Homeಮುಖಪುಟಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ

ಜಮ್ಮು ಕಾಶ್ಮೀರಕ್ಕೆ ಹೊಸ ಆಡಳಿತ ನಿಯಮ ಪ್ರಕಟಿಸಿದ ಗೃಹ ಸಚಿವಾಲಯ

ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ, ಅಖಿಲ ಭಾರತೀಯ ಸೇವೆ ಮತ್ತು ಭ್ರಷ್ಟಾಚಾರ ನಿಗ್ರಹ ವ್ಯವಸ್ಥೆಗಳಲ್ಲಿ ಮುಖ್ಯಮಂತ್ರಿಗೆ ಅಧಿಕಾರ ಇಲ್ಲ

- Advertisement -
- Advertisement -

ವರ್ಷಗಳ ಹಿಂದೆ ಕೇಂದ್ರಾಡಳಿತ ಪ್ರದೇಶ ಎಂದು ಘೋಷಿಸಲ್ಪಟ್ಟ ಜಮ್ಮು ಕಾಶ್ಮೀರದಲ್ಲಿ ಲೆಫ್ಟಿನೆಂಟ್ ಗವರ್ನರ್ ಮತ್ತು ಸಚಿವರ ಸಮಿತಿಯ ಕಾರ್ಯಗಳನ್ನು ನಿಖರಗೊಳಿಸುವ ಹೊಸ ನಿಯಮಗಳನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಪ್ರಕಟಿಸಿದೆ.

ಪೊಲೀಸ್, ಸಾರ್ವಜನಿಕ ಸುವ್ಯವಸ್ಥೆ, ಅಖಿಲ ಭಾರತೀಯ ಸೇವೆ ಮತ್ತು ಭ್ರಷ್ಟಾಚಾರ ನಿಗ್ರಹ ವ್ಯವಸ್ಥೆಗಳು ಲೆಫ್ಟಿನೆಂಟ್ ಗವರ್ನರ್ ಕಾರ್ಯನಿರ್ವಹಣೆಯಡಿ ಬರುತ್ತವೆ ಎಂದು ಹೊಸ ವ್ಯವಹಾರ ನಿಯಮ ಹೇಳುತ್ತದೆ. ಸಚಿವರ ಸಮಿತಿ ಅಥವಾ ಮುಖ್ಯಮಂತ್ರಿಗೆ ಈ ಕಾರ್ಯ ವ್ಯವಸ್ಥೆಯಲ್ಲಿ ಯಾವುದೇ ಅಧಿಕಾರ ಇಲ್ಲ.

ಇದನ್ನೂ ಓದಿ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ ಒಂದುಗೂಡಿದ ಆರು ಪಕ್ಷಗಳು

ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಹೊರಡಿಸಿದ ಅಧಿಸೂಚನೆ, ಕೇಂದ್ರಾಡಳಿತ ಪ್ರದೇಶದ ಶಾಂತಿ ಮತ್ತು ನೆಮ್ಮದಿಯ ಮೇಲೆ ಅಥವಾ ಅಲ್ಪಸಂಖ್ಯಾತ ಸಮುದಾಯ, ಎಸ್‌ಸಿ/ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಮೇಲೆ ಪರಿಣಾಮ ಬೀರುವ ಅಥವಾ ಬೀಳಬಹುದಾದ ಯಾವುದೇ ವಿಷಯ ಅಥವಾ ಪ್ರಸ್ತಾವನೆಗೆ ಸಂಬಂಧಿಸಿ ಆದೇಶ ಹೊರಡಿಸುವ ಮುನ್ನ ಮುಖ್ಯ ಕಾರ್ಯದರ್ಶಿಗಳ ಮೂಲಕ ಮುಖ್ಯಮಂತ್ರಿಗೆ ತಿಳಿಸಿ ಲೆಫ್ಟಿನೆಂಟ್ ಗವರ್ನರ್‌ಗೆ ಸಲ್ಲಿಸಬೇಕು ಎಂದು ಹೇಳಿದೆ.

ಹೊಸ ತೆರಿಗೆ ವಿಧಿಸುವ ಪ್ರಸ್ತಾವನೆ, ಭೂಕಂದಾಯ, ಸರಕಾರಿ ಆಸ್ತಿಯ ಮಾರಾಟ ಅಥವಾ ಲೀಸ್ ಒಪ್ಪಂದ, ಇಲಾಖೆ ಅಥವಾ ಅಧಿಕಾರಿಗಳ ಮರು ಸಂಯೋಜನೆ, ಮಸೂದೆ ರೂಪಿಸುವುದು ಮುಂತಾದ ಅಖಿಲ ಭಾರತೀಯ ಸೇವೆಯ ಅಧಿಕಾರಿಗಳಿಗೆ ಸಂಬಂಧಿಸದ ಕೆಲಸಗಳನ್ನು ಮುಖ್ಯಮಂತ್ರಿ ನೇತೃತ್ವದ ಸಚಿವರ ಸಮಿತಿ ನಿರ್ಧರಿಸುತ್ತದೆ.

ಇದನ್ನೂ ಓದಿ: ಕಾಶ್ಮೀರದ ಪ್ರಜಾಸತ್ತಾತ್ಮಕ ಹೋರಾಟಕ್ಕೆ ಪ್ರೇರೇಪಣೆಯ ಗೌತಮ್ ನೌಲಾಖ

ಲೆಫ್ಟಿನೆಂಟ್ ಗವರ್ನರ್ ಮತ್ತು ಸಚಿವರ ಮಧ್ಯೆ ಭಿನ್ನಾಭಿಪ್ರಾಯ ಮೂಡಿ, ಆರು ತಿಂಗಳ ಬಳಿಕವೂ ಒಮ್ಮತಾಭಿಪ್ರಾಯ ಮೂಡದಿದ್ದರೆ ಆಗ ಲೆಫ್ಟಿನೆಂಟ್ ಗವರ್ನರ್ ಅವರ ನಿರ್ಧಾರವನ್ನು ಸಚಿವ ಸಮಿತಿ ಒಪ್ಪಬೇಕಾಗುತ್ತದೆ. ಕೇಂದ್ರಾಡಳಿತ ಪ್ರದೇಶದ ಸರಕಾರ ಮತ್ತು ಕೇಂದ್ರ ಸರಕಾರ, ರಾಜ್ಯ ಸರಕಾರಗಳ ಮಧ್ಯೆ ವಿವಾದಕ್ಕೆ ಕಾರಣವಾಗಬಲ್ಲ ಯಾವುದೇ ವಿಷಯವನ್ನು ಸಂಬಂಧಿತ ಇಲಾಖೆಯ ಕಾರ್ಯದರ್ಶಿ, ಮುಖ್ಯ ಕಾರ್ಯದರ್ಶಿಯ ಮೂಲಕ ಲೆಫ್ಟಿನೆಂಟ್ ಗವರ್ನರ್ ಮತ್ತು ಮುಖ್ಯಮಂತ್ರಿಯ ಗಮನಕ್ಕೆ ತರಬೇಕು ಎಂದು ಸೂಚಿಸಲಾಗಿದೆ.

ಪ್ರಧಾನಿ ಹಾಗೂ ಇತರ ಕೇಂದ್ರ ಸಚಿವರ ಸಹಿತ ದೈನಂದಿನ ವಿಷಯ ಮತ್ತು ಪ್ರಾಮುಖ್ಯವಿಲ್ಲದ ವಿಷಯ ಹೊರತುಪಡಿಸಿ ಕೇಂದ್ರ ಸರಕಾರದಿಂದ ಬರುವ ಎಲ್ಲಾ ಮಾಹಿತಿಗಳನ್ನುತಕ್ಷಣ ಮುಖ್ಯ ಕಾರ್ಯದರ್ಶಿ, ಆಯಾ ಖಾತೆಯ ಸಚಿವ, ಮುಖ್ಯಮಂತ್ರಿ ಮತ್ತು ಲೆಫ್ಟಿನೆಂಟ್ ಗವರ್ನರ್ ಗಮನಕ್ಕೆ ತರಬೇಕು ಎಂದು ನಿಯಮಾವಳಿಯಲ್ಲಿ ಸೂಚಿಸಲಾಗಿದೆ.

ಶಾಲಾ ಶಿಕ್ಷಣ, ಕೃಷಿ, ಉನ್ನತ ಶಿಕ್ಷಣ, ತೋಟಗಾರಿಕೆ, ಚುನಾವಣೆ, ಸಾಮಾನ್ಯ ಆಡಳಿತ, ಗೃಹ, ಗಣಿಗಾರಿಕೆ, ಇಂಧನ, ಲೋಕೋಪಯೋಗಿ ಇಲಾಖೆ, ಬುಡಕಟ್ಟು ವ್ಯವಹಾರ, ಸಾರಿಗೆ ಸೇರಿದಂತೆ ಕೇಂದ್ರಾಡಳಿತ ಪ್ರದೇಶದಲ್ಲಿ 39 ಇಲಾಖೆಗಳಿರುತ್ತವೆ.


ಓದಿ: ನೀನೂ ಅಲ್ಲಿರಲಿಲ್ಲ: ಕಾಶ್ಮೀರದ ಜನರ ಸಂಕಟ, ತಲ್ಲಣ, ಅತಂತ್ರ-ಅನಿಶ್ಚಿತತೆಯನ್ನು ಕಟ್ಟಿಕೊಡುವ ಕವಿತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಪ್ರಾಧಿಕಾರ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...