್ತಾರೆ. ಆದರೆ ಪ್ರಸ್ತುತ ಕೊರೊನಾ ಬಿಕ್ಕಟ್ಟಿನಲ್ಲಿ ಈ ಆರೋಗ್ಯ ಕಾರ್ಯಕರ್ತರು ಗಂಟೆಗಟ್ಟಲೆ ಆಹಾರ ಮತ್ತು ನೀರಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸುವುದು ಅವರ ಕರ್ತವ್ಯ ನಿಷ್ಟೆಗೆ ಹಿಡಿದ ಕೈಗನ್ನಡಿಯಾಗಿದೆ.

ಮುಟ್ಟು, ಶೌಚ ವಿಷಯಗಳನ್ನು ಭಾರತದಲ್ಲಿ ಮಡಿ ಎಂದು ನೋಡಲಾಗುತ್ತದೆ. ಆದರೆ ಅವು ನೈಸರ್ಗಿಕ ಕ್ರಿಯೆಗಳಷ್ಟೆ. ಅವುಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಮಹಿಳೆಯರನ್ನು ಗೌರವಿಸಲು ಸಾಧ್ಯ. ಈ ಸಾಂಕ್ರಾಮಿಕ ಕಾಲದಲ್ಲಿ ಮಹಿಳಾ ವೈದ್ಯರು, ದಾದಿಯುರು ಅವುಗಳನ್ನೆಲ್ಲ ಮೆಟ್ಟಿ ನಿಂತು ಕೆಲಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ ಕೆಲಸ.

ಇಂತಹ ವೈದ್ಯರನ್ನು ಸ್ಮರಿಸುವುದು, ಅವರ ಕರ್ತವ್ಯಕ್ಕೆ ಗೌರವ ಸೂಚಿಸುವುದು ಎಲ್ಲರ ಜವಾಬ್ದಾರಿಯಾಗಿದೆ. ಅದೇ ರೀತಿ ಸರ್ಕಾರಗಳು ಸಹ ಕೇವಲ ಭಾಷಣ ಮಾತ್ರವಲ್ಲದೇ ಈ ಮಹಿಲಾ ವೈದ್ಯರು ಮತ್ತು ದಾದಿಯರಿಗೆ ಸಮರ್ಪಕ ಸಂಬಳ, ಭತ್ಯೆಗಳನ್ನು ನೀಡಬೇಕು. ಅವರಿಗೆ ಅಗತ್ಯವಿರುವ ಪಿಪಿಇ ಮತ್ತು ಇತರ ವೈದ್ಯಕೀಯ ಸಾಮಗ್ರಿಗಳನ್ನು ಸಾಕಷ್ಟು ಸಂಖ್ಯೆಯಲ್ಲಿ ಒದಗಿಸಬೇಕು.


ಓದಿ: ಕರ್ತವ್ಯನಿಷ್ಠ, ಪ್ರಾಮಾಣಿಕ ಪ್ರತಿಭಾನ್ವಿತ ವೈದ್ಯ ಹೋರಾಟಗಾರ ಡಾ. ಕಫೀಲ್‌ಖಾನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...