Homeಮುಖಪುಟತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ.

- Advertisement -
- Advertisement -

ತಮಿಳುನಾಡಿನ ಶಿವಕಾಸಿಯಲ್ಲಿರುವ ಎಂ ಪುದುಪಟ್ಟಿ ಎಂಬ ಗ್ರಾಮದಲ್ಲಿ, ಅರ್ಜುನ ನದಿಯ ದಡದ ಬಳಿ 1,200 ವರ್ಷಗಳಷ್ಟು ಹಳೆಯದಾದ ಮತ್ತು ಬಂಡೆಯಲ್ಲಿ ಕೊರೆದಂತೆ ಇರುವ ದೇವಸ್ಥಾನ ಪತ್ತೆಯಾಗಿದೆ.

Photo Courtesy: Sarkardaily

ಪುರಾತತ್ವಶಾಸ್ತ್ರಜ್ಞರು ಈ ದೇವಸ್ಥಾನ ಬಂಡೆಯಿಂದ ನಿರ್ಮಿಸಲ್ಪಟ್ಟಿದೆ ಎಂದು ಗುರುತಿಸಿದ್ದಾರೆ. ಆದರೂ ಇಲ್ಲಿರುವ ಮೂರೂ ಕೋಣೆಗಳಲ್ಲಿಯೂ (ಗರ್ಭಗುಡಿ, ಅರ್ಧಮಂಟಪ ಮತ್ತು ಮಹಾ ಮಂಟಪ) ಯಾವುದೇ ದೇವರ ವಿಗ್ರಹಗಳು ಪತ್ತೆಯಾಗಿಲ್ಲ. ಇದು 20 ಅಡಿ ಉದ್ದದ ಸುಣ್ಣದ ದಿಬ್ಬದ ಪ್ರವೇಶದ್ವಾರವನ್ನು ಹೊಂದಿದೆ.

ಗೋಡೆಗಳ ಮೇಲೆ ಮತ್ತು ಚಾವಣಿಯಲ್ಲಿ ಸಿಮೆಂಟ್‌ನ ಕುರುಹುಗಳಿವೆ ಎಂದು ತಜ್ಞರು ಹೇಳಿದ್ದಾರೆ. ಸುಮಾರು 100 ವರ್ಷಗಳ ಹಿಂದೆ ದೇವಸ್ಥಾನದ ಭಕ್ತರು ದುರಸ್ಥಿ ನಡೆಸಿದ್ದಿರಬಹುದು ಎಂದು ಪುರಾತತ್ತ್ವಜ್ಞರು ಊಹಿಸಿದ್ದಾರೆ. ದೇವಸ್ಥಾನದ ಒಳಗೆ ಹಲವು ಕಡೆ ಸುಣ್ಣದ ಕಲ್ಲು ಕುಸಿಯುತ್ತಿದೆ. ಮಹಾ ಮಂಟಪದ ಸೀಲಿಂಗ್‌ನಲ್ಲಿ ಬೃಹತ್ ರಂಧ್ರವಿದೆ ಎನ್ನಲಾಗಿದೆ.


ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ..


ರಾಜ್ಯ ಪುರಾತತ್ವ ವಿಭಾಗದ ನಿವೃತ್ತ ಸಹಾಯಕ ನಿರ್ದೇಶಕ ಡಾ.ಸಿ.ಸಂತಲಿಂಗಂ ಮಾತನಾಡಿ, ಈ ದೇವಾಲಯವು ಮೂರು ಅಂಶಗಳಲ್ಲಿ ವಿಶಿಷ್ಟವಾಗಿದೆ ಎಂದಿದ್ದಾರೆ.

“ಮೊದಲನೆಯದು: ಇದು ಸಂಧಾರ ಮಾದರಿಯ ದೇವಾಲಯವಾಗಿದೆ. ಭಾರತದಲ್ಲಿ ಇದುವರೆಗೂ ಸಂಧಾರ ಮಾದರಿಯ, ಬಂಡೆಯಲ್ಲಿ ಕತ್ತರಿಸಿದ ದೇವಾಲಯವಿಲ್ಲ. ಈ ದೇವಾಲಯಗಳು ದೇವಾಲಯದ ಸುತ್ತಲೂ ವೃತ್ತಾಕಾರದ ಹಾದಿಯನ್ನು (ಪ್ರದಕ್ಷಿಣಪಥ) ಹೊಂದಿವೆ. ಎಲ್ಲಾ ದೇವಾಲಯಗಳಲ್ಲಿ ಈ ಹಾದಿಗಳಿಲ್ಲ ಎಂದು ಮೂಲಗಳು ತಿಳಿಸಿವೆ.

ಎರಡನೆಯದು: ದೇವಾಲಯವು ಎರಡು ಸುತ್ತುವರಿದ ಹಾದಿಗಳನ್ನು ಹೊಂದಿದೆ. ಇದು ಬಹಳ ಅಪರೂಪ. ಒಂದು ಮಾರ್ಗವು ಅರ್ಧಮಂಟಪದಿಂದ ಪ್ರದಕ್ಷಿಣಾಕಾರವಾಗಿ ಚಲಿಸುತ್ತಿದ್ದರೆ, ಎರಡನೆಯದು ಮಹಾಮಂಟಪದ ಪಕ್ಕದಲ್ಲಿದೆ.

ಮೂರನೆಯದು: ದೇವಾಲಯವನ್ನು ಸಂಪೂರ್ಣವಾಗಿ ಸುಣ್ಣದ ಕಲ್ಲುಗಳಿಂದ ಕೆತ್ತಲಾಗಿದೆ. ಇದು ಕಡಿಮೆ ಗುಣಮಟ್ಟದ ಕಲ್ಲಾಗಿದ್ದು, ಹಾಗಾಗಿಯೇ ದೇವಾಲಯದಲ್ಲಿ ಕಲಾತ್ಮಕ ವಿನ್ಯಾಸ, ಶಿಲ್ಪಕಲೆ ಅಥವಾ ಕೆತ್ತನೆ ಇಲ್ಲದಿರುವುದಕ್ಕೆ ಕಾರಣವಾಗಿದೆ. ಆದರೂ ಗರ್ಭಗೃಹದ ಪ್ರವೇಶದ್ವಾರದ ಎರಡೂ ಬದಿಗಳಲ್ಲಿ ಗೂಡುಗಳಿವೆ. ಇದಲ್ಲದೆ, ಗರ್ಭಗೃಹದಲ್ಲಿ ಕಲ್ಲಿನ ನಾಗ ಪ್ರತಿಮೆ ಇದೆ. ಪೂಜೆ ಮಾಡುವ ಸಲುವಾಗಿ, ಭಕ್ತರು 100 ವರ್ಷಗಳ ಹಿಂದೆ ಇದನ್ನು ಇಟ್ಟಿರಬಹುದು” ಎಂದು ಸಂತಲಿಂಗಂ ಹೇಳಿದ್ದಾರೆ.

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ. ಇದನ್ನು ಮರಳುಗಲ್ಲಿನಿಂದ ಕೆತ್ತಲಾಗಿದೆ. ಇದು ಸುಣ್ಣದ ಕಲ್ಲುಗಳಿಗೆ ಹೋಲುವ ಬಂಡೆಯಾಗಿದೆ ಎಂದು ಸಂತಲಿಂಗಂ ಹೇಳಿದರು.


ಇದನ್ನೂ ಓದಿ: ಆರ್ಯ-ಅನಾರ್ಯರ ನಡುವಿನ ಕಾಳಗ ಮತ್ತು ಮಿಲನ: ಗೊಂಡಿಯರ ಸಂಭೂ ಶೇಖರ ಶಂಭೋ ಶಂಕರನಾದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....