Homeಮುಖಪುಟನೇರವಾಗಿ ನೇಮಕಗೊಳ್ಳುವ ಅಧ್ಯಕ್ಷರಿಗೆ 1% ಬೆಂಬಲವೂ ಇಲ್ಲದಿರಬಹುದು!: ಗುಲಾಮ್ ನಬೀ

ನೇರವಾಗಿ ನೇಮಕಗೊಳ್ಳುವ ಅಧ್ಯಕ್ಷರಿಗೆ 1% ಬೆಂಬಲವೂ ಇಲ್ಲದಿರಬಹುದು!: ಗುಲಾಮ್ ನಬೀ

ಸೋನಿಯಾ ಗಾಂಧಿಗೆ ಬರೆಯಲಾಗಿದ್ದ, ಭಿನ್ನಮತೀಯ ಪತ್ರಕ್ಕೆ ಸಹಿ ಹಾಕಿದವರಲ್ಲಿ ಪ್ರಮುಖರಾದ ಆಜಾದ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಉನ್ನತ ಸಭೆ ನಡೆದ ನಾಲ್ಕು ದಿನಗಳ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ.

- Advertisement -
- Advertisement -

ಚುನಾವಣೆಯಲ್ಲಿ ಆಯ್ಕೆಯಾಗದೇ, ನೇರವಾಗಿ ನೇಮಕಗೊಳ್ಳುವ ಕಾಂಗ್ರೆಸ್ ಅಧ್ಯಕ್ಷರಿಗೆ ಪಕ್ಷದಲ್ಲಿ ಶೇ 1 ರಷ್ಟೂ ಬೆಂಬಲವೂ ಇಲ್ಲದಿರಬಹುದು ಎಂದು ಪಕ್ಷದ ಹಿರಿಯ ಮುಖಂಡ ಗುಲಾಮ್ ನಬಿ ಆಜಾದ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಸೋನಿಯಾ ಗಾಂಧಿಗೆ ಬರೆಯಲಾಗಿದ್ದ, ಭಿನ್ನಮತೀಯ ಪತ್ರಕ್ಕೆ ಸಹಿ ಹಾಕಿದವರಲ್ಲಿ ಪ್ರಮುಖರಾದ ಆಜಾದ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಉನ್ನತ ಸಭೆ ನಡೆದ ನಾಲ್ಕು ದಿನಗಳ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ.

“ನಾವು ನೀಡಿದ ಹೇಳಿಕೆ ಅಥವಾ ನಮ್ಮ ಅಭಿಪ್ರಾಯದ ಮೇಲೆ ದಾಳಿ ನಡೆಸುತ್ತಿರುವ ಪದಾಧಿಕಾರಿಗಳು, ರಾಜ್ಯ ಘಟಕದ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರು ಮುಂತಾದವರು ಚುನಾವಣೆಯ ಸಂದರ್ಭದಲ್ಲಿ ಎಲ್ಲಿಯೂ ಕಾಣಸಿಗುವುದಿಲ್ಲ” ಎಂದು 71 ವರ್ಷದ ಗುಲಾಮ್ ನಬಿ ಆಜಾದ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆಂದು ಎನ್ ಡಿ ಟಿ ವಿ ವರದಿ ಮಾಡಿದೆ.

ಕಾಂಗ್ರೆಸ್ ನಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡವರು ನಮ್ಮ ಪತ್ರವನ್ನು ಖಂಡಿತಾ ಸ್ವಾಗತಿಸುತ್ತಾರೆ ಎಂದು ರಾಜ್ಯಸಭಾ ಸದಸ್ಯರಾಗಿರುವ ಆಜಾದ್ ಹೇಳಿದರು.

ಇದನ್ನೂ ಓದಿ: ಬೀದಿಯಲ್ಲಿ ಮಲಗಿದ್ದ ಬಾಲಕನ ಮೇಲೆ ಪೇದೆಯಿಂದ ಅಮಾನವೀಯ ಹಲ್ಲೆ: ಪೇದೆ ಅಮಾನತು

‘ರಾಜ್ಯ ಕಾಂಗ್ರೆಸ್ ಮುಖ್ಯಸ್ಥರು, ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡುವಾಗ, ಚುನಾವಣೆಗೆ ನಿಲ್ಲುವವರ ಪರವಾದ ಮತಗಳು ಶೇಕಡಾ 51 ರಷ್ಟು ಇರಬೇಕಾಗುತ್ತದೆ. ಆದರೆ ಇದೀಗ, ನೇರ ನೇಮಕಾತಿಯ ಮೂಲಕ ಪಕ್ಷದ ಅಧ್ಯಕ್ಷರಾಗುವ ವ್ಯಕ್ತಿಗೆ ಶೇಕಡಾ 1 ರಷ್ಟೂ ಬೆಂಬಲವೂ ಇಲ್ಲದೇ ಹೋಗಬಹುದು! ಸಿಡಬ್ಲ್ಯೂಸಿ ಸದಸ್ಯರು ಒಮ್ಮೆ ಚುನಾಯಿತರಾದರೆ ಅವರನ್ನು ತೆಗೆದುಹಾಕಲಾಗುವುದಿಲ್ಲ. ಹಾಗಾಗಿ ನಿಮಗೇನು ಸಮಸ್ಯೆ?” ಎಂದು ಆಜಾದ್ ವ್ಯಂಗ್ಯವಾಡಿದರು.

ಸಂಸದರು ಮತ್ತು ಮಾಜಿ ಮಂತ್ರಿಗಳು ಸೇರಿದಂತೆ 23 ಕಾಂಗ್ರೆಸ್ ಮುಖಂಡರು ಪಕ್ಷದ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ, ‘ವ್ಯಾಪಕ ಸುಧಾರಣೆ, ನ್ಯಾಯಯುತ ಆಂತರಿಕ ಚುನಾವಣೆ, ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಕಾಲಿಕ ನಾಯಕತ್ವ’ದ ಬಗ್ಗೆ ಬೇಡಿಕೆ ಇಡಲಾಗಿತ್ತು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಪತ್ರ ಬರೆದಿರುವವರ ಮೇಲೆ ವಾಗ್ದಾಳಿ ಮಾಡಲಾಯಿತು. ಈ ಸಭೆಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಹಾಜರಿದ್ದರು. ಪತ್ರ ಬರೆದಿರುವವರನ್ನು ಖಂಡಿಸಿದ್ದನ್ನು ಬಿಟ್ಟರೆ, ಪತ್ರದಲ್ಲಿನ ವಿಷಯಗಳ ಚರ್ಚೆ ಮುನ್ನೆಲೆಗೆ ಬರಲೇ ಇಲ್ಲ. ಭಿನ್ನಮತೀಯ ಪತ್ರಕ್ಕೆ ದೇಶದಾದ್ಯಂತ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನ ನಡೆಯುವವರೆಗೂ ಸೋನಿಯಾ ಗಾಂಧಿ ಮಧ್ಯಂತರ ಮುಖ್ಯಸ್ಥರಾಗಿ ಉಳಿಯುತ್ತಾರೆ ಎಂದು ಘೋಷಿಸುವುದರೊಂದಿಗೆ ಅಂದಿನ ಸಭೆ ಕೊನೆಗೊಂಡಿತ್ತು.


ಇದನ್ನೂ ಓದಿ: ಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ ಸಂಕಷ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...