Homeಕರ್ನಾಟಕದೇವನೂರರ 'ಕುಸುಮಬಾಲೆ ವಾಚಿಕಾಭಿನಯ': ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

ದೇವನೂರರ ‘ಕುಸುಮಬಾಲೆ ವಾಚಿಕಾಭಿನಯ’: ಇಂದಿನಿಂದ ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಪ್ರಸಾರ

'ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ 'ಕುಸುಮಬಾಲೆ' ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. "ಸಂಬಂಜ ಅನ್ನೋದು ದೊಡ್ಡದು ಕಣ" ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ.

- Advertisement -
- Advertisement -

ಹಿರಿಯ ಸಾಹಿತಿ ದೇವನೂರು ಮಹಾದೇವರವರ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಕೃತಿ ‘ಕುಸುಮಬಾಲೆ’ ರಂಗಕೃತಿಯ ವಾಚಿಕಾಭಿನಯವು ಇಂದು ಸಂಜೆ 6.30ರಿಂದ ರಂಗಾಯಣದ ವೆಬ್‌ಸೈಟ್ ಮತ್ತು ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರವಾಗಲಿದೆ.

ಇಂದು ಮಧ್ಯಾಹ್ನ ಮೈಸೂರಿನ ರಂಗಾಯಣ ಆವರಣದಲ್ಲಿ ಇದರ ಉದ್ಘಾಟನಾ ಕಾರ್ಯಕ್ರಮ ನೆರವೇರಿತು.  ರಂಗಾಯಣದ ವಿನ್ಯಾಸ ಕಲಾವಿದರಾದ ಎಚ್.ಕೆ.ದ್ವಾರಕಾನಾಥ್, ಕುಸುಮಬಾಲೆ ಕುರಿತಂತೆ ರಚಿಸಿದ್ದ ಚಿತ್ರಕಲೆಯನ್ನು ರಂಗಕರ್ಮಿಗಳಾದ ಬಿ.ವಿ.ರಾಜಾರಾಮ್ ಬಿಡುಗಡೆ ಮಾಡಿದರು.

‘ಕೊರೊನಾ ಸಾಂಕ್ರಾಮಿಕ ರೋಗದ ಕಾರಣದಿಂದ ಯಾವುದೇ ರಂಗಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಹಿಂದೆಯೇ ರಂಗಾಯಣದ ಕಲಾವಿದರು ಅಭಿಯಿಸಿದ್ದ, ಕನ್ನಡದ ಪ್ರಖ್ಯಾತ ಕಾದಂಬರಿಗಳಲ್ಲಿ ಒಂದಾದ ಕುಸುಮಬಾಲೆಯ ವಾಚಿಕಾಭಿನಯವನ್ನು ಪ್ರಸಾರ ಮಾಡಲು ಮುಂದಾಗಿದ್ದೇವೆ’ ಎಂದು ರಂಗಾಯಣದ ನಿರ್ದೇಶಕ ಅಡ್ಡಂಡ ಕಾರ್ಯಪ್ಪ ನಾನುಗೌರಿ.ಕಾಂಗೆ ತಿಳಿಸಿದರು.

‘ಕನ್ನಡದ ಶ್ರೇಷ್ಟ ಕಾದಂಬರಿಗಳಲ್ಲಿ ಒಂದಾದ ‘ಕುಸುಮಬಾಲೆ’ ತನ್ನ ಭಾಷಾ ವೈಶಿಷ್ಟ್ಯತೆಯಿಂದಲೇ ಹೆಸರುವಾಸಿಯಾಗಿದೆ. “ಸಂಬಂಜ ಅನ್ನೋದು ದೊಡ್ಡದು ಕಣ” ಎಂದು ಹೇಳುವ ಕೃತಿ ಮಾನವ ಸಂಬಂಧಗಳನ್ನು, ಅದರ ಮೌಲ್ಯವನ್ನು ಅಷ್ಟೇ ಸೊಗಸಾಗಿ ಬಿಚ್ಚಿಡುತ್ತದೆ. ಹಾಗಾಗಿ ಈ ಕೃತಿಯು ವಿಮರ್ಶಾತೀತವಾದುದಾಗಿದ್ದು, ಇದರಲ್ಲಿ ಬಳಸಿರುವ ಕ್ಲಿಷ್ಟ ಭಾಷೆಯ ಕಾರಣ ಇದನ್ನು ಅಭಿನಯಿಸುವುದಕ್ಕೋ ಅಥವಾ ವಾಚಿಸುವ ಸಾಹಸಕ್ಕೋ ಯಾರೂ ಕೈ ಹಾಕಿಲ್ಲ. ಆದರೆ ನಾವು ಈ ಕಷ್ಟದ ಕೆಲಸವನ್ನು ಇಷ್ಟ ಪಟ್ಟು ಮಾಡುತ್ತಿದ್ದೇವೆ’ ಎಂದು ಅವರು ಹೇಳಿದರು.

ಇದನ್ನೂ ಓದಿ: ಹಿರೇಹಾಳು ಇಬ್ರಾಹಿಂ ಸಾಬರ ತೋಟದಲ್ಲಿ ಅರಳಿದ ರಂಗಭೂಮಿಯ ಹೂ ಪಿಂಜಾರ ಅಬ್ದುಲ್

ಕುಸುಮಬಾಲೆ-ರಂಗಕೃತಿಯ ವಾಚಿಕಾಭಿನಯ 9 ಎಪಿಸೋಡ್ ಗಳಲ್ಲಿ ಪ್ರತಿದಿನ ಪ್ರಸಾರವಾಗಲಿದ್ದು, ಇದು ರಂಗಾಯಣವು, ಕಲಾಸಕ್ತ ಜನರನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಜನರನ್ನು ತಲುಪುವುದಕ್ಕೆ ಮಾಡಿರುವ ಮೊದಲ ಪ್ರಯತ್ನವಾಗಿದೆ. ಇದರ ನಂತರ ಕುವೆಂಪು ಅವರ ‘ಕಿಂದರಿಜೋಗಿ’, ಬಿ.ವಿ.ಕಾರಂತರ ರಂಗಗೀತೆಗಳ ಪ್ರಸ್ತುತಿಯಂತಹ ಹಲವು ಕಾರ್ಯಕ್ರಮಗಳನ್ನು ನೀಡುವ ಯೋಜನೆ ಹಾಕಿಕೊಂಡಿದ್ದೇವೆ ಎಂದು ರಂಗಾಯಣ ನಿರ್ದೇಶಕರು ಹೇಳಿದರು.

1992 ರಲ್ಲಿ ಬಸವಲಿಂಗಯ್ಯನವರು ನಿರ್ದೇಶಿಸಿ, ಕಾರಂತರು ಸಂಗೀತ ಸಂಯೋಜಿಸಿದ್ದ ಈ ನಾಟಕವು ನಾವು ಅಭಿನಯಿಸಿದ ಶ್ರೇಷ್ಟ ನಾಟಕಗಳಲ್ಲಿ ಒಂದು ಎಂದು ಹಿರಿಯ ಕಲಾವಿದರಾದ ಗೀತಾ ಮೊಂಟಡ್ಕ ಹೇಳಿದರು.

ಈ ವಾಚಿಕಾಭಿನಯದಲ್ಲಿ ಹಳೆಯದನ್ನು ನೆನೆಪಿಸಿಕೊಂಡು ಮತ್ತೆ ಈಗ ಪ್ರಸ್ತುತಪಡಿಸುತ್ತಿದ್ದೇವೆ. ನಾಟಕದಲ್ಲಿ ಅಭಿನಯಿಸಿದ್ದ ಕಲಾವಿದರೇ ಬಹುತೇಕ ಇದರಲ್ಲೂ ಇದ್ದೇವೆ. ಸಂಗೀತದಲ್ಲಿ ಬಿ.ವಿ.ಕಾರಂತರ ಶಿಷ್ಯರಾದ ಶ್ರೀನಿವಾಸ ಭಟ್ (ಚೀನಿ) ಇರಲಿದ್ದಾರೆ. ನಾವೇ ಹಾಡುತ್ತಾ ವಾಚಿಕಾಭಿನಯ ಮಾಡಲಿದ್ದೇವೆ ಎಂದು ಗೀತಾ ಮೊಂಟಡ್ಕ ಹೇಳಿದರು.

ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ.


ಇದನ್ನೂ ಓದಿ: ತುಳು ರಂಗಭೂಮಿಯ ಸಾಕ್ಷಿಪ್ರಜ್ಞೆ ಅರವಿಂದ ಬೋಳಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...