Homeಕರ್ನಾಟಕಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

- Advertisement -
- Advertisement -

15 ದಿನಗಳಿಂದ ತೀವ್ರ ಚರ್ಚೆಯಲ್ಲಿರುವ ಬೆಳಗಾವಿಯ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಸ್ಥಾಪನೆ ವಿವಾದ ಅಂತ್ಯವಾಗುವ ಹಂತಕ್ಕೆ ಬಂದಿದೆ. ಅಲ್ಲಿ ಬುಧವಾರ ರಾತ್ರಿ ಸ್ಥಾಪಿಸಲ್ಪಟ್ಟಿರುವ ರಾಯಣ್ಣನ ಪ್ರತಿಮೆಯನ್ನು ಜಿಲ್ಲಾಡಳಿತ ಅಧಿಕೃತ ಎಂದು ಒಪ್ಪಿಕೊಂಡಿದೆ. ಅಲ್ಲದೇ ಆ ವೃತ್ತಕ್ಕೆ ಶಿವಾಜಿ ಹೆಸರಿಡುವುದಾಗಿ ಘೋಷಿಸಿದೆ. ಅಂತೂ ವಿಷಯ ತಣ್ಣಗಾಗುತ್ತಿರುವಾಗಲೇ ವೇಳೆಗೆ ಮೈಸೂರು ಸಂಸದ ಪ್ರತಾಪ್‌ ಸಿಂಹ ವಿವಾದಾತ್ಮಕ ಹೇಳಿಕೆಯೊಂದನ್ನು ನೀಡಿದ್ದು ಕನ್ನಡಿಗರು ತಿರುಗಿ ಬೀಳುವಂತೆ ಮಾಡಿದೆ.

ಆಗಸ್ಟ್ 15 ರಂದು ಕನ್ನಡಿಗರು ಮತ್ತು ರಾಯಣ್ಣನ ಅಭಿಮಾನಿಗಳು ಪ್ರತಿಮೆ ಸ್ಥಾಪನೆ ಮಾಡಿದ್ದಾಗ ಅದನ್ನು ಜಿಲ್ಲಾಡಳಿತ ಒಪ್ಪಿಕೊಂಡಿದ್ದರೆ ರಾದ್ಧಾಂತವೇ ಆಗುತ್ತಿರಲಿಲ್ಲ. ಆದರೆ ಪ್ರತಿಮೆ ತೆರವುಗೊಳಿಸಿದ್ದಲ್ಲದೇ ಅದರ ವಿರುದ್ಧ ಪ್ರತಿಭಟಿಸಿದವರ ಮೇಲೆ ಲಾಠಿ ಚಾರ್ಜ್ ನಡೆಸಿ ಕೇಸು ಜಡಿದಿದ್ದು ವಿವಾದ ತೀವ್ರ ಸ್ಪರೂಪ ಪಡೆದುಕೊಳ್ಳಲು ಕಾರಣವಾಗಿತ್ತು.

ಲಕ್ಷಾಂತರ ಕನ್ನಡಿಗರು ಅದೇ ಜಾಗದಲ್ಲಿ ರಾಯಣ್ಣನ ಪ್ರತಿಮೆ ನಿರ್ಮಾಣವಾಗಬೇಕೆಂದು ಆಗ್ರಹಿಸಿ ಹತ್ತಾರು ಪ್ರತಿಭಟನೆಗಳು, ಬೆಳಗಾವಿ ಚಲೋ ಹೋರಾಟ ನಡೆದುದ್ದರ ಪರಿಣಾಮವಾಗಿ ಕೊನೆಗೂ ರಾಜ್ಯಸರ್ಕಾರ ಮನಸ್ಸಿಲ್ಲದ ಮನಸ್ಸಿನಿಂದಲೇ ಪ್ರತಿಮೆಗೆ ಒಪ್ಪಿಗೆ ನೀಡಿತ್ತು. ಈ ನಡುವೆ ಎಂಇಎಸ್ ಸಂಘಟನೆ ಅಲ್ಲಿ ಶಿವಾಜಿ ಪ್ರತಿಮೆ ನಿರ್ಮಾಣವಾಗಬೇಕೆಂದು ತಗಾದೆ ತೆಗೆದಿತ್ತು. ಕನ್ನಡಿಗರು ವರ್ಸಸ್ ಮರಾಠಿಗರು ಭಾವನೆ ಆರಂಭವಾಗಿತ್ತು. ಕೊನೆಗೂ ರಾಯಣ್ಣನ ಪ್ರತಿಮೆ ಮತ್ತು ವೃತ್ತಕ್ಕೆ ಶಿವಾಜಿ ಹೆಸರು ಒಂದು ಹಂತಕ್ಕೆ ಎಲ್ಲರಿಗೂ ಒಪ್ಪಿತವಾಗಿತ್ತು.

ಇಂತಹ ಸಂದರ್ಭದಲ್ಲಿ “ಶಿವಾಜಿ ಮಹಾರಾಜ್ ದೇಶದ ಸ್ವಾಭಿಮಾನದ ಸಂಕೇತ. ಹಾಗೆಯೇ ಸಂಗೊಳ್ಳಿ ರಾಯಣ್ಣ ನಮ್ಮ ಕರ್ನಾಟಕದ ಸ್ವಾಭಿಮಾನದ ಸಂಕೇತ.. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎನ್ನುವ ಪ್ರಶ್ನೆಯನ್ನು ತರುವಂತಹ ವ್ಯವಸ್ಥಿತ ‍ಷಡ್ಯಂತ್ರ ನಡೆಯುತ್ತಿದೆ. ನಮಗೆ ಶಿವಾಜಿ ಪ್ರತಿಮೆಯೂ ಬೇಕು, ರಾಯಣ್ಣನ ಪ್ರತಿಮೆಯೂ ಬೇಕು” ಎಂಬ ಸಂಸದ ಪ್ರತಾಪ್ ಸಿಂಹರವರ ಹೇಳಿಕೆ ಕನ್ನಡಿಗರನ್ನು ಕೆರಳಿಸಿದೆ.

ಶಿವಾಜಿ ರಾಷ್ಟ್ರನಾಯಕರು, ರಾಯಣ್ಣ ನಮ್ಮ ರಾಜ್ಯಕ್ಕೆ ಸೀಮಿತ ಎಂಬ ಮಾತಿನ ಅರ್ಥವೇನು? ಕನ್ನಡಿಗರು ಕರ್ನಾಟಕಕ್ಕಷ್ಟೇ ಸೀಮಿತವೇ ಎಂದು ಹಲವು ಕನ್ನಡಿಗರು ಪ್ರಶ್ನಿಸಿದ್ದಾರೆ. ಇವರಿಬ್ಬರಲ್ಲಿ ಯಾರು ಹೆಚ್ಚು ಯಾರು ಕಡಿಮೆ ಎಂಬುದನ್ನು ಸಂಸದ ಪ್ರತಾಪ್ ಸಿಂಹರವರೇ ಧ್ವನಿಸಿದ್ದಾರೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನ ಸ್ಯಾಂಕಿ ಟ್ಯಾಂಕ್ ಪಕ್ಕದ ಸರ್ಕಲ್‌ನಲ್ಲಿ ಬಹಳ ಹಿಂದಿನಿಂದಲೂ ಶಿವಾಜಿ ಪ್ರತಿಮೆ ಇದೆ. ಅದಕ್ಕೆ ಯಾವ ಕನ್ನಡಿಗರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ ಬೆಳಗಾವಿಯಲ್ಲಿ ರಾಯಣ್ಣನ ಪ್ರತಿಮೆಗೆ ವಿರೋಧವೇಕೆ? ಕರ್ನಾಟಕದಲ್ಲಿ ಶಿವಾಜಿ ಪ್ರತಿಮೆ ಬೇಕು ಎಂದು ವಾದಿಸುವವರು ಮಹಾರಾಷ್ಟ್ರದಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆ ಇರಿಸಲು ಮುಂದಾಗುವರೆ ಎಂದು ಅನೇಕ ಕನ್ನಡಿಗರು ಪ್ರಶ್ನಿಸಿದ್ದಾರೆ.

“ವಿಚಾರ ಇಷ್ಟೇ! ಕರ್ನಾಟಕದ ಮಹನೀಯರು ಕರ್ನಾಟಕಕ್ಕೆ ಮಾತ್ರ ಸೀಮಿತ. ಹೊರನಾಡಿನ ಮಹನೀಯರು ದೇಶದ ಸ್ವಾಭಿಮಾನದ ಸಂಕೇತ. ಕರ್ನಾಟಕದ ಮಹನೀಯರನ್ನು ಭಾರತದ ಮಟ್ಟದಲ್ಲಿ ಸ್ವಾಭಿಮಾನದ ಸಂಕೇತ ಎಂದು ತಿಳಿದುಕೊಂಡಿಲ್ಲದ ಜನಪ್ರತಿನಿಧಿಗಳನ್ನ ಆರಿಸಿದ್ದೇವೆ. ಕರ್ನಾಟಕದ ಬಹಳಷ್ಟು ಮಹನೀಯರ ಬಗ್ಗೆ ಹೊರನಾಡಿನ ಜನರಿಗೆ ತಿಳಿದೇಯಿಲ್ಲದ ಕಾರಣವೇನು ತಿಳಿಯಿತೇ?” ಎಂದು ಗ್ರಾಹಕ ಸೇವೆಯಲ್ಲಿ ಕನ್ನಡಕ್ಕಾಗಿ ದನಿಯೆತ್ತುತ್ತಿರುವ ಅರುಣ್ ಜಾವಗಲ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಚನ್ನಮ್ಮ, ಅಬ್ಬಕ್ಕ, ಮಲ್ಲಮ್ಮನವರು ಮೊದಲು ಆಮೇಲೆ ಲಕ್ಷ್ಮಿಭಾಯಿ. ರಾಯಣ್ಣ ಮೊದಲು ಆಮೇಲೆ ಶಿವಾಜಿ. ಕೃಷ್ಣದೇವರಾಯ ಮೊದಲು ಆಮೇಲೆ ಅಶೋಕ. ವಿಷ್ಣುವರ್ಧನ ಮೊದಲು ಆಮೇಲೆ ಚಂದ್ರಗುಪ್ತ ಮೌರ್ಯ. ಟಿಪ್ಪು ಮೊದಲು ಆಮೇಲೆ ಸಂಬಾಜಿ. ಬಸವಣ್ಣ ಮೊದಲು ಆಮೇಲೆ ವಿವೇಕಾನಂದ. ಎಲ್ಲರಿಗೂ ಗೌರವ ಕೊಡೋಣ…ಮೊದಲು ನಮ್ಮ ಗೌರವ ಉಳಿಸಿಕೊಳ್ಳಣ ಎಂದು ನೂತನರವರು ಟ್ವೀಟ್ ಮಾಡಿದ್ದಾರೆ.

ಶಿವಾಜಿ ಮಾತ್ರ ಹೇಗೆ ದೇಶದ ಸ್ವಾಭಿಮಾನ ಆಗ್ತಾರೆ ? ಹಾಗೆ ನೋಡಿದರೆ ರಾಯಣ್ಣ ದೇಶದ ಸ್ವಾಭಿಮಾನದ ಸಂಕೇತವಾಗುತ್ತಾರೆ. ಶಿವಾಜಿ, ರಾಯಣ್ಣರ ಕಾಲದಲ್ಲಿ ಒಕ್ಕೂಟದ ವ್ಯವಸ್ಥೆಯೇ ಇರಲಿಲ್ಲ, ಸಾಮ್ರಾಜ್ಯಗಳು ಇದ್ದವು ಅಷ್ಟೇ. ಇಂತ ಸಾಮಾನ್ಯ ಅರಿವಿಲ್ಲದ ಮುಠ್ಠಾಳರು ತಮ್ಮ ಹೈಕಾಮಾಂಡ್ ಅನ್ನು ಮೆಚ್ಚಿಸಲು ಗುಲಾಮರ ರೀತಿ ಹೇಳಿಕೆಗಳನ್ನು ಕೊಡುತ್ತಾರೆ ಎಂದು ಸುಚಿಂದ್ರರವರು ಟ್ವೀಟ್ ಮಾಡಿದ್ದಾರೆ.

ಇನ್ನು ಇಂದು ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮತ್ತು ಸಚಿವ ಈಶ್ವರಪ್ಪ ಭೇಟಿ ನೀಡಿ ಎರಡು ಪ್ರತಿಮೆಗಳಿಗೆ ಮಾಲಾರ್ಪಣೆ ಮಾಡಿದ್ದಾರೆ.

ಸಂಗೊಳ್ಳಿ ರಾಯಣ್ಣನ ಪ್ರತಿಮೆ ನಿರ್ಮಾಣ ವಿಚಾರದಲ್ಲಿ ರಾಜ್ಯ ಸರ್ಕಾರ ಬೇಗನೆ ಒಂದು ನಿರ್ಧಾರ ತೆಗೆದುಕೊಂಡಿದ್ದರೆ ಇಂದು ರಾಯಣ್ಣ ವರ್ಸಸ್ ಶಿವಾಜಿ, ಕನ್ನಡಿಗರು ವರ್ಸಸ್ ಮರಾಠಿಗರು ಎಂಬ ಪರಿಸ್ಥಿತಿಯೇ ನಿರ್ಮಾಣವಾಗುತ್ತಿರಲಿಲ್ಲ. ಸರ್ಕಾರದ ನಿರ್ಲಕ್ಷ ಧೋರಣೆಯೇ ಇಂದಿನ ರಾಯಣ್ಣ ಪ್ರತಿಮೆ ವಿವಾದಕ್ಕೆ ನೇರ ಕಾರಣ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ  ಆರೋಪಿಸಿದ್ದಾರೆ.

ನಾನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿಯವರಿಗೆ 2 ಬಾರಿ ಕರೆ ಮಾಡಿ ಮಾತನಾಡಿದ್ದೇನೆ. ರಾಯಣ್ಣನಂಥ ಮಹಾನ್ ವ್ಯಕ್ತಿಗಳ ವಿಚಾರವನ್ನು ವಿವಾದ ಮಾಡಿಕೊಳ್ಳುವುದೇ ದೊಡ್ಡ ತಪ್ಪು. ಸರ್ಕಾರ ನಿನ್ನೆ ಮಾಡಿದ ಕೆಲಸವನ್ನು ಮೊದಲೇ ಮಾಡಿದ್ದರೆ ರಾಯಣ್ಣನ ಪ್ರತಿಮೆ ನಿರ್ಮಾಣದ ವಿಚಾರ ವಿವಾದವೇ ಆಗುತ್ತಿರಲಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಮತ್ತೆ ಮುನ್ನೆಲೆಗೆ ಬಂದ ಹಿಂದಿ ಹೇರಿಕೆ ಚರ್ಚೆ: ಕನಿಮೊಳಿ ಪರ ದನಿಯೆತ್ತಿದ ಎಚ್‌.ಡಿ ಕುಮಾರಸ್ವಾಮಿ, ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...