Homeಮುಖಪುಟಫೇಸ್‌ಬುಕ್-ಬಿಜೆಪಿ ಸಖ್ಯದ ವಾಲ್ ಸ್ಟ್ರೀಟ್ ವರದಿ: ವಿಚಾರಣೆ ಆರಂಭಿಸಿದ ದೆಹಲಿ ಅಸೆಂಬ್ಲಿ

ಫೇಸ್‌ಬುಕ್-ಬಿಜೆಪಿ ಸಖ್ಯದ ವಾಲ್ ಸ್ಟ್ರೀಟ್ ವರದಿ: ವಿಚಾರಣೆ ಆರಂಭಿಸಿದ ದೆಹಲಿ ಅಸೆಂಬ್ಲಿ

ಸಮಿತಿಯು, ಪತ್ರಕರ್ತ ಮತ್ತು ಲೇಖಕ ಪರಂಜೋಯ್ ಗುಹಾ ಠಾಕೂರ್ತಾ ಮತ್ತು ಡಿಜಿಟಲ್ ಹಕ್ಕುಗಳ ಕಾರ್ಯಕರ್ತ ನಿಖಿಲ್ ಪಹ್ವಾ ಅವರ ಹೇಳಿಕೆಗಳನ್ನು ತೆಗೆದುಕೊಂಡು, ಅದನ್ನು "ತಜ್ಞರ ಸಾಕ್ಷಿಗಳು" ಎಂದು ಪರಿಗಣಿಸಿದೆ.

- Advertisement -
- Advertisement -

ಅಮೇರಿಕಾದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದ್ದ ‘ಭಾರತದಲ್ಲಿ ಫೇಸ್‌ಬುಕ್ ಬಿಜೆಪಿ ಪರವಾಗಿ ಕೆಲಸ ಮಾಡಿದೆ’ ಎಂಬ ಆರೋಪದ ವಿಚಾರಣೆಯನ್ನು ದೆಹಲಿ ಅಸೆಂಬ್ಲಿಯ ಶಾಂತಿ ಮತ್ತು ಸಾಮರಸ್ಯದ ಸಮಿತಿ ಆರಂಭಿಸಿದೆ. ಈ ಆರೋಪಗಳ ಬಗ್ಗೆ ತಮ್ಮ ಹೇಳಿಕೆಯನ್ನು ದಾಖಲಿಸಲು ಫೇಸ್‌ಬುಕ್‌ನ ಉನ್ನತ ಅಧಿಕಾರಿಗಳನ್ನು ವಿಚಾರಣೆಗೆ ಆಹ್ವಾನಿಸಿದೆ ಎಂದು ಪಿಟಿಐ ವರದಿ ಮಾಡಿದೆ.

ಕೆಲವು ದಿನಗಳ ಹಿಂದೆ ಅಮೇರಿಕಾದ ಪತ್ರಿಕೆ ವಾಲ್ ಸ್ಟ್ರೀಟ್ ಜರ್ನಲ್ “ಭಾರತದಲ್ಲಿ ಬಿಜೆಪಿ ನಾಯಕರ ದ್ವೇಷ ಭಾಷಣವನ್ನು ನಿಯಂತ್ರಿಸುವಲ್ಲಿ ಫೇಸ್‌ಬುಕ್ ಕ್ರಮ ತೆಗೆದುಕೊಂಡಿಲ್ಲ. ಆಡಳಿತ ಪಕ್ಷದ ವಿರುದ್ಧ ಕ್ರಮ ತೆಗೆದುಕೊಂಡರೆ ಕಂಪನಿಯ ಭವಿಷ್ಯದ ವ್ಯವಹಾರಗಳಿಗೆ ತೊಂದರೆಯಾಗಬಹುದು ಎಂದು ಫೇಸ್‌ಬುಕ್ ಭಾರತದ ಮುಖ್ಯಸ್ಥರು ಹೇಳಿದ್ದಾರೆ” ಎಂದು ವರದಿ ಮಾಡಿತ್ತು.

ಇದಕ್ಕೆ ಸಂಬಂಧಿಸಿದಂತೆ ದೇಶದಲ್ಲಿ ಆರೋಪ-ಪ್ರತ್ಯಾರೋಪಗಳು ನಡೆಯುತ್ತಿವೆ. ಇದರ ಬಗ್ಗೆ ತನಿಖೆಯಾಗಬೇಕೆಂದು ಹಲವರು ಒತ್ತಾಯಿಸಿ ಫೇಸ್‌ಬುಕ್‌ಗೆ ಪತ್ರವನ್ನೂ ಬರೆದಿದ್ದರು. ಇದೀಗ ದೆಹಲಿಯ ಅಸೆಂಬ್ಲಿಯು ಫೇಸ್‌ಬುಕ್ ಅಧಿಕಾರಿಗಳನ್ನು ವಿಚಾರಿಸುವುದಾಗಿ ಹೇಳಿದೆ.

“ತನಿಖೆಗೆ ಸಮಿತಿಯು ಸರ್ವಾನುಮತದಿಂದ ಒಪ್ಪಿಗೆ ಪಡೆದುಕೊಂಡಿದೆ. ದೂರುದಾರರು ಮಾಡಿದ ಆರೋಪಗಳ ಬಗ್ಗೆ ತನಿಖೆ ನಡೆಸಲು ಫೇಸ್‌ಬುಕ್ ಅಧಿಕಾರಿಗಳನ್ನು ಕರೆಸಿಕೊಳ್ಳಬೇಕು. ಹಾಗಾಗಿ ಶೀಘ್ರದಲ್ಲೇ ಫೇಸ್‌ಬುಕ್‌ನ ಉನ್ನತ ಅಧಿಕಾರಿಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸುತ್ತೇವೆ” ಎಂದು ದೆಹಲಿ ಅಸೆಂಬ್ಲಿ ಹೇಳಿಕೆಯಲ್ಲಿ ತಿಳಿಸಿದೆ.

ಸಮಿತಿಯು, ಪತ್ರಕರ್ತ ಮತ್ತು ಲೇಖಕ ಪರಂಜೋಯ್ ಗುಹಾ ಠಾಕೂರ್ತಾ ಮತ್ತು ಡಿಜಿಟಲ್ ಹಕ್ಕುಗಳ ಕಾರ್ಯಕರ್ತ ನಿಖಿಲ್ ಪಹ್ವಾ ಅವರ ಹೇಳಿಕೆಗಳನ್ನು ತೆಗೆದುಕೊಂಡು, ಅದನ್ನು “ತಜ್ಞರ ಸಾಕ್ಷಿಗಳು” ಎಂದು ಪರಿಗಣಿಸಿದೆ. ಠಾಕೂರ್ತಾ ಭಾರತದಲ್ಲಿ ‘ಫೇಸ್‌ಬುಕ್‌ನ ರಿಯಲ್ ಫೇಸ್’ ಎಂಬ ಪುಸ್ತಕವನ್ನು ಬರೆದಿದ್ದಾರೆ.

ದೆಹಲಿ ಅಸೆಂಬ್ಲಿ ಸಮಿತಿಯ ಅಧ್ಯಕ್ಷರಾಗಿರುವ ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಾಡ್ಡ, ಫೇಸ್‌ಬುಕ್-ಬಿಜೆಪಿ ಸಂಬಂಧ ಮತ್ತು ಆರೋಪಿಸಲಾಗಿರುವ ಫೇಸ್‌ಬುಕ್-ಬಿಜೆಪಿ ಸಂಬಂಧ ಮತ್ತು ಫೆಬ್ರವರಿಯಲ್ಲಿ ದೆಹಲಿಯಲ್ಲಿ ನಡೆದ ಕೋಮುಗಲಭೆಯಲ್ಲಿ ಸಾಮಾಜಿಕ ಮಾಧ್ಯಮಗಳ ಪಾತ್ರದ ಬಗ್ಗೆ ಹಲವಾರು ಪ್ರಶ್ನೆಗಳ ಕುರಿತು ತಜ್ಞರನ್ನು ಸಲಹೆ ಕೇಳಿದ್ದಾರೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ‘ಫೇಸ್‌ಬುಕ್ ಹೇಳುವಂತೆ ಅದು ವಿಷಯ ತಟಸ್ಥ ನಿಲುವು ಹೊಂದಿಲ್ಲ. ಅತಿದೊಡ್ಡ ಜಾಲ ಹೊಂದಿರುವ ಸಾಮಾಜಿಕ ಮಾಧ್ಯಮ ಮತ್ತು ಬಿಜೆಪಿ ನಡುವಿನ ಸಂಬಂಧವನ್ನು ಸಾಬೀತುಪಡಿಸಲು ಪುರಾವೆಗಳಿವೆ’ ಎಂದು ತಜ್ಞರು ಹೇಳಿದ್ದಾರೆ.

ಕೋಮು ಹಿಂಸಾಚಾರವನ್ನು ಪ್ರಚೋದಿಸುವಲ್ಲಿ ಫೇಸ್‌ಬುಕ್‌ನ ಪಾತ್ರ ಮತ್ತು ದ್ವೇಷ ಹರಡುವ ಪೋಸ್ಟ್‌ಗಳಿಗೆ ಸಂಬಂಧಿಸಿದಂತೆ ಅದು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಖಚಿತಪಡಿಸಿಕೊಳ್ಳಲು ಸ್ವತಂತ್ರ ವಿಚಾರಣೆಯ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಆಗಸ್ಟ್ 14 ರಂದು ದಿ ವಾಲ್ ಸ್ಟ್ರೀಟ್ ಜರ್ನಲ್‌ನಲ್ಲಿ ಪ್ರಕಟವಾದ ವರದಿಯಿಂದ ದ್ವೇಷ ಭಾಷಣದ ಬಗ್ಗೆ ಫೇಸ್‌ಬುಕ್‌ನ ಏಕ ಪಕ್ಷಪಾತತೆಯನ್ನು ಬಹಿರಂಗಪಡಿಸಲಾಗಿದೆ. ಈ ವರದಿಯು ಭಾರತದಲ್ಲಿ ರಾಜಕೀಯವಾಗಿ ಭಾರೀ ಮಹತ್ವದ್ದೆನಿಸಿದೆ.

ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ವ್ಯಕ್ತಿಗಳು ಮತ್ತು ಗುಂಪುಗಳಿಗೆ “ದ್ವೇಷ-ಭಾಷಣ ನಿಯಮಗಳನ್ನು ಅನ್ವಯಿಸಿಲ್ಲ” ಎಂದು ಫೇಸ್‌ಬುಕ್ ಇಂಡಿಯಾದ ಸಾರ್ವಜನಿಕ ನೀತಿಯ ಮುಖ್ಯಸ್ಥೆ ಅಂಖಿ ದಾಸ್ ಅವರ ಕಾರ್ಯವೈಖರಿಯನ್ನು ಈ ವರದಿಯು ಬಹಿರಂಗಪಡಿಸಿತ್ತು.

ಕಳೆದ ವಾರ, ಮಾಹಿತಿ ತಂತ್ರಜ್ಞಾನದ ಸಂಸದೀಯ ಸ್ಥಾಯಿ ಸಮಿತಿಯು ಸೆಪ್ಟೆಂಬರ್ 2 ರಂದು ಈ ಕುರಿತು ಚರ್ಚಿಸಲು ಫೇಸ್‌ಬುಕ್ ಪ್ರತಿನಿಧಿಗಳನ್ನು ಕರೆಸಲಿದೆ ಎಂದು ಹೇಳಿದೆ. ಸಮಿತಿಯ ಅಧ್ಯಕ್ಷ ಶಶಿ ತರೂರ್ ಆಗಸ್ಟ್ 17 ರಂದು ತನಿಖೆ ಕೈಗೆತ್ತಿಕೊಳ್ಳುವುದಾಗಿ ಘೋಷಿಸಿದ್ದರು.

ಇದರ ನಡುವೆ, ಫೇಸ್‌ಬುಕ್, ತನ್ನ ವೇದಿಕೆಯಲ್ಲಿ ದ್ವೇಷ ಭಾಷಣಕ್ಕೆ ಸ್ಥಳವಿಲ್ಲ ಎಂದು ಶುಕ್ರವಾರ ಹೇಳಿ, ಯಾವುದೇ ಕಾರಣಕ್ಕೂ ಇಲ್ಲಿ ಏಕ ಪಕ್ಷಪಾತತೆಗೆ ಅವಕಾಶವಿಲ್ಲ. ಮತ್ತು ಕೋಮು ಪ್ರಚೋದನೆಗೂ ಅವಕಾಶವಿಲ್ಲ ಎಂದು ಹೇಳಿದೆ.


ಇದನ್ನೂ ಓದಿ: ಬಿಜೆಪಿ ಮತ್ತು ಆರ್‌ಎಸ್‌ಎಸ್‌ ಫೇಸ್‌ಬುಕ್‌ ಅನ್ನು ನಿಯಂತ್ರಿಸುತ್ತಿದ್ದಾರೆ: ರಾಹುಲ್ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...