Homeಮುಖಪುಟದೇವರ ಸಂದೇಶವಾಹಕರೆ, ಆರ್ಥಿಕ ತಪ್ಪು ನಿರ್ವಹಣೆಗೆ ಕಾರಣರ್ಯಾರು? ಪಿ.ಚಿದಂಬರಂ ಪ್ರಶ್ನೆ

ದೇವರ ಸಂದೇಶವಾಹಕರೆ, ಆರ್ಥಿಕ ತಪ್ಪು ನಿರ್ವಹಣೆಗೆ ಕಾರಣರ್ಯಾರು? ಪಿ.ಚಿದಂಬರಂ ಪ್ರಶ್ನೆ

ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್, ಸರ್ಕಾರವು ಆರ್ಥಿಕತೆಯನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಹಾಗಾಗಿ ಅದು ಪರಂ-ಆತ್ಮ-ನಿರ್ಭರ್(ದೇವರನ್ನು ಅವಲಂಬಿಸಿದೆ) ಆಗಿದೆ ಎಂದು ಟೀಕಿಸಿದ್ದಾರೆ.

- Advertisement -
- Advertisement -

‘ಕೊರೊನಾ ಸಾಂಕ್ರಾಮಿಕವು ದೇವರ ಕಾರ್ಯ. ಹಾಗಾಗಿಯೇ ಜಿಎಸ್‌ಟಿ ಸಂಗ್ರಹದಲ್ಲಿ ಕುಸಿತವಾಗಿದೆ’ ಎಂದು ಹೇಳಿ ವಿವಾದಕ್ಕೊಳಗಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ರವರನ್ನು ಮಾಜಿ ಸಚಿವ ಪಿ. ಚಿದಂಬರಂ ದೇವರ ಸಂದೇಶವಾಹಕರು ಎಂದು ಕರೆದು ವ್ಯಂಗ್ಯವಾಡಿದ್ದಾರೆ.

ಸಾಂಕ್ರಾಮಿಕವು ದೇವರ ಕಾರ್ಯ ಎಂದು ನೀವು ಹೇಳಿದ್ದೀರಿ. ಆದರೆ ಸಾಂಕ್ರಾಮಿಕ ಆರಂಭಕ್ಕೂ ಮೊದಲಿನ 2017/18, 2018/19, 2019/20 ವರ್ಷಗಳಲ್ಲಿನ ಆರ್ಥಿಕ ತಪ್ಪು ನಿರ್ವಹಣೆಗೆ ಕಾರಣರ್ಯಾರು ಎಂದು ವಿವರಿಸುವಿರಾ ದೇವರ ಸಂದೇಶವಾಹಕರೆ? ಎಂದು ಚಿದಂಬರಂ ಪ್ರಶ್ನಿಸಿದ್ದಾರೆ.

2018/19ರ ಎರಡನೇ ತ್ರೈಮಾಸಿಕದಲ್ಲಿದ್ದ 7.1 ಭಾರತದ ಜಿಡಿಪಿ ಬೆಳವಣಿಗೆಯು 2019/20ರ ನಾಲ್ಕನೇ ತ್ರೈಮಾಸಿಕದ ಹೊತ್ತಿಗೆ 3.1ಕ್ಕೆ ಕುಸಿದಿದೆ. ಈ ಕುಸಿತವು ಸರ್ಕಾರದ ತಪ್ಪು ನಿರ್ವಹಣೆಯನ್ನು ತೋರಿಸುವುದಿಲ್ಲವೇ ಎಂದು ಅವರು ಪ್ರಶ್ನಿಸಿದ್ದಾರೆ.

ರಾಜ್ಯಗಳಿಗೆ ಕೊಡಬೇಕಾದ ಜಿಎಸ್‌ಟಿ ಪಾಲನ್ನು ನೀಡಲು ಕೇಂದ್ರ ಸರ್ಕಾರ ಸತಾಯಿಸುತ್ತಿದೆ. ಇದು ಕೇಂದ್ರ ಸರ್ಕಾರದ ಜವಾಬ್ದಾರಿ. ಆದರೆ ಈ ವಿಷದಯಲ್ಲಿ ಕೇಂದ್ರ ರಾಜ್ಯಗಳಿಗೆ ದ್ರೋಹವೆಸಗಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ.

2021ರ ವಿತ್ತೀಯ ವರ್ಷದಲ್ಲಿ ಕೊರೊನಾ ಸಾಂಕ್ರಾಮಿಕದ ಕಾರಣದಿಂದ 2.35 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ ಕುಸಿತವಾಗಿದೆ ಎಂದು ಜಿಎಸ್‌ಟಿ ಕೌನ್ಸಿಲ್ ಸಭೆಯಲ್ಲಿ ಅರ್ಥ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದೆರು. ನಾವು ದೇವರ ಕಾರ್ಯವನ್ನು ಎದುರಿಸಬೇಕಾಯಿತು ಎಂದು ಹೇಳುವ ಮೂಲಕ ಅದಕ್ಕೆ ಅವರು ದೇವರು ಎಂದಿದ್ದು ಭಾರೀ ಟೀಕೆಗೊಳಗಾಗಿತ್ತು.

ಕಾಂಗ್ರೆಸ್ ಮುಖಂಡ ಜೈರಾಂ ರಮೇಶ್, ಸರ್ಕಾರವು ಆರ್ಥಿಕತೆಯನ್ನು ನಿಭಾಯಿಸುವಲ್ಲಿ ವಿಫಲವಾಗಿದೆ. ಹಾಗಾಗಿ ಅದು ಪರಂ-ಆತ್ಮ-ನಿರ್ಭರ್(ದೇವರನ್ನು ಅವಲಂಬಿಸಿದೆ) ಆಗಿದೆ ಎಂದು ಟೀಕಿಸಿದ್ದಾರೆ.


ಇದನ್ನೂ ಓದಿ: ಕೋವಿಡ್‌ನಿಂದಾಗಿ ಜಿಎಸ್‌ಟಿ ಸಂಗ್ರಹ ಕುಸಿತ: ರಾಜ್ಯಗಳಿಗೆ ಪಾಲು ನೀಡಲು ಹಣವಿಲ್ಲವೆಂದ ಕೇಂದ್ರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...