Homeಮುಖಪುಟಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ

ಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಲು ಸಾಧ್ಯವಿಲ್ಲ: ಸುಪ್ರೀಂ

ಅರ್ಜಿದಾರರು ಜೂನ್‌ ತಿಂಗಳಿನಲ್ಲಿ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಿದ್ದನ್ನು ಉಲ್ಲೇಖಿಸಿ ಮೊಹರಂ ಹಬ್ಬದ ಮೆರವಣಿಗೆಗೂ ಅವಕಾಶ ನೀಡಬೇಕೆಂದು ಕೋರಿದ್ದರು.

- Advertisement -
- Advertisement -

ಮೊಹರಂ ಮೆರವಣಿಗೆಗಳಿಗೆ ಅನುಮತಿ ನೀಡಬೇಕೆಂದು ಕೋರಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸುಪ್ರೀಂ ಕೋರ್ಟ್, ಕೊರೊನಾ ಹರಡಲು ಒಂದು ನಿರ್ದಿಷ್ಟ ಸಮುದಾಯವೇ ಕಾರಣವೆಂಬ ಟಾರ್ಗೆಟ್‌ಗೆ ಒಳಗಾಗುವುದರಿಂದ ಅನುಮತಿ ಸಾಧ್ಯವಿಲ್ಲ ಎಂದಿದೆ.

ಉತ್ತರ ಪ್ರದೇಶದ ಸೈಯ್ಯದ್ ಕಾಲ್ಬೆ ಜವಾದ್ ಎಂಬುವವರು ಸಲ್ಲಿಸಿದ್ದ ಅರ್ಜಿ ಆಲಿಸಿದ ಸಿಜೆಐ ಎಸ್‌ ಎ ಬೋಬ್ಡೆ ನೇತೃತ್ವದ ನ್ಯಾಯಪೀಠ ನಾವು ಮೆರವಣಿಗೆಗೆ ಅನುಮತಿ ನೀಡಿದರೆ ನಿರ್ದಿಷ್ಟ ಸಮುದಾಯವೊಂದು ಕೊರೊನಾ ಹರಡಲು ಕಾರಣವೆಂಬ ಟಾರ್ಗೆಟ್‌ಗೆ ಒಳಗಾಗುತ್ತದೆ ಎಂದಿದೆ.

ಅರ್ಜಿದಾರರು ಜೂನ್‌ ತಿಂಗಳಿನಲ್ಲಿ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅವಕಾಶ ನೀಡಿದ್ದನ್ನು ಉಲ್ಲೇಖಿಸಿ ಮೊಹರಂ ಹಬ್ಬದ ಮೆರವಣಿಗೆಗೂ ಅವಕಾಶ ನೀಡಬೇಕೆಂದು ಕೋರಿದ್ದರು.

ಇದಕ್ಕೆ ಉತ್ತರಿಸಿ ಸಿಜೆಐ ‘ನೀವು ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಯನ್ನು ಉಲ್ಲೇಖಿಸಿದ್ದೀರಿ. ಆದರೆ ಅದು ಕೇವಲ ಒಂದು ಊರಿನಲ್ಲಿ ಮತ್ತು ಒಂದು ಬೀದಿಯಲ್ಲಿ ಮಾತ್ರ ನಡೆದ ಮೆರವಣಿಗೆಯಾದ್ದರಿಂದ ನಮಗೆ ಅಪಾಯದ ಅಂದಾಜಿದ್ದರಿಂದ ಅನುಮತಿ ನೀಡಿದ್ದೆವು. ಆದರೆ ಇಡೀ ದೇಶಕ್ಕೆ ಅನ್ವಯವಾಗುವಂಥಹ ಸಾಮಾನ್ಯ ತೀರ್ಪು ನೀಡುವುದು ಕಷ್ಟ’ ಎಂದಿದ್ದಾರೆ.

ಒಂದು ಜಾಗದಲ್ಲಿ ನಡೆಯುವ ಮೆರವಣಿಗೆಯಾದರೆ ನಾವು ಅಪಾಯವನ್ನು ಅಂದಾಜಿಸಬಹುದು. ಹಾಗಾಗಿ ಇಡೀ ದೇಶದ ಜನರ ಆರೋಗ್ಯವನ್ನು ಅಪಾಯಕ್ಕೆ ತಳ್ಳಲು ಸಾಧ್ಯವಿಲ್ಲ ಎಂದು ನ್ಯಾಯಪೀಠ ಹೇಳಿದೆ.

ಇದಕ್ಕೆ ಪ್ರತಿಯಾಗಿ ಅರ್ಜಿದಾರರು ಲಕ್ನೋ ನಗರದಲ್ಲಿ ಮೆರವಣಿಗೆ ನಡೆಸಲು ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ಹಾಗಾದರೆ ನೀವು ಅಲಹಾಬಾದ್ ಹೈಕೋರ್ಟ್ ಅನ್ನು ಸಂಪರ್ಕಿಸಿ ಎಂದು ಸುಪ್ರೀಂ ಹೇಳಿದೆ.

ಜೂನ್ ತಿಂಗಳಿನಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದ ವೇಳೆ ಸುಪ್ರೀಂ ಕೋರ್ಟ್ ‘ಜಗನ್ನಾಥ ದೇವರು ನಮ್ಮನ್ನು ಕ್ಷಮಿಸುವುದಿಲ್ಲ’ ಎಂದು ಹೇಳುವ ಮೂಲಕ ಓರಿಸ್ಸಾದ ಪೂರಿ ಜಗನ್ನಾಥ ರಥಯಾತ್ರೆಗೆ ಅನುಮತಿ ನಿರಾಕರಿಸಿತ್ತು. ಆದರೆ ಐದು ದಿನಗಳ ನಂತರ ಕೇಂದ್ರ ಮನವಿ ಮೇರೆಗೆ ಮೆರವಣಿಗೆಗೆ ಅವಕಾಶ ನೀಡಿತ್ತು.


ಇದನ್ನೂ ಓದಿ: ’ಬ್ಯಾಡ್‌ ಬಾಯ್‌ ಬಿಲಿಯನೇರ್ಸ್’ ಸಾಕ್ಷ್ಯಚಿತ್ರದ ವಿರುದ್ದ ಕೋರ್ಟ್ ಮೆಟ್ಟಿಲೇರಿದ ಮೆಹುಲ್ ಚೋಕ್ಸಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...