Homeಚಳವಳಿಸ್ಕ್ರಾಲ್.ಇನ್ ಸಂಪಾದಕಿ ಸುಪ್ರಿಯಾ ಶರ್ಮ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಸ್ಕ್ರಾಲ್.ಇನ್ ಸಂಪಾದಕಿ ಸುಪ್ರಿಯಾ ಶರ್ಮ ಬಂಧನಕ್ಕೆ ಮಧ್ಯಂತರ ತಡೆ ನೀಡಿದ ಅಲಹಾಬಾದ್ ಹೈಕೋರ್ಟ್

ಪ್ರಧಾನಿ ನರೇಂದ್ರ ಮೋದಿಯ ಕ್ಷೇತ್ರ ವಾರಣಾಸಿಯಲ್ಲಿ ದತ್ತು ಪಡೆದ ಡೊಮರಿ ಗ್ರಾಮದ ಜನರ ಕಳಪೆ ಜೀವನದ ಪರಿಸ್ಥಿತಿಯನ್ನು ವರದಿಯನ್ನು ದಿ ಸ್ಕ್ರೋಲ್ ಮಾಡಿದ್ದಕ್ಕಾಗಿ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

- Advertisement -
- Advertisement -

ಖ್ಯಾತ ಸುದ್ದಿ ಪೋರ್ಟಲ್ ಸ್ಕ್ರಾಲ್.ಇನ್ ಸಂಪಾದಕರಾದ ಸುಪ್ರಿಯಾ ಶರ್ಮಾ ಮತ್ತು ನರೇಶ್ ಫರ್ನಾಂಡಿಸ್ ತಮ್ಮ ವಿರುದ್ಧ ದಾಖಲಾದ ಎಫ್‌ಐಆರ್ ಅನ್ನು ರದ್ದುಗೊಳಿಸುವಂತೆ ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಲ್ಲಿಸಿದ್ದ ಅರ್ಜಿಯನ್ನು ಪರಿಗಣಿಸಿದ ಅಲಹಾಬಾದ್ ಹೈಕೋರ್ಟ್ ಅವರ ಬಂಧನಕ್ಕೆ ಮಧ್ಯಂತರ ತಡೆ ನೀಡಿ ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಮನೋಜ್ ಮಿಶ್ರಾ ಮತ್ತು ಅನಿಲ್ ಕುಮಾರ್ ಅವರನ್ನೊಳಗೊಂಡ ವಿಭಾಗೀಯ ನ್ಯಾಯಪೀಠವು, “ಪ್ರಕರಣದ ಸಂಗತಿಗಳು, ಸನ್ನಿವೇಶಗಳನ್ನು ಪರಿಗಣಿಸಿ ಮತ್ತು ಅರ್ಜಿದಾರರು ಪ್ರಕಟಣೆಗೆ ಸಂಬಂಧಿಸಿದ ಸಂದರ್ಶನದ ಆಡಿಯೊ ರೆಕಾರ್ಡಿಂಗ್ ಹೊಂದಿದ್ದಾರೆಂದು ಹೇಳಿಕೊಂಡಿದ್ದಾರೆ. ಅದರಲ್ಲಿರುವ ವಿಷಯಗಳು ಪ್ರಕಟಣೆಯಲ್ಲಿ ಪ್ರತಿಫಲಿಸುತ್ತವೆ.

ಹಾಗಾಗಿ ತನಿಖೆಯನ್ನು ಒದಗಿಸುವ ಮೂಲಕ ಈ ಅರ್ಜಿಯನ್ನು ವಿಲೇವಾರಿ ಮಾಡುವುದು ಸೂಕ್ತವೆಂದು ನಾವು ಭಾವಿಸುತ್ತೇವೆ. ಪ್ರಕರಣವು ಅದರ ತಾರ್ಕಿಕ ತೀರ್ಮಾನಕ್ಕೆ ಬರಲಿದೆ. ಆದರೆ ಸೆಕ್ಷನ್ 173 (2) ಸಿಆರ್ಪಿಸಿ ಅಡಿಯಲ್ಲಿ, ಅವರು ತನಿಖೆಯಲ್ಲಿ ಸಹಕರಿಸಿದರೆ ಪೊಲೀಸ್ ವರದಿಯನ್ನು ಸಲ್ಲಿಸುವವರೆಗೆ ಅರ್ಜಿದಾರರನ್ನು ಮೇಲಿನ ಪ್ರಕರಣದಲ್ಲಿ ಬಂಧಿಸಬಾರದು” ಎಂದು ಹೇಳಿದೆ.

ಆದರೆ, ನ್ಯಾಯಾಲಯವು ಅವರ ವಿರುದ್ಧ ಎಫ್ಐಆರ್ ರದ್ದುಗೊಳಿಸಲು ನಿರಾಕರಿಸಿದೆ.

ಇದನ್ನೂ ಓದಿ: “ಎಷ್ಟು ಸಾಧ್ಯವೋ ಅಷ್ಟು ಕೇಸ್ ಜಡಿದುಬಿಡಿ!” : ಪತ್ರಕರ್ತರ ಮೇಲಿನ ಪ್ರಭುತ್ವದ ದಮನಕ್ಕೆ ಪರಿಹಾರವೇನು?

ಪ್ರಧಾನಿ ನರೇಂದ್ರ ಮೋದಿ ತಮ್ಮ ವಾರಣಾಸಿ ಕ್ಷೇತ್ರದಲ್ಲಿ ದತ್ತು ಪಡೆದ ಡೊಮರಿ ಗ್ರಾಮದಲ್ಲಿನ ಜನರ ಕಳಪೆ ಜೀವನದ ಪರಿಸ್ಥಿತಿಗಳನ್ನು ದಿ ಸ್ಕ್ರೋಲ್ ವರದಿ ಮಾಡಿತ್ತು. ಇದಕ್ಕಾಗಿ ಸಂಪಾದಕರ ಮೇಲೆ ಪ್ರಕರಣ ದಾಖಲಿಸಲಾಗಿತ್ತು.

“ಲಾಕ್‌ಡೌನ್ ಸಮಯದಲ್ಲಿ ಜನರು ಹಸಿವಿನಿಂದ ಬಳಲುತ್ತಿದ್ದರು” ಎಂಬ ಶೀರ್ಷಿಕೆಯ ವರದಿಯಲ್ಲಿ, ಲಾಕ್‌ಡೌನ್ ಸಮಯದಲ್ಲಿ ಜನರು ಆಹಾರ ಅಥವಾ ಪಡಿತರ ಕೊರತೆ ಸೇರಿದಂತೆ ತೀವ್ರ ಸಂಕಷ್ಟಗಳನ್ನು ಎದುರಿಸಿದ್ದಾಗಿ ಮಾಲಾ ಎಂಬುವವರು ಹೇಳಿದ್ದಾರೆಂದು ಶರ್ಮಾ ಉಲ್ಲೇಖಿಸಿದ್ದರು.

ಆದರೆ, ತಾನು ವಾರಣಾಸಿ ನಗರ ಪುರಸಭೆಯಲ್ಲಿ ಹೊರಗುತ್ತಿಗೆ ನೈರ್ಮಲ್ಯ ಕಾರ್ಯಕರ್ತೆ ಎಂದು ಹೇಳಿಕೊಂಡಿದ್ದ ಅವರು, ಲಾಕ್‌ಡೌನ್ ಸಮಯದಲ್ಲಿ ತಾನು ಯಾವುದೇ ತೊಂದರೆಗಳನ್ನು ಎದುರಿಸಲಿಲ್ಲ ಎಂದು ಹೇಳುತ್ತಿದ್ದಾರೆ.

ಶರ್ಮಾ ಅವರೊಂದಿಗಿನ ಸಂದರ್ಶನವನ್ನು ನೆನಪಿಸಿಕೊಂಡ ಮಾಲಾ ದೇವಿ, “ಅವರು ನನ್ನನ್ನು ಲಾಕ್ ಡೌನ್ ಬಗ್ಗೆ ಕೇಳಿದರು; ನಾನು ಅಥವಾ ನನ್ನ ಕುಟುಂಬದ ಯಾರೊಬ್ಬರೂ ಯಾವುದೇ ಸಮಸ್ಯೆಗಳನ್ನು ಎದುರಿಸಲಿಲ್ಲ ಎಂದು ನಾನು ಅವರಿಗೆ ಹೇಳಿದ್ದೆ” ಎಂದು ಹೇಳಿದರು.

ಇದನ್ನೂ ಓದಿ: ಸರ್ವಾಧಿಕಾರಿ ಹಿಡಿತದಲ್ಲಿ ನಲುಗುತ್ತಿರುವ ಆಫ್ರಿಕಾದ ಎರಿಟ್ರಿಯಾ ದೇಶದ ಪತ್ರಕರ್ತರು, ಬರಹಗಾರರು

ಎಫ್‌ಐಆರ್‌ನಲ್ಲಿ ಮಾಲಾ ದೇವಿ, “ನಾನು ಮತ್ತು ಮಕ್ಕಳು ಹಸಿವಿನಿಂದ ಬಳಲುತ್ತಿದ್ದೇವೆ ಎಂದು ಹೇಳುವ ಮೂಲಕ, ಸುಪ್ರಿಯಾ ಶರ್ಮಾ ನನ್ನ ಬಡತನ ಮತ್ತು ನನ್ನ ಜಾತಿಯನ್ನು ಗೇಲಿ ಮಾಡಿದ್ದಾರೆ. ಅವರು ನನ್ನ ಭಾವನೆಗಳನ್ನು ನೋಯಿಸಿದ್ದಾರೆ” ಎಂದು ಹೇಳಿದರು.

ಸೆಕ್ಷನ್ 269, 501 ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ. ದೂರು ನೀಡಿದ ಮಹಿಳೆಯು ಎಫ್‌ಐಆರ್‌ನಲ್ಲಿ ತಮ್ಮ ಸಮುದಾಯವನ್ನು ಅವಮಾನಿಸಲಾಗಿದೆ ಎಂದು ಆರೋಪಿಸಿದ್ದಾರೆ.

ಈ ಆರೋಪಗಳನ್ನು ನಿರಾಕರಿಸಿದ ಸುಪ್ರಿಯಾ ಶರ್ಮಾ, “ಸಂದರ್ಶನದ ಆಡಿಯೊ ರೆಕಾರ್ಡಿಂಗ್ ಮಾಡಿರುವುದಾಗಿ, ಕೆಲವು ವ್ಯಕ್ತಿಗಳ ವಾಸ್ತವಿಕ ಸ್ಥಿತಿಯನ್ನು ತೋರಿಸಲು ಸಾರ್ವಜನಿಕ ಹಿತಾಸಕ್ತಿಯಿಂದ ಇದನ್ನು ಪ್ರಕಟಿಲಾಗಿದೆ” ಎಂದು ಹೇಳಿದ್ದಾರೆ.

“ಮಾಲಾ ದೇವಿಯವರ ಹೇಳಿಕೆಗಳನ್ನು ನಿಖರವಾಗಿ ವರದಿ ಮಾಡಲಾಗಿದೆ. ಇದು ಸ್ವತಂತ್ರ ಮತ್ತು ದಿಟ್ಟತನದ ಪತ್ರಿಕೆಗೆ ಬೆದರಿಕೆಯೊಡ್ಡುವ ಪ್ರಕರಣವಾಗಿದೆ” ಎಂದು ಸ್ಕ್ರಾಲ್.ಇನ್ ಹೇಳಿಕೆ ನೀಡಿದೆ.


ಇದನ್ನೂ ಓದಿ: ಕಾನೂನಿನ ದುರುಪಯೋಗ: ಸ್ಕ್ರೋಲ್.ಇನ್ ಸಂಪಾದಕರ ಮೇಲಿನ FIR ರದ್ಧತಿಗೆ ಅರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...