Homeಮುಖಪುಟತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ.

- Advertisement -
- Advertisement -

ತಮಿಳುನಾಡಿನ ಶಿವಕಾಸಿಯಲ್ಲಿರುವ ಎಂ ಪುದುಪಟ್ಟಿ ಎಂಬ ಗ್ರಾಮದಲ್ಲಿ, ಅರ್ಜುನ ನದಿಯ ದಡದ ಬಳಿ 1,200 ವರ್ಷಗಳಷ್ಟು ಹಳೆಯದಾದ ಮತ್ತು ಬಂಡೆಯಲ್ಲಿ ಕೊರೆದಂತೆ ಇರುವ ದೇವಸ್ಥಾನ ಪತ್ತೆಯಾಗಿದೆ.

Photo Courtesy: Sarkardaily

ಪುರಾತತ್ವಶಾಸ್ತ್ರಜ್ಞರು ಈ ದೇವಸ್ಥಾನ ಬಂಡೆಯಿಂದ ನಿರ್ಮಿಸಲ್ಪಟ್ಟಿದೆ ಎಂದು ಗುರುತಿಸಿದ್ದಾರೆ. ಆದರೂ ಇಲ್ಲಿರುವ ಮೂರೂ ಕೋಣೆಗಳಲ್ಲಿಯೂ (ಗರ್ಭಗುಡಿ, ಅರ್ಧಮಂಟಪ ಮತ್ತು ಮಹಾ ಮಂಟಪ) ಯಾವುದೇ ದೇವರ ವಿಗ್ರಹಗಳು ಪತ್ತೆಯಾಗಿಲ್ಲ. ಇದು 20 ಅಡಿ ಉದ್ದದ ಸುಣ್ಣದ ದಿಬ್ಬದ ಪ್ರವೇಶದ್ವಾರವನ್ನು ಹೊಂದಿದೆ.

ಗೋಡೆಗಳ ಮೇಲೆ ಮತ್ತು ಚಾವಣಿಯಲ್ಲಿ ಸಿಮೆಂಟ್‌ನ ಕುರುಹುಗಳಿವೆ ಎಂದು ತಜ್ಞರು ಹೇಳಿದ್ದಾರೆ. ಸುಮಾರು 100 ವರ್ಷಗಳ ಹಿಂದೆ ದೇವಸ್ಥಾನದ ಭಕ್ತರು ದುರಸ್ಥಿ ನಡೆಸಿದ್ದಿರಬಹುದು ಎಂದು ಪುರಾತತ್ತ್ವಜ್ಞರು ಊಹಿಸಿದ್ದಾರೆ. ದೇವಸ್ಥಾನದ ಒಳಗೆ ಹಲವು ಕಡೆ ಸುಣ್ಣದ ಕಲ್ಲು ಕುಸಿಯುತ್ತಿದೆ. ಮಹಾ ಮಂಟಪದ ಸೀಲಿಂಗ್‌ನಲ್ಲಿ ಬೃಹತ್ ರಂಧ್ರವಿದೆ ಎನ್ನಲಾಗಿದೆ.


ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ..


ರಾಜ್ಯ ಪುರಾತತ್ವ ವಿಭಾಗದ ನಿವೃತ್ತ ಸಹಾಯಕ ನಿರ್ದೇಶಕ ಡಾ.ಸಿ.ಸಂತಲಿಂಗಂ ಮಾತನಾಡಿ, ಈ ದೇವಾಲಯವು ಮೂರು ಅಂಶಗಳಲ್ಲಿ ವಿಶಿಷ್ಟವಾಗಿದೆ ಎಂದಿದ್ದಾರೆ.

“ಮೊದಲನೆಯದು: ಇದು ಸಂಧಾರ ಮಾದರಿಯ ದೇವಾಲಯವಾಗಿದೆ. ಭಾರತದಲ್ಲಿ ಇದುವರೆಗೂ ಸಂಧಾರ ಮಾದರಿಯ, ಬಂಡೆಯಲ್ಲಿ ಕತ್ತರಿಸಿದ ದೇವಾಲಯವಿಲ್ಲ. ಈ ದೇವಾಲಯಗಳು ದೇವಾಲಯದ ಸುತ್ತಲೂ ವೃತ್ತಾಕಾರದ ಹಾದಿಯನ್ನು (ಪ್ರದಕ್ಷಿಣಪಥ) ಹೊಂದಿವೆ. ಎಲ್ಲಾ ದೇವಾಲಯಗಳಲ್ಲಿ ಈ ಹಾದಿಗಳಿಲ್ಲ ಎಂದು ಮೂಲಗಳು ತಿಳಿಸಿವೆ.

ಎರಡನೆಯದು: ದೇವಾಲಯವು ಎರಡು ಸುತ್ತುವರಿದ ಹಾದಿಗಳನ್ನು ಹೊಂದಿದೆ. ಇದು ಬಹಳ ಅಪರೂಪ. ಒಂದು ಮಾರ್ಗವು ಅರ್ಧಮಂಟಪದಿಂದ ಪ್ರದಕ್ಷಿಣಾಕಾರವಾಗಿ ಚಲಿಸುತ್ತಿದ್ದರೆ, ಎರಡನೆಯದು ಮಹಾಮಂಟಪದ ಪಕ್ಕದಲ್ಲಿದೆ.

ಮೂರನೆಯದು: ದೇವಾಲಯವನ್ನು ಸಂಪೂರ್ಣವಾಗಿ ಸುಣ್ಣದ ಕಲ್ಲುಗಳಿಂದ ಕೆತ್ತಲಾಗಿದೆ. ಇದು ಕಡಿಮೆ ಗುಣಮಟ್ಟದ ಕಲ್ಲಾಗಿದ್ದು, ಹಾಗಾಗಿಯೇ ದೇವಾಲಯದಲ್ಲಿ ಕಲಾತ್ಮಕ ವಿನ್ಯಾಸ, ಶಿಲ್ಪಕಲೆ ಅಥವಾ ಕೆತ್ತನೆ ಇಲ್ಲದಿರುವುದಕ್ಕೆ ಕಾರಣವಾಗಿದೆ. ಆದರೂ ಗರ್ಭಗೃಹದ ಪ್ರವೇಶದ್ವಾರದ ಎರಡೂ ಬದಿಗಳಲ್ಲಿ ಗೂಡುಗಳಿವೆ. ಇದಲ್ಲದೆ, ಗರ್ಭಗೃಹದಲ್ಲಿ ಕಲ್ಲಿನ ನಾಗ ಪ್ರತಿಮೆ ಇದೆ. ಪೂಜೆ ಮಾಡುವ ಸಲುವಾಗಿ, ಭಕ್ತರು 100 ವರ್ಷಗಳ ಹಿಂದೆ ಇದನ್ನು ಇಟ್ಟಿರಬಹುದು” ಎಂದು ಸಂತಲಿಂಗಂ ಹೇಳಿದ್ದಾರೆ.

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ. ಇದನ್ನು ಮರಳುಗಲ್ಲಿನಿಂದ ಕೆತ್ತಲಾಗಿದೆ. ಇದು ಸುಣ್ಣದ ಕಲ್ಲುಗಳಿಗೆ ಹೋಲುವ ಬಂಡೆಯಾಗಿದೆ ಎಂದು ಸಂತಲಿಂಗಂ ಹೇಳಿದರು.


ಇದನ್ನೂ ಓದಿ: ಆರ್ಯ-ಅನಾರ್ಯರ ನಡುವಿನ ಕಾಳಗ ಮತ್ತು ಮಿಲನ: ಗೊಂಡಿಯರ ಸಂಭೂ ಶೇಖರ ಶಂಭೋ ಶಂಕರನಾದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...