Homeಕರ್ನಾಟಕ6ನೇ ತರಗತಿ 'ವೇದ ಕಾಲದ ಸಂಸ್ಕೃತಿ' ಪಾಠ ಮಾಡದಂತೆ ಶಿಕ್ಷಣ ಸಚಿವರ ಆದೇಶ: ಅಂಥದ್ದೇನಿದೆ ಪಾಠದಲ್ಲಿ?

6ನೇ ತರಗತಿ ‘ವೇದ ಕಾಲದ ಸಂಸ್ಕೃತಿ’ ಪಾಠ ಮಾಡದಂತೆ ಶಿಕ್ಷಣ ಸಚಿವರ ಆದೇಶ: ಅಂಥದ್ದೇನಿದೆ ಪಾಠದಲ್ಲಿ?

ಪಠ್ಯಪುಸ್ತಕ ಈಗಾಗಲೇ ಮುದ್ರಣಗೊಂಡು ವಿದ್ಯಾರ್ಥಿಗಳ ಕೈಸೇರಿರುವುದರಿಂದ ವಿವಾದಿತ ಪಾಠವನ್ನು ತೆಗೆಯಲು ಸಾಧ್ಯವಿಲ್ಲ. ಹಾಗಾಗಿ ಈ ಪಾಠವನ್ನು ಮಾಡದಿರುವಂತೆ ಶಿಕ್ಷಕರಿಗೆ ಆದೇಶ ಹೊರಡಿಸುತ್ತೇನೆ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

- Advertisement -
- Advertisement -

ಆರನೇ ತರಗತಿ ಸಮಾಜವಿಜ್ಞಾನ ಪಠ್ಯಪುಸ್ತಕದ ಭಾಗವಾಗಿರುವ ವೇದ ಕಾಲದ ಸಂಸ್ಕೃತಿ ಕುರಿತು ಪಾಠ ಮಾಡದಂತೆ ಶಿಕ್ಷಕರಿಗೆ ಆದೇಶ ಹೊರಡಿಸುವುದಾಗಿ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಹೇಳಿದ್ದಾರೆ.

ಪಠ್ಯದಲ್ಲಿರುವ ವೇದ ಕಾಲದ ಯಜ್ಞದ ಕುರಿತ ಮಾಹಿತಿ ತಪ್ಪು ಎಂಬ ಅಭಿಪ್ರಾಯದಲ್ಲಿ ಉಡುಪಿಯ ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾದ ಚರ್ಚೆಯೂ ನಡೆದಿತ್ತು. ಹಾಗಾಗಿ ಈ ಪಠ್ಯದಲ್ಲಿ ಹಿಂದೂ ಧಾರ್ಮಿಕ ನಂಬಿಕೆಗೆ ಧಕ್ಕೆಯಾಗಿರುವ ಅಂಶಗಳಿವೆ ಎಂಬ ಆಕ್ಷೇಪದ ಹಿನ್ನೆಲೆಯಲ್ಲಿ ಆ ಪಾಠವನ್ನು ಕೈಬಿಡಲು ಸಚಿವ ಸುರೇಶ್ ಕುಮಾರ್ ಆದೇಶ ನೀಡುವುದಾಗಿ ಹೇಳಿದ್ದಾರೆಂದು ಡೆಕ್ಕನ್ ಹೆರಾಲ್ಡ್ ಸೇರಿದಂತೆ ಹಲವು ಪತ್ರಿಕೆಗಳು ವರದಿ ಮಾಡಿವೆ.

ಉತ್ತರ ವೇದಗಳ ಕಾಲ

“ಉತ್ತರ ವೇದಗಳ ಕಾಲದಲ್ಲಿ, ಧಾರ್ಮಿಕ ಆಚರಣೆಗಳು ಸಂಕೀರ್ಣವೂ, ಕಠಿಣವೂ ಆದವು. ಯಾಗಯಜ್ಞಗಳ ಆಚರಣೆ ತೀವ್ರವಾಯಿತು. ಹವಿಸ್ಸಿನ ಹೆಸರಿನಲ್ಲಿ ಹಾಲು, ತುಪ್ಪ, ಧಾನ್ಯಗಳನ್ನು ಬೆಂಕಿಗೆ ಅರ್ಪಿಸುವುದು ಹೆಚ್ಚಾದಂತೆ ಆಹಾರದ ಬಿಕ್ಕಟ್ಟು ಉಲ್ಬಣಿಸಿತು. ಬ್ರಹ್ಮ, ವಿಷ್ಣು ಮತ್ತು ಶಿವ ಪ್ರಭಾವಿ ದೇವರುಗಳಾದರು. ಜೊತೆಗೆ ಲಕ್ಷ್ಮಿ, ಸರಸ್ವತಿ, ಪಾರ್ವತಿ, ಗಣೇಶ, ಸ್ಕಂದ ಮೊದಲಾದ ಪರಿವಾರ ದೇವ-ದೇವತೆಗಳು ಪ್ರಾಮುಖ್ಯತೆಗೆ ಬಂದವು” ಎಂದು 6ನೇ ತರಗತಿಯ ಸಮಾಜ ವಿಜ್ಞಾನ ಪುಸ್ತಕದ, ಇತಿಹಾಸದ 5ನೇ ಪಾಠದಲ್ಲಿ ಉಲ್ಲೇಖವಾಗಿದೆ.

ಈ ಮಾಹಿತಿ ತಪ್ಪಾಗಿದ್ದು, ಜೊತೆಗೆ ಇದು ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆಯನ್ನುಂಟುಮಾಡುತ್ತವೆ ಎಂದು ಅದಮಾರು ಮಠದ ಸ್ವಾಮೀಜಿ ಹೇಳಿದ್ದರು.

ಈ ಪಠ್ಯಪುಸ್ತಕವು ಹಳೆಯದಾಗಿದ್ದು, ನಾವು ಈ ವರ್ಷ ಇದನ್ನು ಪರಿಷ್ಕರಿಸಿಲ್ಲ. ಈ ಪಾಠವನ್ನು ಮಾಡದಿರುವಂತೆ ಶಿಕ್ಷಕರಿಗೆ ಆದೇಶ ನೀಡುತ್ತೇನೆ. ಅದಾಗ್ಯೂ ಈಗಾಗಲೇ ಈ ಪುಸ್ತಕ ಮುದ್ರಣಗೊಂಡು ಎಲ್ಲಾ ಮಕ್ಕಳಿಗೂ ತಲುಪಿರುವುದರಿಂದ ಈ ವರ್ಷ ಈ ಅಂಶವನ್ನು ಪಠ್ಯದಿಂದ ತೆಗೆಯಲು ಸಾಧ್ಯವಿಲ್ಲ ಎಂದು ವಿಷಾದಿಸುತ್ತೇನೆ” ಎಂದು ಶಿಕ್ಷಣ ಸಚಿವರು ಹೇಳಿದ್ದಾರೆ.

ಈ ಕುರಿತು ವಿವಾದ ಭುಗಿಲೆದ್ದ ಹಿನ್ನೆಲೆಯಲ್ಲಿ ನಾನುಗೌರಿ.ಕಾಂ ಪ್ರಾಧ್ಯಾಪಕರೊಬ್ಬರನ್ನು (ಹೆಸರು ಹೇಳಲಿಚ್ಚಿಸದ) ಮಾತನಾಡಿಸಿತು. “ಯಜ್ಞ,ಯಾಗ, ವೇದಗಳ ಕುರಿತು ನೀಡಿರುವ ಮಾಹಿತಿಯಲ್ಲಿ ತಪ್ಪು ಎಲ್ಲಿಯೂ ಇಲ್ಲ. ವೈದಿಕ ಸಾಹಿತ್ಯಗಳಾದ ವೇದ, ಉಪನಿಷತ್ತುಗಳು, ಅರಣ್ಯಕಗಳು, ಬ್ರಾಹ್ಮಣಕಗಳು, ಪುರಾಣಗಳು, ಶತಪಥ ಬ್ರಾಹ್ಮಣ ಮುಂತಾದವುಗಳಲ್ಲಿ ಈ ಯಜ್ಞಗಳ ಕುರಿತು ಉಲ್ಲೇಖವಿದೆ” ಎಂದು ಹೇಳಿದರು.

“ಯಜ್ಞಗಳಲ್ಲಿ ಬಲಿ ಕೊಡುವುದು, ಧಾನ್ಯಗಳು, ಹಾಲು, ತುಪ್ಪ, ವಸ್ತ್ರಗಳನ್ನೂ ಅಗ್ನಿಗೆ ಅರ್ಪಿಸುವುದು ವೇದೋತ್ತರ ಕಾಲದಲ್ಲಿ ಸರ್ವೇ ಸಾಮಾನ್ಯವಾಗಿತ್ತು. ಆದರೆ ಇದರಿಂದ ಆಹಾರ ಬಿಕ್ಕಟ್ಟು ಹೆಚ್ಚಾಯಿತು ಎನ್ನುವುದು ಸ್ವಲ್ಪ ಅತಿರೇಕವೆನಿಸಿದರೂ ಆಶ್ಚರ್ಯವಿಲ್ಲ. ಏಕೆಂದರೆ, ಆಗ ಯಜ್ಞಗಳನ್ನು ಮಾಡಿಸುತ್ತಿದ್ದವರು ರಾಜರು (ಕ್ಷತ್ರಿಯರು). ಕೆಲವೊಮ್ಮೆ ತಿಂಗಳುಗಟ್ಟಲೆ ಯಾಗಗಳು ನಡೆಯುತ್ತಿದ್ದವು. ಅಷ್ಟೂ ದಿನಗಳವರೆಗೆ ಯಜ್ಞಕುಂಡದಲ್ಲಿ ಬೆಂಕಿ ಆರದಿರಲು ಧವಸ, ಧಾನ್ಯ, ಹಾಲು, ತುಪ್ಪ, ಬಟ್ಟೆಗಳನ್ನು ಹಾಕುತ್ತಲೇ ಇರಬೇಕಿತ್ತು. ಹಾಗಾಗಿ ಆಹಾರದ ತೊಂದರೆಯೂ ಆಗಿರಬುಹುದು” ಎಂದು ಅವರು ಅಭಿಪ್ರಾಯಪಟ್ಟರು.

‘ತಮ್ಮ ಧರ್ಮಕ್ಕೆ ಧಕ್ಕೆಯಾಗುತ್ತದೆ ಎಂದ ಮಾತ್ರಕ್ಕೆ ಸತ್ಯವನ್ನು ಮುಚ್ಚಿಡಲು ಸಾಧ್ಯವಿಲ್ಲ. ಬಲಿ ಮತ್ತು ಮಾಂಸಾಹಾರ ಸೇವನೆಯ ಕುರಿತು ನಮಗೆ ಲಭ್ಯವಿರುವ, ಸಂಸ್ಕೃತ ಭಾಷೆಯಲ್ಲಿಯೇ ಇರುವ ವೈದಿಕ ಸಾಹಿತ್ಯದಲ್ಲಿ ಮಾಹಿತಿ ದೊರೆಯುತ್ತದೆ. ಹಾಗಾಗಿ ಈಗ ಈ ಪಾಠವನ್ನು ಕೈಬಿಡುತ್ತಿರುವ ಉದ್ದೇಶ ಸ್ಪಷ್ಟವಾಗಿದೆ. ಇದರಿಂದ ಮಕ್ಕಳಿಗೆ ನೀಡಬೇಕಾಗಿರುವ ವೈಚಾರಿಕ ಪ್ರಜ್ಞೆಯನ್ನು ಮೊಟಕುಗೊಳಿಸಿದಂತಾಗುತ್ತದೆ’ ಎಂದು ಗುರುರಾಜ್ ಬೇಡೇಕಾರ್‌ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ನೆಹರೂ-ಶಾಸ್ತ್ರಿಗೆ ಸಂಬಂಧಿಸಿದ ವಿಷಯಗಳನ್ನು ಪಠ್ಯಕ್ರಮದಿಂದ ಕೈಬಿಟ್ಟ ಯುಪಿ ಸರ್ಕಾರ

ಭಾರತೀಯ ಸಮಾಜಶಾಸ್ತ್ರ ಸಂಘದ ಅಧ್ಯಕ್ಷರು ಮತ್ತು ನಿವೃತ್ತ ಸಮಾಜಶಾಸ್ತ್ರ ಪ್ರಾಧ್ಯಾಪಕರಾದ ಆರ್.ಇಂದಿರಾರವರು ಮಾತನಾಡಿ ‘ಯಾವುದೋ ಒಂದು ಒಳ್ಳೆಯ ಅಥವಾ ಕೆಟ್ಟ ಆಚರಣೆ/ವಿಷಯದ ಬಗ್ಗೆ ಸಂಕ್ಷಿಪ್ತ ವಿವರವನ್ನು ಮಾತ್ರ ನೀಡಲಾಗುತ್ತಿದೆ. ಹಾಗಾಗಿ ಇದರಲ್ಲಿ ಸರಿ-ತಪ್ಪುಗಳನ್ನು ಹುಡುಕುವ ಪ್ರಮೇಯವೇ ಇಲ್ಲ. ಯಾವುದೇ ವಿಷಯದ ಬಗ್ಗೆ ಸಮಗ್ರ ಕಲಿಕೆ ಆಗಬೇಕು. ಅದರಲ್ಲೂ ಸಮಾಜವನ್ನು ಒಟ್ಟುಗೂಡಿಸುವ, ಸಕಾರಾತ್ಮಕ ಮನೋಭಾವ ಬೆಳೆಸುವ ವಿಷಗಳ ಕಲಿಕೆ ಆಗಬೇಕು’ ಎಂದಿದ್ದಾರೆ.

‘ಅದಾಗ್ಯೂ, ಯಜ್ಞ-ಯಾಗಗಳಿಗೆ ಧವಸ, ಧಾನ್ಯ, ಹಾಲು, ತುಪ್ಪ ಇತ್ಯಾದಿಗಳನ್ನು ಹಾಕಿ ವಿನಾಕಾರಣ ವ್ಯಯಿಸುವುದು ನಿಜಕ್ಕೂ ಖಂಡನೀಯ. ಇಂತಹ ಅಪವ್ಯಯ ವೇದಗಳ ಕಾಲದಲ್ಲಿ ಮಾತ್ರವಲ್ಲ, ಈಗಲೂ ನಡೆಯುತ್ತಿದೆ. ಎಷ್ಟೋ ಜನ ಹಸಿವಿನಿಂದ ಸಾಯುತ್ತಿರುವಾಗ ಧಾನ್ಯಗಳನ್ನು ಬೆಂಕಿಗೆ ಹಾಕುವುದು, ಎಷ್ಟೋ ಜನರಿಗೆ ಮಾನ ಮುಚ್ಚಿಕೊಳ್ಳಲೂ ತುಂಡುಬಟ್ಟೆಯಿಲ್ಲದಿರುವಾಗ ಒಳ್ಳೆಯ ಬಟ್ಟೆಗಳನ್ನು ಬೆಂಕಿಗೆ ಹಾಕುವುದು ನಿಜಕ್ಕೂ ಖಂಡನೀಯ. ಇವುಗಳ ಕುರಿತು ವೈಚಾರಿಕ ಜ್ಞಾನವನ್ನು ಶಿಕ್ಷಕರು ಶಾಲೆಯಲ್ಲಿ ನೀಡಬೇಕು. ಪಠ್ಯಪುಸ್ತಕದಲ್ಲಿ ಇದ್ದರೆ ಮಾತ್ರ ಹೇಳಬೇಕು ಎನ್ನುವುದಕ್ಕಿಂತ ಪ್ರತಿ ತರಗತಿಯಲ್ಲಿಯೂ ಇಂತಹ ವಿಷಯಗಳ ಬಗ್ಗೆ ಅರಿವು ಮೂಡಿಸುವುದು ಒಳ್ಳೆಯದು’ ಎಂದರು.

ಹಂಪಿ ವಿಶ್ವವಿದ್ಯಾನಿಲಯ, ಇತಿಹಾಸ ವಿಭಾಗದ ಮುಖ್ಯಸ್ಥರಾದ ಪ್ರೊ.ವಿಜಯ್ ಅವರನ್ನು ನಾನುಗೌರಿ.ಕಾಂ ಮಾತನಾಡಿಸಿದಾಗ, ‘ಯಾವುದೇ ಚುನಾಯಿತ ಸರ್ಕಾರಕ್ಕೆ ಪಠ್ಯ ಬದಲಾವಣೆ ಮಾಡುವ ಅಧಿಕಾರವಿದೆ. ಆದರೆ ಅದು ತಜ್ಞರ ಸಮಿತಿಯನ್ನೊಳಗೊಂಡಂತೆ ಒಂದು ಪ್ರಕ್ರಿಯೆಯ ಮೂಲಕ ನಡೆಯಬೇಕೇ ಹೊರತು ಏಕಾಏಕಿ ಯಾವುದೇ ವಿಷಯವನ್ನು ತೆಗೆಯಲೂ ಸಾಧ್ಯವಿಲ್ಲ, ಸೇರಿಸಲೂ ಸಾಧ್ಯವಿಲ್ಲ’ ಎಂದು ಹೇಳಿದರು.

‘ಪ್ರತಿಯೊಬ್ಬ ಇತಿಹಾಸಕಾರರೂ, ತಮಗೆ ಸಾಕ್ಷ್ಯಗಳು ದೊರೆತಿರುವ ಅಥವಾ ತಾವು ಅಧ್ಯಯನ ಮಾಡಿರುವ ಯಾವುದೇ ವಿಷಯದ ಬಗ್ಗೆ, ತಮ್ಮದೇ ಆದ ವ್ಯಾಖ್ಯಾನವನ್ನು ಹೊಂದಿರುತ್ತಾರೆ. ಹಾಗಾಗಿ ಯಾವುದು ಸರಿ-ತಪ್ಪು ಎಂದು ಹೇಳಲು ಸಾದ್ಯವಿಲ್ಲ. ಹಾಗಾಗಿ ಏನೇ ಮಾಡುವುದಿದ್ದರೂ ನಿರ್ದಿಷ್ಟ ಪ್ರಕ್ರಿಯೆಯ ಮೂಲಕವೇ ಮಾಡಬೇಕಾಗುತ್ತದೆ’ ಎಂದು ಹೇಳಿದರು.

ಇದರ ಕುರಿತು ಪ್ರತಿಕ್ರಿಯೆ ಪಡೆಯಲು ಶಿಕ್ಷಣ ಸಚಿವರನ್ನು ಸಂಪರ್ಕಿಸಲಾಯಿತು. ಆದರೆ ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಶಿಕ್ಷಣ ಸಚಿವರೇ ಹೇಳಿರುವಂತೆ, ಪಠ್ಯಪುಸ್ತಕ ಈಗಾಗಲೇ ಮುದ್ರಣಗೊಂಡು ವಿದ್ಯಾರ್ಥಿಗಳ ಕೈಸೇರಿರುವುದರಿಂದ ವಿವಾದಿತ ಪಾಠವನ್ನು ತೆಗೆಯಲು ಸಾಧ್ಯವಿಲ್ಲ. ಹಾಗಾಗಿ ಈ ಪಾಠವನ್ನು ಮಾಡದಿರುವಂತೆ ಶಿಕ್ಷಕರಿಗೆ ಆದೇಶ ಹೊರಡಿಸುತ್ತೇನೆ ಎಂದಿದ್ದಾರೆ.

“ಶಿಕ್ಷಕರು 4ನೇ ಪಾಠವನ್ನು ಮುಗಿಸಿ, ನೇರವಾಗಿ 6ನೇ ಪಾಠವನ್ನು ಮಾಡಲು ಮುಂದಾದಾಗ, ವಿದ್ಯಾರ್ಥಿಗಳು 5ನೇ ಪಾಠ ಯಾಕೆ ಮಾಡುತ್ತಿಲ್ಲ/ಮಾಡಿಲ್ಲ ಎಂದು ಪ್ರಶ್ನಿಸುತ್ತಾರೆ. ಆಗ ಶಿಕ್ಷಕರು ಏನು ಉತ್ತರ ಕೊಡಬಹುದು? ಇದಕ್ಕೆ ಶಿಕ್ಷಣ ಸಚಿವರು ಏನು ಹೇಳುತ್ತಾರೆ?


ಇದನ್ನೂ ಓದಿ: ಟಿಪ್ಪು ಸುಲ್ತಾನ್ ಸೇರಿದಂತೆ ಮಹತ್ವದ ಪಠ್ಯಗಳನ್ನು ಕೈಬಿಟ್ಟ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...