Homeಮುಖಪುಟ’ಕಾವೇರಿ ಕಾಲಿಂಗ್’ ಪ್ರಕರಣ: ಡಿಸ್ಕವರಿ ಚಾನೆಲ್‌ಗೆ ಕಾರ್ಯಕ್ರಮ ನಿಲ್ಲಿಸಲು ಕಾನೂನು ನೋಟಿಸು ನೀಡಿದ್ದೀರ ಎಂದು ಕೇಳಿದ...

’ಕಾವೇರಿ ಕಾಲಿಂಗ್’ ಪ್ರಕರಣ: ಡಿಸ್ಕವರಿ ಚಾನೆಲ್‌ಗೆ ಕಾರ್ಯಕ್ರಮ ನಿಲ್ಲಿಸಲು ಕಾನೂನು ನೋಟಿಸು ನೀಡಿದ್ದೀರ ಎಂದು ಕೇಳಿದ ಹೈಕೋರ್ಟ್

ಇಶಾ ಫೌಂಡೇಶನ್ ಸಾರ್ವಜನಿಕರಿಂದ ಒಂದು ಮರ ನೆಡುವಿಕೆಗೆ 42 ರೂ. ವನ್ನು ಪಡೆಯುತ್ತಿದ್ದು, ಅದಕ್ಕಾಗಿ ಒಟ್ಟು 10 ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಸಂಗ್ರಹಿಸುತ್ತಿದೆ. ಇದು ದೊಡ್ಡ ಹಗರಣವಾಗಿದೆ ಎಂದು ಆರೋಪಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆಯಾಗಿತ್ತು.

- Advertisement -
- Advertisement -

ಕಾವೇರಿ ಕಾಲಿಂಗ್‌ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕರ್ನಾಟಕ ಹೈಕೋರ್ಟ್, ಡಿಸ್ಕವರಿ ಚಾನೆಲ್‌ನಲ್ಲಿ ಪ್ರಸಾರವಾಗುತ್ತಿರುವ ಕಾವೇರಿ ಕಾಲಿಂಗ್ ಕಾರ್ಯಕ್ರಮದ ಪ್ರದರ್ಶನ ನಿಲ್ಲಿಸುವಂತೆ ಅರ್ಜಿದಾರ ಚಾನೆಲ್‌ಗೆ ನೋಟಿಸ್ ಕಳುಹಿಸಿದ್ದಾರೆಯೇ ಎಂಬ ಬಗ್ಗೆ ಸ್ಪಷ್ಟನೆ ನೀಡುವಂತೆ ಇಶಾ ಫೌಂಡೇಶನ್‌ಗೆ ನಿರ್ದೇಶಿಸಿತು.

ಇದಕ್ಕೆ ಉತ್ತರಿಸಿದ ಇಶಾ ಫೌಂಡೇಶನ್ ಪರವಾಗಿ ಹಾಜರಾದ ವಕೀಲ ಉದಯ್ ಹೊಲ್ಲಾ, ಪ್ರಕರಣವು ಹೈಕೋರ್ಟ್ ಮುಂದೆ ಬಾಕಿ ಇದೆ ಆದರೆ ಕಾರ್ಯಕ್ರಮ ಪ್ರಸಾರವಾದರೆ ಅದು ನ್ಯಾಯಾಲಯ ನಿಂದನೆಗೆ ಕಾರಣವಾಗಲಿದೆ ಎಂದು ತಿಳಿಸಿ ಅರ್ಜಿದಾರ ಮೂರು ನೋಟಿಸ್‌ಗಳನ್ನು ಚಾನೆಲ್‌ಗೆ ಕಳುಹಿಸಿದ್ದಾರೆ ಎಂದು ಹೇಳಿದರು.

ಕಾರ್ಯಕ್ರಮವನ್ನು ತಡೆಹಿಡಿಯಲು ನ್ಯಾಯಾಲಯವು ಯಾವುದೇ ಮಧ್ಯಂತರ ಆದೇಶವನ್ನು ಅಂಗೀಕರಿಸಿಲ್ಲ ಎಂದು ಅವರು ಸೂಚಿಸಿದರು.

ಇದನ್ನೂ ಓದಿ: ಆಧ್ಯಾತ್ಮಕ ಸಂಘಟನೆಯಾದ ಕಾರಣಕ್ಕೆ ಯಾರೂ ಕಾನೂನಿಗಿಂತ ಮಿಗಿಲಲ್ಲ: ಜಗ್ಗಿ ವಾಸುದೇವ್‌ಗೆ ಹೈಕೋರ್ಟ್‌ ತರಾಟೆ.

ಚಾನೆಲ್‌ಗೆ ನೋಟಿಸ್ ಕಳುಹಿಸಿದ್ದೀರಾ ಎಂದು ಅರ್ಜಿದಾರರೊಂದಿಗೆ ಪ್ರಶ್ನಿಸಿದ ನ್ಯಾಯಪೀಠಕ್ಕೆ ಉತ್ತರಿಸಿದ ಅವರು ಇಶಾ ಫೌಂಡೇಶನ್ ನನಗೆ ಅಫಿಡವಿಟ್ ಸಲ್ಲಿಸಿಲ್ಲ ಎಂದು ಹೇಳಿದರು. ಅರ್ಜಿದಾರರಿಗೆ ಮತ್ತೊಮ್ಮೆ ಅಫಿಡವಿಟ್ ಸಲ್ಲಿಸುವಂತೆ ನ್ಯಾಯಪೀಠ ಇಶಾ ಫೌಂಡೇಶನ್‌ಗೆ ನಿರ್ದೇಶನ ನೀಡಿ, “ನೀವು ಚಾನೆಲ್‌ಗಳನ್ನು ತಪ್ಪುದಾರಿಗೆಳೆಯುವ ಹಾಗಿಲ್ಲ” ಎಂದು ಅಭಿಪ್ರಾಯಪಟ್ಟಿತು.

ವಿಚಾರಣೆಯ ಸಮಯದಲ್ಲಿ ನ್ಯಾಯಾಲಯವು, ಕಾವೇರಿ ಕಾಲಿಂಗ್‌ ಕಾರ್ಯಕ್ರಮವು ಸರ್ಕಾರಿ ಜಮೀನಿನಲ್ಲಿದೆ ಮತ್ತು ಇದು ಸರ್ಕಾರಿ ಯೋಜನೆಯಾಗಿದೆ ಎಂದು ಸಾರ್ವಜನಿಕರಿಂದ ಹಣವನ್ನು ಸಂಗ್ರಹಿಸಲಾಗಿದೆ ಎಂಬ ಎರಡು ವಿಷಯಗಳನ್ನು ಮಾತ್ರ ನಿರ್ಧರಿಸಬೇಕಾಗಿದೆ ಎಂದು ಸೂಚಿಸಿತು.

ಪ್ರಕರಣದ ಮುಂದಿನ ವಿಚಾರಣೆಯನ್ನು ನ್ಯಾಯಾಲಯವು ಸೆಪ್ಟೆಂಬರ್ 8 ರಂದು ಮುಂದೂಡಿದೆ.

ಈ ಮಧ್ಯೆ, ಇಶಾ ಪ್ರತಿಷ್ಠಾನವು ಪ್ರಸ್ತಾಪಿಸಿರುವ ‘ಕಾವೇರಿ ಕಾಲಿಂಗ್’ ಯೋಜನೆ ರಾಜ್ಯ ಸರ್ಕಾರದ ಯೋಜನೆಯಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿತ್ತು.

ದೂರುದಾರರಾದ ವಕೀಲ ಎ.ವಿ. ಅಮರನಾಥ್ ಅವರ ಅರ್ಜಿಯ ಪ್ರಕಾರ, ಇಶಾ ಫೌಂಡೇಶನ್ ಕಾವೇರಿಯ ಉಗಮ ಸ್ಥಳವಾದ ತಲಕಾವೆರಿಯಿಂದ ತಿರುವರೂರಿನವರೆಗೆ 639 ಕಿಲೋಮೀಟರ್ ವ್ಯಾಪ್ತಿಯ ಕಾವೇರಿ ನದಿ ತೀರದಲ್ಲಿ 253 ಕೋಟಿ ಮರದ ಸಸಿಗಳನ್ನು ನೆಡಲು ಯೋಜಿಸಿದೆ. ಇದಕ್ಕಾಗಿ ಸಾರ್ವಜನಿಕರಿಂದ ಒಂದು ಮರ ನೆಡುವಿಕೆಗೆ 42 ರೂ. ವನ್ನು ಫೌಂಡೇಶನ್ ಪಡೆಯುತ್ತಿದ್ದು, ಅಂದರೆ ಇದು ಒಟ್ಟು 10 ಸಾವಿರ ಕೋಟಿ ರೂಪಾಯಿಗಿಂತಲೂ ಹೆಚ್ಚು ಸಂಗ್ರಹಿಸುತ್ತಿದೆ. ಇದು ದೊಡ್ಡ ಹಗರಣವಾಗಿದೆ ಎಂದು ಅರ್ಜಿದಾರ ವಕೀಲ ಅಮರನಾಥ್ ದೂರಿದ್ದಾರೆ.


ಓದಿ: ’ಕಾವೇರಿ ಕೂಗು’ ಎಂಬುದು ರಾಜಕೀಯ, ಮೋಸ ಮತ್ತು ನಾಟಕ: ಜಗ್ಗಿ ವಾಸುದೇವ್ ನಡೆಗೆ ಪರಿಸರ ಕಾರ್ಯಕರ್ತರ ಆಕ್ಷೇಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...