Homeಕರ್ನಾಟಕಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ: ಟಿ.ಎಸ್.ನಾಗಾಭರಣ

ಹಿಂದಿಗೆ ಮಾತ್ರ ಆದ್ಯತೆ ನೀಡಿ ಉಳಿದ ಭಾಷೆಗಳಿಗೆ ಆದ್ಯತೆ ನೀಡದಿರುವುದು ತಪ್ಪು, ಇಲ್ಲಿ ಎಲ್ಲಾ ರಾಜ್ಯದ ಜನರು ವಾಸಿಸುತ್ತಾರೆ. ಅವರ ಭಾಷೆಯನ್ನೂ ಬಳಸೋಣ ಅಲ್ಲವೇ ಎಂದು ಟಿ.ಎಸ್.ನಾಗಾಭರಣ ತಿಳಿಸಿದ್ದಾರೆ.

- Advertisement -
- Advertisement -

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಾರಿಗೆ ಶುರುವಾಗಿನಿಂದ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದೆ. ಮೆಟ್ರೋ ನಿಲ್ದಾಣಗಳಲ್ಲಿ ನಾಮಫಲಕಗಳ ಬದಲಾವಣೆ ವಿಚಾರವಂತೂ ಪ್ರತಿ ಬಿಎಂಆರ್‌ಸಿಎಲ್ ಸಭೆಯಲ್ಲೂ ಕೇಳಿಬರುವಂತಹದ್ದು. ಇಂತಹ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಮೆಟ್ರೋದಲ್ಲಿ ಹಿಂದಿ ತೆಗೆಯಿರಿ, ಇಲ್ಲ ಎಲ್ಲಾ ಅಧಿಕೃತ 22 ಭಾಷೆಗಳನ್ನು ಬಳಸಿ ಎಂದು ತಾಕೀತು ಮಾಡಿದ್ದಾರೆ.

ಮೆಟ್ರೋ ರೈಲುಗಳಲ್ಲಿ ಮತ್ತು ಮೆಟ್ರೋ ನಿಲ್ದಾಣಗಳ ನಾಮಫಲಕಗಳಲ್ಲಿ ಹಿಂದಿ ಭಾಷೆಯನ್ನು ತೆಗೆದುಹಾಕಿ ಕೇವಲ ಕನ್ನಡ ಮತ್ತು ಇಂಗ್ಲೀಷ್ ಭಾಷೆ ಬಳಸುವಂತೆ ಕೆಡಿಎ ಒತ್ತಾಯಿಸಿದೆ. ರಾಜ್ಯ ಸರ್ಕಾರ ತ್ರಿಭಾಷಾ ನೀತಿಗೆ ಬದ್ಧವಾಗಿಲ್ಲದೇ ಇರುವಾಗ 3 ಭಾಷೆಯ ಫಲಕಗಳೇಕೆ ಎಂದು ಟಿ.ಎಸ್.ನಾಗಾಭರಣ ಪ್ರಶ್ನಿಸಿದ್ದಾರೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರವು 2 ಆಯ್ಕೆಗಳನ್ನು ಬಿಎಂಆರ್‌ಸಿಎಲ್ ಮುಂದಿಟ್ಟಿದೆ. ಒಂದು ಕೇವಲ ಕನ್ನಡ ಮತ್ತು ಇಂಗ್ಲೀಷ್ ಫಲಕಗಳನ್ನು ಬಳಸುವುದು. ಎರಡನೇಯದು ಹಿಂದಿ ಬೇಕೇಬೇಕು ಎಂದರೆ ದೇಶದ ಎಲ್ಲಾ 22 ಅಧಿಕೃತ ಭಾಷೆಗಳನ್ನು ನಾಮಫಲಕಗಳ ಬಳಸಬೇಕು ಎಂದಿದೆ.

ಹಿಂದಿಗೆ ಮಾತ್ರ ಆದ್ಯತೆ ನೀಡಿ ಉಳಿದ ಭಾಷೆಗಳಿಗೆ ಆದ್ಯತೆ ನೀಡದಿರುವುದು ತಪ್ಪು, ಇಲ್ಲಿ ಎಲ್ಲಾ ರಾಜ್ಯದ ಜನರು ವಾಸಿಸುತ್ತಾರೆ. ಅವರ ಭಾಷೆಯನ್ನೂ ಬಳಸೋಣ ಅಲ್ಲವೇ ಎಂದು ಟಿ.ಎಸ್.ನಾಗಾಭರಣ ತಿಳಿಸಿದ್ದಾರೆ.

ಇನ್ನು ಮೆಟ್ರೋದಲ್ಲಿ ವಿಶೇಷವಾಗಿ ಸ್ವಚ್ಛತೆ ಮತ್ತು ಭದ್ರತಾ ವಿಭಾಗಗಳಲ್ಲಿ ಕನ್ನಡಿಗರನ್ನು ಮಾತ್ರ ಉದ್ಯೋಗಕ್ಕೆ ತೆಗೆದುಕೊಳ್ಳಬೇಕು. ನಮ್ಮ ಜನರಿಗೂ ಕೆಲಸದ ಅವಶ್ಯಕತೆ ಹೆಚ್ಚಾಗಿದೆ ಎಂದು ಕೆಡಿಎ ಸಭೆಗೆ ತಿಳಿಸಿದೆ.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಶಿಫಾರಸ್ಸುಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ. ನವೆಂಬರ್ ಒಳಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್ ಹೇಳಿದ್ದಾರೆ.

ಆದರೆ ಇಂತಹ ಭರವಸೆ ಹಲವು ಬಾರಿ ಬಂದಿದ್ದರೂ, ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ದೇಶಾದ್ಯಂತ ತ್ರಿಭಾಷಾ ನೀತಿಗೆ ವಿರೋಧ ವ್ಯಕ್ತವಾಗುತ್ತಿರುವ ಈ ಪರಿಸ್ಥಿತಿಯಲ್ಲಿ ಬಿಎಂಆರ್‌ಸಿಎಲ್ ಹೇಗೆ ಕಾರ್ಯನಿವರ್ಹಿಸುತ್ತದೆ ಎಂದು ಕಾದುನೋಡಬೇಕು.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...