Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಇದನ್ನು ಪ್ರಕಟಿಸಿದ್ದರು.

- Advertisement -
- Advertisement -

ತಲೆಗೆ ಸ್ಕಲ್ ಟೋಪಿ ಮತ್ತು ‘ಸ್ಟಾಪ್ ಕಿಲ್ಲಿಂಗ್ ರೋಹಿಂಗ್ಯಾ ಮುಸ್ಲಿಂ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸುತ್ತಿರುವ ಜನರ ವಿಡಿಯೋವನ್ನು ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ’ಕೋಲ್ಕತ್ತಾದಲ್ಲಿ ‘ಇಸ್ಲಾಂ ಜಿಂದಾಬಾದ್’ಗೆ ಘೋಷಣೆ ಕೂಗಿದ್ದಾರೆ ಎಂದು ಬರೆದಿದ್ದಾರೆ.

ತಾರೆಖ್ ಫತಾಹ್ ತಮ್ಮ ಟ್ವೀಟ್‌ನಲ್ಲಿ “ಇದು ಕರಾಚಿ, ಕಾಶ್ಮೀರ ಅಥವಾ ಕೇರಳ ಅಲ್ಲ. “ಇಸ್ಲಾಂ ಜಿಂದಾಬಾದ್” ನ ಈ ಘೋಷಣೆ ಕೋಲ್ಕತ್ತಾದಲ್ಲಿ, ಮಮತಾ ಬಾನರ್ಜಿ ಆಳ್ವಿಕೆಯ ವೆಸ್ಟ್ ಬೆಂಗಾಲ್‌ನ ರಾಜಧಾನಿಯಲ್ಲಿ” ಎಂದು ಬರೆದಿದ್ದಾರೆ.

ಇದರ ಆರ್ಕೈವ್ ಇಲ್ಲಿದೆ.

ಈ ಪೋಸ್ಟ್ ಅನ್ನು ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ.

ಇದರ ಆಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ

ಫ್ಯಾಕ್ಟ್‌‌ಚೆಕ್‌

ಈ ವೀಡಿಯೊವು ಸೆಪ್ಟೆಂಬರ್ 2017 ರದ್ದಾಗಿದ್ದು ಬಾಂಗ್ಲಾದೇಶದ್ದಾಗಿದೆ. ಅಲ್ಲಿನ ಇಸ್ಲಾಮಿಕ್ ಸಂಘಟನೆಯು ಮ್ಯಾನ್ಮಾರ್ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ವಿಡಿಯೋವಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ವೀಡಿಯೊದ ಪ್ರಮುಖ ಫ್ರೇಮ್‌ಗಳ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ, ‘ಸ್ಪೈಸಿ ಇನ್ಫೋಟ್ಯೂಬ್’ ಎಂಬ ಯೂಟ್ಯೂಬ್ ಚಾನೆಲ್ 13 ಸೆಪ್ಟೆಂಬರ್ 2017 ರಂದು ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದು, “ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶವು ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರೆದಿದೆ” ಎಂದು ಬರೆದಿದೆ.

ಇದರ ನಂತರ ಕೆಲವು ಕೀವರ್ಡ್ ಮೂಲಕ ಇನ್ನಷ್ಟು ಹುಡುಕಾಡಿದಾಗ 13 ಸೆಪ್ಟೆಂಬರ್ 2017 ರ ದಿನಾಂಕದ “ರೋಹಿಂಗ್ಯಾಗಳ ಮೇಲಿನ ಕಿರುಕುಳವನ್ನು ವಿರೋಧಿಸಿ ಇಸ್ಲಾಮಿಕ್ ಚಳವಳಿಯ ರ್‍ಯಾಲಿ” ಎಂಬ ಸುದ್ದಿಯನ್ನು ಆನ್‌ಲೈನ್ ಸುದ್ದಿ ಸಂಸ್ಥೆಯಾದ ಬಾಂಗ್ಲೇನ್ಯೂಸ್ 24 ರ ವರದಿ ಮಾಡಿತ್ತು.

ರೋಹಿಂಗ್ಯಾ ಮುಸ್ಲಿಮರ ಚಿತ್ರಹಿಂಸೆ ಮತ್ತು ಹತ್ಯೆಯನ್ನು ಪ್ರತಿಭಟಿಸಲು ಇಸ್ಲಾಮಿಕ್ ರಾಜಕೀಯ ಸಂಘಟನೆಯಾದ ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶ (ಐಎಬಿ) ಮ್ಯಾನ್ಮಾರ್ ರಾಯಭಾರ ಕಚೇರಿಗೆ ರ್‍ಯಾಲಿಯನ್ನು ನಡೆಸಿತು ಎಂದು ಅದು ಹೇಳಿದೆ.

ಅಷ್ಟೇ ಅಲ್ಲದೆ ಐಎಬಿಯ ವಿದ್ಯಾರ್ಥಿ ಘಟಕವಾದ ಐಎಸ್ಸಿಎಯ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಮೆರವಣಿಗೆಯ ವೀಡಿಯೊವನ್ನು ಕಾಣಬಹುದಾಗಿದೆ.

ಐಎಬಿ ತಮ್ಮ ಫೇಸ್‌ಬುಕ್ ಪುಟದಲ್ಲಿ ರ್‍ಯಾಲಿಯನ್ನು ಘೋಷಿಸಿ, “ಸೆಪ್ಟೆಂಬರ್ 13 ರಂದು ಢಾಕಾದಲ್ಲಿರುವ ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರಿಯುವಂತೆ” ಜನರಿಗೆ ಕರೆ ನೀಡಿತ್ತು.

ಇದಲ್ಲದೆ, ವೀಡಿಯೊದ ದೃಶ್ಯದಲ್ಲಿರುವ ಇತರ ಸುಳಿವುಗಳು ಇದು ಬಾಂಗ್ಲಾದೇಶದ್ದೇ ಹೊರತು ಭಾರತದ್ದಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ವಿಡಿಯೋದಲ್ಲಿ ಹಸಿರು ಹಿನ್ನೆಲೆಯ ಮಧ್ಯದಲ್ಲಿ ಕೆಂಪು ಚುಕ್ಕೆ ಹೊಂದಿರುವ ಬಾಂಗ್ಲಾದೇಶದ ಧ್ವಜವನ್ನು ವೀಡಿಯೊದ ಸ್ಟಿಲ್ ಶಾಟ್‌ನಲ್ಲಿ ಕಾಣಬಹುದು.

ಅಷ್ಟೇ ಅಲ್ಲದೆ ಪೊಲೀಸ್ ಅಧಿಕಾರಿಗಳು ಬಾಂಗ್ಲಾದೇಶದ ಪೊಲೀಸ್ ಸಮವಸ್ತ್ರಕ್ಕೆ ಹೋಲುವ ಸಮವಸ್ತ್ರವನ್ನು ಧರಿಸಿರುವುದನ್ನು ಸಹ ಕಾಣಬಹುದು.

ಈ ಮೂಲಕ ಸ್ಪಷ್ಟವಾಗಿ, ಬಾಂಗ್ಲಾದೇಶದ ಪ್ರತಿಭಟನೆಯನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯಾಗಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...