Homeಕರ್ನಾಟಕದೇವನೂರರ 'ಕುಸುಮಬಾಲೆ ವಾಚಿಕಾಭಿನಯ': ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

ದೇವನೂರರ ‘ಕುಸುಮಬಾಲೆ ವಾಚಿಕಾಭಿನಯ’: ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

'ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ 'ಕುಸುಮಬಾಲೆ' ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. "ಸಂಬಂಜ ಅನ್ನೋದು ದೊಡ್ಡದು ಕಣ" ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರು ಮಹಾದೇವರವರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿ ‘ಕುಸುಮಬಾಲೆ’ ರಂಗಕೃತಿಯ ವಾಚಿಕಾಭಿನಯವು ಇಂದು ಸಂಜೆ 6.30ರಿಂದ ರಂಗಾಯಣದ ವೆಬ್‌ಸೈಟ್ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ.

ಇಂದು ಮಧ್ಯಾಹ್ನ ಮೈಸೂರಿನ ರಂಗಾಯಣ ಆವರಣದಲ್ಲಿ ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.  ರಂಗಾಯಣದ ವಿನ್ಯಾಸ ಕಲಾವಿದರಾದ ಎಚ್.ಕೆ.ದ್ವಾರಕಾನಾಥ್, ಕುಸುಮಬಾಲೆ ಕುರಿತಂತೆ ರಚಿಸಿದ್ದ ಚಿತ್ರಕಲೆಯನ್ನು ರಂಗಕರ್ಮಿಗಳಾದ ಬಿ.ವಿ.ರಾಜಾರಾಮ್ ಬಿಡುಗಡೆ ಮಾಡಿದರು.

‘ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಯಾವುದೇ ರಂಗಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಹಿಂದೆಯೇ ರಂಗಾಯಣದ ಕಲಾವಿದರು ಅಭಿಯಿಸಿದ್ದ, ಕನ್ನಡದ ಪ್ರಖ್ಯಾತ ಕಾದಂಬರಿಗಳಲ್ಲಿ ಒಂದಾದ ಕುಸುಮಬಾಲೆಯ ವಾಚಿಕಾಭಿನಯವನ್ನು ಪ್ರಸಾರ ಮಾಡಲು ಮುಂದಾಗಿದ್ದೇವೆ’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾನುಗೌರಿ.ಕಾಂಗೆ ತಿಳಿಸಿದರು.

‘ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ ‘ಕುಸುಮಬಾಲೆ’ ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. “ಸಂಬಂಜ ಅನ್ನೋದು ದೊಡ್ಡದು ಕಣ” ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ. ಹಾಗಾಗಿ ಈ ಕೃತಿಯು ವಿಮರ್ಶಾತೀತವಾದುದಾಗಿದ್ದು, ಇದರಲ್ಲಿ ಬಳಸಿರುವ ಕ್ಲಿಷ್ಟ ಭಾಷೆಯ ಕಾರಣ ಇದನ್ನು ಅಭಿನಯಿಸುವುದಕ್ಕೋ ಅಥವಾ ವಾಚಿಸುವ ಸಾಹಸಕ್ಕೋ ಯಾರೂ ಕೈ ಹಾಕಿಲ್ಲ. ಆದರೆ ನಾವು ಈ ಕಷ್ಟದ ಕೆಲಸವನ್ನು ಇಷ್ಟ ಪಟ್ಟು ಮಾಡುತ್ತಿದ್ದೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಹಿರೇಹಾಳು ಇಬ್ರಾಹಿಂ ಸಾಬರ ತೋಟದಲ್ಲಿ ಅರಳಿದ ರಂಗಭೂಮಿಯ ಹೂ ಪಿಂಜಾರ ಅಬ್ದುಲ್

ಕುಸುಮಬಾಲೆ-ರಂಗಕೃತಿಯ ವಾಚಿಕಾಭಿನಯ 9 ಎಪಿಸೋಡ್ ಗಳಲ್ಲಿ ಪ್ರತಿದಿನ ಪ್ರಸಾರವಾಗಲಿದ್ದು, ಇದು ರಂಗಾಯಣವು, ಕಲಾಸಕ್ತ ಜನರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪುವುದಕ್ಕೆ ಮಾಡಿರುವ ಮೊದಲ ಪ್ರಯತ್ನವಾಗಿದೆ. ಇದರ ನಂತರ ಕುವೆಂಪು ಅವರ ‘ಕಿಂದರಿಜೋಗಿ’, ಬಿ.ವಿ.ಕಾರಂತರ ರಂಗಗೀತೆಗಳ ಪ್ರಸ್ತುತಿಯಂತಹ ಹಲವು ಕಾರ್ಯಕ್ರಮಗಳನ್ನು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ರಂಗಾಯಣ ನಿರ್ದೇಶಕರು ಹೇಳಿದರು.

1992 ರಲ್ಲಿ ಬಸವಲಿಂಗಯ್ಯನವರು ನಿರ್ದೇಶಿಸಿ, ಕಾರಂತರು ಸಂಗೀತ ಸಂಯೋಜಿಸಿದ್ದ ಈ ನಾಟಕವು ನಾವು ಅಭಿನಯಿಸಿದ ಶ್ರೇಷ್ಟ ನಾಟಕಗಳಲ್ಲಿ ಒಂದು ಎಂದು ಹಿರಿಯ ಕಲಾವಿದರಾದ ಗೀತಾ ಮೊಂಟಡ್ಕ ಹೇಳಿದರು.

ಈ ವಾಚಿಕಾಭಿನಯದಲ್ಲಿ ಹಳೆಯದನ್ನು ನೆನೆಪಿಸಿಕೊಂಡು ಮತ್ತೆ ಈಗ ಪ್ರಸ್ತುತಪಡಿಸುತ್ತಿದ್ದೇವೆ. ನಾಟಕದಲ್ಲಿ ಅಭಿನಯಿಸಿದ್ದ ಕಲಾವಿದರೇ ಬಹುತೇಕ ಇದರಲ್ಲೂ ಇದ್ದೇವೆ. ಸಂಗೀತದಲ್ಲಿ ಬಿ.ವಿ.ಕಾರಂತರ ಶಿಷ್ಯರಾದ ಶ್ರೀನಿವಾಸ ಭಟ್ (ಚೀನಿ) ಇರಲಿದ್ದಾರೆ. ನಾವೇ ಹಾಡುತ್ತಾ ವಾಚಿಕಾಭಿನಯ ಮಾಡಲಿದ್ದೇವೆ ಎಂದು ಗೀತಾ ಮೊಂಟಡ್ಕ ಹೇಳಿದರು.

ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ತುಳು ರಂಗಭೂಮಿಯ ಸಾಕ್ಷಿಪ್ರಜ್ಞೆ ಅರವಿಂದ ಬೋಳಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...