Homeಮುಖಪುಟನೇರವಾಗಿ ನೇಮಕಗೊಳ್ಳುವ ಅಧ್ಯಕ್ಷರಿಗೆ 1% ಬೆಂಬಲವೂ ಇಲ್ಲದಿರಬಹುದು!: ಗುಲಾಮ್ ನಬೀ

ನೇರವಾಗಿ ನೇಮಕಗೊಳ್ಳುವ ಅಧ್ಯಕ್ಷರಿಗೆ 1% ಬೆಂಬಲವೂ ಇಲ್ಲದಿರಬಹುದು!: ಗುಲಾಮ್ ನಬೀ

ಸೋನಿಯಾ ಗಾಂಧಿಗೆ ಬರೆಯಲಾಗಿದ್ದ, ಭಿನ್ನಮತೀಯ ಪತ್ರಕ್ಕೆ ಸಹಿ ಹಾಕಿದವರಲ್ಲಿ ಪ್ರಮುಖರಾದ ಆಜಾದ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಉನ್ನತ ಸಭೆ ನಡೆದ ನಾಲ್ಕು ದಿನಗಳ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ.

- Advertisement -
- Advertisement -

ಚುನಾವಣೆಯಲ್ಲಿ ಆಯ್ಕೆಯಾಗದೇ, ನೇರವಾಗಿ ನೇಮಕಗೊಳ್ಳುವ ಕಾಂಗ್ರೆಸ್ ಅಧ್ಯಕ್ಷರಿಗೆ ಪಕ್ಷದಲ್ಲಿ ಶೇ 1 ರಷ್ಟೂ ಬೆಂಬಲವೂ ಇಲ್ಲದಿರಬಹುದು ಎಂದು ಪಕ್ಷದ ಹಿರಿಯ ಮುಖಂಡ ಗುಲಾಮ್ ನಬಿ ಆಜಾದ್ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ.

ಸೋನಿಯಾ ಗಾಂಧಿಗೆ ಬರೆಯಲಾಗಿದ್ದ, ಭಿನ್ನಮತೀಯ ಪತ್ರಕ್ಕೆ ಸಹಿ ಹಾಕಿದವರಲ್ಲಿ ಪ್ರಮುಖರಾದ ಆಜಾದ್, ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಉನ್ನತ ಸಭೆ ನಡೆದ ನಾಲ್ಕು ದಿನಗಳ ನಂತರ ಈ ಹೇಳಿಕೆಯನ್ನು ನೀಡಿದ್ದಾರೆ.

“ನಾವು ನೀಡಿದ ಹೇಳಿಕೆ ಅಥವಾ ನಮ್ಮ ಅಭಿಪ್ರಾಯದ ಮೇಲೆ ದಾಳಿ ನಡೆಸುತ್ತಿರುವ ಪದಾಧಿಕಾರಿಗಳು, ರಾಜ್ಯ ಘಟಕದ ಅಧ್ಯಕ್ಷರು, ಜಿಲ್ಲಾ ಅಧ್ಯಕ್ಷರು ಮುಂತಾದವರು ಚುನಾವಣೆಯ ಸಂದರ್ಭದಲ್ಲಿ ಎಲ್ಲಿಯೂ ಕಾಣಸಿಗುವುದಿಲ್ಲ” ಎಂದು 71 ವರ್ಷದ ಗುಲಾಮ್ ನಬಿ ಆಜಾದ್ ಸುದ್ದಿ ಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆಂದು ಎನ್ ಡಿ ಟಿ ವಿ ವರದಿ ಮಾಡಿದೆ.

ಕಾಂಗ್ರೆಸ್ ನಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡವರು ನಮ್ಮ ಪತ್ರವನ್ನು ಖಂಡಿತಾ ಸ್ವಾಗತಿಸುತ್ತಾರೆ ಎಂದು ರಾಜ್ಯಸಭಾ ಸದಸ್ಯರಾಗಿರುವ ಆಜಾದ್ ಹೇಳಿದರು.

ಇದನ್ನೂ ಓದಿ: ಬೀದಿಯಲ್ಲಿ ಮಲಗಿದ್ದ ಬಾಲಕನ ಮೇಲೆ ಪೇದೆಯಿಂದ ಅಮಾನವೀಯ ಹಲ್ಲೆ: ಪೇದೆ ಅಮಾನತು

‘ರಾಜ್ಯ ಕಾಂಗ್ರೆಸ್ ಮುಖ್ಯಸ್ಥರು, ಜಿಲ್ಲಾಧ್ಯಕ್ಷರು, ಬ್ಲಾಕ್ ಅಧ್ಯಕ್ಷರು ಮತ್ತು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು ಆಯ್ಕೆ ಮಾಡುವಾಗ, ಚುನಾವಣೆಗೆ ನಿಲ್ಲುವವರ ಪರವಾದ ಮತಗಳು ಶೇಕಡಾ 51 ರಷ್ಟು ಇರಬೇಕಾಗುತ್ತದೆ. ಆದರೆ ಇದೀಗ, ನೇರ ನೇಮಕಾತಿಯ ಮೂಲಕ ಪಕ್ಷದ ಅಧ್ಯಕ್ಷರಾಗುವ ವ್ಯಕ್ತಿಗೆ ಶೇಕಡಾ 1 ರಷ್ಟೂ ಬೆಂಬಲವೂ ಇಲ್ಲದೇ ಹೋಗಬಹುದು! ಸಿಡಬ್ಲ್ಯೂಸಿ ಸದಸ್ಯರು ಒಮ್ಮೆ ಚುನಾಯಿತರಾದರೆ ಅವರನ್ನು ತೆಗೆದುಹಾಕಲಾಗುವುದಿಲ್ಲ. ಹಾಗಾಗಿ ನಿಮಗೇನು ಸಮಸ್ಯೆ?” ಎಂದು ಆಜಾದ್ ವ್ಯಂಗ್ಯವಾಡಿದರು.

ಸಂಸದರು ಮತ್ತು ಮಾಜಿ ಮಂತ್ರಿಗಳು ಸೇರಿದಂತೆ 23 ಕಾಂಗ್ರೆಸ್ ಮುಖಂಡರು ಪಕ್ಷದ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ, ‘ವ್ಯಾಪಕ ಸುಧಾರಣೆ, ನ್ಯಾಯಯುತ ಆಂತರಿಕ ಚುನಾವಣೆ, ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಕಾಲಿಕ ನಾಯಕತ್ವ’ದ ಬಗ್ಗೆ ಬೇಡಿಕೆ ಇಡಲಾಗಿತ್ತು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಪತ್ರ ಬರೆದಿರುವವರ ಮೇಲೆ ವಾಗ್ದಾಳಿ ಮಾಡಲಾಯಿತು. ಈ ಸಭೆಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಹಾಜರಿದ್ದರು. ಪತ್ರ ಬರೆದಿರುವವರನ್ನು ಖಂಡಿಸಿದ್ದನ್ನು ಬಿಟ್ಟರೆ, ಪತ್ರದಲ್ಲಿನ ವಿಷಯಗಳ ಚರ್ಚೆ ಮುನ್ನೆಲೆಗೆ ಬರಲೇ ಇಲ್ಲ. ಭಿನ್ನಮತೀಯ ಪತ್ರಕ್ಕೆ ದೇಶದಾದ್ಯಂತ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನ ನಡೆಯುವವರೆಗೂ ಸೋನಿಯಾ ಗಾಂಧಿ ಮಧ್ಯಂತರ ಮುಖ್ಯಸ್ಥರಾಗಿ ಉಳಿಯುತ್ತಾರೆ ಎಂದು ಘೋಷಿಸುವುದರೊಂದಿಗೆ ಅಂದಿನ ಸಭೆ ಕೊನೆಗೊಂಡಿತ್ತು.


ಇದನ್ನೂ ಓದಿ: ಮುಟ್ಟಿನ ಸಮಯದಲ್ಲಿ ಪಿಪಿಇ ಜೊತೆಗೆ ಸ್ಯಾನಿಟರಿ ಪ್ಯಾಡ್ ಹಾಗೂ ಡೈಪರ್‌ ಕೂಡಾ ಧರಿಸಬೇಕು: ಮಹಿಳಾ ವೈದ್ಯೆಯರ ಸಂಕಷ್ಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...