Homeಕರ್ನಾಟಕಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್‌ ದಂಧೆ; ನಟಿಯರಿಂಲೇ ಹೆಚ್ಚು ಬೇಡಿಕೆ: ತನಿಖೆಯಿಂದ ಬಹಿರಂಗ

ಧಾರವಾಹಿ ಕಲಾವಿದೆಯರು ಕೂಡಾ ಇದರ ಗ್ರಾಹಕರು ಎಂದು ತನಿಖೆ ಬಹಿರಂಗ ಪಡಿಸಿದೆ

- Advertisement -
- Advertisement -

ಕನ್ನಡ ಚಿತ್ರರಂಗದಲ್ಲಿ ನಿರಂತರವಾಗಿ ಡ್ರಗ್ಸ್‌ ದಂದೆ ನಡೆಯುತ್ತಿದೆ ಎನ್ನಲಾಗಿದ್ದು, ನಟರಿಗಿಂತ ನಟಿಯರಿಂದಲೇ ಇದಕ್ಕೆ ಬೇಡಿಕೆ ಹೆಚ್ಚಾಗಿದ್ದು, ಧಾರವಾಹಿ ಕಲಾವಿದೆಯರು ಕೂಡಾ ಇದರ ಗ್ರಾಹಕರು ಎಂದು ತನಿಖೆಯಿಂದ ತಿಳಿದು ಬಂದಿದೆ.

ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್​ಸಿಬಿ) ಅಧಿಕಾರಿಗಳು ’ರಾಯಲ್ಸ್‌ ಸೂಟ್ಸ್‌ ಹೋಟೆಲ್’ ಅಪಾರ್ಟ್‌ಮೆಂಟ್ ಸಮುಚ್ಚಯದ ಪ್ಲಾಟ್‌ ಮೇಲೆ ದಾಳಿ ಮಾಡಿ ಡ್ರಗ್ಸ್ ದಂಧೆ ಒಬ್ಬ ಮಹಿಳೆ ಸೇರಿದಂತೆ ಮೂವರು ಆರೋಪಿಗಳನ್ನೂ ಬಂಧಿಸಿದ್ದರು. ಬಂಧಿತರನ್ನು ಡಿ ಅನಿಕಾ, ಅನೂಪ್ ಮೊಹಮದ್ ಮತ್ತು ರಾಜೇಶ್ ರವೀಂದ್ರನ್ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಹಜ್‌ ಯಾತ್ರೆಯಲ್ಲಿ ಪಾಕಿಸ್ತಾನಿ ಉಗ್ರಗಾಮಿಗಳನ್ನು ಅಮೀರ್‌ ಖಾನ್‌‌‌ ಭೇಟಿಯಾಗಿದ್ದು ನಿಜವೆ?

ತನಿಖೆಯ ವೇಳೆ ಹೆಸರಾಂತ ನಟ-ನಟಿಯರು, ಹಾಗೂ ಸಂಗೀತ ನಿರ್ದೇಶಕರ ಹೆಸರನ್ನು ಬಂಧಿತರು ಬಾಯಿಬಿಟ್ಟಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ನಟಿಯರು ಡ್ರಗ್ಸ್‌ನಿಂದ ಸೌಂದರ್ಯ ಹೆಚ್ಚಾಗುತ್ತದೆ ಎಂಬ ಮನೋಭಾವನೆಯಲ್ಲಿ ಇದನ್ನು ಬಳಸುತ್ತಿದ್ದರು ಎನ್ನಲಾಗಿದೆ. ಕಲಾವಿದರು ಮಾಡುತ್ತಿದ್ದ ಪಾರ್ಟಿಗಳೆ ಈ ಡ್ರಗ್ಸ್‌ ವ್ಯಾಪಾರದ ಕೇಂದ್ರವಾಗಿದ್ದು ಅಲ್ಲಿಂದಲೇ ಆರೋಪಿಗಳು ಡ್ರಗ್ಸ್‌ ಪೂರೈಕೆ ಮಾಡುತ್ತಿದ್ದರು ಎಂದು ತನಿಖೆಯಿಂದ ತಿಳಿದು ಬಂದಿದೆ.

PC: The New Indian Express

ಈ ಬಗ್ಗೆ ಮಾತನಾಡಿದ ಸಂಸದೆ ಸುಮಲತಾ ಅಂಬರೀಷ್,‌ ‘ಇಂದಿನ ಜನರೇಷನ್‌ನಲ್ಲಿ ಮಾದಕ ವ್ಯಸನದ ಆತಂಕ ಇದ್ದೇ ಇದೆ. ಆದರೆ, ಕನ್ನಡ ಚಿತ್ರರಂಗದಲ್ಲಿ ಡ್ರಗ್ಸ್ ಮಾಫಿಯಾ ಇದೆ ಎಂಬುದು ನನ್ನ ಗಮನಕ್ಕೆ ಎಲ್ಲಿಯೂ ಬಂದಿಲ್ಲ. ಅದು ನಮ್ಮ ಚಿತ್ರರಂಗಕ್ಕೆ ಬರಬಾರದು ಎಂದು ನಾನು ಆಶಿಸುತ್ತೇನೆ’ ಎಂದಿದ್ದಾರೆ.

ಇದನ್ನೂ ಓದಿ: ’ಜಾಫರ್ ಪನಾಹಿ’ ಸಿನಿಮಾ ಜಗತ್ತಿನ ಬಂಡುಕೋರ: ಕೀಲಾರ ಟೆಂಟ್ ಹೌಸ್-5

ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಮಾತನಾಡಿ, ‘ನನಗೆ ತಿಳಿದಿರುವ ಮಟ್ಟಿಗೆ ನಮ್ಮ ಕನ್ನಡ ಚಿತ್ರರಂಗದ ಕಲಾವಿದರು ಯಾರು ಕೂಡ ಡ್ರಗ್ಸ್ ತೆಗೆದುಕೊಳ್ಳಲ್ಲ. ಬಾಡಿ ಬಿಲ್ಡ್ ಮಾಡಲು ವೈದ್ಯರ ಸಲಹೆ ಪಡೆದು, ಪ್ರೋಟಿನ್ ಮತ್ತಿತ್ತರದ್ದನ್ನು ತೆಗೆದುಕೊಳ್ಳುತ್ತಾರೆ. ಬೆಳಗ್ಗೆ ಎದ್ದಕೂಡಲೇ ಡ್ರಗ್ಸ್ ಬೇಕೇಬೇಕು ಎನ್ನುವಂತಹ ಕಲಾವಿದರು ನಮ್ಮ ಇಂಡಸ್ಟ್ರೀಯಲ್ಲಿ ಯಾರೂ ಇಲ್ಲ’ ಎಂದು ಹೇಳಿದ್ದಾರೆ.

ಈ ಮಧ್ಯೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್‌, ನಟ ನಟಿಯರು ಡ್ರಗ್ಸ್‌‌ ಮಾಫಿಯಾ ದಲ್ಲಿ ಭಾಗಿಯಾಗಿರುವ ವಿಷಯವನ್ನು ನಮ್ಮ ಸರ್ಕಾರ ಹೊರಹಾಕಿದೆ. ಹಿಂದಿನ ಆಡಳಿತದಲ್ಲಿದ್ದವರು ಡ್ರಗ್ಸ್ ಮಾಫಿಯಾದ ಪರವಾಗಿದ್ದರು, ಮುಖ್ಯಮಂತ್ರಿ ಯಡಿಯೂರಪ್ಪ ಈ ಜಾಲವನ್ನು ಬೇರು ಸಮೇತ ಕಿತ್ತು ಹಾಕುವಲ್ಲಿ ಮುಂದಾಗುತ್ತಿದ್ದಾರೆ ಎಂದು ರಾಜಕೀಯ ಮೈಲೇಜ್ ಪಡೆಯಲು ಪ್ರಯತ್ನಿಸಿದ್ದಾರೆ.


ಇದನ್ನೂ ಓದಿ: ಬಾಲಿವುಡ್ ಗ್ಯಾಂಗ್! ಸ್ವಜನಪಕ್ಷಪಾತದ ಸುಳಿಯಲ್ಲಿ ಹಿಂದಿ ಚಿತ್ರರಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...