Homeಕರೋನಾ ತಲ್ಲಣ35 ಲಕ್ಷ ಕೊರೊನಾ! ಪ್ರಕರಣಗಳು: ಜಾಗತಿಕವಾಗಿ ಹೊಸ ದಾಖಲೆ ನಿರ್ಮಿಸಿದ ಭಾರತ

35 ಲಕ್ಷ ಕೊರೊನಾ! ಪ್ರಕರಣಗಳು: ಜಾಗತಿಕವಾಗಿ ಹೊಸ ದಾಖಲೆ ನಿರ್ಮಿಸಿದ ಭಾರತ

- Advertisement -
- Advertisement -

ಕಳೆದ 24 ಗಂಟೆಗಳಲ್ಲಿ 78,761 ಹೊಸ ಕೊರೊನಾ ವೈರಸ್ ಪ್ರಕರಣಗಳು ದಾಖಲಾಗಿದ್ದು, ಭಾರತದ ಒಟ್ಟು ಪ್ರಕರಣಗಳ ಸಂಖ್ಯೆ 35 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಇಂದು ಬೆಳಿಗ್ಗೆ ತಿಳಿಸಿದೆ.

ಈ ಸಾಂಕ್ರಾಮಿಕ ರೋಗದ ಪ್ರಾರಂಭದಿಂದ ಹಿಡಿದು ಇಲ್ಲಿಯವರೆಗೆ, ಒಂದು ದಿನದಲ್ಲಿ ಇಷ್ಟು ಅತಿ ಹೆಚ್ಚು ಪ್ರಕರಣಗಳನ್ನು ಜಗತ್ತಿನ ಯಾವ ದೇಶವೂ ದಾಖಲಿಸಿರಲಿಲ್ಲ.

ಎಎಫ್‌ಪಿ ಲೆಕ್ಕಾಚಾರದ ಪ್ರಕಾರ, ಈ ಹಿಂದೆ, ಜುಲೈ 17 ರಂದು 77,638 ದೈನಂದಿನ ಪ್ರಕರಣಗಳ ದಾಖಲೆಯೊಂದಿಗೆ ಅಮೇರಿಕಾ ಈ ದಾಖಲೆಯನ್ನು ನಿರ್ಮಿಸಿತ್ತು.

ಕಳೆದ 24 ಗಂಟೆಗಳಲ್ಲಿ, ಸಾಂಕ್ರಾಮಿಕ ರೋಗಕ್ಕೆ ಸಂಬಂಧಿಸಿದಂತೆ 948 ಸಾವುಗಳು ಸಂಭವಿಸಿದ್ದು, ಒಟ್ಟು ಸಾವುಗಳ ಸಂಖ್ಯೆ 63,498 ಕ್ಕೆ ಏರಿದೆ. ಈವರೆಗೆ ಸುಮಾರು 27 ಲಕ್ಷ ಜನರು ಚೇತರಿಸಿಕೊಂಡಿದ್ದಾರೆ. ಇಂದಿನವರೆಗೆ ಚೇತರಿಕೆ ದರ ಶೇಕಡಾ 76.6 ರಷ್ಟಿದೆ.

ಇದನ್ನೂ ಓದಿ: ಕೊರೊನಾ ಸರಣಿ-1: ಒಮ್ಮೆ ಕೊರೊನಾ ಬಂದವರಿಗೆ ಮತ್ತೆ ಬರುವುದಿಲ್ಲವಾ? – ಡಾ.ವಾಸು ಎಚ್‌.ವಿ

ಭಾರತದಲ್ಲಿ ಕೊರೊನಾ ವೈರಸ್ ಪ್ರಕರಣಗಳ ಕುರಿತ ಪ್ರಮುಖ ಅಂಶಗಳು:

  • ಕೊರೊನಾ ಸಾಂಕ್ರಾಮಿಕ ರೋಗದಿಂದ ಬಳಲುತ್ತಿರುವ ರಾಷ್ಟ್ರಗಳ ಪೈಕಿ, ಅಮೇರಿಕಾ ಮತ್ತು ಬ್ರೆಜಿಲ್ ನಂತರದಲ್ಲಿ, ಭಾರತವು ಮೂರನೇ ಅತಿ ಹೆಚ್ಚು ಹಾನಿಗೊಳಗಾದ ದೇಶವಾಗಿದೆ. ಆಗಸ್ಟ್ 4 ರಿಂದ ದೇಶದಲ್ಲಿ ಅತಿ ಹೆಚ್ಚು ಏಕದಿನ ಪ್ರಕರಣಗಳು ದಾಖಲಾಗಿದೆ.
  • 35 ಲಕ್ಷ ಪ್ರಕರಣಗಳನ್ನು ದಾಟಲು ಭಾರತಕ್ಕೆ 213 ದಿನಗಳು ಬೇಕಾಯಿತು. ಕಳೆದ ಒಂದು ವಾರದಲ್ಲಿ ದೇಶವು 5 ಲಕ್ಷ ಪ್ರಕರಣಗಳನ್ನು ದಾಖಲಿಸಿದೆ.
  • ಕಳೆದ 24 ಗಂಟೆಗಳಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶಗಳಲ್ಲಿ ಅತಿ ಹೆಚ್ಚು ಹೊಸ ಪ್ರಕರಣಗಳು ವರದಿಯಾಗಿವೆ. ಸರ್ಕಾರದ ಅಂಕಿಅಂಶಗಳ ಪ್ರಕಾರ ಈ ಐದು ರಾಜ್ಯಗಳಲ್ಲಿ ಅತಿ ಹೆಚ್ಚು ಸಾವುಗಳು ದಾಖಲಾಗಿವೆ.
  • ಸೆಪ್ಟೆಂಬರ್ 7 ರಿಂದ ಮೆಟ್ರೊ ಸೇವೆಗಳನ್ನು ಪುನರಾರಂಭಿಸಲು ಸರ್ಕಾರವು ನಾಲ್ಕನೇ ಹಂತದ ಅನ್‌ಲಾಕ್ ಮಾರ್ಗಸೂಚಿಗಳನ್ನು ಶನಿವಾರ ಪ್ರಕಟಿಸಿದೆ. ಕಂಟೈನ್‌ಮೆಂಟ್ ವಲಯಗಳ ಹೊರಗೆ ಲಾಕ್‌ಡೌನ್‌ಗಳನ್ನು ವಿಧಿಸಲಾಗುವುದಿಲ್ಲ ಎಂದು ರಾಜ್ಯಗಳಿಗೆ ತಿಳಿಸಲಾಗಿದೆ.
  • ಸೆಪ್ಟೆಂಬರ್ 21 ರಿಂದ ಹೊಸ ನಿಯಮಗಳ ಭಾಗವಾಗಿ ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಕ್ರೀಡೆ, ಧಾರ್ಮಿಕ ಮತ್ತು ಇತರ ಕಾರ್ಯಕ್ರಮಗಳನ್ನು 100 ಜನರ ಮಿತಿಯೊಂದಿಗೆ ಅನುಮತಿಸಲಾಗುವುದು. ಶಾಲೆಗಳು, ಕಾಲೇಜುಗಳು, ಈಜುಕೊಳಗಳು ಮತ್ತು ಒಳಾಂಗಣ ಚಿತ್ರಮಂದಿರಗಳಿಗೆ ನಿರ್ಭಂದ. ಅನ್ಲಾಕ್ 4 ಎಂದು ಕರೆಯಲ್ಪಡುವ ಈ ಹಂತವು ಸೆಪ್ಟೆಂಬರ್ 30 ರವರೆಗೆ ಜಾರಿಯಲ್ಲಿರುತ್ತದೆ.
  • ರೋಗದ ಹರಡುವಿಕೆಯ ಸೂಚಕವಾಗಿರುವ ಭಾರತದ ಸಕಾರಾತ್ಮಕ ದರವು ಇಂದು ಬೆಳಿಗ್ಗೆ ಶೇಕಡಾ 7.46 ರಷ್ಟಿದೆ; ಸಾವಿನ ಪ್ರಮಾಣವು ಶೇಕಡಾ 1.79 ರಷ್ಟಿದೆ.
  • ಸುಮಾರು 130 ಕೋಟಿ ಜನಸಂಖ್ಯೆ ಹೊಂದಿರುವ ಭಾರತ, ಇದುವರೆಗೆ 4.14 ಕೋಟಿ ಮಾದರಿಗಳನ್ನು ಪರೀಕ್ಷಿಸಿದೆ; ನಿನ್ನೆಯಿಂದ ಇಲ್ಲಿಯವರೆಗೆ 10.55 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ.
  • ಕಳೆದ ನಾಲ್ಕು ದಿನಗಳಿಂದ ದೇಶವು 75,000 ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸುತ್ತಿದೆ. ಇದು ಗುರುವಾರ 77,266 ಪ್ರಕರಣಗಳೊಂದಿಗೆ ಅತಿದೊಡ್ಡ ಏಕದಿನ ಏರಿಕೆಯನ್ನು ದಾಖಲಿಸಿದೆ.
  • ಭಾರತದ ಕೊರೊನಾ ವೈರಸ್ ಪ್ರಕರಣಗಳು ಮತ್ತು ಸಾವುಗಳು, ಜಾಗತಿಕ ಸರಾಸರಿಗೆ ಹೋಲಿಸಿದರೆ (ಪ್ರತಿ ದಶಲಕ್ಷ ಜನಸಂಖ್ಯೆಗೆ) ಅತ್ಯಂತ ಕಡಿಮೆ ಎಂದು ಕೊರೊನಾ ಕುರಿತು ಉನ್ನತ ಮಟ್ಟದ ಮಂತ್ರಿಗಳ ಗುಂಪಿಗೆ (GoM) ಶನಿವಾರ ಸುದ್ದಿ ಸಂಸ್ಥೆ ಪಿಟಿಐ ತಿಳಿಸಲಾಗಿದೆ ಎಂದು ಎನ್ ಡಿ ಟಿ ವಿ ವರದಿ ಮಾಡಿದೆ.
  • ವಿಶ್ವಾದ್ಯಂತ, ಇದುವರೆಗೆ 25 ದಶಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. 8 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಕೊರೊನಾ ವಿಚಾರದಲ್ಲಿ ತಬ್ಲೀಘಿಗಳನ್ನು ’ಬಲಿಪಶು’ ಮಾಡಲಾಗಿದೆ: ಬಾಂಬೆ ಹೈಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...