Homeಮುಖಪುಟಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಲವು ರಾಜ್ಯಗಳು ತಮ್ಮ ಪಾಲಿನ ಹಣಕ್ಕಾಗಿ ಒತ್ತಾಯಿಸಲು ಬಯಸಿದ್ದರು. ಆದರೆ ಕೇಂದ್ರ ಸರ್ಕಾರವೇ ತನ್ನ ಕಷ್ಟ ತೋಡಿಕೊಂಡಿದ್ದು ರಾಜ್ಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

- Advertisement -
- Advertisement -

ಇಂದು ನಡೆದ 41ನೇ ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಕೋವಿಡ್‌ ಸಾಂಕ್ರಾಮಿಕದಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೊರೊನಾ ದೇವರ ಕಾರ್ಯ ಎಂದು ಹೇಳುವ ಮೂಲಕ ಅಸಹಾಯಕತೆ ಪ್ರದರ್ಶಿಸಿದ್ದಾರೆ.

2021ರ ವಿತ್ತೀಯ ವರ್ಷದಲ್ಲಿ ಜಿಎಸ್‌ಟಿ ಸಂಗ್ರಹದಲ್ಲಿ 2.35 ಲಕ್ಷ ಕೋಟಿ ಕೊರತೆ ಬೀಳಲಿದೆ. ಹಾಗಾಗಿ ರಾಜ್ಯಗಳಿಗೆ ಪಾಲು ನೀಡಲು ಹಣದ ಕೊರತೆಯುಂಟಾಗಿದೆ ಎಂದು ಕೇಂದ್ರ ಸರ್ಕಾರದ ಕಂದಾಯ ಕಾರ್ಯದರ್ಶಿ ಎ.ಬಿ.‌ ಪಾಂಡೆ ತಿಳಿಸಿದ್ದಾರೆ.

ಮಾರ್ಚ್‌ನಲ್ಲಿ 13,806 ರೂ ಬಿಡುಗಡೆಯೊಂದಿಗೆ 2019-20ನೇ ಹಣಕಾಸು ವರ್ಷದಲ್ಲಿ ರಾಜ್ಯಗಳಿಗೆ ಈಗಾಗಲೇ ಒಟ್ಟು 1.65 ಲಕ್ಷ ಕೋಟಿ ರೂ ಜಿಎಸ್‌ಟಿ ಪರಿಹಾರ ಹಣ ನೀಡಲಾಗಿದೆ. ಆದರೆ ಜಿಎಸ್‌ಟಿ ಪರಿಹಾರಕ್ಕಾಗಿನ ಸೆಸ್ ಸಂಗ್ರಹ ಕೇವಲ 95,444 ಕೋಟಿ ರೂ ಗೆ ಕುಸಿದಿದೆ ಎಂದು ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಕೊರೊನಾ ವೈರಸ್‌ ಲಾಕ್‌ಡೌನ್‌ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿರುವ ಹಲವು ರಾಜ್ಯಗಳು ತಮ್ಮ ಪಾಲಿನ ಹಣಕ್ಕಾಗಿ ಒತ್ತಾಯಿಸಲು ಬಯಸಿದ್ದರು. ಆದರೆ ಕೇಂದ್ರ ಸರ್ಕಾರವೇ ತನ್ನ ಕಷ್ಟ ತೋಡಿಕೊಂಡಿದ್ದು ರಾಜ್ಯಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.

ಬಿಜೆಪಿಯೇತರ ಪಕ್ಷಗಳು ಆಳ್ವಿಕೆಯಲ್ಲಿರುವ ರಾಜ್ಯಗಳು ಕೇಂದ್ರವು ನಮ್ಮ ಪಾಲಿನ ಜಿಎಸ್‌ಟಿ ಹಣವನ್ನು ನೀಡುವುದು ಶಾಸನಬದ್ಧ ಬಾಧ್ಯತೆಯಾಗಿದೆ ಎಂದು ಸಭೆಯಲ್ಲಿ ಆಗ್ರಹಿಸಿದ್ದಾರೆ. ಆದರು ಜಿಎಸ್‌ಟಿ ಸಂಗ್ರಹ ಕುಸಿದಿರುವಾಗ ಕೇಂದ್ರಕ್ಕೆ ಅಂತಹ ಬಾಧ್ಯತೆಗಳಿಲ್ಲ ಎಂದು ಸರ್ಕಾರ ವಾದಿಸಿದೆ.

ಕೇಂದ್ರ ಸರ್ಕಾರವು ನಮಗೆ 4400 ಕೋಟಿ ಜಿಎಸ್‌ಟಿ ಹಣ ಬಾಕಿ ಉಳಿಸಿಕೊಂಡಿದೆ. ನಾವು ರಾಜ್ಯದಲ್ಲಿ 1800 ಕೋಟಿ ಸಂಬಳ ನೀಡಬೇಕಾಗಿದೆ. ಇಂತಹ ಸಂದರ್ಭದಲ್ಲಿ ಕೇಂದ್ರ ಹಣ ನೀಡದಿದ್ದರೆ ನಾವು ಏನು ಮಾಡಬೇಕು ಎಂದು ಪಂಜಾಬ್ ಹಣಕಾಸು ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್ ಟ್ವೀಟ್ ಮಾಡುವ ಮೂಲಕ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ ನಿಯಂತ್ರಣ ಕಾನೂನಿನಡಿಯಲ್ಲಿ, ಜಿಎಸ್‌ಟಿ ಜಾರಿಗೆ ಬಂದ ಜುಲೈ 1, 2017 ರಿಂದ ಮೊದಲ ಐದು ವರ್ಷಗಳಲ್ಲಿ ರಾಜ್ಯಗಳಿಗೆ ಆದಾಯ ನಷ್ಟಕ್ಕೆ ಕೇಂದ್ರದಿಂದ ಪಾವತಿ ಖಾತರಿ ನೀಡಲಾಗಿದೆ. 2022ರವರೆಗೂ ರಾಜ್ಯಗಳು ನಷ್ಟ ಹೊಂದಿದ್ದಲ್ಲಿ ಕೇಂದ್ರ ಅದನ್ನು ತುಂಬಿಕೊಡುವ ಭರವಸೆ ನೀಡಿತ್ತು.

ಕೊರೊನಾ ಬಿಕ್ಕಟ್ಟಿನ ಸಂದರ್ಭದಲ್ಲಿ ಜಿಎಸ್‌ಟಿ ಆದಾಯದ ನಷ್ಟಕ್ಕೆ ಕೇಂದ್ರವು ರಾಜ್ಯಗಳಿಗೆ ಸಂಪೂರ್ಣ ಪರಿಹಾರವನ್ನು ನೀಡಬೇಕು ಎಂದು ಸರ್ಕಾರದ ಅಟಾರ್ನಿ ಜನರಲ್ ಕೆ.ಕೆ.ವೇಣುಗೋಪಾಲ್ ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.


ಇದನ್ನೂ ಓದಿ: ಮೋದಿಯ ಈ ಮೂರು ವೈಫಲ್ಯಗಳ ಕುರಿತು ಹಾರ್ವಡ್ ಬ್ಯುಸಿನೆಸ್ ಸ್ಕೂಲ್ ಅಧ್ಯಯನ ಮಾಡುತ್ತದೆ: ರಾಹುಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...