Homeಕರ್ನಾಟಕಮಧುಗಿರಿ ಇಒ, ಬ್ಯಾಲ್ಯ ಪಿಡಿಒರಿಂದ ತಾರತಮ್ಯ - ಕ್ರಮ ಕೈಗೊಳ್ಳುವಂತೆ ದಲಿತ ಕುಟುಂಬಗಳ ಆಗ್ರಹ

ಮಧುಗಿರಿ ಇಒ, ಬ್ಯಾಲ್ಯ ಪಿಡಿಒರಿಂದ ತಾರತಮ್ಯ – ಕ್ರಮ ಕೈಗೊಳ್ಳುವಂತೆ ದಲಿತ ಕುಟುಂಬಗಳ ಆಗ್ರಹ

ತಾಲೂಕು ಪಂಚಾಯ್ತಿ ಇಒ ದೊಡ್ಡ ಸಿದ್ದಪ್ಪ ಮತ್ತು ಬ್ಯಾಲ್ಯ ಗ್ರಾಮ ಪಂಚಾಯಿತಿ ಪಿಡಿಒ ಸಂತೋಷ್ ಸಿಂಗ್ ಮೇಲ್ಜಾತಿಯವರ ಪರ ನಿಂತಿದ್ದಾರೆ.

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ನಿವೇಶನ ರಹಿತರಿಗೆ ನಿವೇಶನ ನೀಡುವಂತೆ ಒತ್ತಾಯಿಸಿ ಹಾಗೂ ಮಧುಗಿರಿ ಇಒ ಮತ್ತು ಬ್ಯಾಲ್ಯ ಪಿಡಿಒರಿಂದ ತಾರತಮ್ಯ ವಿರೋಧಿಸಿ ಭೂಮಿ ಮತ್ತು ವಸತಿ ಹಕ್ಕಿಗಾಗಿ ಹೋರಾಟ ಸಮಿತಿ ಮುಖಂಡರು ಜಿಲ್ಲಾ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಎಸ್ಪಿ ಅವರಿಗೆ ಮನವಿ ಸಲ್ಲಿಸಿದೆ.

ತುಮಕೂರು ಜಿಲ್ಲೆಯಲ್ಲಿ  ನೂರಾರು ದಲಿತ ಕುಟುಂಬಗಳು ನಿವೇಶನವಿಲ್ಲದೆ ಮನೆಯಿಲ್ಲದೆ ತೊಂದರೆ ಅನುಭವಿಸುತ್ತಿವೆ. ಹಲವು ಬಾರಿ ಹೋರಾಟ ಮಾಡಿ ಮನವಿ ಸಲ್ಲಿಸಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ನಿವೇಶನ ರಹಿತ ದಲಿತ ಕುಟುಂಬಗಳ ಜೊತೆ ಈ ಅಧಿಕಾರಿಗಳು ಚಲ್ಲಾಟವಾಡುತ್ತಿದ್ದಾರೆ ಎಂದು ಸಮಿತಿ ದೂರಿದೆ.

ಇದನ್ನೂ ಓದಿ: ಸಿಂದಗಿ ದಲಿತ ಯುವಕನ ಹತ್ಯೆ: ಬಿಜೆಪಿ ನೀಡುತ್ತಿರುವ ಬೆಂಬಲವೇ ಕೃತ್ಯಕ್ಕೆ ಕಾರಣವೆಂದ ಸಿದ್ದರಾಮಯ್ಯ

ಭೂಮಿ ಮತ್ತು ವಸತಿಗಾಗಿ ತುಮಕೂರು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಲಾಯಿತು. ಪ್ರತಿಭಟನೆಗೆ ಸ್ಪಂದಿಸಿದ ಜಿಲ್ಲಾಧಿಕಾರಿಗಳು ನಿವೇಶನ ಕೊಡಿಸುವ ಭರವಸೆ ನೀಡಿದರು.  ಆದರೆ ಕೆಳಹಂತ ಅಧಿಕಾರಿಗಳು ಬೇಜವಾಬ್ದಾರಿಯಿಂದ ನಡೆಸುಕೊಳ್ಳುತ್ತಿದ್ದಾರೆ ಎಂದು ಸಂಚಾಲಕ ಹಂದ್ರಾಳ್ ನಾಗಭೂಷನ್ ಆರೋಪಿಸಿದರು.

“ಮಧುಗಿರಿ ತಾಲೂಕು ಬ್ಯಾಲ್ಯ ಗ್ರಾಮದಲ್ಲಿ 10 ದಲಿತ ಕುಟುಂಬಗಳು ಮನೆಯಿಲ್ಲದೆ ರಸ್ತೆ ಬದಿಯಲ್ಲಿ ವಾಸ ಮಾಡುತ್ತಿವೆ. ಇವರಿಗೆ ಗ್ರಾಮಠಾಣದಲ್ಲಿ ನಿವೇಶನ ನೀಡಬೇಕು ಎಂದು ಮನವಿ ಸಲ್ಲಿಸಿದೆ. ಜಿಲ್ಲಾಧಿಕಾರಿಗಳು ಕೂಡಲೇ ಜಾಗ ಗುರುತಿಸಿ ನಿವೇಶನ ನೀಡುವಂತೆ ಸೂಚಿಸಿದರು. ಆದರೆ ಗ್ರಾಮ ಪಂಚಾಯ್ತಿ ಅಧ್ಯಕ್ಷರ ಕುಮ್ಮಕ್ಕಿನ ಮೇಲೆ ಪಿಡಿಒ ಮತ್ತು ತಾಲೂಕು ಪಂಚಾಯ್ತಿ ಕಾರ್ಯನಿರ್ವಹಣಾಧಿಕಾರಿಗಳು ಬೇಕೆಂದೇ ಕರ್ತವ್ಯ ಲೋಪ ಎಸಗಿ ಬಡಕುಟುಂಬಗಳಿಗೆ ಅನ್ಯಾಯ ಮಾಡಿವೆ” ಎಂದು ಅವರು ಟೀಕಿಸಿದರು.

ಇಒ ದೊಡ್ಡಸಿದ್ದಪ್ಪ ಮತ್ತು ಬ್ಯಾಲ್ಯ ಗ್ರಾಮ ಪಂಚಾಯಿತಿ ಪಿಡಿಒ ಸಂತೋಷ್ ಸಿಂಗ್ ಮೇಲ್ಜಾತಿಯವರ ಪರ ನಿಂತಿದ್ದಾರೆ. ದಲಿತರಿಗೆ ಅನ್ಯಾಯ ಮಾಡುತ್ತಿದ್ದಾರೆ. ಜಿಲ್ಲಾಧಿಕಾರಿಗಳ ಮೌಖಿಕ ನಿರ್ದೇಶನವನ್ನು ಧಿಕ್ಕರಿಸಿ  ಗ್ರಾಮ ಪಂಚಾಯ್ತಿ ಅಧ್ಯಕ್ಷರೊಂದಿಗೆ ಶಾಮೀಲಾಗಿ ಕರ್ತವ್ಯಲೋಪ ಎಸಗಿರುವ ಪಿಡಿಒ, ಇಒ ಮತ್ತು ಅಧ್ಯಕ್ಷರ ವಿರುದ್ದ ದಲಿತ ದೌರ್ಜನ್ಯ ಕಾಯ್ದೆಯನ್ವಯ ಕ್ರಮ ಕೈಗೊಳ್ಳುವಂತೆ ನೊಂದ ಕುಟುಂಬಗಳು ಆಗ್ರಹಿಸಿದೆ.

ಇದನ್ನೂ ಓದಿ: ಮಧ್ಯಪ್ರದೇಶ: ದಲಿತ ಯುವಕನ ಮೇಲೆ ಮಾರಣಾಂತಿಕ ಹಲ್ಲೆ- ಆತನ ಮೇಲೆಯೇ ದೂರು ದಾಖಲಿಸಿದ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...