Homeಕರ್ನಾಟಕಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪ

ಪ್ರತಾಪ್ ಸಿಂಹ ಒಬ್ಬ ಬ್ಲೂ ಫಿಲ್ಮ್ ಹೀರೋ: ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪ

ಈ ನನ್ನ ಆರೋಪಗಳು ಸುಳ್ಳು ಎನ್ನುವುದಾದರೆ ಪ್ರತಾಪ್ ಸಿಂಹರವರೆ ಕೋರ್ಟ್‌ಗೆ ಹೋಗಲಿ. ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಿ. ನಾನು ಕೋರ್ಟಿನಲ್ಲಿ ದಾಖಲೆ ಇಟ್ಟು ಹೋರಾಡುತ್ತೇನೆ ಎಂದು ಲಕ್ಷ್ಮಣ್ ಹೇಳಿದ್ದಾರೆ.

- Advertisement -
- Advertisement -

ಮೈಸೂರು-ಕೊಡಗು ಸಂಸದ ಪ್ರತಾಪ್‌ ಸಿಂಹರವರ ಭ್ರಷ್ಟಚಾರ, ವೈಯುಕ್ತಿಕ ಜೀವನದ ಬಗ್ಗೆ ನನಗೆ ಮಾಹಿತಿ ಇದೆ. ಅವರೊಬ್ಬ ಸಂಸರಾಗುವುದಕ್ಕಿಂತ ಒಬ್ಬ ಬ್ಲೂ ಫಿಲಂ ಹೀರೋ ಆಗಿದ್ದರೆ ಸರಿಯಿರುತ್ತಿತ್ತು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಆರೋಪಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೊಬ್ಬ ರೋಲ್‍ಕಾಲ್ ಗಿರಾಕಿ, ಬ್ಲಾಕ್‍ಮೇಲರ್ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ. ಹಾಗೇನಾದರೂ ನಾನು ಯಾರಿಗಾದ್ರು ಬ್ಲಾಕ್‍ಮೇಲ್ ಮಾಡಿದ್ರೆ ದಯವಿಟ್ಟು ಸಾಬೀತು ಮಾಡಿ. ಒಂದು ವೇಳೆ ನಾನು ಮಾಡಿರುವುದು ಸಾಬೀತಾದರೆ ರಾಷ್ಟ್ರಪತಿಗಳಿಗೆ ಪತ್ರಬರೆದು ಬಹಿರಂಗವಾಗಿ ಮೈಸೂರಿನ ಕಲಾಮಂದಿರದ ಮುಂದೆ ನಾನೇ ನೇಣಿಗೆ ಶರಣಾಗ್ತಿನಿ ಎಂದು ಲಕ್ಷ್ಮಣ್ ಸವಾಲು ಹಾಕಿದ್ದಾರೆ.

ಕೆಲದಿನಗಳ ಹಿಂದೆ ಕೊರೊನಾ ಹೆಸರಿನಲ್ಲಿ ರಾಜ್ಯಸರ್ಕಾರ 5000 ಕೋಟಿ ರೂ ಭ್ರಷ್ಟಾಚಾರವೆಸಗಿದೆ ಮತ್ತು ಸಿಎಂ ಯಡಿಯೂರಪ್ಪನವರ ಪುತ್ರ ವಿಜಯೇಂದ್ರ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ಲಕ್ಷ್ಮಣ್ ಆರೋಪಿಸಿದ್ದರು. ಅದಕ್ಕೆ ಪ್ರತಿಯಾಗಿ ಸಂಸದ ಪ್ರತಾಪ್ ಸಿಂಹ, ‘ಅವರೊಬ್ಬ ರೋಲ್‍ಕಾಲ್ ಗಿರಾಕಿ, ಬ್ಲಾಕ್‍ಮೆಲರ್’ ಎಂದು ಟೀಕಿಸಿದ್ದರು.

ಈ ಕುರಿತು ಪತ್ರಿಕಾಗೋಷ್ಠಿ ನಡೆಸಿದ ಲಕ್ಷ್ಮಣ್, ‘ನನ್ನ ಮೇಲೆ ತನಿಖೆ ನಡೆಸಿ ಆರೋಪ ಸಾಬೀತುಪಡಿಸಿದರೆ ನಾನು ನೇಣಿಗೆ ಶರಣಾಗುತ್ತೇನೆ. ಆದರೆ ನಾನು ಮಾಡುವ ಆರೋಪಗಳು ಸಾಬೀತಾದರೆ ಪ್ರತಾಪ್ ಸಿಂಹ ತನ್ನ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವರೇ’ ಎಂದು ಸವಾಲು ಹಾಕಿದ್ದಾರೆ.

“ಪ್ರತಾಪ್ ಸಿಂಹ ಒಬ್ಬ ಕಚ್ಚೆಹರುಕ, ಬಾಯಿ ಹರುಕ. ನೀವು ಸೈಟಿಗಾಗಿ ಮಡದಿಯನ್ನ ತಂಗಿ ಅಂತ ಹೇಳಿದ್ದೀರಿ. ಚುನಾವಣೆ ಸಂದರ್ಭದಲ್ಲಿ ನಿಮ್ಮ ಒಂದು ಆಡಿಯೋ ವೈರಲ್ ಆಗಿತ್ತು. ಅಂತಹ ನಾಲ್ಕು ಆಡಿಯೋ ನನ್ನ ಬಳಿ ಇದೆ. ನೀನು ಎಷ್ಟು ಹೆಣ್ಣುಮಕ್ಕಳನ್ನು ಹಾಳು ಮಾಡಿದ್ದೀಯಾ ಅಂತ ಗೊತ್ತಿದೆ. ಈಗಲೇ ನಿನ್ನ ಯೋಗ್ಯತೆ ಏನು ಅಂತ ಸಾಬೀತು ಮಾಡ್ತಿನಿ. ನಾನು ದಾಖಲೆಗಳನ್ನು ಕೋರ್ಟ್‍ಗೆ ನೀಡುತ್ತೇನೆ” ಎಂದು ಲಕ್ಷ್ಮಣ್ ಪ್ರತಾಪ್ ಸಿಂಹ ವಿರುದ್ಧ ಹರಿಹಾಯ್ದಿದ್ದಾರೆ.

“ಅವರು 10%ಗೆ ತಮ್ಮ ಎಂಪಿ ಅನುದಾನ ಮಾರಿಕೊಂಡಿದ್ದಾರೆ. ಇದಕ್ಕೂ ನನ್ನ ಬಳಿ ದಾಖಲೆಗಳು ಇದೆ. ಅವರೊಬ್ಬ ಸಂಸದನಾಗುವುದಕ್ಕಿಂತ ಬ್ಲೂ ಫಿಲ್ಮ್ ಹೀರೋ ಆಗಬೇಕಿತ್ತು” ಎಂದು ಅವರು ದಾಳಿ ನಡೆಸಿದ್ದಾರೆ.

ಈ ನನ್ನ ಆರೋಪಗಳು ಸುಳ್ಳು ಎನ್ನುವುದಾದರೆ ಪ್ರತಾಪ್ ಸಿಂಹರವರೆ ಕೋರ್ಟ್‌ಗೆ ಹೋಗಲಿ. ನನ್ನ ಮೇಲೆ ಮಾನನಷ್ಟ ಮೊಕದ್ದಮೆ ಹಾಕಲಿ. ನಾನು ಕೋರ್ಟಿನಲ್ಲಿ ದಾಖಲೆ ಇಟ್ಟು ಹೋರಾಡುತ್ತೇನೆ ಎಂದು ಅವರು ಹೇಳಿದ್ದಾರೆ.

ಹಿಂದೆ ಪ್ರಕಾಶ್ ರೈ, ಪ್ರತಾಪ್ ಸಿಂಹ ವಿರುದ್ದ 1 ರೂ ಕೇಸ್ ಹಾಕಿದ್ದರು. ಕೇಸಿನಲ್ಲಿ ಸೋಲುತ್ತೇನೆ ಎಂದು ಗೊತ್ತಾದ ಕೂಡಲೇ ಓಡಿಹೋಗಿ ಅವರ ಕೈಕಾಲು ಹಿಡಿದು ಕೇಸ್ ವಾಪಸ್ ತೆಗೆಸಿದರು. ಅದೇ ರೀತಿ ನನ್ನ ಮೇಲೆಯೂ ಒತ್ತಡ ಹಾಕಬಹುದು. ಆದರೆ ನಾನು ಹೆದರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೋರ್ಟ್ ಛೀಮಾರಿ ಹಾಕಿದ ಬಳಿಕ ಪ್ರಕಾಶ್ ರೈ ಬಳಿ ಕ್ಷಮೆ ಕೇಳಿದ ಸಂಸದ ಪ್ರತಾಪ್ ಸಿಂಹ

ಚುನಾವಣಾ ಸಂದರ್ಭದ ಆ ಹುಡುಗಿ ಎಲ್ಲೋದ್ಲು? ಕೊಲೆ ಏನಾದ್ರು ಮಾಡಿಸಿಬಿಟ್ರಾ? ಎಂದು ಲಕ್ಷ್ಮಣ್ ಪ್ರತಾಪ್ ಸಿಂಹರವರಿಗೆ ಟಾಂಗ್ ಕೊಟ್ಟಿದ್ದಾರೆ. ಇದಕ್ಕೆ ಪ್ರತಾಪ್ ಸಿಂಹ ಏನು ಮಾಡುತ್ತಾರೆ ಕಾದು ನೋಡಬೇಕಿದೆ.

ಇನ್ನು ಬಿಜೆಪಿ ಉಪಾಧ್ಯಕ್ಷ ವಿಜಯೇಂದ್ರ ವಿರುದ್ಧವೂ ವಾಗ್ದಾಳಿ ನಡೆಸಿದ ಅವರು, “482 ಕೆಪಿಎಸ್‌ಸಿ ಹುದ್ದೆಗಳನ್ನು ವಿಜಯೇಂದ್ರ ಮಾರಾಟ ಮಾಡಿದ್ದಾರೆ. ಡಿಸೆಂಬರ್‌ನಲ್ಲಿ ನಡೆದ ನೇಮಕಾತಿ ಪ್ರಕ್ರಿಯೆಲ್ಲಿ 218 ಕೋಟಿ ರೂ ಅವ್ಯವಹಾರ ನಡೆದಿದೆ” ಎಂದು ಆರೋಪಿಸಿದ್ದಾರೆ.


ಇದನ್ನೂ ಓದಿ: ಶಿವಾಜಿ ಮಾತ್ರ ರಾಷ್ಟ್ರನಾಯಕರೆ, ಸಂಗೊಳ್ಳಿ ರಾಯಣ್ಣ ರಾಷ್ಟ್ರನಾಯಕರಲ್ಲವೇ?: ಕನ್ನಡಿಗರ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...