Homeಮುಖಪುಟಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ ಚಲೋಗೆ ಭಾರೀ ಜನಬೆಂಬಲ

ಕರ್ನಾಟಕ ರಣಧೀರರ ಪಡೆ ರಾಜ್ಯಾಧ್ಯಕ್ಷ ಬಿ.ಹರೀಶ್ ಕುಮಾರ್ ನೇತೃತ್ವದಲ್ಲಿ ನೂರಾರು ಕನ್ನಡಿಗರು ನಿನ್ನೆ ಬೆಂಗಳೂರಿನಿಂದ ಹಲವು ವಾಹನಗಳಲ್ಲಿ ಜಾಥ ಹೊರಟಿದ್ದು ಇಂದು ಮುಂಜಾನೆ ಬೆಳಗಾವಿ ತಲುಪಿವೆ.

- Advertisement -
- Advertisement -

ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಸ್ಥಾಪಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು ಖಂಡಿಸಿ, ಅದೇ ಸ್ಥಳದಲ್ಲೀ ಕೂಡಲೇ ಪ್ರತಿಮೆ ನಿರ್ಮಿಸಬೇಕೆಂದು ಆಗ್ರಹಿಸಿ ಇಂದು ಬೆಳಗಾವಿ ಚಲೋ ಹೋರಾಟ ನಡೆಯುತ್ತಿದ್ದು, ಭಾರೀ ಜನಬೆಂಬಲ ವ್ಯಕ್ತವಾಗಿದೆ.

ಕರ್ನಾಟಕ ರಣಧೀರರ ಪಡೆ ರಾಜ್ಯಾಧ್ಯಕ್ಷ ಬಿ.ಹರೀಶ್ ಕುಮಾರ್ ನೇತೃತ್ವದಲ್ಲಿ ನೂರಾರು ಕನ್ನಡಿಗರು ನಿನ್ನೆ ಬೆಂಗಳೂರಿನಿಂದ ಹಲವು ವಾಹನಗಳಲ್ಲಿ ಜಾಥ ಹೊರಟಿದ್ದು ಇಂದು ಮುಂಜಾನೆ ಬೆಳಗಾವಿ ತಲುಪಿವೆ. ಸಾಮಾಜಿಕ ಕಾರ್ಯಕರ್ತ ನಿಕೇತ್ ರಾಜ್ ಮೌರ್ಯ ನೇತೃತ್ವದಲ್ಲಿ ಮತ್ತೊಂದು ತಂಡ ಬೆಳಗಾಗಿ ತಲುಪಿದ್ದು ಅಲ್ಲಿನ ಸ್ಥಳೀಯರು, ಕನ್ನಡಪರ ಹೋರಾಟಗಾರರು ಸೇರಿ ಬೆಳಗಾವಿಯ ಸುವರ್ಣ ವಿಧಾನಸೌಧದೆಡೆಗೆ ಬೃಹತ್ ಮೆರವಣಿಗೆ ನಡೆಸುತ್ತಿದ್ದಾರೆ.

ಆಗಸ್ಟ್ 15 ರಂದು ಸಂಗೊಳ್ಳಿ ರಾಯಣ್ಣನ ಜನ್ಮದಿನದಂದು ಹಲವು ಕನ್ನಡಪರ ಹೋರಾಟಗಾರರು ರಾತ್ರೋರಾತ್ರಿ  ಬೆಳಗಾವಿಯ ಪೀರನವಾಡಿ ವೃತ್ತದಲ್ಲಿ ಪ್ರತಿಮೆ ಸ್ಥಾಪಿಸಿದ್ದರು. ಆದರೆ ಪೊಲೀಸರು ಅದನ್ನು ತೆರವುಗೊಳಿಸಿ, ತಡೆಯಲು ಮುಂದಾದ ಕನ್ನಡಪರ ಕಾರ್ಯಕರ್ತರ ಮೇಲೆ ಲಾಠಿ ಪ್ರಹಾರ ನಡೆಸಿದ್ದರು.

ಅಂದಿನಿಂದ ನೂರಾರು ಕನ್ನಡಪರ ಸಂಘಟನೆಗಳು ಅದೇ ಸ್ಥಳದಲ್ಲಿ ರಾಯಣ್ಣನ ಪ್ರತಿಮೆ ನಿರ್ಮಾಣವಾಗಬೇಕೆಂದು ಪಟ್ಟು ಹಿಡಿದು ಕುಳಿತಿವೆ. ಹತ್ತಾರು ಪ್ರತಿಭಟನೆಗಳು ದಾಖಲಾಗಿವೆ. ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ದನಿಯೆತ್ತಲಾಗುತ್ತಿದೆ. ಆದರೂ ಸರ್ಕಾರವಾಗಲೀ, ಬೆಳಗಾವಿ ಜಿಲ್ಲಾಡಳಿತವಾಗಲಿ ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ.

ಆಗಸ್ಟ್ 17 ರಂದು ಬೆಳಗಾವಿಯಲ್ಲಿ ಸಾವಿರಾರು ಜನರು ಸೇರಿ ಭಾರೀ ಪ್ರತಿಭಟನೆ ನಡೆಸಿದ್ದರು. ಪೀರನವಾಡಿ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಮೆರವಣಿಗೆ ನಡೆಸಿ ಕೂಡಲೇ ಪ್ರತಿಮೆ ಸ್ಥಾಪನೆಗೆ ಪಟ್ಟು ಹಿಡಿದಿದ್ದರು. ಅದೇ ದಿನ ಬೆಂಗಳೂರಿನಲ್ಲಿ ಕರ್ನಾಟಕ ರಣಧೀರ ಪಡೆಯಿಂದ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆದಿತ್ತು.

ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು: ಕನ್ನಡಿಗರಿಂದ ತೀವ್ರ ಆಕ್ರೋಶ

ಪ್ರತಿಮೆ ಸ್ಥಾಪನೆಗೆ ಅನುಮತಿ ಪಡೆದಿಲ್ಲ ಎಂಬುದು ಪೊಲೀಸರ ವಾದವಾದರೆ, ಅಲ್ಲಿನ ಸ್ಥಳೀಯರು ಮೂರು ವರ್ಷಗಳಿಂದ ಅನುಮತಿಗೆ ಪ್ರಯತ್ನಿಸಲಾಗುತ್ತಿದೆ. ಪೀರನವಾಡಿ ಗ್ರಾಮಪಂಚಾಯ್ತಿಯು ಅನುಮತಿ ನೀಡಿದೆ. ಆದರೆ ಪೊಲೀಸರು ಅನುಮತಿ ನಿರಾಕರಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಈ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಸೇರಿದಂತೆ ಹಲವರು ದನಿಯೆತ್ತಿದ್ದರು. ಶಾಂತಿಯುತವಾಗಿ ಪ್ರತಿಮೆ ನಿರ್ಮಾಣಕ್ಕೆ ಸರ್ಕಾರ ಸಹಕರಿಸಬೇಕು ಎಂದು ಕೋರಿದ್ದರು.

ಕರ್ನಾಟಕ ರಣಧೀರ ಪಡೆ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ರಾಯಣ್ಣಿನಿಗಾಗಿ ಉಪವಾಸ ಸತ್ಯಾಗ್ರಹ ಕೂಡ ನಡೆದಿತ್ತು. ನಿನ್ನೆ ಸಂಜೆ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿಯಾಗಿದ್ದ ಕಾಗಿನೆಲೆ ಕನಕಗುರುಪೀಠದ ನಿರಂಜನಾನಂದ ಸ್ವಾಮೀಜಿಯವರು ಶಾಂತಿಯುತವಾಗಿ ವಿವಾದ ಬಗೆಹರಿಸುವಂತೆ ಮನವಿ ಮಾಡಿದ್ದರು.

ಗೃಹಸಚಿವ ಬಸವರಾಜ ಬೊಮ್ಮಾಯಿಯವರು ಮಾತನಾಡಿ ವಿವಾದ ಬಗೆಹರಿಸಿ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಲಾಗುವುದು. ಈ ವಿಚಾರದಲ್ಲಿ ಸಚಿವ ರಮೇಶ್ ಜಾರಕಿಹೊಳಿ ಕೆಲಸ ಮಾಡುತ್ತಿದ್ದು, ಸ್ವಲ್ಪಸಮಯಾವಕಾಶಬೇಕು ಎಂದಿದ್ದರು.

ಇಂದು ಬೆಳಗಾವಿಯಲ್ಲಿ ಈ ವಿಚಾರಕ್ಕೆ ಭಾರೀ ಪ್ರತಿಭಟನೆ ನಡೆಯುತ್ತಿದೆ. ರಾಜ್ಯದ ಹಲವು ಭಾಗಗಳಿಂದ ಕನ್ನಡಿಗರು ಬೆಳಗಾವಿ ಚಲೋಗೆ ಕೈಜೋಡಿಸಿದ್ದಾರೆ. ಪೀರನವಾಡಿ ಸರ್ಕಲ್‌ಗೆ ರಾಯಣ್ಣ ವೃತ್ತ ಎಂದು ಹೆಸರಿಡಬೇಕೆಂದು ಒತ್ತಾಯಿಸಿದ್ದಾರೆ.

ಸರ್ಕಾರ ಈ ವಿಚಾರದಲ್ಲಿ ಕೂಡಲೇ ಮಧ್ಯಪ್ರವೇಶಿಸಿ ಆದಷ್ಟು ಬೇಗ ಪ್ರತಿಮೆ ನಿರ್ಮಾಣಕ್ಕೆ ಅವಕಾಶ ನೀಡದಿದ್ದಲ್ಲಿ ಪ್ರತಿಭಟನೆಯ ಕಿಚ್ಚು ಜೋರಾಗುವ ಸಂಭವವಿದೆ.


ಇದನ್ನೂ ಓದಿ: ಸಂಗೊಳ್ಳಿ ರಾಯಣ್ಣ ಪ್ರತಿಮೆ ಸ್ಥಾಪನೆಗೆ ಪಟ್ಟು: ಬೆಳಗಾವಿ, ಬೆಂಗಳೂರಿನಲ್ಲಿ ಭಾರೀ ಪ್ರತಿಭಟನೆ

Also Read: BJP: Yes to Savarkar, No to Kitturu Rani Chennamma

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...