HomeಮುಖಪುಟNEET, JEE ಪರೀಕ್ಷೆ ವಿಳಂಬ ವಿದ್ಯಾರ್ಥಿಗಳ ಭವಿಷ್ಯ ಮುಂದೂಡಿದಂತೆ: ಪರೀಕ್ಷೆಗೆ ಒತ್ತಾಯಿಸಿ ಮೋದಿಗೆ ಪತ್ರ

NEET, JEE ಪರೀಕ್ಷೆ ವಿಳಂಬ ವಿದ್ಯಾರ್ಥಿಗಳ ಭವಿಷ್ಯ ಮುಂದೂಡಿದಂತೆ: ಪರೀಕ್ಷೆಗೆ ಒತ್ತಾಯಿಸಿ ಮೋದಿಗೆ ಪತ್ರ

NEET, JEE ಪರೀಕ್ಷೆ ವಿಳಂಬವು ವಿದ್ಯಾರ್ಥಿಗಳ ಭವಿಷ್ಯ ಮುಂದೂಡಿದಂತೆ. ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಸಕಾಲದಲ್ಲಿ ಪರೀಕ್ಷೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

- Advertisement -
- Advertisement -

ಕಳೆದ ಕೆಲವು ತಿಂಗಳುಗಳಿಂದ NEET, JEE ಪ್ರವೇಶ ಪರೀಕ್ಷೆ ಮುಂದೂಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೆಚ್ಚಾಗಿರುವ ಬೆನ್ನಲ್ಲೆ ದೇಶ, ವಿದೇಶದ ವಿವಿಧ ವಿಶ್ವವಿದ್ಯಾಲಯಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದು ಕೂಡಲೇ ಪರೀಕ್ಷೆ ನಡೆಸುವಂತೆ ಒತ್ತಾಯಿಸಿದ್ದಾರೆ.

NEET, JEE ಪರೀಕ್ಷೆ ವಿಳಂಬವು ವಿದ್ಯಾರ್ಥಿಗಳ ಭವಿಷ್ಯ ಮುಂದೂಡಿದಂತೆ. ವಿದ್ಯಾರ್ಥಿಗಳ ಭವಿಷ್ಯದ ವಿಚಾರದಲ್ಲಿ ರಾಜೀ ಮಾಡಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಸಕಾಲದಲ್ಲಿ ಪರೀಕ್ಷೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.

ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳನ್ನು ಮುಂದಿಟ್ಟುಕೊಂಡು ಪರೀಕ್ಷೆ ಮುಂದೂಡುವಂತೆ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಅವರ ಅಜೆಂಡಾ ಹೇರಲು ಪ್ರಯತ್ನಿಸುತ್ತಿದ್ದಾರೆ. ಇದಕ್ಕೆ ಸರ್ಕಾರ ಬಗ್ಗದೇ ಆದಷ್ಟು ಬೇಗ ಪರೀಕ್ಷೆ ನಡೆಸಬೇಕು. ಸಾಂಕ್ರಾಮಿಕ ರೋಗದಿಂದಾಗಿ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಅನಿಶ್ಚತತೆಯ ಕಾರ್ಮೋಡಗಳಿವೆ. ಅವರ ಆತಂಕಗಳನ್ನು ಆದಷ್ಟು ಬೇಗನೆ ಪರಿಹರಿಸಬೇಕಾಗಿದೆ ಎಂದು ತಜ್ಞರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ದೆಹಲಿ ವಿಶ್ವವಿದ್ಯಾನಿಲಯ, ಇಗ್ನೋ, ಲಕ್ನೋ ವಿಶ್ವವಿದ್ಯಾನಿಲಯ, ಜೆಎನ್ ಯು, ಬಿಎಚ್ ಯು, ಐಐಟಿ ದೆಹಲಿ ಮತ್ತು ವಿದೇಶಿ ವಿಶ್ವವಿದ್ಯಾನಿಲಯಗಳಾದ ಲಂಡನ್ ವಿಶ್ವವಿದ್ಯಾನಿಲಯ, ಕ್ಯಾಲಿಪೋರ್ನಿಯಾ ವಿಶ್ವವಿದ್ಯಾನಿಲಯ, ದಿ ಹೀಬ್ರೂ ಯುನಿವರ್ಸಿಟಿ ಆಫ್ ಜೆರುಸಲೆಮ್ ಮತ್ತು ಇಸ್ರೇಲ್ ದೇಶದ ಬೆನ್ ಗುರಿಯನ್ ವಿಶ್ವವಿದ್ಯಾನಿಲಯಗಳ ಶಿಕ್ಷಣ ತಜ್ಞರು ಪತ್ರಕ್ಕೆ ಸಹಿ ಮಾಡಿ ಪರೀಕ್ಷೆ ನಡೆಸಲು ಮನವಿ ಮಾಡಿದ್ದಾರೆ.

ನಿನ್ನೆ ತಾನೇ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ 7 ರಾಜ್ಯಗಳ ಸಿಎಂಗಳ ಸಭೆ ನಡೆದು ಪರೀಕ್ಷೆ ಮುಂದೂಡಲು ಕಾನೂನು ಸಮರಕ್ಕೆ ಪ್ರತಿಪಕ್ಷಗಳು ಸಜ್ಜಾಗಿವೆ. ಇಂದು ರಾಜ್ಯದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕೂಡ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಕೊರೋನಾ ನಡುವೆ ಪರೀಕ್ಷೆ ಬೇಡ, ಪ್ರಧಾನಿಗಳು ಯುವ ವಿದ್ಯಾರ್ಥಿಗಳ ಬಗ್ಗೆ ಸೂಕ್ಷ್ಮತೆ ಹೊಂದಬೇಕು ಮತ್ತು ಪರೀಕ್ಷೆ ಮುಂದೂಡಬೇಕು ಎಂದು ಟ್ವೀಟ್ ಮಾಡಿದ್ದಾರೆ.

ಇತ್ತ ಸರ್ಕಾರ ಪರೀಕ್ಷೆಗಳನ್ನು ಮುಂದೂಡಿ ವಿದ್ಯಾರ್ಥಿಗಳ ಶೈಕ್ಷಣಿಕ ವರ್ಷವನ್ನು ವ್ಯರ್ಥ ಮಾಡಲು ಸಾದ್ಯವಿಲ್ಲ, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಪತ್ರತಿಪಕ್ಷಗಳು ಆಟವಾಡುತ್ತಿವೆ. ಯುವಜನತೆಯ ಭವಿಷ್ಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಪರೀಕ್ಷೆ ನಡೆಸಿಯೇ ನಡೆಸುತ್ತೆವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಇಷ್ಟೊಂದು ಚರ್ಚೆ, ಪ್ರತಿಭಟನೆಗಳು, ರಾಜಕೀಯ ಕೆಸರೆರಚಾಟದ ಮಧ್ಯೆಯೇ ನಿನ್ನೆ NTA ಬಿಡುಗಡೆ ಮಾಡಿರುವ ನೀಟ್ ಮತ್ತು JEE ಪರೀಕ್ಷೆಯ ಪ್ರವೇಶ ಪತ್ರಗಳನ್ನು ಈಗಾಗಲೇ 14 ಲಕ್ಷಕ್ಕೂ ಅಧಿಕ ಮಂದಿ ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಸೆಪ್ಟೆಂಬರ್ 13ಕ್ಕೆ ನೀಟ್ ಪರೀಕ್ಷೆ ಮತ್ತು ಸೆಪ್ಟೆಂಬರ್ 1ರಿಂದ 6ರವರೆಗೆ ಜೆಇಇ ಪರೀಕ್ಷೆಗಳು ನಡೆಯಲಿವೆ.


ಇದನ್ನೂ ಓದಿ: ನೀಟ್, ಜೆಇಇ ಪರೀಕ್ಷೆ: ವಿದ್ಯಾರ್ಥಿಗಳ ಬಗ್ಗೆ ಕೇಂದ್ರಕ್ಕೆ ಕಾಳಜಿಯಿಲ್ಲ ಎಂದ ಸೋನಿಯಾ ಗಾಂಧಿ

Also Read: DU Online Exams: Servers Crash, Chaos and Nightmare for Students

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...