Homeಕರ್ನಾಟಕಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ?: ಸಿದ್ದರಾಮಯ್ಯ ಕಿಡಿ

ರಾಜ್ಯದ 25 ಸಂಸದರು ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ.

- Advertisement -
- Advertisement -

ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.

ಜಿಎಸ್‌ಟಿ ಪರಿಹಾರವನ್ನು ನೀಡುವುದಿಲ್ಲ ಎಂಬ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ನಿಲುವು ರಾಜ್ಯಕ್ಕೆ ಮಾಡಿರುವ ಘೋರ ಅನ್ಯಾಯ. ಈ ಅನ್ಯಾಯವನ್ನು ಪ್ರತಿಭಟಿಸದೆ ಬಾಯಿ ಮುಚ್ಚಿಕೊಂಡು ಒಪ್ಪಿಕೊಂಡ ರಾಜ್ಯ ಸರ್ಕಾರ ರಾಜ್ಯದ ಜನತೆಗೆ ದ್ರೋಹ ಎಸಗಿದೆ. ಇದನ್ನು ಸಹಿಸಲು ಸಾಧ್ಯ ಇಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಸಿಂದಗಿ ದಲಿತ ಯುವಕನ ಹತ್ಯೆ: ಬಿಜೆಪಿ ನೀಡುತ್ತಿರುವ ಬೆಂಬಲವೇ ಕೃತ್ಯಕ್ಕೆ ಕಾರಣವೆಂದ ಸಿದ್ದರಾಮಯ್ಯ

ಪ್ರವಾಹ ಪೀಡಿತ ಜನರಿಗೆ ಪರಿಹಾರ ನೀಡಲು ದುಡ್ಡಿಲ್ಲ ಎಂದು ಒಂದು ಕಡೆ ಮುಖ್ಯಮಂತ್ರಿಗಳು ಕಣ್ಣೀರು ಹಾಕುತ್ತಿದ್ದಾರೆ. ಇನ್ನೊಂದೆಡೆ ನಮಗೆ ನೀಡಬೇಕಾಗಿರುವ ನ್ಯಾಯಬದ್ಧ ಜಿಎಸ್‌ಟಿ ಪರಿಹಾರವನ್ನು ಕೊಡಲಾಗುವುದಿಲ್ಲ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಕರ್ನಾಟಕದ ಜನ ಏನು ಮಾಡಬೇಕು? ಮಣ್ಣು ತಿನ್ನಬೇಕಾ? ಎಂದು ಅವರು ಟ್ವೀಟ್‌ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ

ಸಂವಿಧಾನದ 101 ನೇ ತಿದ್ದುಪಡಿ ಮೂಲಕ ಜಾರಿಗೆ ಬಂದಿರುವ ಜಿಎಸ್‌ಟಿ ಕಾಯ್ದೆಯ ಸೆಕ್ಷನ್ 18 ರ ಪ್ರಕಾರ ಜಿಎಸ್‌ಟಿಯಿಂದ ಆಗುವ ನಷ್ಟಕ್ಕೆ ಐದು ವರ್ಷಗಳ ಕಾಲ ಪರಿಹಾರ ನೀಡಬೇಕಾಗಿರುವುದು ಕೇಂದ್ರದ ಸಂವಿಧಾನಾತ್ಮಕ ಕರ್ತವ್ಯ. ಈ ಪರಿಹಾರದ ನಿರಾಕರಣೆಯೆಂದರೆ ರಾಜ್ಯದ ಸಾಂವಿಧಾನಿಕ ಹಕ್ಕಿನ ಉಲ್ಲಂಘನೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಬಿಜೆಪಿ ನಳಿನ್ ಕುಮಾರ್‌ ಎಂಬ ’ನಕಲಿ ಶ್ಯಾಮ’ನನ್ನು ಅಧ್ಯಕ್ಷ ಸ್ಥಾನಕ್ಕೇರಿಸಿದೆ: ಸಿದ್ದರಾಮಯ್ಯ ವ್ಯಂಗ್ಯ

ನಾಲ್ಕು ತಿಂಗಳ ಒಟ್ಟು ಜಿಎಸ್‌ಟಿ ಪರಿಹಾರ ರೂ.13,764 ಕೋಟಿ ರಾಜ್ಯಕ್ಕೆ ಬರಬೇಕಾಗಿದೆ ಎಂದಿರುವ ಅವರು, ಇದು ಕೇಂದ್ರ ಮತ್ತು ರಾಜ್ಯಗಳು ಮಾಡಿಕೊಂಡ ಒಡಂಬಡಿಕೆ. ಈಗ ನಮ್ಮ ಖಜಾನೆಯಲ್ಲಿ ದುಡ್ಡಿಲ್ಲ, ನೀವು ಬೇಕಿದ್ದರೆ ಆರ್‌ಬಿಐ ನಲ್ಲಿ ಸಾಲ ಮಾಡಿ ತೀರಿಸಿಕೊಳ್ಳಿ ಎಂದರೆ ಇದು ಯಾವೂರ ನ್ಯಾಯ ಪ್ರಧಾನಿಗಳೇ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ರಾಜ್ಯಕ್ಕೆ ಬರಬೇಕಾಗಿರುವ ಅನುದಾನಗಳು‌ ಕಡಿತಗೊಳ್ಳುತ್ತಲೇ ಬಂದಿದೆ. 14ನೇ ಹಣಕಾಸು ಆಯೋಗದಡಿ ಕೇಂದ್ರ ತೆರಿಗೆಯಲ್ಲಿ ಶೇಕಡಾ 4.7 ರಷ್ಟು ಪಾಲು ಕರ್ನಾಟಕಕ್ಕೆ ಸಿಗುತ್ತಿದ್ದರೆ, 15ನೇ ಹಣಕಾಸು ಆಯೋಗ ಅದನ್ನು ಶೇಕಡಾ 3.6ಕ್ಕೆ ಇಳಿಸಿದೆ. ಈಗ ಇನ್ನೊಂದು ಅನ್ಯಾಯ ಎಂದು ಅವರು ಹೇಳಿದ್ದಾರೆ.

ಜಿಎಸ್‌ಟಿ ಮಂಡಳಿ ಸಭೆಯಲ್ಲಿ ಭಾಗವಹಿಸಿದ್ದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿ ಜಿಎಸ್‌ಟಿ ಸಂಗ್ರಹ ಶೇಕಡಾ 71 ರಷ್ಟಾಗಿದೆ ಎಂದು ಹೇಳಿದ್ದಾರೆ. ಹೀಗಿದ್ದರೂ ನಮ್ಮ ತೆರಿಗೆ ಹಣವನ್ನು ನಮಗೆ ನೀಡಲು ನಿರಾಕರಿಸುತ್ತಿರುವುದು ರಾಜ್ಯದ ಜನರಿಗೆ ಮಾಡುತ್ತಿರುವ ಮೋಸ ಅಲ್ಲವೇ? ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷ ಅಧಿಕಾರದಲ್ಲಿದ್ದರೆ ಭಾಗ್ಯದ ಬಾಗಿಲು ತೆರೆಯಲಿದೆ ಎಂದು ಬಿಜೆಪಿ ಹೇಳಿತ್ತು. ಇದನ್ನು ನಂಬಿದ ಜನತೆ 25 ಸಂಸದರನ್ನು ಆರಿಸಿ ಕಳಿಸಿದರು. ಇವರೆಲ್ಲ ಪ್ರಧಾನಿ ಎದುರು ಮಾತು ಬಾರದ ಕೀಲಿ ಗೊಂಬೆಗಳಂತೆ ವರ್ತಿಸುತ್ತಾ ರಾಜ್ಯದ ಹಿತಶತ್ರುಗಳಾಗಿ ಹೋಗಿದ್ದಾರೆ ಎಂದು ರಾಜ್ಯದ ಬಿಜೆಪಿ ಸಂಸದರನ್ನು ವ್ಯಂಗ್ಯವಾಡಿದ್ದಾರೆ.


ಓದಿ: ನಾವು ದೀಪ ಹಚ್ಚುವವರ ಪರ, ಬೆಂಕಿ ಹಚ್ಚುವವರ ಪರ ಅಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...