Homeಮುಖಪುಟತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ತಮಿಳುನಾಡಿನ ಶಿವಕಾಸಿಯಲ್ಲಿ 1,200 ವರ್ಷದ ಹಳೆಯ ದೇವಸ್ಥಾನ ಪತ್ತೆ!

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ.

- Advertisement -
- Advertisement -

ತಮಿಳುನಾಡಿನ ಶಿವಕಾಸಿಯಲ್ಲಿರುವ ಎಂ ಪುದುಪಟ್ಟಿ ಎಂಬ ಗ್ರಾಮದಲ್ಲಿ, ಅರ್ಜುನ ನದಿಯ ದಡದ ಬಳಿ 1,200 ವರ್ಷಗಳಷ್ಟು ಹಳೆಯದಾದ ಮತ್ತು ಬಂಡೆಯಲ್ಲಿ ಕೊರೆದಂತೆ ಇರುವ ದೇವಸ್ಥಾನ ಪತ್ತೆಯಾಗಿದೆ.

Photo Courtesy: Sarkardaily

ಪುರಾತತ್ವಶಾಸ್ತ್ರಜ್ಞರು ಈ ದೇವಸ್ಥಾನ ಬಂಡೆಯಿಂದ ನಿರ್ಮಿಸಲ್ಪಟ್ಟಿದೆ ಎಂದು ಗುರುತಿಸಿದ್ದಾರೆ. ಆದರೂ ಇಲ್ಲಿರುವ ಮೂರೂ ಕೋಣೆಗಳಲ್ಲಿಯೂ (ಗರ್ಭಗುಡಿ, ಅರ್ಧಮಂಟಪ ಮತ್ತು ಮಹಾ ಮಂಟಪ) ಯಾವುದೇ ದೇವರ ವಿಗ್ರಹಗಳು ಪತ್ತೆಯಾಗಿಲ್ಲ. ಇದು 20 ಅಡಿ ಉದ್ದದ ಸುಣ್ಣದ ದಿಬ್ಬದ ಪ್ರವೇಶದ್ವಾರವನ್ನು ಹೊಂದಿದೆ.

ಗೋಡೆಗಳ ಮೇಲೆ ಮತ್ತು ಚಾವಣಿಯಲ್ಲಿ ಸಿಮೆಂಟ್‌ನ ಕುರುಹುಗಳಿವೆ ಎಂದು ತಜ್ಞರು ಹೇಳಿದ್ದಾರೆ. ಸುಮಾರು 100 ವರ್ಷಗಳ ಹಿಂದೆ ದೇವಸ್ಥಾನದ ಭಕ್ತರು ದುರಸ್ಥಿ ನಡೆಸಿದ್ದಿರಬಹುದು ಎಂದು ಪುರಾತತ್ತ್ವಜ್ಞರು ಊಹಿಸಿದ್ದಾರೆ. ದೇವಸ್ಥಾನದ ಒಳಗೆ ಹಲವು ಕಡೆ ಸುಣ್ಣದ ಕಲ್ಲು ಕುಸಿಯುತ್ತಿದೆ. ಮಹಾ ಮಂಟಪದ ಸೀಲಿಂಗ್‌ನಲ್ಲಿ ಬೃಹತ್ ರಂಧ್ರವಿದೆ ಎನ್ನಲಾಗಿದೆ.


ಇದನ್ನೂ ಓದಿ: ಇತಿಹಾಸ ಪುರುಷರ ಬಗ್ಗೆ ಸಂಘ ಪರಿವಾರ ಮಾಡಿದ ಚಾರಿತ್ಯವಧೆಯ ಇತಿಹಾಸ..


ರಾಜ್ಯ ಪುರಾತತ್ವ ವಿಭಾಗದ ನಿವೃತ್ತ ಸಹಾಯಕ ನಿರ್ದೇಶಕ ಡಾ.ಸಿ.ಸಂತಲಿಂಗಂ ಮಾತನಾಡಿ, ಈ ದೇವಾಲಯವು ಮೂರು ಅಂಶಗಳಲ್ಲಿ ವಿಶಿಷ್ಟವಾಗಿದೆ ಎಂದಿದ್ದಾರೆ.

“ಮೊದಲನೆಯದು: ಇದು ಸಂಧಾರ ಮಾದರಿಯ ದೇವಾಲಯವಾಗಿದೆ. ಭಾರತದಲ್ಲಿ ಇದುವರೆಗೂ ಸಂಧಾರ ಮಾದರಿಯ, ಬಂಡೆಯಲ್ಲಿ ಕತ್ತರಿಸಿದ ದೇವಾಲಯವಿಲ್ಲ. ಈ ದೇವಾಲಯಗಳು ದೇವಾಲಯದ ಸುತ್ತಲೂ ವೃತ್ತಾಕಾರದ ಹಾದಿಯನ್ನು (ಪ್ರದಕ್ಷಿಣಪಥ) ಹೊಂದಿವೆ. ಎಲ್ಲಾ ದೇವಾಲಯಗಳಲ್ಲಿ ಈ ಹಾದಿಗಳಿಲ್ಲ ಎಂದು ಮೂಲಗಳು ತಿಳಿಸಿವೆ.

ಎರಡನೆಯದು: ದೇವಾಲಯವು ಎರಡು ಸುತ್ತುವರಿದ ಹಾದಿಗಳನ್ನು ಹೊಂದಿದೆ. ಇದು ಬಹಳ ಅಪರೂಪ. ಒಂದು ಮಾರ್ಗವು ಅರ್ಧಮಂಟಪದಿಂದ ಪ್ರದಕ್ಷಿಣಾಕಾರವಾಗಿ ಚಲಿಸುತ್ತಿದ್ದರೆ, ಎರಡನೆಯದು ಮಹಾಮಂಟಪದ ಪಕ್ಕದಲ್ಲಿದೆ.

ಮೂರನೆಯದು: ದೇವಾಲಯವನ್ನು ಸಂಪೂರ್ಣವಾಗಿ ಸುಣ್ಣದ ಕಲ್ಲುಗಳಿಂದ ಕೆತ್ತಲಾಗಿದೆ. ಇದು ಕಡಿಮೆ ಗುಣಮಟ್ಟದ ಕಲ್ಲಾಗಿದ್ದು, ಹಾಗಾಗಿಯೇ ದೇವಾಲಯದಲ್ಲಿ ಕಲಾತ್ಮಕ ವಿನ್ಯಾಸ, ಶಿಲ್ಪಕಲೆ ಅಥವಾ ಕೆತ್ತನೆ ಇಲ್ಲದಿರುವುದಕ್ಕೆ ಕಾರಣವಾಗಿದೆ. ಆದರೂ ಗರ್ಭಗೃಹದ ಪ್ರವೇಶದ್ವಾರದ ಎರಡೂ ಬದಿಗಳಲ್ಲಿ ಗೂಡುಗಳಿವೆ. ಇದಲ್ಲದೆ, ಗರ್ಭಗೃಹದಲ್ಲಿ ಕಲ್ಲಿನ ನಾಗ ಪ್ರತಿಮೆ ಇದೆ. ಪೂಜೆ ಮಾಡುವ ಸಲುವಾಗಿ, ಭಕ್ತರು 100 ವರ್ಷಗಳ ಹಿಂದೆ ಇದನ್ನು ಇಟ್ಟಿರಬಹುದು” ಎಂದು ಸಂತಲಿಂಗಂ ಹೇಳಿದ್ದಾರೆ.

ಈ ದೇವಾಲಯವು ಕ್ರಿ.ಶ 8 ನೇ ಶತಮಾನದ ಆರಂಭದಲ್ಲಿ-ಪಾಂಡ್ಯರ ಯುಗಕ್ಕೆ ಸೇರಿದೆ. ಇದು ತಿರುಚಂದೂರಿನಲ್ಲಿರುವ ವಲ್ಲಿ ಗುಹೆ ದೇವಾಲಯಕ್ಕೆ ಹೋಲುತ್ತದೆ. ಇದನ್ನು ಮರಳುಗಲ್ಲಿನಿಂದ ಕೆತ್ತಲಾಗಿದೆ. ಇದು ಸುಣ್ಣದ ಕಲ್ಲುಗಳಿಗೆ ಹೋಲುವ ಬಂಡೆಯಾಗಿದೆ ಎಂದು ಸಂತಲಿಂಗಂ ಹೇಳಿದರು.


ಇದನ್ನೂ ಓದಿ: ಆರ್ಯ-ಅನಾರ್ಯರ ನಡುವಿನ ಕಾಳಗ ಮತ್ತು ಮಿಲನ: ಗೊಂಡಿಯರ ಸಂಭೂ ಶೇಖರ ಶಂಭೋ ಶಂಕರನಾದ ಕಥೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...