Homeಫ್ಯಾಕ್ಟ್‌ಚೆಕ್ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಫ್ಯಾಕ್ಟ್‌‌ಚೆಕ್‌‌: ’ಇಸ್ಲಾಂ ಜಿಂದಾಬಾದ್’ ಎಂದು ಕೂಗಿದ ಈ ರ್‍ಯಾಲಿ ಕೊಲ್ಕತ್ತಾದ್ದಲ್ಲ, ಬಾಂಗ್ಲಾದೇಶದ್ದು

ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ಇದನ್ನು ಪ್ರಕಟಿಸಿದ್ದರು.

- Advertisement -
- Advertisement -

ತಲೆಗೆ ಸ್ಕಲ್ ಟೋಪಿ ಮತ್ತು ‘ಸ್ಟಾಪ್ ಕಿಲ್ಲಿಂಗ್ ರೋಹಿಂಗ್ಯಾ ಮುಸ್ಲಿಂ’ ಎಂಬ ಫಲಕಗಳನ್ನು ಹಿಡಿದು ಪ್ರತಿಭಟನಾ ರ್‍ಯಾಲಿ ನಡೆಸುತ್ತಿರುವ ಜನರ ವಿಡಿಯೋವನ್ನು ಸರಣಿ ನಕಲಿ ಸುದ್ದಿಯ ಅಪರಾಧಿಯಾಗಿರುವ ಕೆನಡಾದ ಪತ್ರಕರ್ತ ತಾರೆಕ್ ಫತಾಹ್ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ ’ಕೋಲ್ಕತ್ತಾದಲ್ಲಿ ‘ಇಸ್ಲಾಂ ಜಿಂದಾಬಾದ್’ಗೆ ಘೋಷಣೆ ಕೂಗಿದ್ದಾರೆ ಎಂದು ಬರೆದಿದ್ದಾರೆ.

ತಾರೆಖ್ ಫತಾಹ್ ತಮ್ಮ ಟ್ವೀಟ್‌ನಲ್ಲಿ “ಇದು ಕರಾಚಿ, ಕಾಶ್ಮೀರ ಅಥವಾ ಕೇರಳ ಅಲ್ಲ. “ಇಸ್ಲಾಂ ಜಿಂದಾಬಾದ್” ನ ಈ ಘೋಷಣೆ ಕೋಲ್ಕತ್ತಾದಲ್ಲಿ, ಮಮತಾ ಬಾನರ್ಜಿ ಆಳ್ವಿಕೆಯ ವೆಸ್ಟ್ ಬೆಂಗಾಲ್‌ನ ರಾಜಧಾನಿಯಲ್ಲಿ” ಎಂದು ಬರೆದಿದ್ದಾರೆ.

ಇದರ ಆರ್ಕೈವ್ ಇಲ್ಲಿದೆ.

ಈ ಪೋಸ್ಟ್ ಅನ್ನು ಹಲವಾರು ಸಾಮಾಜಿಕ ಜಾಲತಾಣದ ಬಳಕೆದಾರರು ಹಂಚಿಕೊಂಡಿದ್ದಾರೆ.

ಇದರ ಆಕೈವ್ ಇಲ್ಲಿದೆ.
ಇದರ ಆರ್ಕೈವ್ ಇಲ್ಲಿದೆ

ಫ್ಯಾಕ್ಟ್‌‌ಚೆಕ್‌

ಈ ವೀಡಿಯೊವು ಸೆಪ್ಟೆಂಬರ್ 2017 ರದ್ದಾಗಿದ್ದು ಬಾಂಗ್ಲಾದೇಶದ್ದಾಗಿದೆ. ಅಲ್ಲಿನ ಇಸ್ಲಾಮಿಕ್ ಸಂಘಟನೆಯು ಮ್ಯಾನ್ಮಾರ್ ರಾಯಭಾರ ಕಚೇರಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದ ವಿಡಿಯೋವಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಬಕ್ರೀದ್‌ಗೆ ತಂದ ಆಡುಗಳನ್ನು ಲೂಟಿ ಮಾಡಿದ್ದು ನಿಜವೆ?

ವೀಡಿಯೊದ ಪ್ರಮುಖ ಫ್ರೇಮ್‌ಗಳ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದಾಗ, ‘ಸ್ಪೈಸಿ ಇನ್ಫೋಟ್ಯೂಬ್’ ಎಂಬ ಯೂಟ್ಯೂಬ್ ಚಾನೆಲ್ 13 ಸೆಪ್ಟೆಂಬರ್ 2017 ರಂದು ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದು, “ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶವು ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರೆದಿದೆ” ಎಂದು ಬರೆದಿದೆ.

ಇದರ ನಂತರ ಕೆಲವು ಕೀವರ್ಡ್ ಮೂಲಕ ಇನ್ನಷ್ಟು ಹುಡುಕಾಡಿದಾಗ 13 ಸೆಪ್ಟೆಂಬರ್ 2017 ರ ದಿನಾಂಕದ “ರೋಹಿಂಗ್ಯಾಗಳ ಮೇಲಿನ ಕಿರುಕುಳವನ್ನು ವಿರೋಧಿಸಿ ಇಸ್ಲಾಮಿಕ್ ಚಳವಳಿಯ ರ್‍ಯಾಲಿ” ಎಂಬ ಸುದ್ದಿಯನ್ನು ಆನ್‌ಲೈನ್ ಸುದ್ದಿ ಸಂಸ್ಥೆಯಾದ ಬಾಂಗ್ಲೇನ್ಯೂಸ್ 24 ರ ವರದಿ ಮಾಡಿತ್ತು.

ರೋಹಿಂಗ್ಯಾ ಮುಸ್ಲಿಮರ ಚಿತ್ರಹಿಂಸೆ ಮತ್ತು ಹತ್ಯೆಯನ್ನು ಪ್ರತಿಭಟಿಸಲು ಇಸ್ಲಾಮಿಕ್ ರಾಜಕೀಯ ಸಂಘಟನೆಯಾದ ಇಸ್ಲಾಮಿ ಆಂದೋಲನ್ ಬಾಂಗ್ಲಾದೇಶ (ಐಎಬಿ) ಮ್ಯಾನ್ಮಾರ್ ರಾಯಭಾರ ಕಚೇರಿಗೆ ರ್‍ಯಾಲಿಯನ್ನು ನಡೆಸಿತು ಎಂದು ಅದು ಹೇಳಿದೆ.

ಅಷ್ಟೇ ಅಲ್ಲದೆ ಐಎಬಿಯ ವಿದ್ಯಾರ್ಥಿ ಘಟಕವಾದ ಐಎಸ್ಸಿಎಯ ಯೂಟ್ಯೂಬ್ ಚಾನೆಲ್‌ನಲ್ಲಿ ಈ ಮೆರವಣಿಗೆಯ ವೀಡಿಯೊವನ್ನು ಕಾಣಬಹುದಾಗಿದೆ.

ಐಎಬಿ ತಮ್ಮ ಫೇಸ್‌ಬುಕ್ ಪುಟದಲ್ಲಿ ರ್‍ಯಾಲಿಯನ್ನು ಘೋಷಿಸಿ, “ಸೆಪ್ಟೆಂಬರ್ 13 ರಂದು ಢಾಕಾದಲ್ಲಿರುವ ಮ್ಯಾನ್ಮಾರ್ ರಾಯಭಾರ ಕಚೇರಿಯನ್ನು ಸುತ್ತುವರಿಯುವಂತೆ” ಜನರಿಗೆ ಕರೆ ನೀಡಿತ್ತು.

ಇದಲ್ಲದೆ, ವೀಡಿಯೊದ ದೃಶ್ಯದಲ್ಲಿರುವ ಇತರ ಸುಳಿವುಗಳು ಇದು ಬಾಂಗ್ಲಾದೇಶದ್ದೇ ಹೊರತು ಭಾರತದ್ದಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ವಿಡಿಯೋದಲ್ಲಿ ಹಸಿರು ಹಿನ್ನೆಲೆಯ ಮಧ್ಯದಲ್ಲಿ ಕೆಂಪು ಚುಕ್ಕೆ ಹೊಂದಿರುವ ಬಾಂಗ್ಲಾದೇಶದ ಧ್ವಜವನ್ನು ವೀಡಿಯೊದ ಸ್ಟಿಲ್ ಶಾಟ್‌ನಲ್ಲಿ ಕಾಣಬಹುದು.

ಅಷ್ಟೇ ಅಲ್ಲದೆ ಪೊಲೀಸ್ ಅಧಿಕಾರಿಗಳು ಬಾಂಗ್ಲಾದೇಶದ ಪೊಲೀಸ್ ಸಮವಸ್ತ್ರಕ್ಕೆ ಹೋಲುವ ಸಮವಸ್ತ್ರವನ್ನು ಧರಿಸಿರುವುದನ್ನು ಸಹ ಕಾಣಬಹುದು.

ಈ ಮೂಲಕ ಸ್ಪಷ್ಟವಾಗಿ, ಬಾಂಗ್ಲಾದೇಶದ ಪ್ರತಿಭಟನೆಯನ್ನು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ನಡೆದ ರ್‍ಯಾಲಿಯಾಗಿ ತಪ್ಪಾಗಿ ಹಂಚಿಕೊಳ್ಳಲಾಗಿದೆ.


ಓದಿ: ಕೊರೊನಾ ನೆಪದಲ್ಲಿ ಈ ವೈದ್ಯ ಕಿಡ್ನಿ ಕದಿಯುತ್ತಿದ್ದರೆ? ಏನಿದು ಪ್ರಕರಣ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...