HomeಮುಖಪುಟNEET, JEE ಪರೀಕ್ಷೆಗಳನ್ನು ಮುಂದೂಡಿ: ನಟ ಸೋನು ಸೂದ್ ಆಗ್ರಹ

NEET, JEE ಪರೀಕ್ಷೆಗಳನ್ನು ಮುಂದೂಡಿ: ನಟ ಸೋನು ಸೂದ್ ಆಗ್ರಹ

ಖ್ಯಾತ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಹಲವುರು ಪರೀಕ್ಷೆ ಮುಂದೂಡಲು ಆಗ್ರಹಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

- Advertisement -
- Advertisement -

ಸೆಪ್ಟಂಬರ್ ಮೊದಲಾರ್ಧದಲ್ಲಿ ನಡೆಸಲು ಉದ್ದೇಶಿಸಿರುವ ರಾಷ್ಟ್ರವ್ಯಾಪಿ NEET, JEE ಪರೀಕ್ಷೆಗಳನ್ನು ಮುಂದೂಡುವಂತೆ ನಟ ಸೋನು ಸೂದ್ ಆಗ್ರಹಿಸಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ಸಾವಿರಾರು ವಲಸೆ ಕಾರ್ಮಿಕರು ತಮ್ಮ ಊರುಗಳಿಗೆ ತಲುಪಲು ಸಹಾಯ ಮಾಡಿ ವ್ಯಾಪಕ ಮೆಚ್ಚುಗೆ ಗಳಿಸಿದ್ದ ನಟ ಸೂದ್ ಸಾಂಕ್ರಾಮಿಕ ಕಾಲದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಂತೆ ಒತ್ತಾಯಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

26 ಲಕ್ಷ ವಿದ್ಯಾರ್ಥಿಗಳು NEET ವೈದ್ಯಕೀಯ ಅರ್ಹತಾ ಪರೀಕ್ಷೆ ಮತ್ತು JEE ಐಐಟಿ ಅರ್ಹತ ಪರೀಕ್ಷೆ ಬರೆಯಲು ತಯಾರಿ ನಡೆಸಿದ್ದು, ಕೊರೊನಾ ಮತ್ತು ಪ್ರವಾಹ ಪರಿಸ್ಥಿತಿಯಿಂದಾಗಿ ಪರೀಕ್ಷೆ ಮುಂದೂಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಕೇಂದ್ರ ಸರ್ಕಾರ ಪರೀಕ್ಷೆ ನಡೆಸಿಯೇ ಸಿದ್ದ ಎಂದು ಘೋಷಿಸಿದೆ. ಈ ಕುರಿತು ದಾಖಲಾದ ಪಿಐಎಲ್‌ ಅನ್ನು ಕೂಡ ಸುಪ್ರೀಂ ವಜಾಗೊಳಿಸಿದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ಆತಂಕದಲ್ಲಿದ್ದಾರೆ. ಹಾಗಾಗಿ ಅವರಿಗೆ ನೆರವಾಗಲು ಕನಿಷ್ಠ ಮೂರು ತಿಂಗಳ ಕಾಲ ಈ ಪರೀಕ್ಷೆಗಳನ್ನು ಮುಂದೂಡಬೇಕೆಂದು ಸೋನು ಸೂದ್ ಹೇಳಿದ್ದಾಗಿ ಎನ್‌ಡಿಟಿವಿ ವರದಿ ಮಾಡಿದೆ.

ಈ ಬಾರಿ ಬಿಹಾರದ ಅತಿ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಿದ್ದತೆ ನಡೆಸಿದ್ದಾರೆ. ಆದರೆ ಅಲ್ಲಿ ಸಂಭವಿಸಿದ ಭಾರೀ ಪ್ರವಾಹದಿಂದಾಗಿ 13-14 ಜಿಲ್ಲೆಗಳು ತೀವ್ರ ಸಂಕಷ್ಟದಲ್ಲಿವೆ. ಅವರಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲ. ನಗರಗಳಲ್ಲಿ ಉಳಿಯಲು ಆರ್ಥಿಕ ಸಹಾಯವಿಲ್ಲ. ಹೀಗಿರುವಾಗ ಆ ವಿದ್ಯಾರ್ಥಿಗಳನ್ನು ಮನೆಯಿಂದ ಹೊರಬಂದು ಪರೀಕ್ಷೆ ಬರೆಯಿರಿ ಎಂದು ಹೇಗೆ ಹೇಳಲು ಸಾಧ್ಯ ಎಂದು ಸೂದ್ ಪ್ರಶ್ನಿಸಿದ್ದಾರೆ.

ನಾನು ಒಬ್ಬ ಇಂಜಿನಿಯರ್. ವಿದ್ಯಾರ್ಥಿಗಳ ಆಸೆ ಆಕಾಂಕ್ಷೆ ನನಗೆ ಗೊತ್ತಿದೆ. ಈ ದೇಶದ ಹಲವು ವಿಭಾಗಗಳಿಗೆ ಆಯ್ಕೆಯಾಗುವ ವಿದ್ಯಾರ್ಥಿಗಳು ನಿರಾಳವಾಗಿ ಪರೀಕ್ಷೆ ಬರೆಯುವಂತ ವಾತವರಣ ನಿರ್ಮಿಸಬೇಕೆಂದು ಸೂದ್ ಅಭಿಪ್ರಾಯಪಟ್ಟಿದ್ದಾರೆ.

ಆದರೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವ ರಮೇಶ್ ನಿಶಾಂಕ್ ಪೋಖ್ರಿಯಾಲ್ ಪರೀಕ್ಷೆ ನಡೆಸುವ ಕೇಂದ್ರದ ತೀರ್ಮಾವನ್ನು ಸಮರ್ಥಿಸಿಕೊಂಡಿದ್ದಾರೆ. ಇದು ಪೋಷಕರು ಮತ್ತು ವಿದ್ಯಾರ್ಥಿಗಳ ಒತ್ತಾಯವಾಗಿದ್ದು ಈಗಾಗಲೇ ಶೆ.80 ರಷ್ಟು ವಿದ್ಯಾರ್ಥಿಗಳು ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಂಡಿದ್ದಾರೆ. ಅವರೆಲ್ಲರೂ ಪರೀಕ್ಷೆ ಬರೆಯುತ್ತಾರೆ ಎಂದು ದೂರದರ್ಶನದೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

ಬಹಳಷ್ಟು ವಿದ್ಯಾರ್ಥಿಗಳು ಮತ್ತು ಪೋಷಕರು ಪರೀಕ್ಷೆ ಬರೆಯಲು ನಾವು ಇನ್ನು ಎಷ್ಟು ಕಾಲ ಕಾಯಬೇಕು ಎಂದು ಪ್ರಶ್ನಿಸುತ್ತಿದ್ದಾರೆ. ಹಾಗಾಗಿ ಪರೀಕ್ಷೆ ಮುಂದೂಡುವುದಿಲ್ಲ. ಸಾಮಾಜಿಕ ಅಂತರದ ಸುರಕ್ಷಾ ನಿಯಮಗಳನ್ನು ಕಾಯ್ದುಕೊಂಡು ಪರೀಕ್ಷೆ ನಡೆಸುತ್ತೇವೆ ಎಂದಿದ್ದಾರೆ.

ಖ್ಯಾತ ಪರಿಸರ ಕಾರ್ಯಕರ್ತೆ ಗ್ರೇಟಾ ಥನ್‌ಬರ್ಗ್ ಸೇರಿದಂತೆ ಹಲವುರು ಪರೀಕ್ಷೆ ಮುಂದೂಡಲು ಆಗ್ರಹಿಸಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಪ್ರಧಾನ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.

ಬಟ್ ಸರ್ ಕಾಮಿಕ್ಸ್ ಹೆಸರಿನಲ್ಲಿ ವ್ಯಂಗ್ಯ ಮಾಡುವ ಡೂಡಲ್‌ಗಾರ ಅರವಿಂದ್ ತೆಗ್ಗಿನಮಠರವರು ಸರ್ಕಾರಕ್ಕೆ ಪರೀಕ್ಷೆ ಮುಂದೂಡುವ ಆಕಾಂಕ್ಷೆಯಿದೆ. ಆದರೆ ಅದನ್ನು ಯಾವಾಗ ಘೋಷಿಸಿದರೆ ಹೆಚ್ಚಿನ ರಾಜಕೀಯ ಲಾಭ ದೊರಕುತ್ತದೆ ಎಂದು ಪ್ರಧಾನಿಗಳು ಯೋಚಿಸುತ್ತಿದ್ದಾರೆ ಎಂದು ರಚಿಸಿರುವ ಡೂಡಲ್‌ ಟ್ವಿಟ್ಟರ್‌ನಲ್ಲಿ ಗಮನ ಸೆಳೆದಿದೆ.

ಇನ್ನು ಪರೀಕ್ಷೆ ನಡೆಸುವ ಸರ್ಕಾರದ ಕ್ರಮವನ್ನು ವಿರೋಧಿಸಿ ವಿರೋಧ ಪಕ್ಷಗಳು ಇಂದು ಸಭೆ ಸೇರುತ್ತಿವೆ. ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: ಜೆಇಇ-ನೀಟ್ ಪರೀಕ್ಷೆ ಮುಂದೂಡಿ: ಗ್ರೇಟಾ ಥನ್‌ಬರ್ಗ್ ಸೇರಿ ಹಲವರ ಒತ್ತಾಯ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...