Homeಕರೋನಾ ತಲ್ಲಣರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

ರೋಗಲಕ್ಷಣಗಳು ಇರುವವರು, ಇಲ್ಲದವರು ಕೊರೊನಾ ಪರೀಕ್ಷೆ ಮಾಡಿಸಬೇಕೆ, ಬೇಡವೇ?

- Advertisement -
- Advertisement -

ಚೀನಾದಲ್ಲಿ ಹುಟ್ಟಿಕೊಂಡಿತು ಎನ್ನಲಾಗಿರುವ ಕೊರೊನಾ ವೈರಸ್ ವಿಶ್ವದಾದ್ಯಂತ ಆವರಿಸಿ ಸರ್ವರನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಕೊರೊನಾ ಹೊಡೆತದಿಂದ ವಿಶ್ವವನ್ನು ಹೊರತರಬೇಕು ಎಂದು ಹಲವಾರು ವಿಜ್ಞಾನಿಗಳು ಅದಕ್ಕೆ ಲಸಿಕೆ ಕಂಡುಹಿಡಿಯುವ ಸ್ಫರ್ಧೆಗೆ ಇಳಿದಿದ್ದಾರೆ.

ಭಾರತದಂತಹ ಜನಸಾಂದ್ರತೆ ಹೊಂದಿರುವ ದೇಶದಲ್ಲಿ ವಿಶ್ವದ ಅತೀ ದೀರ್ಘವಾದ ಲಾಕ್‌ಡೌನ್ ಹಾಕಿದ ಪರಿಣಾಮ ದೇಶದ ಕೋಟ್ಯಾಂತರ ಜನರು ದೇಶದ ಹೆದ್ದಾರಿಗಳಲ್ಲಿ ರಕ್ತದ ಮೆರವಣಿಗೆ ನಡೆಸಿದರು. ಅಂದು ಹೇರಲ್ಪಟ್ಟ ಲಾಕ್‌ಡೌನ್ ಇನ್ನೂ ಸಹ ಸಂಪೂರ್ಣವಾಗಿ ತೆರವುಗೊಂಡಿಲ್ಲ. ಆದರೆ ಇಂತಹ ಸಂದರ್ಭದಲ್ಲಿ ಜನ ಸಾಮಾನ್ಯರೂ ನೂರಾರು ಗೊಂದಲಗಳಲ್ಲಿ ಸಿಕ್ಕಿ ನಲುಗುತ್ತಿದ್ದಾರೆ. ಈ ಗೊಂದಲ ನಿವಾರಿಸಲು ಸರ್ಕಾರ ಮಾಡಿದ್ದೇನು? ಧೀರ್ಘ ಅವಧಿಯ ಲಾಕ್‌ಡೌನ್ ಘೊಷಿಸುವ ಸಂಧರ್ಭದಲ್ಲೇ ಮುಂದಾಲೋಚನೆ ಮಾಡದ ಸರ್ಕಾರ ಈಗ ಮಾಡುತ್ತದೆಯೇ? ಉತ್ತರ ಶೂನ್ಯ.

ದಿಲ್ಲಿ ಮತ್ತು ನೊಯಿಡಾದಿಂ ಉತ್ತರ ಪ್ರದೇಶ ಮತ್ತಿತರ ರಾಜ್ಯಗಳಿಗೆ ಕಾಲ್ನಡಿಗೆಯಲ್ಲಿ ಹೋಗುತ್ತಿರುವ ವಲಸೆ ಕಾರ್ಮಿಕರ ಕುರಿತು ಕಲಾವಿದೆ ಲಬಾನಿ ಜಾಂಗಿ ಅವರ ವರ್ಣಚಿತ್ರ

ದೇಶದಲ್ಲಿ ಕೊರೊನಾ ಪ್ರಾರಂಭವಾಗಿ 7 ತಿಂಗಳಾದರೂ ಸರ್ಕಾರದಿಂದ ಏರ್ಪಟ್ಟ ಗೊಂದಲಗಳು ಇನ್ನೂ ಬಗೆಹರಿದಿಲ್ಲ. ಸರ್ಕಾರಗಳೇ ಗೊಂದಲ ಉಂಟುಮಾಡಿದರೆ ಅದರಿಂದ ಕಷ್ಟಪಡುವುದು ಸಾಮಾನ್ಯ ಜನರು. ಈಗಾಗಲೆ ಜನರು ಖಾಸಗಿ ಆಸ್ಪತ್ರೆಗಳಲ್ಲಿ ಸುಲಿಗೆಗೆ ಒಳಗಾಗಿದ್ದಾರೆ. ಇನ್ನೊಂದು ಕಡೆ ಸರ್ಕಾರಿ ಆಸ್ಪತ್ರೆಯ ವೈದ್ಯರು ಒತ್ತಡದಲ್ಲಿ ಸಿಲುಕಿದ್ದಾರೆ. ಈ ವೈದ್ಯರಿಗೆ, ಕೊರೊನಾ ನೋಡಲ್ ಅಧಿಕಾರಿಗಳಿಗೆ ಸರ್ಕಾರವೆ ದಿನಕ್ಕೆ ಇಂತಿಷ್ಟು ಕೊರೊನಾ ಪರೀಕ್ಷಗಳನ್ನು ನಡೆಸಿ ಎಂದು ಟಾರ್ಗೆಟ್ ಕೊಡುತ್ತಿದೆ. ಏಕೆ ಟಾರ್ಗೆಟ್? ಇದರಿಂದ ಏನು ಪ್ರಯೋಜನ ಎಂದು ಮಾತ್ರ ಸರ್ಕಾರ ಹೇಳುತ್ತಿಲ್ಲ.

ಇದನ್ನೂ ಓದಿ: 6ನೇ ತರಗತಿ ‘ವೇದ ಕಾಲದ ಸಂಸ್ಕೃತಿ’ ಪಾಠ ಮಾಡದಂತೆ ಶಿಕ್ಷಣ ಸಚಿವರ ಆದೇಶ: ಅಂಥದ್ದೇನಿದೆ ಪಾಠದಲ್ಲಿ?

ಕಳೆದ ವಾರವಷ್ಟೆ ಮೈಸೂರಿನ ಸರ್ಕಾರಿ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಸಾವಿಗೆ ಕಾರಣ ’ಕೊರೊನಾ ಟೆಸ್ಟ್ ಟಾರ್ಗೆಟ್’ ಕೊಡುತ್ತಿದ್ದದ್ದೇ ಎಂದು ಅವರ ಕುಟುಂಬ ಸದಸ್ಯರು ದೂರಿದ್ದಾರೆ. ಇದರಲ್ಲೂ ಹುರುಳಿಲ್ಲದಿಲ್ಲ. ರ್‍ಯಾಪಿಡ್ ಟೆಸ್ಟ್, ಆರ್‌‌‌ಟಿ ಪಿಸಿಆರ್ ಟೆಸ್ಟ್‌‌ಗಳು ಎಂದೆಲ್ಲ ಹಲವಾರು ಟೆಸ್ಟ್‌ಗಳನ್ನು ಸರ್ಕಾರ ಟಾರ್ಗೆಟ್ ಕೊಟ್ಟು ಮಾಡಿಸುತ್ತಿದೆ. ಹೆಚ್ಚಿನ ವೈದ್ಯರು ರೋಗ ಲಕ್ಷಣಗಳಿದ್ದರಷ್ಟೆ ಆಸ್ಪತ್ರೆಗೆ ಹೋಗಿ, ಬೇಕಾಬಿಟ್ಟಿ ಟೆಸ್ಟ್‌ಗಳು ಅಗತ್ಯವಿಲ್ಲ ಎಂದು ಹೇಳುತ್ತಿದ್ದರೂ, ಸರ್ಕಾರ ಮಾತ್ರ ಜಿದ್ದಿಗೆ ಬಿದ್ದು ಇಂತಿಷ್ಟು ಟೆಸ್ಟ್‌ಗಳು ಆಗಲೆಬೇಕು ಎಂದು ಹಠ ಹಿಡಿದಿದೆ.

ಮೈಸೂರಿನ ವೈದ್ಯ ಡಾ. ನಾಗೇಂದ್ರ

ಈ ಟೆಸ್ಟ್ ಟಾರ್ಗೆಟ್ ಹಿಂದೆ ಭ್ರಷ್ಟಾಚಾರದ ವಾಸನೆಯಿದೆ ಎಂಬ ದೊಡ್ಡ ಆರೋಪ ಕೇಳಿಬಂದಿದೆ. ಇಲ್ಲದಿದ್ದರೆ ಯಾವುದೇ ರೋಗ ಲಕ್ಷಣಗಳು ಇಲ್ಲದೆ ಇರುವವರನ್ನು ತಂದು ಪರೀಕ್ಷೆ ಮಾಡುವ ಜರೂರತ್ತಾದರೂ ಏನು?  ಬೆಂಗಳೂರಿನಲ್ಲಿ ಸಾಮಾನ್ಯವಾಗಿರು ದೃಶ್ಯವೆಂದರೆ ಬೀದಿ ಬೀದಿಯಲ್ಲಿ ಪರೀಕ್ಷಾ ಮಾದರಿ ಸಂಗ್ರಹಿಸಿವ ಟೆಂಟ್ ಹಾಕಿ ಹಾದಿ ಬೀದಿಯಲ್ಲಿ ಹೋಗುವವರನ್ನು ಕರೆದು, ಮನೆ ಮನೆ ತೆರಳಿ “ಉಚಿತ ಟೆಸ್ಟ್ ಮಾಡಿಸಿಕೊಳ್ಳಿ” ಎನ್ನುವುದರಲ್ಲಿ ಯಾರ ಹಿತಾಸಕ್ತಿ ಅಡಗಿದೆ? ಒಟ್ಟಿನಲ್ಲಿ ಲಕ್ಷಗಟ್ಟಲೇ ಟೆಸ್ಟ್‌ ಕಿಟ್‌ಗಳನ್ನು ತರಿಸುವ, ಅದರಲ್ಲಿ ಕಿಕ್‌ ಬ್ಯಾಕ್ ಪಡೆಯುವ ಉದ್ದೇಶ ಬಿಟ್ಟರೆ ಇದರಲ್ಲಿ ಬೇರೇನಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಸಾಮಾನ್ಯ ಜನರು ಕೊರೊನಾ ಪರೀಕ್ಷೆ ಮಾಡಿಸಬೇಕೆ? ಬೇಡವೇ? ರೋಗ ಲಕ್ಷಣಗಳಿರುವವರ ಮಾತ್ರ ಮಾಡಿಸಿದರೆ ಸಾಕೇ ಇತ್ಯಾದಿ ಗೊಂದಲಗಳು ಸಾರ್ವಜನಿಕರಲ್ಲಿ ಮೂಡಿವೆ. ಒಂದು ಕಡೆ ಸರ್ಕಾರದ ಟಾರ್ಗೆಟ್, ಇನ್ನೊಂದು ಕಡೆ ಸೋಂಕು ಇಲ್ಲದಿದ್ದರೂ ಪರೀಕ್ಷಾ ತಪ್ಪಿನಿಂದಾಗಿ ಪಾಸಿಟಿವ್ ಬಂದುಬಿಡಬಹುದೆಂಬ ಭಯ ಜನರನ್ನು ಕಾಡುತ್ತಿದೆ.

ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಕಮೀಷನರ್ ಮಂಜುನಾಥ್ ಪ್ರಸಾದ್‌ರವರನ್ನು ನಾನುಗೌರಿ.ಕಾಂ ಮಾತನಾಡಿಸಿತು. ಅವರು “ರ್‍ಯಾಪಿಡ್‌ ಟೆಸ್ಟ್‌ ಎಲ್ಲರಿಗೂ ಮಾಡುವುದಿಲ್ಲ. ಕೊರೊನಾ ರೋಗಿಗಳ ಪ್ರಾಥಮಿಕ ಸಂಪರ್ಕ, ದ್ವಿತೀಯ ಸಂಪರ್ಕ ಹೊಂದಿರುವವರಿಗೆ, ಕಂಟೈನ್‌ಮೆಂಟ್ ಪ್ರದೇಶದಲ್ಲಿವವರಿಗೆ, SARI (ತೀವ್ರವಾದ ಉಸಿರಾಟದ ಸೋಂಕು) ಇರುವವರಿಗೆ, ವೈದ್ಯರು ಶಿಫಾರಸ್ಸು ಮಾಡಿದವರಿಗೆ ಮಾತ್ರ ಪರೀಕ್ಷೆ ಮಾಡುತ್ತೇವೆ. ಅದು ಬಿಟ್ಟು ಸಿಕ್ಕಸಿಕ್ಕವರನ್ನು ತಂದು ಪರೀಕ್ಷೆ ಮಾಡಿದರೆ, ಟೆಸ್ಟ್‌ ಕಿಟ್‌ಗಳು ವ್ಯರ್ಥವಾಗುತ್ತವೆ ಅಷ್ಟೇ. ಅದರಿಂದ ಏನೂ ಪ್ರಯೋಜನವಿಲ್ಲ” ಎಂದಿದ್ದಾರೆ.

ಬಿಬಿಎಂಪಿ ಆಯುಕ್ತ ಎನ್‌. ಮಂಜುನಾಥ್ ಪ್ರಸಾದ್‌

ಬೆಂಗಳೂರಿನಲ್ಲಿ ಮನೆಮನೆಗೆ ಹೋಗಿ ’ಫ್ರೀ ಟೆಸ್ಟ್ ಮಾಡಿಸಿ’ ಎಂಬ ಅಭಿಯಾನ ನಡೆಯುತ್ತಿರುವುದರ ಬಗ್ಗೆ ಆಯುಕ್ತರ ಗಮನಕ್ಕೆ ತಂದಾಗ, “ಮನೆಮನೆ ಸರ್ವೆ ಮಾಡುತ್ತಿರುವಾಗ ಯಾರಿಗಾದರು SARI ಲಕ್ಷಣಗಳು ಕಂಡು ಬಂದರೆ, ಕೊಮೋರ್ಬಿಡ್ ಇದ್ದರೆ ಅಂತವರಿಗೆ ಟೆಸ್ಟ್ ಮಾಡಿಸುವುದು ಒಳ್ಳಯದೆ ಮತ್ತು ಅಂತವರಿಗೆ ಮಾತ್ರ ಟೆಸ್ಟ್ ಮಾಡಿಸುತ್ತಿದ್ದೇವೆ” ಎಂದರು.

ಇದನ್ನೂ ಓದಿ: NEET, JEE ಪರೀಕ್ಷೆ ವಿಳಂಬ ವಿದ್ಯಾರ್ಥಿಗಳ ಭವಿಷ್ಯ ಮುಂದೂಡಿದಂತೆ: ಪರೀಕ್ಷೆಗೆ ಒತ್ತಾಯಿಸಿ ಮೋದಿಗೆ ಪತ್ರ

ಈ ಬಗ್ಗೆ ಮಾತನಾಡಿದ ಖ್ಯಾತ ವೈದ್ಯ ಡಾ. ಶ್ರೀನಿವಾಸ ಕಕ್ಕಿಲ್ಲಾಯ, “ಸೋಂಕಿನ ಗುಣಲಕ್ಷಣ ಹೊಂದಿರುವವರು ಮನೆಯಲ್ಲೇ ಇರಿ ಎಂದು ಸರ್ಕಾರವೆ ಹೇಳುತ್ತಿದೆ. ಅಂದರೆ ಇದರ ಉದ್ದೇಶ ಇದಕ್ಕೆ ಪರೀಕ್ಷೆಯು ಬೇಕಾಗಿಲ್ಲ ಎಂದಲ್ಲವೆ?. ಆದರೆ ಮನೆಯಲ್ಲೆ ಇರಲು ಹೇಳುವ ಸರ್ಕಾರ ಮತ್ತೊಂದೆಡೆ ಟೆಸ್ಟ್‌ ಮಾಡಿಸಲು ಹೇಳುತ್ತಿದೆ. ಸರ್ಕಾರಕ್ಕೆ ಕಾಯಿಲೆಯನ್ನು ನಿಯಂತ್ರಿಸುವ ಆಸಕ್ತಿ ಇದ್ದರೆ ಜನರನ್ನು ಮನೆಯಲ್ಲೇ ಇದ್ದು, ಅಲ್ಲಿಂದಲೆ ಆರೋಗ್ಯದ ಮಾಹಿತಿಯನ್ನು ನೀಡಲು ಕೇಳಬಹುದಿತ್ತು. ಆದರೆ ಅದನ್ನು ಸರ್ಕಾರ ಮಾಡುತ್ತಿಲ್ಲ. ಅದಲ್ಲದೆ ಎಲ್ಲರಿಗೂ ಪರೀಕ್ಷೆಗಳು ನಡೆಸಿದರೆ ಕೋಟ್ಯಾಂತರ ರೂಪಾಯಿಗಳು ಬೇಕಾಗುತ್ತದೆ. ಖಜಾನೆಯಲ್ಲಿ ಹಣವಿಲ್ಲ ಎಂದು ಹೇಳುವ ಸರ್ಕಾರಕ್ಕೆ ಸ್ಪಷ್ಟ ಯೋಜನೆಯಿಲ್ಲ” ಎಂದು ಹೇಳಿದರು.

ಡಾ. ಶ್ರೀನಿವಾಸ ಕಕ್ಕಿಲ್ಲಾಯ

“ನಿಜವಾಗಿಯೂ ಕೊರೊನಾ ಪರೀಕ್ಷೆಗಳನ್ನು ನಡೆಸುವುದರಿಂದ ಯಾವುದೇ ಪ್ರಯೋಜನವಿಲ್ಲ. ಯಾರಿಗೆ ಕೊರೊನಾ ಲಕ್ಷಣಗಳಿವೆಯೋ ಅವರು ಸಹ ಪರೀಕ್ಷೆ ಮಾಡಿಸಬೇಕಾಗದ ಅಗತ್ಯವಿಲ್ಲ. ಅವರು ಮನೆಯಲ್ಲೇ ಐಸೋಲೇಷನ್‌ಗೆ ಒಳಗಾದರೆ ಯಾವುದೇ ಸಮಸ್ಯೆ ಆಗುವುದಿಲ್ಲ, ಮಕ್ಕಳು, ವೃದ್ದರು ಮತ್ತು ಇತರ ರೋಗಗಳಿಂದ ಬಳಲುತ್ತಿರುವವರನ್ನು ಹೊರತುಪಡಿಸಿದರೆ ಉಳಿದ ಬಹುತೇಕ ಜನರಿಗೆ ಚಿಕಿತ್ಸೆಯ ಅಗತ್ಯವು ಇರುವುದಿಲ್ಲ. ನಿಮ್ಮ ರಕ್ತದಲ್ಲಿರುವ ಆಮ್ಲಜನಕದ ಪ್ರಮಾಣವನ್ನು ಪರೀಕ್ಷಿಸುತ್ತಾ ಅದರಲ್ಲಿ 95% ಕ್ಕಿಂತ ಕಡಿಮೆ ಬಂದರೆ ಮಾತ್ರ ಆಸ್ಪತ್ರೆಗಳಿಗೆ ಹೋಗಬೇಕು” ಎಂದು ಡಾ. ಕಕ್ಕಿಲ್ಲಾಯ ಮಾಹಿತಿ ನೀಡಿದರು.

ಗುಣಮಟ್ಟ ಸರಿಯಾಗಿಲ್ಲ ಎಂದು ಹೇಳುತ್ತಾ ಸರ್ಕಾರಿ ಆಸ್ಪತ್ರೆಗಳಿಗೆ ಹೋಗಲು ಭಯಪಡುತ್ತಿದ್ದ ಜನರು ಇತ್ತ ಲಕ್ಷಗಟ್ಟಲೆ ದುಡ್ಡು ತೆತ್ತು ಖಾಸಗಿ ಆಸ್ಪತ್ರೆಗಳಿಗೂ ಹೋಗಲು ಹೆದರುತ್ತಿದ್ದಾರೆ. ಸರ್ಕಾರ ಕೂಡಾ ದಿನಕ್ಕೊಂದು ಕೊರೊನಾ ಮಾರ್ಗಸೂಚಿಗಳನ್ನು ಹೊರಡಿಸುತ್ತಾ ಜನರನ್ನು ಮತ್ತಷ್ಟು ಗೊಂದಲಕ್ಕೆ ದೂಡುತ್ತಿದೆ. ಮಾಸ್ಕ್‌ ಕಡ್ಡಾಯದ ವಿಚಾರದಲ್ಲಾಗಲಿ, ಸೀಲ್‌ಡೌನ್‌ ಮಾಡಬೇಕೇ, ಬೇಡವೇ ಎನ್ನುವ ವಿಚಾರದಲ್ಲಾಗಲಿ ಸರ್ಕಾರಕ್ಕೆ ಇನ್ನೂ ಸಹ ಸರಿಯಾದ ನಿರ್ಧಾರಕ್ಕೆ ಬರಲಾಗಿಲ್ಲ.


ಇದನ್ನೂ ಓದಿ: ವೀರ ಹೋರಾಟಗಾರ ’ಮೈಸೂರು ಹುಲಿ’ ಟಿಪ್ಪು ಸುಲ್ತಾನ್ ಈ ನೆಲದ ಮಗ: ಬಿಜೆಪಿ ನಾಯಕ ವಿಶ್ವನಾಥ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...